ಆಗುವದೇನಂದರೆ, ಭೂಮಿಯ ಗೋತ್ರಗಳಲ್ಲಿ ಸೈನ್ಯಗಳ ಕರ್ತನಾದ ಅರಸನನ್ನು ಆರಾಧಿಸುವದಕ್ಕೆ ಯೆರೂಸಲೇಮಿಗೆ ಹೋಗದೆ ಇರುವವರ್ಯಾರೋ ಅವರ ಮೇಲೆ ಮಳೆ ಇಲ್ಲದೆ ಇರುವದು.
Cross references
ವಂಶಾವಳಿಗಳಿಗೂ ಜನಾಂಗಗಳಿಗೂ ಅನುಸಾರ ವಾಗಿರುವ ನೋಹನ ಕುಮಾರರ ಕುಟುಂಬಗಳು ಇವೇ. ಪ್ರಳಯವಾದ ಮೇಲೆ ಇವರಿಂದ ಜನಾಂಗಗಳು ಭೂಮಿಯಲ್ಲಿ ವಿಭಾಗಿಸಲ್ಪಟ್ಟವು.
ನಿನ್ನನ್ನು ಆಶೀರ್ವದಿಸುವವರನ್ನು ಆಶೀರ್ವದಿಸು ವೆನು. ನಿನ್ನನ್ನು ಶಪಿಸುವವರನ್ನು ಶಪಿಸುವೆನು; ನಿನ್ನಲ್ಲಿ ಭೂಮಿಯ ಎಲ್ಲಾ ಜನಾಂಗಗಳು ಆಶೀರ್ವದಿಸಲ್ಪಡು ವವು ಎಂದು ಹೇಳಿದನು.
ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಆಗುವದು; ನೀನು ಪಶ್ಚಿಮ ಪೂರ್ವ ಉತ್ತರ ದಕ್ಷಿಣಗಳಿಗೆ ಹರಡಿಕೊಳ್ಳುತ್ತೀ. ನಿನ್ನಿಂದಲೂ ನಿನ್ನ ಸಂತತಿಯಿಂದಲೂ ಭೂಮಿಯ ಎಲ್ಲಾ ಕುಲದವರು ಆಶೀರ್ವದಿಸಲ್ಪ ಡುವರು.
ಕರ್ತನ ಕೋಪವು ನಿಮ್ಮ ಮೇಲೆ ಉರಿಯಲು ಆತನು ಮಳೆಯಾಗದಂತೆ ಮಾಡಿ ಭೂಮಿಯು ತನ್ನ ಬೆಳೆಯನ್ನು ಕೊಡದಂತೆ ಆಕಾಶವನ್ನು ಮುಚ್ಚಿಬಿಡದ ಹಾಗೆಯೂ ಕರ್ತನು ನಮಗೆ ಕೊಡುವ ಆ ಉತ್ತಮ ದೇಶದಲ್ಲಿಂದ ನೀವು ಬೇಗ ನಾಶವಾಗದ ಹಾಗೆಯೂ ಎಚ್ಚರಿಕೆ ತಂದುಕೊಳ್ಳಿರಿ.
ನಿನ್ನ ತಲೆಯ ಮೇಲಿರುವ ಆಕಾಶವು ತಾಮ್ರ ವಾಗಿಯೂ ನಿನ್ನ ಕೆಳಗಿರುವ ಭೂಮಿಯು ಕಬ್ಬಿಣ ವಾಗಿಯೂ ಇರುವವು.
ಅವರು ನಿನಗೆ ವಿರೋಧವಾಗಿ ಪಾಪವನ್ನು ಮಾಡಿದ ಕಾರಣ ಆಕಾಶವು ಮುಚ್ಚಲ್ಪಟ್ಟು ಮಳೆ ಇಲ್ಲದಿರುವಾಗ ನೀನು ಅವರನ್ನು ಕುಂದಿಸಿದ್ದರಿಂದ ಅವರು ಈ ಸ್ಥಳದ ಕಡೆಗೆ ಪ್ರಾರ್ಥನೆಮಾಡಿ ನಿನ್ನ ನಾಮವನ್ನು ಅರಿಕೆಮಾಡಿ ತಮ್ಮ ಪಾಪದಿಂದ ತಿರುಗಿ ಕೊಂಡರೆ
ಗಿಲ್ಯಾದಿನ ನಿವಾಸಿಗಳಲ್ಲಿ ತಿಷ್ಬೀಯನಾದ ಎಲೀಯನು ಅಹಾಬನಿಗೆ--ಯಾವಾತನ ಸಮ್ಮುಖದಲ್ಲಿ ನಿಲ್ಲುತ್ತೇನೋ ಆ ಇಸ್ರಾಯೇಲಿನ ದೇವ ರಾದ ಕರ್ತನ ಜೀವದಾಣೆ, ನನ್ನ ಮಾತಿನ ಪ್ರಕಾರ ವಲ್ಲದೆ ಈ ವರ್ಷಗಳಲ್ಲಿ ಮಂಜೂ ಮಳೆಯೂ ಬೀಳು ವದಿಲ್ಲ ಅಂದನು.
ಅವರು ನಿನಗೆ ವಿರೋಧವಾಗಿ ಪಾಪಮಾಡಿ ದ್ದರಿಂದ ಆಕಾಶವು ಮುಚ್ಟಲ್ಪಟ್ಟು ಮಳೆ ಇಲ್ಲದಿರು ವಾಗ ನೀನು ಅವರನ್ನು ಶಿಕ್ಷಿಸಿದ್ದರಿಂದ ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸಿ ನಿನ್ನ ಹೆಸರನ್ನು ಕೊಂಡಾಡಿ ತಮ್ಮ ಪಾಪವನ್ನು ಬಿಟ್ಟು ತಿರುಗಿಕೊಂಡರೆ
ಮಳೆ ಇಲ್ಲದ ಹಾಗೆ ನಾನು ಆಕಾಶವನ್ನು ಮುಚ್ಚಿದರೂ ದೇಶವನ್ನು ತಿಂದು ಬಿಡಲು ಮಿಡಿತೆಗಳಿಗೆ ಆಜ್ಞಾಪಿಸಿದರೂ
ನನ್ನನ್ನು ಕೇಳು; ಆಗ ಅನ್ಯಜನರನ್ನು ನಿನ್ನ ಬಾಧ್ಯತೆಯಾಗಿಯೂ ಭೂಮಿಯ ಕಟ್ಟಕಡೆಯ ವರೆಗೆ ನಿನ್ನ ಸ್ವಾಸ್ಥ್ಯವಾಗಿಯೂ ಕೊಡುವೆನು.
ಆದದರಿಂದ ಓ ಅರಸುಗಳೇ, ಈಗ ಜ್ಞಾನವಂತ ರಾಗಿರಿ; ಭೂ ನ್ಯಾಯಾಧಿಪತಿಗಳೇ, ಶಿಕ್ಷಣ ಪಡೆಯಿರಿ.
ಕರ್ತನು ನಿನ್ನ ಬಲ ಪಾರ್ಶ್ವದಲ್ಲಿದ್ದು ತನ್ನ ಕೋಪದ ದಿವಸದಲ್ಲಿ ಅರಸ ರನ್ನು ಹೊಡೆಯುವನು.
ಅದನ್ನು ನಾನು ಹಾಳಾಗಲು ಬಿಡುವೆನು: ಅದನ್ನು ಯಾರೂ ಕುಡಿ ಕತ್ತರಿಸುವದಿಲ್ಲ; ಅಗೆಯುವದೂ ಇಲ್ಲ. ಆದರೆ ಅಲ್ಲಿ ಮುಳ್ಳುಪೊದೆಗಳು ಬೆಳೆಯುವವು; ಅಲ್ಲದೆ ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಆಜ್ಞಾ ಪಿಸುವೆನು.
ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ, ನೀತಿಯುಳ್ಳ ವಾಕ್ಯವು ನನ್ನ ಬಾಯಿಂದ ಹೊರಟಿದೆ, ಅದು ಹಿಂದಿರುಗದು: ಎಲ್ಲರೂ ನನಗೆ ಅಡ್ಡಬೀಳುವರು, ಪ್ರತಿ ನಾಲಿಗೆಯು ಪ್ರತಿಜ್ಞೆ ಮಾಡು ವದು.
ನಿನ್ನನ್ನು ಸೇವಿಸದ ಜನಾಂಗವೂ ರಾಜ್ಯವೂ ನಾಶವಾಗುವದು; ಹೌದು, ಆ ಜನಾಂಗ ಗಳು ಸಂಪೂರ್ಣವಾಗಿ ಹಾಳಾಗುವವು.
ಅವರನ್ನು ಹಿಜ್ಕೀಯನ ಮಗನಾದ ಯೆಹೂದದ ಅರಸನಾದ ಮನಸ್ಸೆಯ ನಿಮಿತ್ತವೂ ಇವನು ಯೆರೂಸಲೇಮಿನಲ್ಲಿ ಮಾಡಿದ್ದರ ನಿಮಿತ್ತವೂ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿಹೋಗುವಂತೆ ಮಾಡುವೆನು.
ಭೂಮಿಯ ಎಲ್ಲಾ ಕುಟುಂಬಗಳಲ್ಲಿ ನಿಮ್ಮನ್ನು ಮಾತ್ರವೇ ತಿಳಿದಿದ್ದೇನೆ; ಆದದರಿಂದ ನಾನು ನಿಮ್ಮ ಎಲ್ಲಾ ಅಕ್ರಮಗಳಿಗಾಗಿ ಶಿಕ್ಷಿಸುತ್ತೇನೆ.
ಸುಗ್ಗಿಯು ಇನ್ನು ಮೂರು ತಿಂಗಳು ಇರುವಾಗ ಮಳೆಯನ್ನು ನಿಮ್ಮಿಂದ ನಾನು ಹಿಂತೆಗೆದಿದ್ದೇನೆ; ಒಂದು ಪಟ್ಟಣದ ಮೇಲೆ ಮಳೆ ಸುರಿಸಿ ಮತ್ತೊಂದು ಪಟ್ಟಣದ ಮೇಲೆ ಮಳೆ ಸುರಿಸದ ಹಾಗೆ ಮಾಡಿದೆನು; ಮಳೆ ಸುರಿಯದ ಭಾಗವು ಒಣಗಿ ಹೋಯಿತು.
ಆಗುವದೇನಂದರೆ--ಯೆರೂಸಲೇಮಿಗೆ ವಿರೋಧವಾಗಿ ಬಂದ ಎಲ್ಲಾ ಜನಾಂಗ ಗಳಲ್ಲಿ ಉಳಿದವರೆಲ್ಲಾ ವರುಷ ವರುಷಕ್ಕೆ ಸೈನ್ಯಗಳ ಕರ್ತನಾದ ಅರಸನನ್ನು ಆರಾಧಿಸುವದಕ್ಕೂ ಗುಡಾ ರಗಳ ಹಬ್ಬವನ್ನು ಆಚರಿಸುವದಕ್ಕೂ ಹೋಗುವರು.
ಆತನು ಒಂದೇ ರಕ್ತದಿಂದ ಎಲ್ಲಾ ಜನಾಂಗಗಳ ಮನುಷ್ಯರನ್ನು ಭೂಮುಖದ ಮೇಲೆಲ್ಲಾ ವಾಸಿಸುವದಕ್ಕಾಗಿ ಉಂಟು ಮಾಡಿದನು.
ಆದರೆ ನೀನು ನಿನ್ನ ಸಹೋದರನಿಗೆ ತೀರ್ಪುಮಾಡುವದು ಯಾಕೆ? ಇಲ್ಲವೆ ನಿನ್ನ ಸಹೋದರನನ್ನು ಹೀನೈಸುವದು ಯಾಕೆ? ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ನಿಂತುಕೊಳ್ಳಬೇಕಲ್ಲಾ.
ಎಲೀಯನು ನಮ್ಮಂಥ ಸ್ವಭಾವವುಳ್ಳವ ನಾಗಿದ್ದನು; ಅವನು ಮಳೆ ಬರಬಾರದೆಂದು ಆಸಕ್ತಿ ಯಿಂದ ಪ್ರಾರ್ಥಿಸಲು ಮೂರು ವರುಷ ಆರು ತಿಂಗಳ ವರೆಗೂ ಮಳೆ ಬೀಳಲಿಲ್ಲ.
ಅವರ ಪ್ರವಾದನೆಯ ದಿನ ಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಇವರಿಗೆ ಉಂಟು. ಇದಲ್ಲದೆ ಇವರಿಗೆ ಇಷ್ಟ ಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹೊಡೆಯುವದಕ್ಕೂ ಅಧಿಕಾರ ಉಂಟು.