ಯಾಕಂ ದರೆ ನಾನು ಅದರ ಸುತ್ತಲೂ ಬೆಂಕಿಯ ಗೋಡೆಯಾ ಗಿಯೂ ಅದರ ಮಧ್ಯದಲ್ಲಿ ಮಹಿಮೆಯಾಗಿಯೂ ಇರುವೆನೆಂದು ಕರ್ತನು ಅನ್ನುತ್ತಾನೆ.
Cross references
ಆದರೆ ಓ ನನ್ನ ಕರ್ತನೇ, ನನಗೆ ಗುರಾಣಿಯೂ ನನ್ನ ಘನವೂ ನನ್ನ ತಲೆ ಎತ್ತುವವನೂ ನೀನೇ.
ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
ದೇವರು ಅದರ ಅರಮನೆಗಳಲ್ಲಿ ಆಶ್ರಯ ವೆಂದು ಗೊತ್ತಾಗಿದೆ.
ಚೀಯೋನನ್ನು ಸುತ್ತಿ ಅವಳ ಸುತ್ತಲು ತಿರುಗಿ ಅದರ ಬುರುಜುಗಳನ್ನು ಲೆಕ್ಕಿಸಿರಿ.
ಕರ್ತನು ಚೀಯೋನ್ ಪರ್ವತದ ಪ್ರತಿಯೊಂದು ವಾಸಿಸುವ ಸ್ಥಳದ ಮೇಲೂ ಅವಳ ಸಭೆಗಳ ಮೇಲೂ ಹಗಲಿನಲ್ಲಿ ಹೊಗೆಯನ್ನೂ ಮೇಘವನ್ನೂ ಇರುಳಿನಲ್ಲಿ ಪ್ರಜ್ವಲಿ ಸುವ ಅಗ್ನಿಪ್ರಕಾಶವನ್ನೂ ಉಂಟುಮಾಡುವನು; ಎಲ್ಲಾ ಮಹಿಮೆಯ ಮೇಲೆ ಕಾವಲಿರುವದು.ಹಗಲಲ್ಲಿ ಬಿಸಿಲಿಗೆ ನೆರಳಾಗುವ ಹಾಗೂ ಬಿರುಗಾಳಿಗೂ ಮಳೆಗೂ ಮರೆಯಾಗಲು ಆಶ್ರಯ ಸ್ಥಾನವಾಗಿ ಒಂದು ಗುಡಾರವಿರುವದು.
ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ.
ಆ ದಿವಸದಲ್ಲಿ ಯೆಹೂದ ದೇಶದೊಳಗೆ ಈ ಹಾಡನ್ನು ಹಾಡುವರು; ನಮಗೆ ಬಲ ವಾದ ಪಟ್ಟಣವಿದೆ. ರಕ್ಷಣೆಯನ್ನು ಕೋಟೆಯನ್ನಾ ಗಿಯೂ ಹೊರಪೌಳಿಯನ್ನಾಗಿಯೂ ದೇವರು ಮಾಡು ವನು.
ಆದರೆ ಅಲ್ಲಿ ವಿಸ್ತಾರವಾದ ನದಿಗಳಂತೆ ಮತ್ತು ಪ್ರವಾಹಗ ಳಂತೆ ಮಹಿಮೆಯುಳ್ಳ ಕರ್ತನು ನಮಗೆ ಇರುವನು. ಅಲ್ಲಿ ಹುಟ್ಟುಗೋಲಿನ ದೋಣಿ ಹೋಗದು, ಘನ ನಾವೆಯು ಸಂಚರಿಸದು.
ಬಲಾತ್ಕಾರವೂ ನಿನ್ನ ದೇಶದೊಳಗೆ ಹಾಳಾದದ್ದೂ ನಾಶವೂ ನಿನ್ನ ಮೇರೆ ಗಳಲ್ಲಿ ಕೇಳಲ್ಪಡುವದಿಲ್ಲ; ನಿನ್ನ ಗೋಡೆಗಳಿಗೆ ರಕ್ಷಣೆ ಎಂದೂ ನಿನ್ನ ಬಾಗಿಲುಗಳಿಗೆ ಸ್ತೋತ್ರವೆಂದೂ ಹೆಸರಿ ಡುವಿ.
ಅವರಿಗೂ ಅವರ ತರುವಾಯ ಅವರ ಮಕ್ಕಳಿಗೂ ಒಳ್ಳೇದಕ್ಕಾಗಿ ಅವರು ಯಾವಾಗಲೂ ನನಗೆ ಭಯ ಪಡುವ ಹಾಗೆ ಅವರಿಗೆ ಒಂದೇ ಹೃದಯವನ್ನೂ ಒಂದೇ ಮಾರ್ಗವನ್ನೂ ಕೊಡುವೆನು.
ಕೈಯಲ್ಲಿ ನೂಲು ಇದ್ದ ಆ ಮನುಷ್ಯನು ಪೂರ್ವದ ಕಡೆಗೆ ಹೊರಟು ಸಾವಿರ ಮೊಳ ಅಳೆದ ಮೇಲೆ, ನನ್ನನ್ನು ನೀರಿನಿಂದ ದಾಟಿಸಿದನು; ಅಲ್ಲಿ ನೀರು ಹೆಜ್ಜೆ ಮುಳುಗುವಷ್ಟಿತ್ತು. 4
ಎಲ್ಲಾ ಜನಾಂಗಗಳನ್ನು ಅದುರಿಸುತ್ತೇನೆ; ಎಲ್ಲಾ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು ಈ ಆಲಯವನ್ನು ಮಹಿಮೆಯಿಂದ ತುಂಬಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಆದದರಿಂದ ಕರ್ತನು ಹೀಗೆ ಹೇಳುತ್ತಾನೆ --ನಾನು ಕನಿಕರದಿಂದ ಯೆರೂಸಲೇಮಿನ ಕಡೆಗೆ ತಿರುಗಿಕೊಂಡಿದ್ದೇನೆ; ನನ್ನ ಆಲಯವು ಅದರಲ್ಲಿ ಕಟ್ಟ ಲ್ಪಡುವದೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಯೆರೂ ಸಲೇಮಿನ ಮೇಲೆ ಅಳತೆ ನೂಲು ಚಾಚಲ್ಪಡುವದು.
ಇದಲ್ಲದೆ ಹೋಗುತ್ತಾ ಬರುತ್ತಾ ಇರುವವನ ನಿಮಿತ್ತವೂ ಸೈನ್ಯದ ನಿಮಿತ್ತವೂ ನನ್ನ ಮನೆಯ ಹತ್ತಿರ ಪಾಳೆಯಮಾಡುತ್ತೇನೆ; ಇನ್ನು ಮೇಲೆ ಉಪದ್ರ ಕೊಡುವವನು ಅವರ ಮೇಲೆ ಹಾದು ಹೋಗುವದಿಲ್ಲ; ಯಾಕಂದರೆ ಈಗ ನನ್ನ ಕಣ್ಣುಗಳಿಂದ ನೋಡಿದ್ದೇನೆ.
ಅದು ಅನ್ಯಜನರನ್ನು ಬೆಳಗಿಸುವ ಬೆಳಕೂ ನಿನ್ನ ಪ್ರಜೆಯಾದ ಇಸ್ರಾಯೇಲ್ಯರ ಮಹಿ ಮೆಯೂ ಆಗಿದೆ ಅಂದನು.
ಅವನು ಆತ್ಮದಲ್ಲಿ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ ಪರಲೋಕ ದೊಳಗಿಂದ ಪರಿಶುದ್ಧವಾದ ಯೆರೂಸಲೇಮೆಂಬ ಆ ದೊಡ್ಡ ಪಟ್ಟಣವು ದೇವರ ಕಡೆಯಿಂದ ಇಳಿದು ಬರುವ ದನ್ನು ನನಗೆ ತೋರಿಸಿದನು.
ಪಟ್ಟಣದಲ್ಲಿ ಬೆಳಕನ್ನು ಕೊಡು ವದಕ್ಕಾಗಿ ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿಲ್ಲ. ಯಾಕಂದರೆ ಅದಕ್ಕೆ ದೇವರ ಪ್ರಭಾವವೇ ಬೆಳಕನ್ನು ಕೊಟ್ಟಿತು; ಕುರಿಮರಿಯಾದಾತನೇ ಅದರ ದೀಪ.
ಇನ್ನು ಮೇಲೆ ಶಾಪವೇನೂ ಇರುವದಿಲ್ಲ; ಅದರಲ್ಲಿ ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನವಿರುವದು. ಆತನ ಸೇವಕರು ಆತನನ್ನು ಸೇವಿಸುವರು.