ಅವನಿಗೆ ಹೇಳತಕ್ಕದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿಗುರೆಂದು ಹೆಸರುಳ್ಳ ಮನುಷ್ಯನು, ಅವನು ತನ್ನ ಸ್ಥಳದೊಳಗಿಂದ ಚಿಗುರು ವನು, ಆತನೇ ಕರ್ತನ ದೇವಾಲಯವನ್ನು ಕಟ್ಟುವನು.
Cross references
ಅವನು ನನ್ನ ಹೆಸ ರಿಗೆ ಮನೆಯನ್ನು ಕಟ್ಟುವನು; ನಾನು ಅವನ ರಾಜ್ಯದ ಸಿಂಹಾಸನವನ್ನು ಸದಾಕಾಲಕ್ಕೂ ಸ್ಥಿರಮಾಡುವೆನು. ನಾನು ಅವನ ತಂದೆಯಾಗಿರುವೆನು; ಅವನು ನನ್ನ ಮಗನಾಗಿರುವನು.
ಅವರು ಯೆರೂಸಲೇಮಿನಲ್ಲಿದ್ದ ದೇವರ ಆಲಯಕ್ಕೆ ಬಂದ ಎರಡನೇ ವರುಷದ ಎರ ಡನೇ ತಿಂಗಳಲ್ಲಿ ಶೆಯಲ್ತಿಯೇಲನ ಮಗನಾದ ಜೆರುಬ್ಬಾ ಬೆಲನೂ ಯೋಚಾದಾಕನ ಮಗನಾದ ಯೇಷೂ ವನೂ ಉಳಿದ ಅವರ ಸಹೋದರರಾದ ಯಾಜಕರೂ ಲೇವಿಯರೂ ಸೆರೆಯಿಂದ ಯೆರೂಸಲೇಮಿಗೆ ಬಂದ ಎಲ್ಲರೂ ಪ್ರಾರಂಭಿಸಿ ಇಪ್ಪತ್ತು ವರುಷ ಪ್ರಾಯಕ್ಕೆ ಹೆಚ್ಚಿದ ಲೇವಿಯರನ್ನು ಕರ್ತನ ಆಲಯದ ಕೆಲಸ ನಡಿಸುವದಕ್ಕೆ ಇಟ್ಟರು.
ಕಟ್ಟುವವರು ಕರ್ತನ ಮಂದಿರಕ್ಕೆ ಅಸ್ತಿವಾರ ಹಾಕುವಾಗ ಇಸ್ರಾ ಯೇಲಿನ ಅರಸನಾದ ದಾವೀದನ ಕಟ್ಟಳೆಯ ಪ್ರಕಾರ ಕರ್ತನನ್ನು ಸ್ತುತಿಸುವದಕ್ಕೆ ವಸ್ತ್ರಗಳನ್ನು ಧರಿಸಿಕೊಂಡವ ರಾಗಿ ತುತೂರಿಗಳನ್ನೂದುವ ಯಾಜಕರನ್ನೂ ತಾಳಗ ಳನ್ನು ಬಡಿಯುವ ಆಸಾಫನ ಮಕ್ಕಳಾದ ಲೇವಿಯರನ್ನೂ ಇಟ್ಟರು.
ನಿನ್ನ ಬಲಗೈ ನೆಟ್ಟ ಸಸಿಯನ್ನೂ ನೀನು ನಿನಗೆ ಬಲಪಡಿಸಿ ಕೊಂಡ ಕೊಂಬೆಯನ್ನೂ ಪರಾಮರಿಸು.
ಆ ದಿನದಲ್ಲಿ ಕರ್ತನ ಕೊಂಬೆಯು ಸುಂದರವಾ ಗಿಯೂ ಮಹಿಮೆಯುಳ್ಳದ್ದಾಗಿಯೂ ಇರುವದು. ಭೂಮಿಯ ಫಲವು ಇಸ್ರಾಯೇಲ್ಯರಲ್ಲಿ ಉಳಿದವರಿಗೆ ಉತ್ತಮವಾಗಿಯೂ ರಮ್ಯವಾಗಿಯೂ ಇರುವದು.
ಇಷಯನ ಬುಡದಿಂದ ಒಂದು ಕೊಂಬೆ ಒಡೆಯುವದು ಅದರ ಬೇರಿನಿಂದ ಕೊಂಬೆ ಯು ಬೆಳೆಯುವದು.
ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು, ಅಧಿಪತಿಗಳು ನ್ಯಾಯ ದಿಂದ ದೊರೆತನಮಾಡುವರು.
ಆತನು ಚಿಗುರಿನಂತೆಯೂ ಒಣನೆಲದಿಂದ ಹುಟ್ಟಿಬರುವ ಬೇರಿನಂತೆಯೂ ಆತನ ಮುಂದೆ ಬೆಳೆ ಯುವನು. ಆತನಿಗೆ ಯಾವ ರೂಪವಾಗಲಿ ಅಂದವಾ ಗಲಿ ಇರಲಿಲ್ಲ; ನಾವು ಆತನನ್ನು ನೋಡಿದಾಗ ಅಲ್ಲಿ ನಾವು ಅಪೇಕ್ಷಿಸುವಂಥ ಯಾವ ಚಂದವೂ ಇರಲಿಲ್ಲ.
ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈ ಒಳ್ಳೇ ಅಂಜೂರದ ಹಣ್ಣುಗಳ ಹಾಗೆ ನಾನು ಈ ಸ್ಥಳದಿಂದ ಕಸ್ದೀಯರ ದೇಶಕ್ಕೆ ಒಳ್ಳೇದಕ್ಕಾಗಿ ಕಳುಹಿಸಿದ ಯೆಹೂದದ ಸೆರೆಯವರನ್ನು ಪರಾಮರಿ ಸುವೆನು.
ಈಗ ನೀವು ತಿರುಗಿ ಕೊಂಡು ನನ್ನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಒಬ್ಬೊಬ್ಬನು ತನ್ನ ತನ್ನ ನೆರೆಯವನಿಗೆ ಬಿಡುಗಡೆಯನ್ನು ಸಾರಿದಿರಿ; ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಮನೆ ಯಲ್ಲಿ ನನ್ನ ಮುಂದೆ ಒಡಂಬಡಿಕೆಯನ್ನು ಮಾಡಿದಿರಿ.
ಆಮೇಲೆ, ಅವನು ನನ್ನನು ದೇವಾಲಯಕ್ಕೆ ಕರೆತಂದು ಕಂಬಗಳನ್ನೂ ಒಂದು ಕಡೆಯಲ್ಲಿ ಆರು ಮೊಳ ಅಗಲವೆಂದೂ ಮತ್ತೊಂದು ಕಡೆ ಆರು ಮೊಳ ಅಗಲವೆಂದೂ ಅಳೆದನು. ಇದೇ ಆ ಗುಡಾರದ ಅಡ್ಡಗಲವಾಗಿತ್ತು.
ಇದಲ್ಲದೆ ಅಶ್ಶೂರ್ಯನು ನಮ್ಮ ದೇಶದಲ್ಲಿ ಬಂದಾಗ ಈತನೇ ಸಮಾಧಾನವಾಗಿರುವನು; ನಮ್ಮ ಅರಮನೆಗಳಲ್ಲಿ ಅವನು ತುಳಿಯುವಾಗ ನಾವು ಆತನಿಗೆ ವಿರೋಧವಾಗಿ ಏಳು ಕುರುಬರನ್ನೂ ಎಂಟು ಮುಖ್ಯ ಮನುಷ್ಯರನ್ನೂ ಎಬ್ಬಿಸುವೆವು.
ಪ್ರಧಾನ ಯಾಜಕ ನಾದ ಓ ಯೆಹೋಶುವನೇ, ನೀನೂ ನಿನ್ನ ಮುಂದೆ ಕೂತುಕೊಳ್ಳುವ ನಿನ್ನ ಸಂಗಡಿಗರೂ ಈಗ ಕೇಳಿರಿ; ಅವರು ಆಶ್ಚರ್ಯವನ್ನುಂಟು ಮಾಡುವ ಮನುಷ್ಯರಾಗಿ ದ್ದಾರೆ; ಇಗೋ, ನಾನು ಕೊಂಬೆಯೆಂಬ ನನ್ನ ಸೇವಕ ನನ್ನು ಬರಮಾಡುವೆನು.
ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು ಉತ್ತರಕೊಟ್ಟು ನನಗೆ ಹೇಳಿದ್ದೇನಂದರೆ--ಜೆರುಬ್ಬಾಬೆಲನಿಗೆ ಕರ್ತನ ವಾಕ್ಯವು ಇದೇ--ಬಲ ದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ದೇವಾಲಯವನ್ನು ಕಟ್ಟುವ ಹಾಗೆ ಸೈನ್ಯಗಳ ಕರ್ತನ ಆಲಯದ ಅಸ್ತಿವಾರವು ಹಾಕಲ್ಪಟ್ಟ ದಿವಸದಲ್ಲಿದ್ದ ಪ್ರವಾದಿಗಳ ಬಾಯಿಂದಾದ ಈ ವಾಕ್ಯಗಳನ್ನು ಈ ದಿವಸಗಳಲ್ಲಿ ಕೇಳುವವರೇ, ನಿಮ್ಮ ಕೈಗಳು ಬಲವಾಗಿರಲಿ.
ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.
ನಾನು ಸಹ ನಿನಗೆ ಹೇಳುವದೇ ನಂದರೆ--ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು; ನರಕದ ದ್ವಾರಗಳು ಅದನ್ನು ಜಯಿಸಲಾರವು.
ನಾನು ದೇವಾಲಯ ವನ್ನು ಕೆಡವಿ ಮೂರು ದಿವಸಗಳಲ್ಲಿ ಕಟ್ಟಬಲ್ಲೆನೆಂದು ಇವನು ಹೇಳಿದನು ಅಂದರು.
ಕೈಯಿಂದ ಕಟ್ಟಿರುವ ಈ ದೇವಾಲಯವನ್ನು ನಾನು ಕೆಡವಿಬಿಟ್ಟು ಕೈಯಿಂದ ಕಟ್ಟದಿರುವ ಮತ್ತೊಂದನ್ನು ಮೂರು ದಿನಗಳಲ್ಲಿ ಕಟ್ಟುವೆನು ಎಂದು ಈತನು ಹೇಳಿದ್ದನ್ನು ನಾವು ಕೇಳಿಸಿಕೊಂಡಿದ್ದೇವೆ ಅಂದರು.
ಇದ ಲ್ಲದೆ ಹಾದುಹೋಗುತ್ತಿದ್ದವರು ತಮ್ಮ ತಲೆಗಳನ್ನು ಅಲ್ಲಾಡಿಸಿ-ಹಾ! ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ,
ಆತನು ಹೀಗೆ ಕೂಗಿ ಪ್ರಾಣ ಬಿಟ್ಟದ್ದನ್ನು ಆತನ ಎದುರಿಗೆ ನಿಂತಿದ್ದ ಶತಾಧಿಪತಿಯು ನೋಡಿ-- ನಿಜವಾಗಿಯೂ ಈ ಮನುಷ್ಯನು ದೇವಕುಮಾರನಾಗಿ ದ್ದನು ಅಂದನು.
ನಮ್ಮ ದೇವರ ಮಮತೆಯ ಕರುಣೆಯಿಂದ ಅದು ಆಗುವದ ಲ್ಲದೆ ಮೇಲಣದಿಂದ ಅರುಣೋದಯವು ಉಂಟಾಗಿ ನಮ್ಮನ್ನು ಸಂಧಿಸಿ
ಫಿಲ್ಫಿಪನು ನತಾನಯೇಲನನ್ನು ಕಂಡು ಅವನಿಗೆ--ನ್ಯಾಯಪ್ರಮಾಣದಲ್ಲಿ ಮೋಶೆಯು ಮತ್ತು ಪ್ರವಾದಿಗಳು ಯಾವಾತನ ವಿಷಯವಾಗಿ ಬರೆದರೋ ಆತನನ್ನು ನಾವು ಕಂಡುಕೊಂಡೆವು; ಆತನು ಯೋಸೇ ಫನ ಮಗನಾದ ನಜರೇತಿನ ಯೇಸುವು ಅಂದನು.
ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈ ದೇವಾಲ ಯವನ್ನು ಕೆಡವಿದರೆ ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು ಅಂದನು.
ಆಗ ಯೇಸು ಮುಳ್ಳಿನ ಕಿರೀಟವನ್ನು ಮತ್ತು ಊದಾಬಣ್ಣದ ನಿಲುವಂಗಿಯನ್ನು ಧರಿಸಿಕೊಂಡವನಾಗಿ ಹೊರಗೆ ಬರಲು ಪಿಲಾತನು ಅವರಿಗೆ--ಇಗೋ, ಈ ಮನುಷ್ಯನು! ಅಂದನು.
ಆದದರಿಂದ ಜನರೇ, ಸಹೋದರರೇ, ಈ ಮನುಷ್ಯನ ಮೂಲಕವಾಗಿ ಪಾಪಪರಿಹಾರವು ದೊರೆಯುತ್ತದೆಂಬದು ನಿಮಗೆ ಸಾರೋಣವಾಗು ತ್ತದೆಂದೂ
ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸ ವನ್ನು ನೇಮಕ ಮಾಡಿದ್ದಾನೆ. ಆತನನ್ನು ಸತ್ತವರೊಳ ಗಿಂದ ಎಬ್ಬಿಸಿದ್ದರಿಂದ ಇದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.
ನಾವು ದೇವರ ಜೊತೆ ಕೆಲಸದವರು; ನೀವು ದೇವರ ಹೊಲವೂ ದೇವರ ಕಟ್ಟಡವೂ ಆಗಿದ್ದೀರಿ.
ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯ ವಾದ ಮೂಲೆಗಲ್ಲು;
ಮನೆಗಿಂತ ಮನೆಕಟ್ಟಿದವನಿಗೆ ಹೆಚ್ಚಾದ ಗೌರವವಿರುವದರಿಂದ ಮೋಶೆಗಿಂತ ಈತನು (ಕ್ರಿಸ್ತ ಯೇಸು) ಹೆಚ್ಚಾದ ಮಾನಕ್ಕೆ ಯೋಗ್ಯನೆಂದೆಣಿಸ ಲ್ಪಟ್ಟಿದ್ದಾನೆ.
ಈ ಮನುಷ್ಯನು ಎಷ್ಟು ದೊಡ್ಡವನಾಗಿದ್ದನೆಂದು ಆಲೋಚಿಸಿರಿ. ನಮ್ಮ ಮೂಲ ಪಿತೃವಾದ ಅಬ್ರಹಾ ಮನು ಸುಲುಕೊಂಡು ಬಂದವುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಆತನಿಗೆ ಕೊಟ್ಟನಲ್ಲಾ.
ಈತನಾ ದರೋ ಸದಾಕಾಲವಿರುವದರಿಂದ ಬದಲಾವಣೆಯಾ ಗದ ಯಾಜಕತ್ವವನ್ನು ಹೊಂದಿದ್ದಾನೆ.
ಪ್ರತಿಯೊಬ್ಬ ಮಹಾಯಾಜಕನು ಕಾಣಿಕೆಗಳನ್ನೂ ಯಜ್ಞಗಳನ್ನೂ ಸಮರ್ಪಿಸುವದಕ್ಕೆ ನೇಮಕವಾಗಿರು ತ್ತಾನಷ್ಟೆ. ಆದದರಿಂದ ಸಮರ್ಪಿಸುವದಕ್ಕೆ ಈತನಿಗೆ ಸಹ ಏನಾದರೂ ಇರುವದು ಅವಶ್ಯವಾಗಿದೆ.
ಆದರೆ ಈ ಮನುಷ್ಯನು ಪಾಪಗಳಿಗೋಸ್ಕರ ನಿರಂತರವಾದ ಒಂದೇ ಯಜ್ಞವನ್ನು ಅರ್ಪಿಸಿದ ಮೇಲೆ ದೇವರ ಬಲ ಗಡೆಯಲ್ಲಿ ಕೂತುಕೊಂಡನು.
ನೀವು ಜೀವವುಳ್ಳ ಕಲ್ಲಾಗಿರು ವಾತನ ಬಳಿಗೆ ಬಂದಿದ್ದೀರಿ. ಆ ಕಲ್ಲು ಮನುಷ್ಯರಿಂದ ನಿಜವಾಗಿಯೂ ನಿರಾಕರಿಸಲ್ಪಟ್ಟಿದ್ದರೂ ಅದು ದೇವ ರಿಂದ ಆಯಲ್ಪಟ್ಟದ್ದೂ ಅಮೂಲ್ಯವಾದದ್ದೂ ಆಯಿತು.