ಇದ ಲ್ಲದೆ ಆ ದಿನದಲ್ಲಿ ಅನೇಕ ಜನಾಂಗಗಳು ಕರ್ತನಿಗೆ ಅಂಟಿಕೊಂಡು ನನ್ನ ಜನರಾಗುವರು; ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು; ಸೈನ್ಯಗಳ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂದು ತಿಳುಕೊಳ್ಳುವಿ.
Cross references
ಮನೆಯಲ್ಲಿ ಹುಟ್ಟಿದವನಿಗೂ ನಿಮ್ಮಲ್ಲಿ ಪ್ರವಾಸಿ ಯಾಗಿರುವ ಅನ್ಯನಿಗೂ ಒಂದೇ ನ್ಯಾಯಪ್ರಮಾಣ ವಿರಬೇಕು ಎಂದು ಹೇಳಿದನು.
ಲೋಕದಂತ್ಯದಲ್ಲಿರುವ ಎಲ್ಲಾ ಜನರು ಜ್ಞಾಪಕ ಮಾಡಿ ಕರ್ತನ ಕಡೆಗೆ ತಿರಿಗಿಕೊಳ್ಳುವರು; ಜನಾಂಗ ಗಳ ಗೋತ್ರಗಳೆಲ್ಲರೂ ನಿನ್ನ ಮುಂದೆ ಆರಾಧಿಸುವರು.
ಯೆರೂಸಲೇಮಿನಲ್ಲಿರುವ ನಿನ್ನ ಮಂದಿ ರದ ನಿಮಿತ್ತ ಅರಸುಗಳು ನಿನಗೆ ಕಾಣಿಕೆಗಳನ್ನು ತರು ವರು.
ಸಮುದ್ರದಿಂದ ಸಮುದ್ರದ ವರೆಗೂ ನದಿಯಿಂದ ಭೂಮಿಯ ಕೊನೆಗಳವರೆಗೂ ಆತನು ಆಳುವನು.
ಆತನ ನಾಮವು ಎಂದೆಂದಿಗೂ ಇರುವದು; ಸೂರ್ಯನು ಇರುವವರೆಗೂ ಆತನ ಹೆಸರು ಇರು ವದು. ಮನುಷ್ಯರು ಆತನಲ್ಲಿ ಆಶೀರ್ವಾದ ಹೊಂದು ವರು. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತ ನೆಂದು ಕರೆಯುವರು.
ಆ ಅಂತ್ಯ ದಿನಗಳಲ್ಲಿ ಆಗುವದೇನಂದರೆ--ಕರ್ತನ ಆಲಯದ ಪರ್ವತವು ಗುಡ್ಡಗಳಿಗಿಂತ ಎತ್ತರ ವಾಗಿ ಪರ್ವತಗಳ ತುದಿಯಲ್ಲಿ ನೆಲೆಯಾಗಿರುವದು. ಎಲ್ಲಾ ಜನಾಂಗಗಳು ಅದರ ಕಡೆಗೆ ತಂಡ ತಂಡವಾಗಿ ಬರುವವು.
ನನ್ನ ಪರಿಶುದ್ಧ ಪರ್ವತದ ಲ್ಲೆಲ್ಲಾ ಕೇಡನ್ನಾಗಲಿ ನಾಶವನ್ನಾಗಲಿ ಯಾರೂ ಮಾಡು ವದಿಲ್ಲ; ಸಮುದ್ರವು ನೀರಿನಿಂದ ಮುಚ್ಚಿಕೊಂಡಿರು ವಂತೆ ಕರ್ತನ ತಿಳುವಳಿಕೆಯು ಭೂಮಿಯಲ್ಲಿ ತುಂಬಿ ಕೊಂಡಿರುವದು.
ಆ ದಿನದಲ್ಲಿ ಇಸ್ರಾಯೇಲು ಐಗುಪ್ತ್ಯರ ಸಂಗ ಡಲೂ ಅಶ್ಶೂರ್ಯರ ಸಂಗಡಲೂ ಮೂರನೆಯ ದಾಗಿ ದೇಶದ ಮಧ್ಯದಲ್ಲಿ ಆಶೀರ್ವಾದವಾಗಿರುವದು.ನನ್ನ ಪ್ರಜೆಯಾದ ಐಗುಪ್ತಕ್ಕೂ ನನ್ನ ಕೈಗಳ ಕೆಲಸ ವಾದ ಅಶ್ಶೂರ್ಯಕ್ಕೂ ನನ್ನ ಸ್ವಾಸ್ತ್ಯವಾದ ಇಸ್ರಾಯೇ ಲಿಗೂ ನಿಮಗೆ ಆಶೀರ್ವಾದ ಎಂದು ಹೇಳಿ ಅವರಿಗೆ ಆಶೀರ್ವಾದ ಕೊಡುವನು.
ಇಗೋ, ನಾನು ಆಧಾರವಾಗಿರುವ ನನ್ನ ಸೇವಕನು; ನಾನು ಆದುಕೊಂಡವನಲ್ಲಿ ನನ್ನ ಆತ್ಮ ಆನಂದಿಸುವದು. ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಅನ್ಯಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.
ಕರ್ತನು ಹೇಳುವದೇನಂದರೆ--ಐಗುಪ್ತದ ಆದಾ ಯವೂ ಇಥಿಯೋಪ್ಯದ ವ್ಯಾಪಾರವೂ ಎತ್ತರದ ಮನುಷ್ಯರಾದ ಸೆಬಾಯರೂ ನಿಮ್ಮಲ್ಲಿಗೆ ಸೇರಿ ನಿಮ್ಮವ ರಾಗಿ ನಿಮ್ಮನ್ನು ಅನುಸರಿಸುವರು; ಸಂಕೋಲೆಗಳನ್ನು ಕಟ್ಟಿಕೊಂಡು ಬಂದು ನಿಮ್ಮ ಮುಂದೆ ಅಡ್ಡಬಿದ್ದು ನಿಶ್ಚಯವಾಗಿ ದೇವರು ನಿಮ್ಮಲ್ಲಿಯೇ ಇದ್ದಾನೆ, ಮತ್ತೊ ಬ್ಬನು ಇಲ್ಲ, ಬೇರೆ ದೇವರು ಇಲ್ಲವೇ ಇಲ್ಲ.
ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು.
ಕರ್ತನಾದ ದೇವರು ಇಂತೆನ್ನುತ್ತಾನೆ--ಇಗೋ, ನಾನು ಅನ್ಯಜನಗಳ ಕಡೆಗೆ ಕೈ ಎತ್ತಿ ಜನರಿಗೆ ನನ್ನ ಧ್ವಜವನ್ನು ಎತ್ತುವೆನು; ಅವರು ನಿನ್ನ ಕುಮಾರರನ್ನು ಕೈಹಿಡಿದು ತರುವರು; ನಿನ್ನ ಕುಮಾರ್ತೆಯರನ್ನು ತಮ್ಮ ಹೆಗಲಮೇಲೆ ತರುವರು.
ಕರ್ತನು ತನ್ನ ಪರಿ ಶುದ್ಧವಾದ ಬಾಹುವನ್ನು ಸಕಲ ಜನಾಂಗಗಳ ಕಣ್ಣು ಗಳಿಗೆ ತೋರಮಾಡಿದ್ದಾನೆ. ಭೂಮಿಯ ಅಂತ್ಯದವ ರೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡುವರು.
ಹೊರಡಿರಿ, ಹೊರಡಿರಿ, ಅಲ್ಲಿಂದ ಹೊರಗೆ ಹೋಗಿರಿ, ಅಶುದ್ಧವಾದದ್ದನ್ನು ಮುಟ್ಟಬೇಡಿರಿ; ಅವಳ ಮಧ್ಯದಿಂದ ಹೊರಗೆ ಹೋಗಿರಿ; ಕರ್ತನ ಪಾತ್ರೆಗ ಳನ್ನು ಹೊರುವವರೇ, ನೀವು ಶುದ್ಧರಾಗಿರ್ರಿ.
ಅನ್ಯಜನಾಂಗಗಳು ನಿನ್ನ ಪ್ರಕಾಶಕ್ಕೂ ಅರಸರು ನಿನ್ನ ಉದಯದ ಕಾಂತಿಗೂ ಬರುವರು.
ಅವರ ಮಧ್ಯದಲ್ಲಿ ಒಂದು ಗುರುತನ್ನಿಟ್ಟು ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ ತಾರ್ಷೀಷಿಗೂ ಫೂಲಿಗೂ ಲೂದಿಗೂ ಬಿಲ್ಲು ಬೊಗ್ಗಿಸುವವರಿಗೂ ತೂಬಲಿಗೂ ಯಾವಾನಿಗೂ ನನ್ನ ಸಮಾಚಾರವನ್ನು ಕೇಳದೆ ನನ್ನ ಮಹಿಮೆಯನ್ನು ನೋಡದೆ ಇರುವ ದೂರದ ದ್ವೀಪ ಗಳಿಗೂ ಕಳುಹಿಸುವೆನು; ಅವರು ಅನ್ಯಜನಾಂಗಗಳಲ್ಲಿ ನನ್ನ ಮಹಿಮೆಯನ್ನು ತಿಳಿಸುವರು.
ಕರ್ತನು ನನಗೆ ಹೀಗೆ ಹೇಳಿದನು--ಹೋಗಿ ಜನರ ಮಕ್ಕಳ ಬಾಗಿಲಲ್ಲಿಯೂ ಯೆಹೂದದ ಅರಸರು ಪ್ರವೇಶಿಸುವಲ್ಲಿಯೂ ಹೊರಡುವಲ್ಲಿಯೂ ಯೆರೂಸ ಲೇಮಿನ ಎಲ್ಲಾ ಬಾಗಿಲುಗಳಲ್ಲಿಯೂ ನಿಂತುಕೊಂಡು
ಇದ್ದಕ್ಕಿದ್ದ ಹಾಗೆ ಬಾಬೆಲ್ ಬಿದ್ದು ಮುರಿಯಲ್ಪಟ್ಟಿದೆ; ಅದರ ವಿಷಯ ಗೋಳಾ ಡಿರಿ; ಅದರ ನೋವಿಗೆ ತೈಲ ತಕ್ಕೊಳ್ಳಿರಿ; ಒಂದು ವೇಳೆ ವಾಸಿಯಾದೀತು.
ಯಾವಾಗ ಇದು ಬರುತ್ತದೋ ಆಗ ಅವರಿಗೆ ಪ್ರವಾದಿಯು ತಮ್ಮ ಸಂಗಡ ಇದ್ದಾನೆಂದು ತಿಳಿಯುವದು.
ಇಗೋ, ನಾನು ನನ್ನ ಕೈಯನ್ನು ಅವರ ಮೇಲೆ ಜಾಡಿಸುತ್ತೇನೆ; ಆಗ ಅವರು ತಮ್ಮ ದಾಸರಿಗೆ ಕೊಳ್ಳೆಯಾಗುವರು; ಸೈನ್ಯಗಳ ಕರ್ತನು ನನ್ನನ್ನು ಕಳುಹಿಸಿದನೆಂದು ನೀವು ತಿಳಿಯುವಿರಿ.
ಆ ದಿನದಲ್ಲಿ ನೀವು ನಿಮ್ಮ ನಿಮ್ಮ ನೆರೆಯವರನ್ನು ದ್ರಾಕ್ಷೇಬಳ್ಳಿಯ ಕೆಳಗೂ ಅಂಜೂರ ಮರದ ಕೆಳಗೂ ಕರೆಯುವಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಜನಗಳೂ ಅನೇಕ ಪಟ್ಟಣಗಳ ನಿವಾಸಿಗಳೂ ಇನ್ನು ಬರುವರು;
ಸೂರ್ಯೋದಯವು ಮೊದಲುಗೊಂಡು ಅದರ ಅಸ್ತಮಾನದ ವರೆಗೂ ನನ್ನ ಹೆಸರು ಅನ್ಯಜನಾಂಗ ಗಳಲ್ಲಿ ಘನವಾಗಿರುವದು; ಸಕಲ ಸ್ಥಳಗಳಲ್ಲಿ ನನ್ನ ಹೆಸರಿಗೆ ಧೂಪವೂ ಶುದ್ಧಕಾಣಿಕೆಯೂ ಅರ್ಪಿಸ ಲ್ಪಡುವದು; ನನ್ನ ಹೆಸರು ಅನ್ಯಜನಾಂಗಗಳಲ್ಲಿ ಘನ ವಾಗಿ ರುವದೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಅದು ಅನ್ಯಜನರನ್ನು ಬೆಳಗಿಸುವ ಬೆಳಕೂ ನಿನ್ನ ಪ್ರಜೆಯಾದ ಇಸ್ರಾಯೇಲ್ಯರ ಮಹಿ ಮೆಯೂ ಆಗಿದೆ ಅಂದನು.
ಇದಲ್ಲದೆ ಅವರೆಲ್ಲರೂ ನಮ್ಮಲ್ಲಿ ಒಂದಾಗಿರಬೇಕೆಂತಲೂ ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವಂತೆಯೂ ತಂದೆಯಾದ ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆ ಇವರು ಸಹ ನಮ್ಮಲ್ಲಿ ಒಂದಾಗಿರ ಬೇಕೆಂತಲೂ ಕೇಳಿಕೊಳ್ಳುತ್ತೇನೆ.
ನಾನು ಇವರಲ್ಲಿಯೂ ನೀನು ನನ್ನಲ್ಲಿಯೂ (ಇರುವಂತೆ) ಅವರೂ ಒಂದಾಗಿ ಪರಿಪೂರ್ಣರಾಗಿ ರುವರು; ನೀನು ನನ್ನನ್ನು ಕಳುಹಿಸಿದ್ದೀ ಎಂತಲೂ ನನ್ನನ್ನು ಪ್ರೀತಿ ಮಾಡಿದಂತೆ ಅವರನ್ನು ನೀನು ಪ್ರೀತಿಮಾಡಿದ್ದೀ ಎಂತಲೂ ಲೋಕವು ತಿಳಿದುಕೊಳ್ಳುವದು.
ಓ ನೀತಿಯುಳ್ಳ ತಂದೆಯೇ, ಲೋಕವು ನಿನ್ನನ್ನು ತಿಳಿಯಲಿಲ್ಲ; ಆದರೆ ನಾನು ನಿನ್ನನ್ನು ತಿಳಿದಿದ್ದೇನೆ, ನೀನೇ ನನ್ನನ್ನು ಕಳುಹಿಸಿದ್ದೀ ಎಂದು ಇವರು ತಿಳಿದಿದ್ದಾರೆ.ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಅವರಲ್ಲಿ ಇರಬೇಕೆಂತಲೂ ನಾನು ಅವರಲ್ಲಿ ಇರುವಂತೆಯೂ ನಾನು ಅವರಿಗೆ ನಿನ್ನ ಹೆಸರನ್ನು ಪ್ರಕಟಿಸಿದ್ದೇನೆ; ಇನ್ನೂ ಪ್ರಕಟಿಸುವೆನು ಅಂದನು.
ಆದಕಾರಣ ದೇವರ ರಕ್ಷಣೆಯು ಅನ್ಯಜನಾಂಗದವರಿಗೆ ಕಳುಹಿಸಲ್ಪಟ್ಟಿದೆ; ಅದನ್ನು ಅವರು ಕೇಳುವರು ಎಂಬದಾಗಿ ನಿಮಗೆ ತಿಳಿದಿರಲಿ ಅಂದನು.
ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.