ಯೆರೂಸಲೇಮಿಗೆ ವಿರೋಧವಾಗಿ ದಂಡುಕಟ್ಟಿ ಕೊಂಡಿರುವ ಎಲ್ಲಾ ಜನಗಳನ್ನು ಕರ್ತನು ವ್ಯಾಧಿ ಯಿಂದ ಬಾಧಿಸುವನು; ಹೀಗೆಯೇ ಅವರು ಕಾಲಿನ ಮೇಲೆ ನಿಲ್ಲುವಾಗ ಅವರ ಶರೀರವು ಕ್ಷಯಿಸಿಹೋಗು ವದು; ಅವರ ಕಣ್ಣುಗಳು ಗುಣಿಗಳಲ್ಲಿ ಇಂಗಿಹೋಗು ವವು; ಅವರ ನಾಲಿಗೆ ಅವರ ಬಾಯಲ್ಲಿ ಕ್ಷಯಿಸಿ ಹೋಗುವದು.
Cross references
ನಾನು ಸಹ ಇದನ್ನು ನಿಮಗೆ ಮಾಡು ವೆನು; ನಿಮ್ಮ ಮೇಲೆ ಭೀತಿಯನ್ನೂ ಕಣ್ಣುಗಳನ್ನು ಕ್ಷೀಣಿಸು ವಂತೆಯೂ ಹೃದಯವು ಕುಗ್ಗಿ ದುಃಖಕ್ಕೊಳಗಾಗು ವಂತೆಯೂ ಮಾಡುವ ಕ್ಷಯರೋಗವನ್ನು ಚಳಿಜ್ವರ ವನ್ನೂ ಬರಮಾಡುವೆನು. ನೀವು ವ್ಯರ್ಥವಾಗಿ ನಿಮ್ಮ ಬೀಜವನ್ನು ಬಿತ್ತುವಿರಿ; ನಿಮ್ಮ ಶತ್ರುಗಳು ಅದನ್ನು ತಿಂದುಬಿಡುವರು.
ಇಷ್ಟಾದರು ನನ್ನ ಮಾತನ್ನು ಕೇಳದೆಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ನಿಮ್ಮನ್ನು ಶಿಕ್ಷಿಸುವೆನು.
ನನ್ನ ಮಾತನ್ನು ಕೇಳಲೊಲ್ಲದೆ ನನಗೆ ವಿರೋಧ ವಾಗಿ ನಡೆದರೆ ನಾನು ನಿಮ್ಮ ಪಾಪಗಳಿಗೆ ತಕ್ಕಂತೆ ನಿಮ್ಮನ್ನು ಏಳರಷ್ಟು ಹೆಚ್ಚಾಗಿ ನಿಮ್ಮ ಮೇಲೆ ವ್ಯಾಧಿಗಳನ್ನು ಬರಮಾಡುವೆನು.
ನಾನು ಸಹ ನಿಮಗೆ ವಿರೋಧವಾಗಿ ನಡೆದು ಇನ್ನೂ ಹೆಚ್ಚಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ನಿಮ್ಮನ್ನು ಶಿಕ್ಷಿಸುವೆನು.
ನಾನು ಕೋಪದಿಂದ ನಿಮಗೆ ವಿರೋಧವಾಗಿ ನಡೆದು ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಶಿಕ್ಷಿಸುವೆನು.
ಕ್ಷಯರೋಗದಿಂದಲೂ ಜ್ವರದಿಂದಲೂ ಉರಿಪಾತ ದಿಂದಲೂ ಮಹಾತಾಪದಿಂದಲೂ ಕತ್ತಿಯಿಂದಲೂ ಕಾಡಿಗೆಯಿಂದಲೂ ಬಾಣಂತಿ ರೋಗದಿಂದಲೂ ಕರ್ತನು ನಿನ್ನನ್ನು ಹೊಡೆಯುವನು; ನೀನು ನಾಶ ವಾಗುವ ಪರ್ಯಂತರ ಅವು ನಿನ್ನನ್ನು ಹಿಂದಟ್ಟುವವು.
ಕರ್ತನು ನಿನ್ನ ಬಾಧೆಗಳನ್ನೂ ನಿನ್ನ ಸಂತತಿಯ ಬಾಧೆಗಳನ್ನೂ ಆಶ್ಚರ್ಯವಾಗ ಮಾಡುವನು; ಅವು ದೊಡ್ಡದಾದ ಮತ್ತು ಸ್ಥಿರವಾದ ಬಾಧೆಗಳೂ ಘೋರ ವಾದ ಮತ್ತು ಸ್ಥಿರವಾದ ರೋಗಗಳೂ ಆಗುವವು.
ಇದಲ್ಲದೆ ದಿನದಿನಕ್ಕೆ ರೋಗ ಅನುಭವಿಸುವದರಿಂದ ನಿನ್ನ ಕರುಳುಗಳು ಹೊರಕ್ಕೆ ಹೊರಡುವ ವರೆಗೆ ನಿನ್ನ ಕರುಳುಗಳ ರೋಗದಿಂದ ನಿನಗೆ ಮಹಾರೋಗ ಉಂಟಾಗಿರುವದು ಎಂಬದೇ.
ಇದೆಲ್ಲಾದರ ತರುವಾಯ ಕರ್ತನು ಅವನ ಕರುಳುಗಳಲ್ಲಿ ವಾಸಿ ಯಾಗಲಾರದ ರೋಗದಿಂದ ಅವನನ್ನು ಬಾಧಿಸಿದನು;
ನಿನ್ನ ಕೋಪದ ಬಲವನ್ನು ತಿಳಿದ ವನಾರು? ನಿನ್ನ ಭಯದ ಪ್ರಕಾರವೇ ನಿನ್ನ ಉಗ್ರತೆ ಇದೆ.
ಕರ್ತನು ನಿನ್ನ ಬಲ ಪಾರ್ಶ್ವದಲ್ಲಿದ್ದು ತನ್ನ ಕೋಪದ ದಿವಸದಲ್ಲಿ ಅರಸ ರನ್ನು ಹೊಡೆಯುವನು.
ಜನಾಂಗಗಳೇ, ಕೇಳುವದಕ್ಕೆ ಹತ್ತಿರ ಬನ್ನಿರಿ; ಜನಗಳೇ ಕಿವಿಗೊಡಿರಿ, ಭೂಮಿ ಯೂ ಅದರಲ್ಲಿನ ಸಮಸ್ತವೂ ಲೋಕವೂ ಅದರ ಎಲ್ಲಾ ಹುಟ್ಟುವಳಿಯೂ ಕೇಳಲಿ.
ಇಗೋ, ಕರ್ತನು ಬೆಂಕಿಯೊಡನೆ ಬರುವನು. ಆತನ ರಥಗಳು ಬಿರುಗಾಳಿಯ ಹಾಗೆ ಇರುವವು; ಉಗ್ರದಿಂದ ತನ್ನ ಕೋಪವನ್ನೂ ಅಗ್ನಿಜ್ವಾಲೆಗಳಿಂದ ತನ್ನ ಗದರಿಕೆ ಯನ್ನೂ ಸಲ್ಲಿಸುವದಕ್ಕಾಗಿಯೇ ಬರುವನು.
ಆ ದಿನದಲ್ಲಿ ಗೋಗನು ಇಸ್ರಾಯೇಲ್ ದೇಶಕ್ಕೆ ವಿರೋಧವಾಗಿ ಬರುವಾಗ ರೋಷವು ನನ್ನ ಮುಖದ ಮೇಲೆ ಬರುವದೆಂದು ದೇವರಾದ ಕರ್ತನು ಹೇಳುತ್ತಾನೆ.
ನಾನು ಅವನಿಗೆ ವಿರುದ್ಧ ವಾಗಿ ವ್ಯಾಧಿಯಿಂದಲೂ ರಕ್ತದಿಂದಲೂ ವಾದಿಸು ತ್ತೇನೆ. ನಾನು ಅವನ ಮೇಲೆ ಅವನ ದಂಡುಗಳ ಮೇಲೆ ಮಳೆಯನ್ನು ಸುರಿಸುವೆನು. ಅವನೊಂದಿಗಿರುವ ಅನೇಕ ಜನರ ಮೇಲೆ ಬೆಂಕಿಯನ್ನೂ ಗಂಧಕವನ್ನೂ ನುಣುಪಾದ ಕಲ್ಲುಗಳಿಂದ ತುಂಬಿ ಹರಿಯುವಂತಹ ಮಹಾ ಮಳೆಯನ್ನು ಸುರಿಸುವೆನು.ಹೀಗೆ ನನ್ನೊಂದಿಗೆ ನಾನೇ ಹೆಚ್ಚಿಸಿಕೊಂಡು ಮತ್ತು ನನಗೆ ನಾನೇ ಪರಿಶುದ್ಧಪಡಿಸಿಕೊಂಡು ಅನೇಕ ಜನಾಂಗಗಳ ಕಣ್ಣುಗಳ ಮುಂದೆ ನಾನು ತಿಳಿಯಪಡಿಸಿಕೊಳ್ಳುತ್ತೇನೆ. ಅವರು ನಾನೇ ಕರ್ತನೆಂದು ತಿಳಿದುಕೊಳ್ಳುವರು.
ನೀನೂ ನಿನ್ನ ಎಲ್ಲಾ ದಳಗಳೂ ನಿನ್ನೊಂದಿಗಿರುವ ನಿನ್ನ ಜನರೂ ಇಸ್ರಾಯೇಲಿನ ಪರ್ವತಗಳ ಮೇಲೆ ಬೀಳುವಿರಿ; ಎಲ್ಲಾ ತರಹದ ಮಾಂಸ ತಿನ್ನುವ ಪಕ್ಷಿಗಳಿಗೂ ಬಯಲಿನ ಮೃಗಗಳಿಗೂ ತಿನ್ನುವಂತೆ ನಾನು ನಿನ್ನನ್ನು ಕೊಡುವೆನು.
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಮನುಷ್ಯಪುತ್ರನೇ, ನೀನು ಪ್ರತಿಯೊಂದು ರೀತಿಯ ಪಕ್ಷಿಗಳಿಗೂ ಮತ್ತು ಬಯಲಿನ ಪ್ರತಿಯೊಂದು ಪ್ರಾಣಿ ಗಳಿಗೂ ಮಾತನಾಡಿ--ಒಟ್ಟಾಗಿ ಬನ್ನಿರಿ. ನಾನು ನಿಮ ಗಾಗಿ ಅರ್ಪಿಸುವ ನನ್ನ ಯಜ್ಞಕ್ಕೋಸ್ಕರ ಪ್ರತಿಯೊಂದು ಕಡೆಯಿಂದಲೂ ಸೇರಿರಿ; ಇದು ಇಸ್ರಾಯೇಲ್ ಪರ್ವತಗಳ ಮೇಲೆ ನಡೆಯುವ ಮಹಾಯಜ್ಞವಾಗಿದೆ. ನೀವು ಮಾಂಸವನ್ನು ತಿಂದು ರಕ್ತವನ್ನು ಕುಡಿಯ ಬಹುದು.
ಇಗೋ, ಆ ದಿನಗಳಲ್ಲಿಯೂ ಆ ಸಮಯದಲ್ಲಿಯೂ ನಾನು ಯೆಹೂದದ ಮತ್ತು ಯೆರೂಸಲೇಮಿನ ಸೆರೆಯನ್ನು ತಿರುಗಿಸುವಾಗ
ಆದರೆ ಈಗ ಅನೇಕ ಜನಾಂಗಗಳು ನಿನಗೆ ವಿರೋಧವಾಗಿ ಕೂಡಿಬಂದಿವೆ; ಅವರು--ಅವಳು ಕೆಡಿಸಲ್ಪಡಲಿ, ಚೀಯೋನಿನ ಮೇಲೆ ನಮ್ಮ ಕಣ್ಣುಗಳು ದೃಷ್ಟಿಸಲಿ ಎಂದು ಹೇಳುತ್ತಾರೆ.
ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ, ಜನಾಂಗಗಳೊಳಗೆ ಅಡವಿಯ ಮೃಗಗಳಲ್ಲಿ ಸಿಂಹದಂತೆಯೂ ಕುರಿಮಂದೆಗಳಲ್ಲಿ ಪ್ರಾಯದ ಸಿಂಹದಂತೆಯೂ ಇರುವದು; ಅದು ಹಾದುಹೋದರೆ ಇಳಿದುಬಿಟ್ಟು ಹರಿದುಬಿಡುತ್ತದೆ, ಯಾರೂ ಬಿಡಿಸ ಲಾರರು.
ಜನಾಂಗಗಳು ನೋಡಿ ತಮ್ಮ ತ್ರಾಣಕ್ಕೆಲ್ಲಾ ನಾಚಿಕೆ ಪಡುವರು; ತಮ್ಮ ಕೈಗಳನ್ನು ಬಾಯಿಯ ಮೇಲೆ ಇಡುವರು; ಅವರ ಕಿವಿಗಳು ಕಿವುಡಾಗಿ ಹೋಗುವವು.
ನಿಶ್ಚಿಂತೆ ಯುಳ್ಳವರಾಗಿರುವ ಅನ್ಯಜನಾಂಗದ ಮೇಲೆ ನಾನು ಬಹಳ ಕೋಪಿಸಿಕೊಂಡಿದ್ದೇನೆ. ನಾನು ಸ್ವಲ್ಪ ಕೋಪ ಮಾಡಿಕೊಂಡಾಗ ಅವರು ಸಂಕಟಕ್ಕೆ ಸಹಾಯಮಾಡಿ ದರು.
ಇವನು ಅವನಿಗೆ ಹೀಗಂದನು--ಓಡಿಹೋಗಿ ಈ ಯೌವನಸ್ಥನಿಗೆ ಹೀಗೆ ಹೇಳು, ಏನಂದರೆ--ಯೆರೂಸಲೇಮು ಅದರಲ್ಲಿರುವ ಮನು ಷ್ಯರ ಮತ್ತು ದನಗಳ ಸಂಖ್ಯೆ ಹೆಚ್ಚಾದದ್ದರಿಂದ ಗೋಡೆ ಇಲ್ಲದ ಊರುಗಳಂತೆ ನಿವಾಸವಾಗುವದು.
ಆ ದಿನದಲ್ಲಿ ಆಗುವದೇ ನಂದರೆ, ಯೆರೂಸಲೇಮಿಗೆ ವಿರೋಧವಾಗಿ ಬರುವ ಜನಾಂಗಗಳನ್ನೆಲ್ಲಾ ನಾಶ ಮಾಡುವದಕ್ಕೆ ನಾನು ಹುಡುಕುವೆನು.
ಆಗ ಕರ್ತನು ಹೊರಟು ಯುದ್ಧದ ದಿನದಲ್ಲಿ ಕಾದಾಟಮಾಡಿದ ಪ್ರಕಾರವೇ ಆ ಜನಾಂಗಗಳ ಸಂಗಡ ಆತನು ಕಾದಾಟ ಮಾಡುವನು.
ಅವನು ದೇವರಿಗೆ ಮಹಿಮೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಹೊಡೆದನು; ಆಗ ಅವನನ್ನು ಹುಳಗಳು ತಿಂದದ್ದರಿಂದ ಅವನು ಪ್ರಾಣ ಬಿಟ್ಟನು.
ಅವರನ್ನು (ಮುದ್ರೆಯಿಲ್ಲದವರನ್ನು) ಕೊಲ್ಲದೆ ಐದು ತಿಂಗಳುಗಳವರೆಗೂ ಯಾತನೆಪಡಿಸಬೇಕೆಂದಾ ಯಿತು. ಅವರಿಗುಂಟಾದ ಯಾತನೆಯು ಮನುಷ್ಯನನ್ನು ಹೊಡೆಯುವ ಚೇಳಿನ ಯಾತನೆಯ ಹಾಗೆ ಇತ್ತು.
ಆಗ ಆಲಯದಿಂದ ಬಂದ ಮಹಾಶಬ್ದ ವನ್ನು ಕೇಳಿದೆನು. ಅದು ಆ ಏಳು ಮಂದಿ ದೂತರಿಗೆ--ನೀವು ಹೋಗಿ ಆ ಪಾತ್ರೆಗಳ ಲ್ಲಿರುವ ದೇವರ ರೌದ್ರವನ್ನು ಭೂಮಿಯ ಮೇಲೆ ಹೊಯ್ಯಿರಿ ಎಂದು ಹೇಳಿತು.
ಮೃಗದ ಮೇಲೆ ನೀನು ನೋಡಿದ ಹತ್ತು ಕೊಂಬು ಗಳು ಆ ಜಾರ ಸ್ತ್ರೀಯನ್ನು ದ್ವೇಷಿಸಿ ಅವಳನ್ನು ಗತಿಗೆಟ್ಟ ವಳನ್ನಾಗಿಯೂ ಬಟ್ಟೆಯಿಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು ಅವಳನ್ನು ಬೆಂಕಿಯಿಂದ ಸುಟ್ಟುಬಿಡುವವು.
ನಿಮಗೆ ಅವಳು ಮಾಡಿದ ಪ್ರಕಾರ ನೀವು ಅವಳಿಗೆ ಪ್ರತೀಕಾರ ಮಾಡಿರಿ; ಅವಳ ಕೃತ್ಯಗಳಿಗೆ ಸರಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ. ಅವಳು ತುಂಬಿಸಿದ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ತುಂಬಿಸಿರಿ.
ಆಮೇಲೆ ಒಬ್ಬ ದೂತನು ಸೂರ್ಯನಲ್ಲಿ ನಿಂತಿರುವದನ್ನು ನಾನು ಕಂಡೆನು. ಅವನು ಮಹಾ ಶಬ್ದದಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ--ಬನ್ನಿರಿ, ಮಹಾ ದೇವರ ಭೋಜನಕ್ಕೆ ಕೂಡಿಕೊಳ್ಳಿರಿ,