Home Bibles ಜೆಕರ್ಯ 14:21 · ಕನ್ನಡ ಬೈಬಲ್
ಜೆಕರ್ಯ 14:21 · ಕನ್ನಡ ಬೈಬಲ್

ಹೌದು, ಯೆರೂಸಲೇಮಿ ನಲ್ಲಿಯೂ ಯೆಹೂದದಲ್ಲಿಯೂ ಇರುವ ಪ್ರತಿ ಯೊಂದು ಪಾತ್ರೆಯು ಸೈನ್ಯಗಳ ಕರ್ತನಿಗೆ ಪರಿಶುದ್ಧ ವಾಗಿರುವವು; ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳಲ್ಲಿ ತಕ್ಕೊಂಡು ಬೇಯಿಸುವರು; ಆ ದಿನದಲ್ಲಿ ಕಾನಾನ್ಯನು ಸೈನ್ಯಗಳ ಕರ್ತನ ಆಲಯದಲ್ಲಿ ಇನ್ನು ಮೇಲೆ ಇರುವದೇ ಇಲ್ಲ.

Cross references

ದ್ವಿತೀಯೋಪದೇಶಕಾಂಡ 12:7

ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ತಿಂದು ನಿಮ್ಮ ಕುಟುಂಬಗಳ ಸಂಗಡ ನೀವು ನಿಮ್ಮ ದೇವರಾದ ಕರ್ತನು ನಿಮ್ಮನ್ನು ಆಶೀರ್ವದಿಸಿದ ಎಲ್ಲಾ ಕೈಕೆಲಸದಲ್ಲಿ ಸಂತೋಷಪಡಬೇಕು.

ದ್ವಿತೀಯೋಪದೇಶಕಾಂಡ 12:12

ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ಸಂತೋಷವಾಗಿರಬೇಕು; ನೀವೂ ನಿಮ್ಮ ಕುಮಾರ ಕುಮಾರ್ತೆಯರೂ ನಿಮ್ಮ ದಾಸದಾಸಿಯರೂ; ನಿಮ್ಮ ಬಾಗಲುಗಳಲ್ಲಿರುವ ಲೇವಿಯನು ಸಹ. ಅವನಿಗೆ ನಿಮ್ಮ ಸಂಗಡ ಪಾಲೂ ಸ್ವಾಸ್ತ್ಯವೂ ಇಲ್ಲ.

ನೆಹೆಮ್ಯ 8:10

ಇದಲ್ಲದೆ ಅವನು ಅವರಿಗೆ--ನೀವು ಹೋಗಿ ಕೊಬ್ಬಿದ್ದನ್ನು ತಿಂದು ಸಿಹಿ ಯಾದದ್ದನ್ನು ಕುಡಿದು ಯಾರಿಗೆ ಸಿದ್ಧಮಾಡಿದ್ದು ಏನೂ ಇಲ್ಲವೋ ಅವರಿಗೆ ಭಾಗಗಳನ್ನು ಕಳುಹಿಸಿ ಕೊಡಿರಿ. ಯಾಕಂದರೆ ಈ ದಿನವು ನಮ್ಮ ಕರ್ತನಿಗೆ ಪರಿಶುದ್ಧ ವಾಗಿದೆ. ಕರ್ತನ ಆನಂದವು ನಿಮ್ಮ ಬಲವಾಗಿರು ವದರಿಂದ ನೀವು ವ್ಯಥೆಪಡಬೇಡಿರಿ.

ಯೆಶಾಯ 4:3

ಹೀಗಿರುವಲ್ಲಿ ಚೀಯೋನಿನಲ್ಲಿ ಬಿಡಲ್ಪಟ್ಟವರು, ಯೆರೂಸಲೇಮಿನಲ್ಲಿ ಉಳಿದವರು, ಹಾಗೂ ಯೆರೂ ಸಲೇಮಿನಲ್ಲಿ ವಾಸಿಸುವವರೊಳಗೆ ಬರೆದಿರುವ ಪ್ರತಿ ಯೊಬ್ಬ ಮನುಷ್ಯನು ಪರಿಶುದ್ಧನೆಂದು ಕರೆಯಲ್ಪಡು ವನು.

ಯೆಶಾಯ 35:8

ಅಲ್ಲಿ ರಾಜ ಮಾರ್ಗವಿರುವದು, ಅದು ಪರಿಶುದ್ಧ ಮಾರ್ಗವೆನಿಸಿಕೊಳ್ಳುವದು; ಯಾವ ಅಶು ದ್ಧನು ಅದರ ಮೇಲೆ ಹಾದುಹೋಗನು; ಅವರಿಗೋ ಸ್ಕರವೇ ಇರುವದು; ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.

ಯೆಹೆಜ್ಕೇಲ 44:9

ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಹೃದಯದಲ್ಲಿಯೂ ಶರೀರದ ಲ್ಲಿಯೂ ಸುನ್ನತಿಯಿಲ್ಲದ ಯಾವೊಬ್ಬ ಪರಕೀಯನೂ ಇಸ್ರಾಯೇಲಿನ ಮಕ್ಕಳೊಳಗಿರುವ ಯಾವೊಬ್ಬ ಅಪರಿಚಿತನೂ ನನ್ನ ಪರಿಶುದ್ಧಸ್ಥಳದೊಳಗೆ ಪ್ರವೇಶಿಸ ಬಾರದು.

ಹೊಶೇಯ 12:7

ಅವನು ವ್ಯಾಪಾರಿಯಾಗಿದ್ದು ಅವನ ಕೈಯಲ್ಲಿ ಮೋಸದ ತ್ರಾಸು ಇದೆ. ಕಸಕೊಳ್ಳುವದನ್ನು ಅವನು ಪ್ರೀತಿಮಾಡುತ್ತಾನೆ.

ಯೋವೇಲ 3:17

ಹೀಗೆ ನನ್ನ ಪರಿಶುದ್ಧ ಪರ್ವತವಾದ ಚೀಯೋನಿ ನಲ್ಲಿ ವಾಸಿಸುವ ನಿಮ್ಮ ದೇವರಾದ ಕರ್ತನು ನಾನೇ ಎಂದು ನೀವು ತಿಳುಕೊಳ್ಳುವಿರಿ; ಆಗ ಯೆರೂಸಲೇಮು ಪರಿಶುದ್ಧವಾಗಿರುವದು; ಅನ್ಯರು ಇನ್ನು ಅದರಲ್ಲಿ ಹಾದುಹೋಗರು.

ಸೆಫನ್ಯ 1:11

ಮಕ್ತೇಷಿನ ನಿವಾಸಿ ಗಳೇ, ಗೋಳಾಡಿರಿ; ವರ್ತಕರ ಜನರೆಲ್ಲಾ ಸಂಹಾರ ವಾದರು; ಬೆಳ್ಳಿ ಹೊತ್ತವರೆಲ್ಲರೂ ಕಡಿದುಬಿಡಲ್ಪಟ್ಟಿ ದ್ದಾರೆ.

ಜೆಕರ್ಯ 7:6

ನೀವು ಉಂಡು ಕುಡಿದಾಗ ನಿಮಗೆ ನೀವೇ ಉಂಡು ಕುಡಿದಿರಲ್ಲಾ?

ಜೆಕರ್ಯ 14:20

ಆ ದಿನದಲ್ಲಿ ಕುದುರೆಗಳ ಗೆಜ್ಜೆಗಳ ಮೇಲೆ ಕರ್ತನಿಗೆ ಪರಿಶುದ್ಧವು ಎಂದಿರುವದು; ಕರ್ತನ ಆಲಯದ ಪಾತ್ರೆಗಳು ಬಲಿಪೀಠದ ಮುಂದಿನ ಪಾತ್ರೆಗಳ ಹಾಗಿರುವವು.ಹೌದು, ಯೆರೂಸಲೇಮಿ ನಲ್ಲಿಯೂ ಯೆಹೂದದಲ್ಲಿಯೂ ಇರುವ ಪ್ರತಿ ಯೊಂದು ಪಾತ್ರೆಯು ಸೈನ್ಯಗಳ ಕರ್ತನಿಗೆ ಪರಿಶುದ್ಧ ವಾಗಿರುವವು; ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳಲ್ಲಿ ತಕ್ಕೊಂಡು ಬೇಯಿಸುವರು; ಆ ದಿನದಲ್ಲಿ ಕಾನಾನ್ಯನು ಸೈನ್ಯಗಳ ಕರ್ತನ ಆಲಯದಲ್ಲಿ ಇನ್ನು ಮೇಲೆ ಇರುವದೇ ಇಲ್ಲ.

ಮತ್ತಾಯ 21:12

ಯೇಸು ದೇವಾಲಯದೊಳಗೆ ಹೋಗಿ ಅದರಲ್ಲಿ ಕ್ರಯ ವಿಕ್ರಯ ಮಾಡುವವರನ್ನೆಲ್ಲಾ ಹೊರಗೆ ಹಾಕಿ ಹಣ ಬದಲಾಯಿಸುವವರ ಮೇಜುಗಳನ್ನೂ ಪಾರಿ ವಾಳ ಮಾರುವವರ ಆಸನಗಳನ್ನೂ ಕೆಡವಿಹಾಕಿ ದನು.

ಮಾರ್ಕ 11:15

ಆಗ ಅವರು ಯೆರೂಸಲೇಮಿಗೆ ಬಂದರು; ಮತ್ತು ಯೇಸು ದೇವಾಲಯದೊಳಕ್ಕೆ ಹೋಗಿ ಅಲ್ಲಿ ಮಾರುತ್ತಿದ್ದವರನ್ನೂ ಕೊಂಡು ಕೊಳ್ಳುತ್ತಿದ್ದವರನ್ನೂ ಹೊರಗೆ ಹಾಕಲಾರಂಭಿಸಿ ಹಣ ಬದಲಾಯಿಸುವವರ ಮೇಜುಗಳನ್ನೂ ಪಾರಿವಾಳಗಳನ್ನು ಮಾರುತ್ತಿದ್ದವರ ಪೀಠಗಳನ್ನೂ ಕೆಡವಿಹಾಕಿದನು.

ಯೋಹಾನ 2:15

ಆಗ ಆತನು ಸಣ್ಣ ಹಗ್ಗಗಳಿಂದ ಕೊರಡೆ ಮಾಡಿ ಕುರಿ ಎತ್ತು ಸಹಿತ ಎಲ್ಲರನ್ನೂ ದೇವಾಲಯದ ಹೊರಕ್ಕೆ ಅಟ್ಟಿ ಚಿನಿವಾರರ ಹಣವನ್ನು ಚೆಲ್ಲಿ ಮೇಜು ಗಳನ್ನು ಕೆಡವಿದನು.

ರೋಮಾಪುರದವರಿಗೆ 14:6

ದಿನವನ್ನು ಗಣ್ಯ ಮಾಡುವವನು ಅದನ್ನು ಕರ್ತನಿಗಾಗಿ ಗಣ್ಯಮಾಡು ತ್ತಾನೆ; ದಿನವನ್ನು ಗಣ್ಯಮಾಡದವನು ಅದನು ಕರ್ತನಿಗಾಗಿ ಗಣ್ಯಮಾಡುವದಿಲ್ಲ; ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವರಿಗೆ ಉಪಕಾರ ಸ್ತುತಿ ಹೇಳುತ್ತಾನೆ; ತಿನ್ನದಿರುವವನು ಕರ್ತನಿಗಾಗಿ ತಿನ್ನದೆ ದೇವರಿಗೆ ಸೆ

1 ಕೊರಿಂಥದವರಿಗೆ 6:9

ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು

1 ಕೊರಿಂಥದವರಿಗೆ 10:31

ಆದದರಿಂದ ನೀವು ತಿಂದರೂ ಕುಡಿದರೂ ಏನು ಮಾಡಿದರೂ ಎಲ್ಲವನ್ನು ದೇವರ ಮಹಿಮೆಗಾಗಿ ಮಾಡಿರಿ.

ಎಫೆಸದವರಿಗೆ 2:19

ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೆ ಪರಿಶುದ್ಧರೊಂದಿಗೆ ಒಂದೇ ಪಟ್ಟಣದವರೂ ದೇವರ ಮನೆಯವರೂ ಆಗಿದ್ದೀರಿ.

1 ತಿಮೋಥೆಯ 3:15

ಆದರೆ ಒಂದು ವೇಳೆ ನಾನು ತಡಮಾಡಿದರೂ ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿರುವ ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಬೇಕು.ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ

1 ತಿಮೋಥೆಯ 4:3

ಮದುವೆಯಾಗಬಾರದೆಂತಲೂ ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿಕೊಂಡಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವದಕ್ಕೋಸ್ಕರ ದೇವರು ಉಂಟು ಮಾಡಿದ ಆಹಾರವನ್ನು ತಿನ್ನಬಾರ ದೆಂತಲೂ ಆಜ್ಞಾಪಿಸುತ್ತಾರೆ.

ಹೆಬ್ರಿಯರಿಗೆ 3:6

ಕ್ರಿಸ್ತನಾದರೋ ಮಗನಾಗಿ ತನ್ನ ಸ್ವಂತ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ; ನಾವು ನಮ್ಮ ಧೈರ್ಯ ವನ್ನೂ ನಮ್ಮ ನಿರೀಕ್ಷೆಯಿಂದುಂಟಾಗುವ ಉತ್ಸಾಹವನ್ನೂ ಕಡೇತನಕ ದೃಢವಾಗಿ ಹಿಡುಕೊಂಡವರಾದರೆ ನಾವೇ ಆತನ ಮನೆಯಾಗಿದ್ದೇವೆ.

1 ಪೇತ್ರ 4:17

ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯ ತೀರ್ಪಿನ ಸಮಯವು ಬಂದದೆ; ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರುವದು?

ಪ್ರಕಟನೆ 18:11

ಇದಲ್ಲದೆ ಭೂಲೋಕದ ವರ್ತಕರು ಅವಳ ನಿಮಿತ್ತವಾಗಿ ಅತ್ತು ಗೋಳಾಡುವರು. ಯಾಕಂದರೆ ಅವರ ಸರಕುಗಳನ್ನು ಅಂದರೆ

ಪ್ರಕಟನೆ 21:27

ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.

ಪ್ರಕಟನೆ 22:15

ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆ ಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.

Interlinear

Choose Theme