ನಾನು ತಿರುಗಿಕೊಂಡು ನನ್ನ ಕಣ್ಣುಗಳನ್ನೆತ್ತಿ ನೋಡಿದಾಗ ಇಗೋ, ನಾಲ್ಕು ರಥಗಳು ಎರಡು ಬೆಟ್ಟಗಳ ನಡುವೆಯಿಂದ ಹೊರಟುಬಂದವು; ಆ ಬೆಟ್ಟಗಳು ಹಿತ್ತಾಳೆಯ ಬೆಟ್ಟಗಳಾಗಿದ್ದವು.
Cross references
ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುವಾ ತನೂ ಭಿಕ್ಷುಕನನ್ನು ತಿಪ್ಪೆಗುಂಡಿಯಿಂದ ತೆಗೆದು ಉನ್ನತ ಮಾಡುವಾತನೂ ಆಗಿದ್ದಾನೆ. ಅವರನ್ನು ಪ್ರಧಾ ನರ ಮಧ್ಯದಲ್ಲಿ ಕೂಡ್ರಿಸುತ್ತಾನೆ; ಘನತೆಯ ಸಿಂಹಾ ಸನವನ್ನು ಬಾಧ್ಯವಾಗಿ ಕೊಡುತ್ತಾನೆ. ಯಾಕಂದರೆ ಭೂಮಿಯ ಆಧಾರಸ್ತಂಭಗಳು ಕರ್ತನದಾಗಿವೆ, ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾನೆ.
ಆತನು ಶಾಂತ ಮಾಡಿದರೆ ಯಾವನು ಕೇಡು ಮಾಡುವನು? ಆತನು ಮುಖವನ್ನು ಮರೆಮಾಡಿದರೆ ಆತನನ್ನು ದೃಷ್ಟಿಸುವವನು ಯಾರು? ಜನಾಂಗಕ್ಕೆ ವಿರೋಧವಾಗಿ ಮಾಡಿದರೂ ಸರಿ, ಮನುಷ್ಯ ಮಾತ್ರದ ವರಿಗಾದರೂ ಸರಿಯೇ.
ಕರ್ತನ ಆಲೋಚನೆಯು ಎಂದೆಂದಿಗೂ ಆತನ ಹೃದಯದ ಆಲೋಚನೆಗಳು ತಲತಲಾಂತ ರಕ್ಕೂ ನಿಲ್ಲುವವು.
ನಿನ್ನ ನೀತಿಯು ದೊಡ್ಡ ಪರ್ವತಗಳ ಹಾಗಿದೆ; ನಿನ್ನ ನ್ಯಾಯತೀರ್ಪುಗಳು ಮಹಾ ಅಗಾಧವೇ. ಓ ಕರ್ತನೇ, ಮನುಷ್ಯರನ್ನೂ ಮೃಗಗಳನ್ನೂ ಸಂರಕ್ಷಿಸುತ್ತೀ.
ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
ಇದೇ ಸಮಸ್ತ ಭೂಮಿಯ ವಿಷಯ ಆಲೋ ಚಿಸಿದ ಉದ್ದೇಶ. ಇದೇ ಜನಾಂಗಗಳ ಮೇಲೆಲ್ಲಾ ಚಾಚಿದ ನನ್ನ ಕೈ.
ಹೌದು, ಅಂದಿನಿಂದಲೇ ನಾನಿದ್ದೇನೆ; ನನ್ನ ಕೈಯಿಂದ ಬಿಡಿಸುವವರು ಯಾರೂ ಇಲ್ಲ; ನನ್ನ ಕೆಲಸಕ್ಕೆ ಅಡ್ಡಿ ಬರುವವನಾರು?
ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ.
ಇಗೋ, ಕರ್ತನು ಬೆಂಕಿಯೊಡನೆ ಬರುವನು. ಆತನ ರಥಗಳು ಬಿರುಗಾಳಿಯ ಹಾಗೆ ಇರುವವು; ಉಗ್ರದಿಂದ ತನ್ನ ಕೋಪವನ್ನೂ ಅಗ್ನಿಜ್ವಾಲೆಗಳಿಂದ ತನ್ನ ಗದರಿಕೆ ಯನ್ನೂ ಸಲ್ಲಿಸುವದಕ್ಕಾಗಿಯೇ ಬರುವನು.
ಇಗೋ, ಮೇಘಗಳ ಹಾಗೆ ಏರಿ ಬರುವನು; ಆತನ ರಥಗಳು ಬಿರುಗಾಳಿಯ ಹಾಗೆ ಇರುವವು, ಆತನ ಕುದುರೆಗಳು ಹದ್ದುಗಳಿಗಿಂತ ತೀವ್ರವಾಗಿವೆ. ನಮಗೆ ಅಯ್ಯೋ, ಹಾಳಾದೆವು.
ಮನುಷ್ಯರ ಮಕ್ಕಳು, ಭೂಮಿಯ ಮೃಗಗಳೂ ಆಕಾಶದ ಪಕ್ಷಿಗಳೂ ವಾಸಿಸುವಂತಾದ್ದೆಲ್ಲವನ್ನೂ ನಿನ್ನ ಕೈಯಲ್ಲಿ ಕೊಟ್ಟು ಅವೆಲ್ಲವುಗಳನ್ನು ಆಳುವಂತೆ ನಿನ್ನನ್ನು ಮಾಡಿದ್ದಾನೆ. ಆ ಬಂಗಾರದ ತಲೆಯು ನೀನೇ.
ಆದಾಗ್ಯೂ ಅದರ ಬೇರಿನ ಮೋಟನ್ನು ಕಬ್ಬಿಣ, ಹಿತ್ತಾಳೆಗಳ ಕಟ್ಟುಳ್ಳದ್ದ ನ್ನಾಗಿ ಮಾಡಿ ಭೂಮಿಯಲ್ಲಿಯೂ ಬಯಲಿನ ಎಳೆಯ ಹುಲ್ಲಿನಲ್ಲಿಯೂ ಬಿಡಿರಿ; ಅದು ಆಕಾಶದ ಮಂಜಿನಿಂದ ತೇವವಾಗಲಿ; ಅದರ ಪಾಲು ಮೃಗಗಳ ಸಂಗಡ ಭೂಮಿಯ ಹುಲ್ಲಿನಲ್ಲಿರಲಿ.
ಭೂ ನಿವಾಸಿಗಳೆಲ್ಲರೂ ಏನೂ ಇಲ್ಲದ ಹಾಗೆ ಎಣಿಸಲ್ಪಟ್ಟಿ ದ್ದಾರೆ; ಆತನು ಪರಲೋಕದ ಸೈನ್ಯದಲ್ಲಿಯೂ ಭೂ ನಿವಾಸಿಗಳಲ್ಲಿಯೂ ತನ್ನ ಚಿತ್ತದ ಪ್ರಕಾರವೇ ಮಾಡು ತ್ತಾನೆ. ಯಾರೂ ಆತನ ಹಸ್ತವನ್ನು ಹಿಂತೆಗೆಯಲಾರರು; ನೀನು ಏನು ಮಾಡುತ್ತಿರುವಿ ಎಂದು ಆತನಿಗೆ ಯಾರೂ ಕೇಳಲಾರರು.
ಒಂದಕ್ಕೊಂದು ಬೇರೆ ಬೇರೆಯ ರೂಪದ ನಾಲ್ಕು ದೊಡ್ಡ ಮೃಗಗಳು ಸಮು ದ್ರದೊಳಗಿಂದ ಮೇಲೆ ಬಂದವು.
ಈಗ ಅದು ಮುರಿಯ ಲ್ಪಟ್ಟು, ಅದಕ್ಕೆ ಬದಲಾಗಿ ನಾಲ್ಕು ಕೊಂಬುಗಳು ಎದ್ದ ವಿಷಯವೇನಂದರೆ--ಆ ಜನಾಂಗದಿಂದ ನಾಲ್ಕು ರಾಜ್ಯ ಗಳು ಉದಯಿಸುವವು; ಆದರೆ ಅವನ (ಮೊದಲ ನೆಯ ಅರಸನ) ಅಧಿಕಾರದಲ್ಲಿ ಇರುವದಿಲ್ಲ;
ನಾನು ನನ್ನ ಕಣ್ಣುಗಳನ್ನು ಎತ್ತಿದಾಗ ಇಗೋ, ನಾಲ್ಕು ಕೊಂಬುಗಳನ್ನು ನೋಡಿದೆನು.
ಆಗ ನಾನು ತಿರಿಗಿಕೊಂಡು ನನ್ನ ಕಣ್ಣು ಗಳನ್ನೆತ್ತಿ ನೋಡಲು ಇಗೋ, ಹಾರುವ ಸುರಳಿ.
ದೂತನು ನನಗೆ ಉತ್ತರಕೊಟ್ಟು ಹೇಳಿದ್ದೇನಂದರೆ--ಇವು ಆಕಾಶಗಳ ನಾಲ್ಕು ಆತ್ಮಗಳು; ಇವು ಸಮಸ್ತ ಭೂಮಿಯ ಕರ್ತನ ಮುಂದೆ ನಿಂತಲ್ಲಿಂದ ಹೊರಟುಬಂದವೆ.
ನಿನ್ನ ಹಸ್ತವು ಮತ್ತು ನಿನ್ನ ಸಂಕಲ್ಪವು ಮೊದಲೇ ನಿಶ್ಚಯಿಸಿದ್ದನ್ನು ಮಾಡಿದರು.
ಆತನ ಸ್ವಚಿತ್ತದ ಆಲೋಚನೆಗನುಸಾರವಾಗಿ ಎಲ್ಲಾ ಕಾರ್ಯ ಗಳನ್ನು ಸಾಧಿಸುವ ಆತನ ಉದ್ದೇಶದ ಮೇರೆಗೆ ಮೊದಲೇ ನೇಮಿಸಲ್ಪಟ್ಟವರಾದ ನಾವು ಆತನಲ್ಲಿ ಬಾಧ್ಯತೆಯನ್ನು ಸಹ ಹೊಂದಿದೆವು.
ನಮ್ಮ ಕರ್ತನಾದ ಕ್ರಿಸ್ತ ಯೇಸು ವಿನಲ್ಲಿ ಆತನು ಸಂಕಲ್ಪಿಸಿದ ಶಾಶ್ವತವಾದ ಸಂಕಲ್ಪದಂತೆ ಇದಾಯಿತು.