ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.
Cross references
ನಾನು ಮಿಂಚುವ ಕತ್ತಿಯನ್ನು ಹದಮಾಡುವಾಗ, ನನ್ನ ಕೈ ನ್ಯಾಯವನ್ನು ಹಿಡುಕೊಳ್ಳುವಾಗ, ನನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ ನನ್ನನ್ನು ಹಗೆಮಾಡುವವರಿಗೆ ಮುಯ್ಯಿ ತೀರಿಸುವೆನು.
ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ.
ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
ಆ ದಿನದಲ್ಲಿ ಕರ್ತನು, ತನ್ನ ಉಗ್ರದೊಂದಿಗೆ ದೊಡ್ಡ ಬಲವಾದ ಕತ್ತಿಯಿಂ ದ(ಖಡ್ಗದಿಂದ) ವೇಗವಾಗಿ ಓಡುವ ಸರ್ಪವಾದ ಲೆವಿಯಾತಾನವನ್ನು ವಕ್ರತೆಯ ಸರ್ಪವಾದ ಲೆವಿಯಾ ತಾನವನ್ನೂ ದಂಡಿಸಿ ಸಮುದ್ರದಲ್ಲಿರುವ ಘಟಸರ್ಪ ವನ್ನೂ ಕೊಂದುಹಾಕುವನು.
ಆತನು ತನ್ನ ಮಂದೆಯನ್ನು ಕುರುಬನಂತೆ ಮೇಯಿ ಸುವನು. ಕುರಿಮರಿಗಳನ್ನು ಕೂಡಿಸಿ ಅವುಗಳನ್ನು ತನ್ನ ಎದೆಗಪ್ಪಿಕೊಳ್ಳುವನು ಎಳೇಮರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು.
ನಿಶ್ಚಯವಾಗಿಯೂ ಆತನು ನಮ್ಮ ಸಂಕಟಗಳನ್ನು ಸಹಿಸಿಕೊಂಡು ನಮ್ಮ ದುಃಖಗಳನ್ನು ಹೊತ್ತನು; ಆದರೂ ನಾವು ಆತನನ್ನು ಪೆಟ್ಟು ತಿಂದವನು, ದೇವರಿಂದ ಹೊಡೆಯಲ್ಪಟ್ಟವನು, (ಶಿಕ್ಷಿಸಲ್ಪಟ್ಟವನು) ಹಿಂಸಿಸಲ್ಪಟ್ಟವನು ಎಂದು ಭಾವಿಸಿ ಕೊಂಡೆವು.
ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.
ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈ ಒಳ್ಳೇ ಅಂಜೂರದ ಹಣ್ಣುಗಳ ಹಾಗೆ ನಾನು ಈ ಸ್ಥಳದಿಂದ ಕಸ್ದೀಯರ ದೇಶಕ್ಕೆ ಒಳ್ಳೇದಕ್ಕಾಗಿ ಕಳುಹಿಸಿದ ಯೆಹೂದದ ಸೆರೆಯವರನ್ನು ಪರಾಮರಿ ಸುವೆನು.
ಓಡಿಹೋಗಿರಿ, ನಿಮ್ಮ ಪ್ರಾಣಗಳನ್ನು ತಪ್ಪಿಸಿಕೊಳ್ಳಿರಿ; ಅರಣ್ಯದಲ್ಲಿರುವ ಒಣಗಿಡದ ಹಾಗಿರ್ರಿ.
ನಾನು ನೀತಿವಂತನನ್ನೂ ದುಷ್ಟನನ್ನೂ ಕಡಿದು ಬಿಡುವದರಿಂದ ನನ್ನ ಕತ್ತಿಯು ದಕ್ಷಿಣದಿಂದ ಮೊದಲುಗೊಂಡು ಉತ್ತ ರದ ಮನುಷ್ಯರೆಲ್ಲರಿಗೆ ವಿರೋಧವಾಗಿ ಅದರ ಒರೆ ಯನ್ನು ಬಿಟ್ಟು ಹೋಗುವದು.
ಮನುಷ್ಯಪುತ್ರನೇ, ಪ್ರವಾದಿಸು ಮತ್ತು ಹೇಳು--ಕರ್ತನು ಹೀಗೆ ಹೇಳುವನೆಂದು ಹೇಳು--ಕತ್ತಿಯು, ಆ ಒಂದು ಕತ್ತಿಯು ಹದಮಾಡ ಲ್ಪಟ್ಟಿದೆ; ಮೆರುಗು ಸಹ ಮಾಡಲ್ಪಟ್ಟಿದೆ;
ಮನುಷ್ಯಪುತ್ರನೇ, ನೀನು ಪ್ರವಾದಿಸಿ ಹೇಳ ಬೇಕಾದದ್ದೇನಂದರೆ--ದೇವರಾದ ಕರ್ತನು ಅಮ್ಮೋನಿ ಯರ ವಿಷಯವಾಗಿಯೂ ಅವರ ನಿಂದೆಯ ವಿಷಯವಾಗಿಯೂ ಹೀಗೆ ಹೇಳುತ್ತಾನೆ--ಹೌದು, ನೀನು ಹೀಗೆ ಹೇಳು, ಹಿರಿದ ಕತ್ತಿಯು ಥಳಥಳಿಸುವದ ರಿಂದ ಸಂಹರಿಸುವದಕ್ಕೆ ಹಿಡಿದಿದೆ; ಮಿಂಚುವಂತೆ ಬಹಳವಾಗಿ ಮಸೆದಿದೆ.
ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ.
ನನ್ನ ಸೇವಕನಾದ ದಾವೀದನು ಅವರ ಮೇಲೆ ಅರಸನಾಗಿರುವನು; ಅವರೆಲ್ಲರಿಗೂ ಒಬ್ಬನೇ ಕುರುಬನಿರುವನು ನನ್ನ ನ್ಯಾಯನಿಯಮ ಗಳನ್ನೇ ಅನುಸರಿಸುವಂತೆ ಮಾಡುವೆನು.
ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.
ಗರ್ಭದಲ್ಲಿ ಅವನು ತನ್ನ ಸಹೋದರ ನನ್ನು ಹಿಮ್ಮಡಿಯಿಂದ ಹಿಡಿದು ತನ್ನ ಶಕ್ತಿಯಿಂದ ದೇವರೊಂದಿಗೆ ಬಲಹೊಂದಿದನು.
ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಸಾವಿರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳ ಗಿಂದ ನನಗಾಗಿ ಹೊರಡುವನು; ಆತನ ಹೊರಡೋಣ ಗಳು ಪೂರ್ವದಿಂದಲೂ ಅನಾದಿ ದಿವಸಗಳಿಂದಲೂ ಅವೆ.
ಆತನು ಕರ್ತನ ಬಲದಲ್ಲಿಯೂ ತನ್ನ ದೇವರಾದ ಕರ್ತನ ಹೆಸರಿನಲ್ಲಿ ಘನತೆಯಲ್ಲಿಯೂ ನಿಂತುಕೊಂಡು ಮೇಯಿಸುವನು; ಮತ್ತು ಅವರು ನೆಲೆಯಾಗಿರುವರು, ಈಗ ಆತನು ಭೂಮಿಯ ಅಂತ್ಯಗಳ ಮಟ್ಟಿಗೂ ದೊಡ್ಡವನಾಗಿ ರುವನು.
ನನ್ನ ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಕೊಲೆಯ ಮಂದೆಯನ್ನು ಮೇಯಿಸು.
ಆಗ ಕೊಯ್ಗುರಿಗಳ ಮಂದೆ ಯನ್ನು ಹೌದು, ಬಡವಾದ ಮಂದೆಯನ್ನೇ ಮೇಯಿಸಿದೆನು; ನನಗಾಗಿ ಎರಡು ಕೋಲುಗಳನ್ನು ತಕ್ಕೊಂಡೆನು; ಒಂದಕ್ಕೆ ಸೌಂದರ್ಯ ಎಂದೂ ಮತ್ತೊಂದಕ್ಕೆ ಬಂಧ ಗಳೆಂದೂ ಹೆಸರಿಟ್ಟೆನು; ಹೀಗೆ ಮಂದೆಯನ್ನು ಮೇಯಿ ಸಿದೆನು.
ಅದೇ ದಿನದಲ್ಲಿ ಅದು ಮುರಿಯಲ್ಪಟ್ಟಿತು; ಆಗ ನನ್ನಲ್ಲಿ ನಿರೀಕ್ಷೆಯಿಟ್ಟ ಬಡ ಕುರಿಮಂದೆಯು ಅದು ಕರ್ತನ ವಾಕ್ಯವೆಂದು ತಿಳಿದುಕೊಂಡಿತು.
ಆ ಮಾತೇನಂದರೆ -- ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಳು; ಅವರು ಆತನ ಹೆಸರನ್ನು ಇಮ್ಮಾನುವೇಲ್ ಎಂದು ಕರೆಯುವರು ಎಂಬದೇ. ದೇವರು ನಮ್ಮ ಕೂಡ ಇದ್ದಾನೆ ಎಂಬದು ಇದರ ಅರ್ಥ.
ಯಾವನಾದರೂ ಶಿಷ್ಯನ ಹೆಸರಿನಲ್ಲಿ ಈ ಚಿಕ್ಕವರಾದ ಒಬ್ಬನಿಗೆ ಕೇವಲ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಅವನು ತನ್ನ ಪ್ರತಿಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ತಂದೆಯೇ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ; ಇಲ್ಲವೆ ಮಗನೇ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದ
ಚಿಕ್ಕವರಲ್ಲಿ ಒಬ್ಬನನ್ನಾದರೂ ನೀವು ತಾತ್ಸಾರ ಮಾಡದಂತೆ ನೋಡಿಕೊಳ್ಳಿರಿ; ಯಾಕಂದರೆ ನಾನು ನಿಮಗೆ ಹೇಳುವದೇನಂದರೆ--ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಾರೆ.
ಅದರಂತೆಯೇ ಈ ಚಿಕ್ಕವರಲ್ಲಿ ಒಬ್ಬನಾದರೂ ನಾಶವಾಗುವದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ.
ಆಮೇಲೆ ಯೇಸು ಅವರಿಗೆ--ನೀವೆಲ್ಲರೂ ಈ ರಾತ್ರಿ ನನ್ನ ವಿಷಯದಲ್ಲಿ ಅಭ್ಯಂತರಪಡುವಿರಿ; ಯಾಕಂದರೆ-- ನಾನು ಕುರುಬನನ್ನು ಹೊಡೆಯುವೆನು; ಮಂದೆ ಯ ಕುರಿಗಳು ಚದರಿಹೋಗುವವು ಎಂದು ಬರೆದದೆ;
ಆದರೆ ಪ್ರವಾದಿಗಳ ಬರಹಗಳು ನೆರವೇರುವಂತೆ ಇದೆಲ್ಲಾ ಆಯಿತು ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.
ಆಗ ಯೇಸು ಅವರಿಗೆ--ಈ ರಾತ್ರಿ ನೀವೆಲ್ಲರೂ ನನ್ನ ದೆಸೆಯಿಂದ ಅಭ್ಯಂತರಪಡುವಿರಿ; ಯಾಕಂದರೆನಾನು ಕುರುಬನನ್ನು ಹೊಡೆಯುವೆನು, ಕುರಿಗಳು ಚದರಿಸಲ್ಪ ಡುವವು ಎಂದು ಬರೆದದೆ.
ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.
ಚಿಕ್ಕ ಹಿಂಡೇ, ಭಯಪಡಬೇಡ; ಯಾಕಂದರೆ ನಿಮಗೆ ರಾಜ್ಯವನ್ನು ಕೊಡುವದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.
ಅವನು ಈ ಚಿಕ್ಕವರಲ್ಲಿ ಒಬ್ಬನಿಗೆ ಆಟಂಕ ಪಡಿಸುವದಕ್ಕಿಂತ ಅವನ ಕೊರಳಿಗೆ ಬೀಸುವ ಕಲ್ಲನ್ನು ನೇತುಹಾಕಿ ಅವನನ್ನು ಸಮುದ್ರದೊಳಗೆ ಬಿಸಾಡು ವದು ಅವನಿಗೆ ಉತ್ತಮವಾಗಿದೆ.
ಆದಿಯಲ್ಲಿ ವಾಕ್ಯವಿದ್ದನು; ಆ ವಾಕ್ಯವು ದೇವರೊಂದಿಗೆ ಇದ್ದನು; ಆ ವಾಕ್ಯವು ದೇವರಾಗಿದ್ದನು.
ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ--ಇಗೋ, ಲೋಕದ ಪಾಪ ವನ್ನು ತೆಗೆದುಹಾಕುವ ದೇವರ ಕುರಿಮರಿ ಎಂದು ಹೇಳಿದನು.
ಇದಲ್ಲದೆ ಮೋಶೆಯು ಅರಣ್ಯದಲ್ಲಿ ಸರ್ಪವನ್ನು ಎತ್ತಿದ ಹಾಗೆಯೇ ಮನುಷ್ಯ ಕುಮಾರನು ಸಹ ಎತ್ತಲ್ಪಡತಕ್ಕದ್ದು.
ಆದರೆ ಯೇಸು ಅವರಿಗೆ--ನನ್ನ ತಂದೆಯು ಈ ವರೆಗೂ ಕೆಲಸ ಮಾಡುತ್ತಾನೆ ಮತ್ತು ನಾನೂ ಕೆಲಸ ಮಾಡುತ್ತೇನೆ ಅಂದನು.
ಆದರೆ ಎಲ್ಲರೂ ತಂದೆಗೆ ಮಾನಕೊಡುವ ಪ್ರಕಾರವೇ ಮಗನಿಗೂ ಮಾನ ಕೊಡಬೇಕೆಂದು ತೀರ್ಪು ಮಾಡು ವದನ್ನೆಲ್ಲಾ ಮಗನಿಗೆ ಒಪ್ಪಿಸಿದ್ದಾನೆ. ಮಗನಿಗೆ ಮಾನ ಕೊಡದವನು ಆತನನ್ನು ಕಳುಹಿಸಿದ ತಂದೆಗೂ ಮಾನ ಕೊಡದವನಾಗಿದ್ದಾನೆ.
ಯೇಸು ಅವರಿಗೆ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಅಬ್ರಹಾಮನಿಗಿಂತ ಮುಂಚೆಯೇ ನಾನು ಇದ್ದೇನೆ ಅಂದನು.ಆಗ ಅವರು ಆತನ ಮೇಲೆ ಕಲ್ಲುಗಳನ್ನು ಎಸೆಯಲು ತಕ್ಕೊಂಡರು; ಆದರೆ ಯೇಸು ಅಡಗಿಕೊಂಡು ಅವರ ಮಧ್ಯದಿಂದ ದೇವಾಲಯದ ಹೊರಗೆ ಬಂದು ಅಲ್ಲಿಂದ ಹಾದು ಹೊರಟು ಹೋದನು.
ಕಳ್ಳನು ಕದ್ದುಕೊಳ್ಳುವದಕ್ಕೂ ಕೊಲ್ಲುವದಕ್ಕೂ ಹಾಳುಮಾಡು ವದಕ್ಕೂ ಮಾತ್ರ ಬರುತ್ತಾನೇ ಹೊರತು ಮತ್ತಾವದಕ್ಕೂ ಬರುವದಿಲ್ಲ; ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಸಮೃದ್ಧಿಯು ಇರಬೇಕೆಂತಲೂ ಬಂದೆನು.
ನಾನು ಮತ್ತು ನನ್ನ ತಂದೆಯು ಒಂದಾಗಿದ್ದೇವೆ ಎಂದು ಉತ್ತರಕೊಟ್ಟನು.