ಆಗ ಕರ್ತನ ದೂತನು ಸೈತಾನನಿಗೆ--ಸೈತಾನನೇ, ಕರ್ತನು ನಿನ್ನನ್ನು ಗದರಿಸಲಿ; ಹೌದು, ಯೆರೂಸಲೇಮನ್ನು ಆದುಕೊಂಡ ಕರ್ತನು ನಿನ್ನನ್ನು ಗದರಿಸಲಿ; ಅದು ಬೆಂಕಿಯೊಳಗಿಂದ ಎಳೆದ ಕೊಳ್ಳೆಯಾಗಿದೆಯಲ್ಲವೋ ಅಂದನು.
Cross references
ಆತನು ತನ್ನ ಬಾಯಿಂದ--ನನ್ನ ಜನ ರಾದ ಇಸ್ರಾಯೇಲನ್ನು ಐಗುಪ್ತದೇಶದಿಂದ ಬರ ಮಾಡಿದ ದಿನ ಮೊದಲುಗೊಂಡು ನನ್ನ ಹೆಸರು ಅದರಲ್ಲಿ ಇರುವ ಹಾಗೆ ಆಲಯವನ್ನು ಕಟ್ಟುವದಕ್ಕೆ ಇಸ್ರಾಯೇಲನ ಸಮಸ್ತ ಗೋತ್ರಗಳೊಳಗಿಂದ ಯಾವ ಪಟ್ಟಣವನ್ನೂ ಆದುಕೊಳ್ಳಲಿಲ್ಲ; ನನ್ನ ಜನರಾದ ಇಸ್ರಾ ಯೇಲಿನ ಮೇಲೆ ಆಳುವವನಾಗಿರಲು ನಾನು ಒಬ್ಬನ ನ್ನಾದರೂ ಆದುಕೊಳ್ಳಲಿಲ್ಲ.
ಆದರೆ ನನ್ನ ಹೆಸರು ಅಲ್ಲಿ ಇರುವ ಹಾಗೆ ಯೆರೂಸಲೇಮನ್ನೂ ನನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ಇರಲು ದಾವೀದನನ್ನೂ ಆದುಕೊಂಡಿದ್ದೇನೆ ಎಂದು ಹೇಳಿದ್ದಾನೆ.
ಬಡವನ ಬಲಪಾರ್ಶ್ವದಲ್ಲಿ ಅವನ ಪ್ರಾಣಕ್ಕೆ ನ್ಯಾಯತೀರಿಸುವ ವರೊಳಗಿಂದ ಅವನನ್ನು ರಕ್ಷಿಸುವದಕ್ಕೆ ಆತನು ನಿಂತುಕೊಳ್ಳುವನು.
ಆ ಕಾಲದಲ್ಲಿ ನಿನ್ನ ಜನರ ಮಕ್ಕಳಿಗೋಸ್ಕರ ನಿಲ್ಲುವ ಮಹಾಪ್ರಧಾನನಾದ ವಿಾಕಾ ಯೇಲನು ಏಳುವನು; ಮೊಟ್ಟಮೊದಲು ಜನಾಂಗ ಉಂಟಾದಂದಿನಿಂದ ಇಂದಿನ ವರೆಗೂ ಸಂಭವಿಸದಂತ ಸಂಕಟವು ಸಂಭವಿಸುವದು. ಆಗ ನಿನ್ನ ಜನರೊಳಗೆ ಅಂದರೆ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಹೆಸರು ಬರೆಯಲ್ಪಟ್ಟಿದೆಯೋ ಅವರೆಲ್ಲರೂ ಬಿಡುಗಡೆಯಾಗು ವರು.
ದೇವರು ಸೊದೋಮನ್ನೂ ಗೊಮೋರವನ್ನೂ ಕೆಡವಿದ ಹಾಗೆ ನಾನು ನಿಮ್ಮಲ್ಲಿ ಕೆಲವರನ್ನು ಕೆಡವಿ ಹಾಕಿದ್ದೇನೆ; ಹೌದು, ಬೆಂಕಿ ಉರಿಯೊಳಗಿಂದ ತೆಗೆದ ಕೊಳ್ಳಿಯ ಹಾಗೆ ಇದ್ದೀರಿ. ಆದರೂ ನೀವು ನನ್ನ ಕಡೆಗೆ ಹಿಂತಿರುಗಿ ಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.
ಇನ್ನೂ ಕೂಗಿ ಹೇಳು, ಏನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನನ್ನ ಪಟ್ಟಣಗಳು ಇನ್ನು ಅಭಿವೃದ್ಧಿಯಾಗಿ ಹರಡುವವು; ಕರ್ತನು ಚೀಯೋನನ್ನು ಇನ್ನು ಆದರಿಸುವನು; ಯೆರೂಸಲೇಮನ್ನು ಇನ್ನು ಆದುಕೊಳ್ಳುವನು.
ಇದಲ್ಲದೆ ಕರ್ತನು ತನ್ನ ಭಾಗವಾದ ಯೆಹೂದವನ್ನು ಪರಿಶುದ್ಧ ದೇಶದಲ್ಲಿ ಸ್ವಾಸ್ತ್ಯವಾಗಿ ಹೊಂದುವನು. ಯೆರೂಸಲೇಮನ್ನು ತಿರುಗಿ ಆದು ಕೊಳ್ಳುವನು.ಓ ಮನುಷ್ಯರೇ, ನೀವೆಲ್ಲಾ ಕರ್ತನ ಮುಂದೆ ಮೌನ ವಾಗಿರ್ರಿ; ಆತನು ತನ್ನ ಪರಿಶುದ್ಧ ನಿವಾಸದೊಳಗಿಂದ ಎದ್ದಿದ್ದಾನೆ.
ಆಗ ಯೇಸು ಅವನನ್ನು ಗದರಿಸಿ--ಸುಮ್ಮನಿರು, ಅವನೊಳ ಗಿಂದ ಹೊರಗೆ ಬಾ ಅಂದನು.
ಆಗ ಯೇಸು ಅವನನ್ನು ಗದರಿಸಿ--ಸುಮ್ಮನಿರು, ಅವನೊಳಗಿಂದ ಹೊರಗೆ ಬಾ ಅಂದನು. ಆ ದೆವ್ವವು ಅವನನ್ನು ಮಧ್ಯದಲ್ಲಿ ಕೆಡವಿ ಅವನನ್ನು ಬಾಧಿಸದೆ ಅವನೊಳಗಿಂದ ಹೊರಗೆ ಬಂತು.
ಅವನು ಇನ್ನೂ ಬರುತ್ತಿದ್ದಾಗಲೇ ದೆವ್ವವು ಅವನನ್ನು ಒದ್ದಾಡಿಸಿ ನೆಲಕ್ಕೆ ಅಪ್ಪಳಿಸಿತು. ಯೇಸು ಆ ಅಶುದ್ಧಾತ್ಮವನ್ನು ಗದರಿಸಿ ಮಗನನ್ನು ಸ್ವಸ್ಥಮಾಡಿ ಅವನನ್ನು ಅವನ ತಂದೆಗೆ ತಿರಿಗಿ ಒಪ್ಪಿ ಸಿದನು.
ಆದರೆ ನಿನ್ನ ನಂಬಿಕೆಯು ಬಿದ್ದುಹೋಗದಂತೆ ನಾನು ನಿನಗೋಸ್ಕರ ಬೇಡಿಕೊಂಡಿದ್ದೇನೆ; ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ಬಲಪಡಿಸು ಎಂದು ಹೇಳಿದನು.
ನಾನು ನಿಮ್ಮೆಲ್ಲರ ವಿಷಯದಲ್ಲಿ ಮಾತ ನಾಡುವದಿಲ್ಲ; ನಾನು ಆರಿಸಿಕೊಂಡವರನ್ನು ಬಲ್ಲೆನು; ಆದರೆ--ನನ್ನೊಂದಿಗೆ ರೊಟ್ಟಿಯನ್ನು ತಿನ್ನುವವನು ನನಗೆ ವಿರೋಧವಾಗಿ ತನ್ನ ಹಿಮ್ಮಡಿಯನ್ನು ಎತ್ತಿದ್ದಾನೆ ಎಂಬ ಬರಹವು ನೆರವೇರಬೇಕಾಗಿದೆ.
ದೇವರಾದುಕೊಂಡವರ ಮೇಲೆ ಯಾರು ತಪ್ಪು ಹೊರಿಸಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವವನಾಗಿದ್ದಾನೆ.
ಆದರೆ ದೇವರು ಅವನಿಗೆ ಕೊಟ್ಟ ಉತ್ತರವೇನಂದರೆ--ಬಾಳನ ವಿಗ್ರಹಕ್ಕೆ ಮೊಣಕಾಲೂರದ ಏಳುಸಾವಿರ ಜನರನ್ನು ನಾನು ನನಗೋಸ್ಕರ ಉಳಿಸಿಕೊಂಡಿದ್ದೇನೆ ಎಂಬದು.
ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದಗಳ ಕೆಳಗೆ ತುಳಿದುಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
ಪಾಪಮಾಡುವವನು ಸೈತಾನ ನಿಗೆ ಸಂಬಂಧಪಟ್ಟವನಾಗಿದ್ದಾನೆ; ಯಾಕಂದರೆ ಆದಿ ಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದದರಿಂದ ದೇವಕುಮಾರನು ಸೈತಾನನ ಕೆಲಸಗಳನ್ನು ಲಯಮಾಡುವದಕ್ಕೋಸ್ಕರವೇ ಪ್ರತ್ಯಕ್ಷನಾದನು.
ಆದರೂ ಪ್ರಧಾನ ದೇವದೂತನಾದ ಮಿಕಾಯೇಲನು ಮೋಶೆಯ ಶವದ ವಿಷಯದಲ್ಲಿ ಸೈತಾನನೊಂದಿಗೆ ವ್ಯಾಜ್ಯವಾಡಿ ವಾಗ್ವಾದ ಮಾಡಿದಾಗ ಅವನು ಸೈತಾನನನ್ನು ದೂಷಿಸುವದಕ್ಕೆ ಧೈರ್ಯ ಗೊಳ್ಳದೆ--ಕರ್ತನು ನಿನ್ನನ್ನು ಗದರಿಸಲಿ ಅಂದನು.
ಬೇರೆಯವರನ್ನು ಬೆಂಕಿಯಿಂದ ಎಳಕೊಂಡು ಭಯದಿಂದ ರಕ್ಷಿಸಿರಿ. ಶರೀರದಿಂದ ಮೈಲಿಗೆಯಾದ ಅಂಗಿಯನ್ನು ಹಗೆಮಾಡಿರಿ.
ಭೂಲೋಕದವರನ್ನೆಲ್ಲಾ ಮೋಸಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾ ತನ ಸರ್ಪವು ದೊಬ್ಬಲ್ಪಟ್ಟು ಭೂಮಿಗೆ ಬಿದ್ದನು; ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು.
ಇವರು ಕುರಿಮರಿಯಾದಾತನ ಮೇಲೆ ಯುದ್ಧ ಮಾಡುವರು, ಆದರೆ ಕುರಿಮರಿ ಯಾದಾತನು ಅವರನ್ನು ಜಯಿಸುವನು; ಯಾಕಂದರೆ ಆತನು ಕರ್ತರ ಕರ್ತನೂ ರಾಜಾಧಿರಾಜನು ಆಗಿದ್ದಾನೆ. ಇದಲ್ಲದೆ ಆತನೊಂದಿಗೆ ಇರುವವರು ಕರೆಯಲ್ಪಟ್ಟ ವರೂ ಆಯಲ್ಪಟ್ಟವರೂ ನಂಬಿಗಸ್ತರು ಆಗಿದ್ದಾರೆ.