ಬೆಳ್ಳಿಬಂಗಾರವನ್ನು ತಕ್ಕೊಂಡು ಕಿರೀಟಗಳನ್ನು ಮಾಡಿ ಅವುಗಳನ್ನು ಯೆಹೋಚಾದಾಕನ ಮಗನಾದ ಪ್ರಧಾನ ಯಾಜಕ ನಾದ ಯೆಹೋಶುವನ ತಲೆಯ ಮೇಲೆ ಇಟ್ಟು
Cross references
ಶುದ್ಧ ಬಂಗಾರದ ತಗಡು ಗಳನ್ನು ಮಾಡಿ ಮುದ್ರೆ ಕೆತ್ತುವ ಪ್ರಕಾರ ಕರ್ತನಿಗೆ ಪರಿಶುದ್ಧ ಎಂದು ಅದರ ಮೇಲೆ ಕೆತ್ತಬೇಕು.
ಅವನ ತಲೆಗೆ ಮುಂಡಾಸವನ್ನು ಇಟ್ಟು ಮುಂಡಾಸದ ಮೇಲೆ ಪರಿಶುದ್ಧ ಕಿರೀಟವನ್ನು ಇಟ್ಟು
ಪರಿಶುದ್ಧ ಕಿರೀಟವಾಗಿರುವ ತಗಡನ್ನು ಶುದ್ಧ ಬಂಗಾರದಿಂದ ಮಾಡಿ ಕರ್ತನಿಗೆ ಪರಿಶುದ್ಧ ಎಂದು ಮುದ್ರೆ ಕೆತ್ತುವವರ ಬರಹದಿಂದ ಅದರ ಮೇಲೆ ಬರೆದು
ಅವನ ತಲೆಯ ಮೇಲೆ ಮುಂಡಾಸವನ್ನು ಇಟ್ಟು ಆ ಮುಂಡಾ ಸದ ಮುಂಭಾಗದಲ್ಲಿ ಬಂಗಾರದ ಪಟ್ಟಿಯನ್ನೂ ಪವಿತ್ರ ವಾದ ಕಿರೀಟವನ್ನೂ ಕರ್ತನು ಮೋಶೆಗೆ ಆಜ್ಞಾಪಿಸಿ ದಂತೆಯೇ ಇಟ್ಟನು.
ಆಗ ಯೋಚಾದಾಕನ ಮಗನಾದ ಯೇಷೂವನೂ ಅವನ ಸಹೋದರರಾದ ಯಾಜಕರೂ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನೂ ಅವನ ಸಹೋದರರೂ ಎದ್ದು ದೇವರ ಮನುಷ್ಯನಾದ ಮೋಶೆಯ ನ್ಯಾಯ ಪ್ರಮಾಣದಲ್ಲಿ ಬರೆದಿರುವ ಹಾಗೆ ದಹನಬಲಿಗಳನ್ನು ಅರ್ಪಿಸುವದಕ್ಕೆ ಇಸ್ರಾಯೇಲ್ ದೇವರ ಬಲಿಪೀಠವನ್ನು ಕಟ್ಟಿಸಿದರು.
ಒಳ್ಳೇತನದ ಆಶೀರ್ವಾದಗಳೊಂದಿಗೆ ಅವನನ್ನು ಎದುರುಗೊಂಡು ಅಪರಂಜಿಯ ಕಿರೀಟವನ್ನು ಅವನ ತಲೆಗೆ ಇಡುತ್ತೀ.
ಚೀಯೋನಿನ ಕುಮಾರ್ತೆಯರೇ, ನೀವು ಹೊರಟು ಹೋಗಿ ಅವನ ಮದುವೆಯ ದಿವಸದಲ್ಲಿಯೂ ಹೃದ ಯದ ಸಂತೋಷದ ದಿವಸದಲ್ಲಿಯೂ ತನ್ನ ತಾಯಿ ತನಗೆ ಧರಿಸಿದ ಕಿರೀಟ ಇರುವ ಅರಸನಾದ ಸೊಲೊ ಮೋನನನ್ನು ನೋಡಿರಿ.
ಅರಸನಾದ ದಾರ್ಯಾವೆಷನ ಎರಡನೇ ವರುಷದ, ಆರನೇ ತಿಂಗಳಿನ ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನ ಕೈಯಿಂದ ಯೆಹೂದದ ಅಧಿಪತಿಯಾದ ಶೆಯಲ್ತಿ ಯೇಲನ ಮಗನಾದ ಜೆರುಬ್ಬಾಬೆಲನಿಗೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನಿಗೂ ಉಂಟಾಯಿತು.
ಕರ್ತನು ಯೆಹೂದದ ಅಧಿಪತಿಯಾದ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನ ಆತ್ಮ ವನ್ನೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನ ಆತ್ಮವನ್ನೂ ಜನರಲ್ಲಿ ಉಳಿದವರೆಲ್ಲರ ಆತ್ಮವನ್ನೂ ಉದ್ರೇಕಿಸಿದ್ದರಿಂದ ಅವರು ಬಂದು ಅರಸನಾದ ದಾರ್ಯಾವೆಷನ ಎರಡನೆಯ ವರುಷದ ಆರನೆಯ ತಿಂಗಳಿನ ಇಪ್ಪತ್ತು ನಾಲ್ಕನೆಯ ದಿನದಲ್ಲಿತಮ್ಮ ದೇವರಾದ ಸೈನ್ಯಗಳ ಕರ್ತನ ಆಲಯದಲ್ಲಿ ಬಂದು ಕೆಲಸ ಮಾಡಿದರು.
ಆದಾಗ್ಯೂ ಈಗ ಕರ್ತನು ಹೇಳುತ್ತಾನೆ --ಜೆರುಬ್ಬಾಬೆಲನೇ, ಬಲವಾಗಿರು; ಪ್ರಧಾನ ಯಾಜಕ ನಾದ ಯೆಹೋಚಾದಾಕನ ಮಗನಾದ ಯೆಹೋ ಶುವನೇ, ಬಲವಾಗಿರು; ದೇಶದ ಜನರೆಲ್ಲರೇ, ಬಲ ವಾಗಿರ್ರಿ ಎಂದು ಕರ್ತನು ಹೇಳುತ್ತಾನೆ; ಕೆಲಸ ಮಾಡಿರಿ; ನಾನು ನಿಮ್ಮ ಸಂಗಡ ಇದ್ದೇನೆಂದು ಸೈನ್ಯ ಗಳ ಕರ್ತನು ಹೇಳುತ್ತಾನೆ.
ಇದಲ್ಲದೆ ಆತನು ನನಗೆ--ಕರ್ತನ ದೂತನ ಮುಂದೆ ನಿಂತಿರುವ ಪ್ರಧಾನ ಯಾಜಕನಾದ ಯೆಹೋಶುವನನ್ನೂ ಅವನನ್ನು ಎದುರಿಸುವದಕ್ಕೆ ಅವನ ಬಲಪಾರ್ಶ್ವದಲ್ಲಿ ನಿಂತ ಸೈತಾನನನ್ನೂ ತೋರಿಸಿದನು.
ಆಗ ನಾನು--ಅವನ ತಲೆಯ ಮೇಲೆ ಶುದ್ಧ ಮುಂಡಾಸವನ್ನು ಇಡಿರಿ ಅಂದೆನು. ಆಗ ಅವರು ಅವನ ತಲೆಯ ಮೇಲೆ ಶುದ್ಧ ಮುಂಡಾಸವನ್ನು ಇಟ್ಟು ಅವನಿಗೆ ನಿಲು ವಂಗಿಗಳನ್ನು ತೊಡಿಸಿದರು; ಕರ್ತನ ದೂತನು ಪಕ್ಕ ದಲ್ಲಿ ನಿಂತಿದ್ದನು.
ಆದರೂ ದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟ ಒಬ್ಬಾತನು ಅಂದರೆ ಯೇಸುವು, ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿ ಹೊಂದಿರುವದನ್ನು ನಾವು ನೋಡುತ್ತೇವೆ; ಆತನು ಮೃತಪಟ್ಟದ್ದರಿಂದಲೇ ಮಾನ ಪ್ರಭಾವಗಳನ್ನು ಹೊಂದಿದನು; ಆತನು ದೇವರ ಕೃಪೆ ಯಿಂದ ಎಲ್ಲರಿಗೋಸ್ಕರ ಮರ
ಆತನ ಕಣ್ಣುಗಳು ಬೆಂಕಿಯ ಉರಿಯಂತಿದ್ದವು; ಆತನ ತಲೆಯ ಮೇಲೆ ಅನೇಕ ಕಿರೀಟಗಳು ಇದ್ದವು. ಬರೆಯಲ್ಪಟ್ಟ ಹೆಸರು ಆತನಿಗೆ ಇತ್ತು. ಅದು ಆತನಿಗೇ ಹೊರತು ಮತ್ತಾರಿಗೂ ತಿಳಿದಿರಲಿಲ್ಲ.