ಹೌದು, ಯೆರೂಸಲೇಮಿ ನಲ್ಲಿಯೂ ಯೆಹೂದದಲ್ಲಿಯೂ ಇರುವ ಪ್ರತಿ ಯೊಂದು ಪಾತ್ರೆಯು ಸೈನ್ಯಗಳ ಕರ್ತನಿಗೆ ಪರಿಶುದ್ಧ ವಾಗಿರುವವು; ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳಲ್ಲಿ ತಕ್ಕೊಂಡು ಬೇಯಿಸುವರು; ಆ ದಿನದಲ್ಲಿ ಕಾನಾನ್ಯನು ಸೈನ್ಯಗಳ ಕರ್ತನ ಆಲಯದಲ್ಲಿ ಇನ್ನು ಮೇಲೆ ಇರುವದೇ ಇಲ್ಲ.
Cross references
ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ತಿಂದು ನಿಮ್ಮ ಕುಟುಂಬಗಳ ಸಂಗಡ ನೀವು ನಿಮ್ಮ ದೇವರಾದ ಕರ್ತನು ನಿಮ್ಮನ್ನು ಆಶೀರ್ವದಿಸಿದ ಎಲ್ಲಾ ಕೈಕೆಲಸದಲ್ಲಿ ಸಂತೋಷಪಡಬೇಕು.
ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ಸಂತೋಷವಾಗಿರಬೇಕು; ನೀವೂ ನಿಮ್ಮ ಕುಮಾರ ಕುಮಾರ್ತೆಯರೂ ನಿಮ್ಮ ದಾಸದಾಸಿಯರೂ; ನಿಮ್ಮ ಬಾಗಲುಗಳಲ್ಲಿರುವ ಲೇವಿಯನು ಸಹ. ಅವನಿಗೆ ನಿಮ್ಮ ಸಂಗಡ ಪಾಲೂ ಸ್ವಾಸ್ತ್ಯವೂ ಇಲ್ಲ.
ಇದಲ್ಲದೆ ಅವನು ಅವರಿಗೆ--ನೀವು ಹೋಗಿ ಕೊಬ್ಬಿದ್ದನ್ನು ತಿಂದು ಸಿಹಿ ಯಾದದ್ದನ್ನು ಕುಡಿದು ಯಾರಿಗೆ ಸಿದ್ಧಮಾಡಿದ್ದು ಏನೂ ಇಲ್ಲವೋ ಅವರಿಗೆ ಭಾಗಗಳನ್ನು ಕಳುಹಿಸಿ ಕೊಡಿರಿ. ಯಾಕಂದರೆ ಈ ದಿನವು ನಮ್ಮ ಕರ್ತನಿಗೆ ಪರಿಶುದ್ಧ ವಾಗಿದೆ. ಕರ್ತನ ಆನಂದವು ನಿಮ್ಮ ಬಲವಾಗಿರು ವದರಿಂದ ನೀವು ವ್ಯಥೆಪಡಬೇಡಿರಿ.
ಹೀಗಿರುವಲ್ಲಿ ಚೀಯೋನಿನಲ್ಲಿ ಬಿಡಲ್ಪಟ್ಟವರು, ಯೆರೂಸಲೇಮಿನಲ್ಲಿ ಉಳಿದವರು, ಹಾಗೂ ಯೆರೂ ಸಲೇಮಿನಲ್ಲಿ ವಾಸಿಸುವವರೊಳಗೆ ಬರೆದಿರುವ ಪ್ರತಿ ಯೊಬ್ಬ ಮನುಷ್ಯನು ಪರಿಶುದ್ಧನೆಂದು ಕರೆಯಲ್ಪಡು ವನು.
ಅಲ್ಲಿ ರಾಜ ಮಾರ್ಗವಿರುವದು, ಅದು ಪರಿಶುದ್ಧ ಮಾರ್ಗವೆನಿಸಿಕೊಳ್ಳುವದು; ಯಾವ ಅಶು ದ್ಧನು ಅದರ ಮೇಲೆ ಹಾದುಹೋಗನು; ಅವರಿಗೋ ಸ್ಕರವೇ ಇರುವದು; ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಹೃದಯದಲ್ಲಿಯೂ ಶರೀರದ ಲ್ಲಿಯೂ ಸುನ್ನತಿಯಿಲ್ಲದ ಯಾವೊಬ್ಬ ಪರಕೀಯನೂ ಇಸ್ರಾಯೇಲಿನ ಮಕ್ಕಳೊಳಗಿರುವ ಯಾವೊಬ್ಬ ಅಪರಿಚಿತನೂ ನನ್ನ ಪರಿಶುದ್ಧಸ್ಥಳದೊಳಗೆ ಪ್ರವೇಶಿಸ ಬಾರದು.
ಅವನು ವ್ಯಾಪಾರಿಯಾಗಿದ್ದು ಅವನ ಕೈಯಲ್ಲಿ ಮೋಸದ ತ್ರಾಸು ಇದೆ. ಕಸಕೊಳ್ಳುವದನ್ನು ಅವನು ಪ್ರೀತಿಮಾಡುತ್ತಾನೆ.
ಹೀಗೆ ನನ್ನ ಪರಿಶುದ್ಧ ಪರ್ವತವಾದ ಚೀಯೋನಿ ನಲ್ಲಿ ವಾಸಿಸುವ ನಿಮ್ಮ ದೇವರಾದ ಕರ್ತನು ನಾನೇ ಎಂದು ನೀವು ತಿಳುಕೊಳ್ಳುವಿರಿ; ಆಗ ಯೆರೂಸಲೇಮು ಪರಿಶುದ್ಧವಾಗಿರುವದು; ಅನ್ಯರು ಇನ್ನು ಅದರಲ್ಲಿ ಹಾದುಹೋಗರು.
ಮಕ್ತೇಷಿನ ನಿವಾಸಿ ಗಳೇ, ಗೋಳಾಡಿರಿ; ವರ್ತಕರ ಜನರೆಲ್ಲಾ ಸಂಹಾರ ವಾದರು; ಬೆಳ್ಳಿ ಹೊತ್ತವರೆಲ್ಲರೂ ಕಡಿದುಬಿಡಲ್ಪಟ್ಟಿ ದ್ದಾರೆ.
ನೀವು ಉಂಡು ಕುಡಿದಾಗ ನಿಮಗೆ ನೀವೇ ಉಂಡು ಕುಡಿದಿರಲ್ಲಾ?
ಆ ದಿನದಲ್ಲಿ ಕುದುರೆಗಳ ಗೆಜ್ಜೆಗಳ ಮೇಲೆ ಕರ್ತನಿಗೆ ಪರಿಶುದ್ಧವು ಎಂದಿರುವದು; ಕರ್ತನ ಆಲಯದ ಪಾತ್ರೆಗಳು ಬಲಿಪೀಠದ ಮುಂದಿನ ಪಾತ್ರೆಗಳ ಹಾಗಿರುವವು.ಹೌದು, ಯೆರೂಸಲೇಮಿ ನಲ್ಲಿಯೂ ಯೆಹೂದದಲ್ಲಿಯೂ ಇರುವ ಪ್ರತಿ ಯೊಂದು ಪಾತ್ರೆಯು ಸೈನ್ಯಗಳ ಕರ್ತನಿಗೆ ಪರಿಶುದ್ಧ ವಾಗಿರುವವು; ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳಲ್ಲಿ ತಕ್ಕೊಂಡು ಬೇಯಿಸುವರು; ಆ ದಿನದಲ್ಲಿ ಕಾನಾನ್ಯನು ಸೈನ್ಯಗಳ ಕರ್ತನ ಆಲಯದಲ್ಲಿ ಇನ್ನು ಮೇಲೆ ಇರುವದೇ ಇಲ್ಲ.
ಯೇಸು ದೇವಾಲಯದೊಳಗೆ ಹೋಗಿ ಅದರಲ್ಲಿ ಕ್ರಯ ವಿಕ್ರಯ ಮಾಡುವವರನ್ನೆಲ್ಲಾ ಹೊರಗೆ ಹಾಕಿ ಹಣ ಬದಲಾಯಿಸುವವರ ಮೇಜುಗಳನ್ನೂ ಪಾರಿ ವಾಳ ಮಾರುವವರ ಆಸನಗಳನ್ನೂ ಕೆಡವಿಹಾಕಿ ದನು.
ಆಗ ಅವರು ಯೆರೂಸಲೇಮಿಗೆ ಬಂದರು; ಮತ್ತು ಯೇಸು ದೇವಾಲಯದೊಳಕ್ಕೆ ಹೋಗಿ ಅಲ್ಲಿ ಮಾರುತ್ತಿದ್ದವರನ್ನೂ ಕೊಂಡು ಕೊಳ್ಳುತ್ತಿದ್ದವರನ್ನೂ ಹೊರಗೆ ಹಾಕಲಾರಂಭಿಸಿ ಹಣ ಬದಲಾಯಿಸುವವರ ಮೇಜುಗಳನ್ನೂ ಪಾರಿವಾಳಗಳನ್ನು ಮಾರುತ್ತಿದ್ದವರ ಪೀಠಗಳನ್ನೂ ಕೆಡವಿಹಾಕಿದನು.
ಆಗ ಆತನು ಸಣ್ಣ ಹಗ್ಗಗಳಿಂದ ಕೊರಡೆ ಮಾಡಿ ಕುರಿ ಎತ್ತು ಸಹಿತ ಎಲ್ಲರನ್ನೂ ದೇವಾಲಯದ ಹೊರಕ್ಕೆ ಅಟ್ಟಿ ಚಿನಿವಾರರ ಹಣವನ್ನು ಚೆಲ್ಲಿ ಮೇಜು ಗಳನ್ನು ಕೆಡವಿದನು.
ದಿನವನ್ನು ಗಣ್ಯ ಮಾಡುವವನು ಅದನ್ನು ಕರ್ತನಿಗಾಗಿ ಗಣ್ಯಮಾಡು ತ್ತಾನೆ; ದಿನವನ್ನು ಗಣ್ಯಮಾಡದವನು ಅದನು ಕರ್ತನಿಗಾಗಿ ಗಣ್ಯಮಾಡುವದಿಲ್ಲ; ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವರಿಗೆ ಉಪಕಾರ ಸ್ತುತಿ ಹೇಳುತ್ತಾನೆ; ತಿನ್ನದಿರುವವನು ಕರ್ತನಿಗಾಗಿ ತಿನ್ನದೆ ದೇವರಿಗೆ ಸೆ
ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು
ಆದದರಿಂದ ನೀವು ತಿಂದರೂ ಕುಡಿದರೂ ಏನು ಮಾಡಿದರೂ ಎಲ್ಲವನ್ನು ದೇವರ ಮಹಿಮೆಗಾಗಿ ಮಾಡಿರಿ.
ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೆ ಪರಿಶುದ್ಧರೊಂದಿಗೆ ಒಂದೇ ಪಟ್ಟಣದವರೂ ದೇವರ ಮನೆಯವರೂ ಆಗಿದ್ದೀರಿ.
ಆದರೆ ಒಂದು ವೇಳೆ ನಾನು ತಡಮಾಡಿದರೂ ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿರುವ ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಬೇಕು.ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ
ಮದುವೆಯಾಗಬಾರದೆಂತಲೂ ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿಕೊಂಡಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವದಕ್ಕೋಸ್ಕರ ದೇವರು ಉಂಟು ಮಾಡಿದ ಆಹಾರವನ್ನು ತಿನ್ನಬಾರ ದೆಂತಲೂ ಆಜ್ಞಾಪಿಸುತ್ತಾರೆ.
ಕ್ರಿಸ್ತನಾದರೋ ಮಗನಾಗಿ ತನ್ನ ಸ್ವಂತ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ; ನಾವು ನಮ್ಮ ಧೈರ್ಯ ವನ್ನೂ ನಮ್ಮ ನಿರೀಕ್ಷೆಯಿಂದುಂಟಾಗುವ ಉತ್ಸಾಹವನ್ನೂ ಕಡೇತನಕ ದೃಢವಾಗಿ ಹಿಡುಕೊಂಡವರಾದರೆ ನಾವೇ ಆತನ ಮನೆಯಾಗಿದ್ದೇವೆ.
ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯ ತೀರ್ಪಿನ ಸಮಯವು ಬಂದದೆ; ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರುವದು?
ಇದಲ್ಲದೆ ಭೂಲೋಕದ ವರ್ತಕರು ಅವಳ ನಿಮಿತ್ತವಾಗಿ ಅತ್ತು ಗೋಳಾಡುವರು. ಯಾಕಂದರೆ ಅವರ ಸರಕುಗಳನ್ನು ಅಂದರೆ
ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.
ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆ ಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.