ಇಗೋ, ನಾನು ನನ್ನ ಕೈಯನ್ನು ಅವರ ಮೇಲೆ ಜಾಡಿಸುತ್ತೇನೆ; ಆಗ ಅವರು ತಮ್ಮ ದಾಸರಿಗೆ ಕೊಳ್ಳೆಯಾಗುವರು; ಸೈನ್ಯಗಳ ಕರ್ತನು ನನ್ನನ್ನು ಕಳುಹಿಸಿದನೆಂದು ನೀವು ತಿಳಿಯುವಿರಿ.
Cross references
ಕರ್ತನು ಚೀಯೋನ್ ಪರ್ವತದ ಪ್ರತಿಯೊಂದು ವಾಸಿಸುವ ಸ್ಥಳದ ಮೇಲೂ ಅವಳ ಸಭೆಗಳ ಮೇಲೂ ಹಗಲಿನಲ್ಲಿ ಹೊಗೆಯನ್ನೂ ಮೇಘವನ್ನೂ ಇರುಳಿನಲ್ಲಿ ಪ್ರಜ್ವಲಿ ಸುವ ಅಗ್ನಿಪ್ರಕಾಶವನ್ನೂ ಉಂಟುಮಾಡುವನು; ಎಲ್ಲಾ ಮಹಿಮೆಯ ಮೇಲೆ ಕಾವಲಿರುವದು.ಹಗಲಲ್ಲಿ ಬಿಸಿಲಿಗೆ ನೆರಳಾಗುವ ಹಾಗೂ ಬಿರುಗಾಳಿಗೂ ಮಳೆಗೂ ಮರೆಯಾಗಲು ಆಶ್ರಯ ಸ್ಥಾನವಾಗಿ ಒಂದು ಗುಡಾರವಿರುವದು.
ಆ ದಿನ ದಲ್ಲಿ ಅವನು ನೋಬಿನಲ್ಲಿ ಇಳುಕೊಂಡವನಂತೆ ಇದ್ದಾಗ್ಯೂ ಚೀಯೋನ್ ಕುಮಾರ್ತೆಯ ಪರ್ವತಕ್ಕೂ ಯೆರೂಸಲೇಮಿನ ಗುಡ್ಡಕ್ಕೂ ವಿರೋಧವಾಗಿ ತನ್ನ ಕೈಯನ್ನು ಅಲ್ಲಾಡಿಸುವನು.
ಕರ್ತನು ಐಗುಪ್ತ ಸಮುದ್ರದ ನಾಲಿಗೆಯನ್ನು ಸಂಪೂರ್ಣವಾಗಿ ನಾಶಮಾಡುವನು; ಆತನು ತನ್ನ ಬಲವಾದ ಗಾಳಿಯಿಂದ ನದಿಯ ಮೇಲೆ ಕೈಯನ್ನು ಜಾಡಿಸಿ ಅದನ್ನು ಏಳು ಹೊಳೆಗಳಾಗಿ ಹೊಡೆದು ಮನುಷ್ಯರ ಕೆರಗಳು ನೆನೆಯದಂತೆ ದಾಟಿಸು ವನು.ಇದಲ್ಲದೆ ಇಸ್ರಾಯೇಲ್ಯರು ಐಗುಪ್ತದೇಶ ದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಶ್ಶೂರದಿಂದ ತಪ್ಪಿಸಿ ಕೊಂಡು ಬರುವ ತನ್ನ ಉಳಿದ ಜನರಿಗೆ ವಿಶಾಲ ವಾದ ಮಾರ್ಗವು ಇರುವದು.
ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ.
ಅವರು(ಶತ್ರುಗಳು) ಬಂದು ಘನವಂತ ದ್ವಾರಗಳೊಳಗೆ ಹೋಗುವಂತೆ ಎತ್ತರವಾದ ಪರ್ವತದ ಮೇಲೆ ನೀವು ಧ್ವಜವನ್ನೆತ್ತಿ ಅವರಿಗೆ ನಿಮ್ಮ ಶಬ್ದವನ್ನು ಕೇಳಿಸುವಂತೆ ಜೋರಾಗಿ ಕೂಗಿ ಕರೆಯಿರಿ.
ಜನರು ಅವರನ್ನು ತೆಗೆದುಕೊಂಡು ತಮ್ಮ ಸ್ಥಳಕ್ಕೆ ಅವರನ್ನು ಬರಮಾಡುವರು. ಆಗ ಇಸ್ರಾಯೇಲಿನ ಮನೆತನದವರು ಕರ್ತನ ದೇಶದಲ್ಲಿ ಆ ಜನಾಂಗದ ವರನ್ನು ಗಂಡು ಹೆಣ್ಣಾಳುಗಳನ್ನಾಗಿ (ದಾಸದಾಸಿಯ ರನ್ನಾಗಿ) ಇಟ್ಟುಕೊಳ್ಳುವರು. ತಮ್ಮನ್ನು ಸೆರೆಹಿಡಿದ ವರನ್ನು ಸೆರೆಹಿಡಿಯುವರು, ತಮ್ಮನ್ನು ಹಿಂಸಿಸಿದವರ ಮೇಲೆ ಅಧಿಕಾರನಡಿಸುವರು.
ಆ ದಿನದಲ್ಲಿ ಐಗುಪ್ತವು ಹೆಂಗಸರ ಹಾಗೆ ಇರು ವದು. ಸೈನ್ಯಗಳ ಕರ್ತನು ಅದರ ಮೇಲೆ ಆಡಿಸುವ ಕೈಯನ್ನು ಬೀಸುತ್ತಿರುವದರಿಂದ ಹೆದರಿ ಭಯಪಡು ವದು.
ಆ ದಿವಸದಲ್ಲಿ ಯೆಹೂದ ದೇಶದೊಳಗೆ ಈ ಹಾಡನ್ನು ಹಾಡುವರು; ನಮಗೆ ಬಲ ವಾದ ಪಟ್ಟಣವಿದೆ. ರಕ್ಷಣೆಯನ್ನು ಕೋಟೆಯನ್ನಾ ಗಿಯೂ ಹೊರಪೌಳಿಯನ್ನಾಗಿಯೂ ದೇವರು ಮಾಡು ವನು.
ನಿನಗೆ ಅಯ್ಯೊ ಸೂರೆಯಾಗದಿದ್ದರೂ ನೀನು ಸೂರೆಮಾಡಿದಿ, ನಿನಗೆ ದ್ರೋಹ ಮಾಡದಿದ್ದರೂ ನೀನು ದ್ರೋಹ ಮಾಡಿದಿ, ನೀನು ಸೂರೆ ಮಾಡುವದನ್ನು ಮುಗಿಸಿದಾಗ ನೀನು ಸೂರೆ ಯಾಗುವಿ, ದ್ರೋಹ ಮಾಡುವುದನ್ನು ಬಿಟ್ಟ ಮೇಲೆ ನಿನಗೂ ದ್ರೋಹ ಮಾಡುವರು.
ಆದರೆ ಅಲ್ಲಿ ವಿಸ್ತಾರವಾದ ನದಿಗಳಂತೆ ಮತ್ತು ಪ್ರವಾಹಗ ಳಂತೆ ಮಹಿಮೆಯುಳ್ಳ ಕರ್ತನು ನಮಗೆ ಇರುವನು. ಅಲ್ಲಿ ಹುಟ್ಟುಗೋಲಿನ ದೋಣಿ ಹೋಗದು, ಘನ ನಾವೆಯು ಸಂಚರಿಸದು.
ನಿನ್ನ ಹಗ್ಗಗಳು ಸಡಲಿ ಸ್ತಂಭದ ಪಾದ ವನ್ನು ಸ್ಥಿರಪಡಿಸಿಕೊಳ್ಳಲಾರದೆ ಹೋದವು; ಪಠವನ್ನು ಮುದುರದಂತೆ ಹಿಡಿದಿರಲಿಕ್ಕೂ ಆಗಲಿಲ್ಲ. ಆಗ ದೊಡ್ಡ ಸೂರೆಯು ಕೊಳ್ಳೆಯಾಗಿ ಹಂಚುವದಕ್ಕೆ ಆಸ್ಪದವಾ ಯಿತು. ಕುಂಟರೂ ಸುಲಿಗೆ ಮಾಡಿದರು.ಯಾವ ನಿವಾಸಿಯೂ ತಾನು ಅಸ್ವಸ್ಥನು ಎಂದು ಹೇಳನು. ಅದರಲ್ಲಿ ವಾಸವಾಗಿರುವ ಜನರ ಅಕ್ರಮವು ಕ್ಷಮಿಸಲ್ಪಡುವದು.
ಬಲಾತ್ಕಾರವೂ ನಿನ್ನ ದೇಶದೊಳಗೆ ಹಾಳಾದದ್ದೂ ನಾಶವೂ ನಿನ್ನ ಮೇರೆ ಗಳಲ್ಲಿ ಕೇಳಲ್ಪಡುವದಿಲ್ಲ; ನಿನ್ನ ಗೋಡೆಗಳಿಗೆ ರಕ್ಷಣೆ ಎಂದೂ ನಿನ್ನ ಬಾಗಿಲುಗಳಿಗೆ ಸ್ತೋತ್ರವೆಂದೂ ಹೆಸರಿ ಡುವಿ.
ಇನ್ನು ಮೇಲೆ ಸೂರ್ಯನು ನಿನಗೆ ಹಗಲಿ ನಲ್ಲಿ ಬೆಳಕಾಗಿರುವದಿಲ್ಲ, ಚಂದ್ರನು ಪ್ರಕಾಶಕ್ಕಾಗಿ ನಿನಗೆ ಬೆಳಕು ಕೊಡುವದಿಲ್ಲ; ಆದರೆ ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು. ನಿನ್ನ ದೇವರು ನಿನ್ನ ಪ್ರಭೆಯಾಗಿರುವನು.
ನಾವು ಹೇಗೆ ಹಾಳಾದೆವು, ನಾವು ದೇಶವನ್ನು ಬಿಟ್ಟದ್ದರಿಂದಲೂ ನಮ್ಮ ನಿವಾಸಗಳು ನಮ್ಮನ್ನು ಹೊರಗೆ ಹಾಕಿದ್ದರಿಂದಲೂ ಬಹಳವಾಗಿ ನಾಚಿಕೆಪಡುತ್ತೇವೆ ಎಂಬ ಗೋಳಾಟದ ಶಬ್ದವು ಚೀಯೋನಿನಿಂದ ಕೇಳಿ ಬಂತು.
ಆದಾಗ್ಯೂ ನಾನು ನಿನಗೂ ಜನರ ಕಿವಿಗಳಿಗೂ ಬೀಳುವಂತೆ ಹೇಳುವ ಈ ವಾಕ್ಯವನ್ನು ಕೇಳು.
ಅವರು ನಿಮಗೆ ನನ್ನ ಹೆಸರಿನಲ್ಲಿ ಸುಳ್ಳಾಗಿ ಪ್ರವಾದಿಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲವೆಂದು ಕರ್ತನು ಅನ್ನುತ್ತಾನೆ.
ಅದಕ್ಕಾಗಿ ಅವರು ಬಯಲಿನಿಂದ ಮರ ಗಳನ್ನಾಗಲಿ ತೆಗೆದುಕೊಳ್ಳುವುದಿಲ್ಲ, ಅಥವಾ ಅರಣ್ಯ ದಲ್ಲಿ ಯಾವುದನ್ನೂ ಕತ್ತರಿಸಿಕೊಳ್ಳುವದೂ ಇಲ್ಲ; ಅವರು ಆಯುಧಗಳನ್ನು ಬೆಂಕಿಯಿಂದಲೇ ಸುಡುವರು; ಅವರು ಸೂರೆಯಾದವುಗಳನ್ನು ಸೂರೆಮಾಡುವರು ಮತ್ತು ಕೊಳ್ಳೆಹೊಡೆದವರನ್ನು ತಾವು ಕೊಳ್ಳೆಹೊಡೆ ಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
ನಾನು ಇಸ್ರಾಯೇಲಿನ ಮಧ್ಯದಲ್ಲಿ ಇದ್ದೇನೆಂದೂ ಮತ್ತೊಬ್ಬ ನಲ್ಲ, ನಾನೇ ನಿಮ್ಮ ದೇವರಾದ ಕರ್ತನಾಗಿದ್ದೇನೆಂದೂ ನೀವು ತಿಳುಕೊಳ್ಳುವಿರಿ; ನನ್ನ ಜನರು ಎಂದೆಂದಿಗೂ ನಾಚಿಕೆಪಡರು.
ನೀನು ಅನೇಕ ಜನಾಂಗಗಳನ್ನು ಸೂರೆ ಮಾಡಿದ್ದರಿಂದ ಜನರಲ್ಲಿ ಉಳಿದವರೆಲ್ಲಾ ನಿನ್ನನ್ನು ಸೂರೆ ಮಾಡುವರು; ಮನುಷ್ಯರ ರಕ್ತಕ್ಕಾಗಿ ದೇಶ, ಪಟ್ಟಣ, ಅದರ ಎಲ್ಲಾ ನಿವಾಸಿಗಳ ಬಲಾತ್ಕಾರದ ನಿಮಿತ್ತವೇ.
ಲೆಬನೋನಿನ ಹಿಂಸೆಯು ನಿನ್ನನ್ನು ಮುಚ್ಚುವದು; ಮೃಗಗಳ ಸೂರೆ ನಿನ್ನನ್ನು ಹೆದರಿಸುವದು; ಮನುಷ್ಯರ ರಕ್ತಕ್ಕಾಗಿ, ದೇಶ, ಪಟ್ಟಣ, ಅದರ ಎಲ್ಲಾ ನಿವಾಸಿಗಳ ಹಿಂಸೆಯು ನಿಮಿತ್ತವೇ.
ಆದದರಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೇಳು ವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ಮೋವಾಬು ಸೊದೋಮಿನ ಹಾಗಾಗುವದು; ಅಮ್ಮೋ ನನ ಮಕ್ಕಳು ಗೊಮೋರದ ಹಾಗಾಗುವರು; ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಣಿಗಳುಳ್ಳಂಥ ನಿತ್ಯವಾಗಿ ಹಾಳಾಗುವಂಥ ಸ್ಥಳವಾಗುವರು; ನನ್ನ ಜನರಲ್ಲಿ ಉಳಿದವರು ಅವರನ್ನು ಸುಲುಕೊಳ್ಳುವರು; ನನ್ನ ಜನರಲ್ಲಿ ಮಿಕ್ಕಾದವರು ಅವರನ್ನು ಸ್ವಾಧೀನ ಮಾಡಿಕೊಳ್ಳುವರು.
ಕರ್ತನು ನಿನ್ನ ನ್ಯಾಯ ತೀರ್ವಿಕೆಗಳನ್ನು ದೂರಮಾಡಿ ನಿನ್ನ ಶತ್ರು ವನ್ನು ತೆಗೆದುಹಾಕಿದ್ದಾನೆ; ಇಸ್ರಾಯೇಲಿನ ಅರಸನಾದ ಕರ್ತನು ನಿನ್ನ ಮಧ್ಯದಲ್ಲಿ ಇದ್ದಾನೆ; ಇನ್ನು ಮೇಲೆ ನೀನು ಕೇಡನ್ನು ನೋಡುವದಿಲ್ಲ.
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮನ್ನು ಸುಲುಕೊಂಡ ಜನಾಂಗ ಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ; ನಿಮ್ಮನ್ನು ಮುಟ್ಟುವವನು ಆತನ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ.
ಜೆರುಬ್ಬಾಬೆಲನ ಕೈಗಳು ಈ ಮನೆಯ ಅಸ್ತಿವಾರವನ್ನು ಹಾಕಿವೆ, ಅವನ ಕೈಗಳು ಸಹ ಅದನ್ನು ಪೂರೈಸುವವು; ಸೈನ್ಯಗಳ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ತಿಳಿಯುವಿರಿ.
ದೂರವಾದವರು ಬಂದು ಕರ್ತನ ದೇವಾ ಲಯವನ್ನು ಕಟ್ಟುವರು; ಸೈನ್ಯಗಳ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ತಿಳಿಯುವಿರಿ; ನೀವು ನಿಮ್ಮ ದೇವರಾದ ಕರ್ತನ ಶಬ್ದಕ್ಕೆ ಜಾಗ್ರತೆಯಾಗಿ ಕಿವಿಗೊಟ್ಟರೆ ಇದು ನೆರವೇರುವದು.
ಸೈನ್ಯಗಳ ಕರ್ತನು ಅವರನ್ನು ಕಾಪಾಡುವನು; ಅವರು ನುಂಗಿ ಕವಣೆ ಕಲ್ಲುಗಳನ್ನು ಸ್ವಾಧೀನಮಾಡಿ ಕೊಳ್ಳುವರು; ಕುಡಿದು ದ್ರಾಕ್ಷಾರಸದಿಂದಾದ ಹಾಗೆ ಓಲಾಡುವರು, ಪಾತ್ರೆಯ ಹಾಗೆಯೂ ಬಲಿಪೀಠದ ಮೂಲೆಗಳ ಹಾಗೆಯೂ ತುಂಬಿರುವರು.
ಅದು ಆಗುವಾಗ ನಾನೇ ಆತನೆಂದು ನೀವು ನಂಬುವಂತೆ ಅದು ಸಂಭವಿಸುವದಕ್ಕಿಂತ ಮುಂಚೆ ಈಗಲೇ ನಿಮಗೆ ಹೇಳುತ್ತೇನೆ.
ಆದರೆ ಸಮಯ ಬಂದಾಗ ಇವುಗಳ ವಿಷಯವಾಗಿ ನಾನು ನಿಮಗೆ ಹೇಳಿದ್ದೇನೆಂದು ನೀವು ಜ್ಞಾಪಕಮಾಡಿಕೊಳ್ಳುವಂತೆ ಇವುಗಳನ್ನು ನಿಮಗೆ ಹೇಳಿದ್ದೇನೆ. ನಾನು ನಿಮ್ಮ ಸಂಗಡಲೇ ಇದ್ದದರಿಂದ ಪ್ರಾರಂಭದಲ್ಲಿ ಇವುಗಳನ್ನು ನಿಮಗೆ ಹೇಳಲಿಲ್ಲ.