ಅವನು ನನಗೆ --ಶಿನಾರ್ ದೇಶದಲ್ಲಿ ಅದಕ್ಕೆ ಮನೆ ಕಟ್ಟುವದಕ್ಕಾಗಿ ತಕ್ಕೊಂಡು ಹೋಗುತ್ತಾರೆ; ಅಲ್ಲಿ ಅದು ಸ್ಥಾಪಿಸಲ್ಪಟ್ಟು ತನ್ನ ಸ್ಥಾನದಲ್ಲಿ ಇರಿಸಲ್ಪಡುವದು ಅಂದನು.
Cross references
ಶಿನಾರ್ ದೇಶದಲ್ಲಿರುವ ಬಾಬೆಲ್ ಯೆರೆಕ್ ಅಕ್ಕದ್ ಕಲ್ನೇ ಎಂಬವು ಅವನ ಪ್ರಾರಂಭದ ರಾಜ್ಯ ಗಳಾಗಿದ್ದವು.
ಇದಾದ ಮೇಲೆ ಅವರು ಪೂರ್ವ ದಿಕ್ಕಿನಿಂದ ಹೊರಟು ಪ್ರಯಾಣ ಮಾಡುವಾಗ ಶಿನಾರ್ ದೇಶದ ಬೈಲನ್ನು ಕಂಡುಕೊಂಡು ಅಲ್ಲಿ ವಾಸಮಾಡಿದರು.
ಶಿನಾರಿನ ಅರಸನಾದ ಅಮ್ರಾಫೆಲನು, ಎಲ್ಲಸಾರಿನ ಅರಸನಾದ ಅರಿಯೋಕನು, ಏಲಾಮಿನ ಅರಸನಾದ ಕೆದೊರ್ಲಗೋಮರನು, ಜನಾಂಗಗಳ ಅರಸನಾದ ತಿದ್ಗಾಲನು ಇವರ ದಿನಗಳಲ್ಲಿ ಆದದ್ದೇನಂದರೆ,
ಕರ್ತನು ನಿನ್ನ ಬಾಧೆಗಳನ್ನೂ ನಿನ್ನ ಸಂತತಿಯ ಬಾಧೆಗಳನ್ನೂ ಆಶ್ಚರ್ಯವಾಗ ಮಾಡುವನು; ಅವು ದೊಡ್ಡದಾದ ಮತ್ತು ಸ್ಥಿರವಾದ ಬಾಧೆಗಳೂ ಘೋರ ವಾದ ಮತ್ತು ಸ್ಥಿರವಾದ ರೋಗಗಳೂ ಆಗುವವು.
ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವದಕ್ಕೆ ಎರಡನೇ ಸಾರಿ ಕೈಹಾಕಿ ಅಶ್ಶೂರ; ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಮತ್ತು ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.
ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನು, ದೇವಾಲಯದ ಕೆಲವು ಪಾತ್ರೆಗಳನ್ನು ಅವನಿಗೆ ಒಪ್ಪಿಸಿದನು. ಅವನು ಅವುಗಳನ್ನು ಶಿನಾರ್ ದೇಶಕ್ಕೂ ತನ್ನ ದೇವರ ಆಲಯಕ್ಕೂ ತಂದು ಪಾತ್ರೆಗಳನ್ನು ತನ್ನ ದೇವರ ಬೊಕ್ಕಸದ ಮನೆಯಲ್ಲಿ ಇರಿಸಿದನು.
ಇಸ್ರಾಯೇಲಿನ ಮಕ್ಕಳು ಬಹಳ ದಿವಸಗಳ ವರೆಗೆ ಅರಸನಿಲ್ಲದೆ ಪ್ರಧಾ ನನಿಲ್ಲದೆ ಬಲಿ ಇಲ್ಲದೆ ವಿಗ್ರಹವಿಲ್ಲದೆ ಎಫೋದ್ ಇಲ್ಲದೆ ವಿಗ್ರಹಗಳು ಇಲ್ಲದೆ ಇರುವರು.ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.
ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು.