ಹೌದು, ಆತನು ಕರ್ತನ ದೇವಾಲಯವನ್ನು ಕಟ್ಟು ವನು; ಆತನು ಮಹಿಮೆಯನ್ನು ಧರಿಸುವನು; ಕೂತು ಕೊಂಡು ತನ್ನ ಸಿಂಹಾಸನದಲ್ಲಿ ಆಳುವನು, ತನ್ನ ಸಿಂಹಾಸನದಲ್ಲಿ ಯಾಜಕನಾಗಿರುವನು; ಸಮಾಧಾನದ ಆಲೋಚನೆ ಅವರಿಬ್ಬರೊಳಗೆ ಇರುವದು.
Cross references
ಸಾಲೇಮಿನ ಅರಸನಾದ ಮೆಲ್ಕೀಚೆದೇಕನು ರೊಟ್ಟಿಯನ್ನೂ ದ್ರಾಕ್ಷಾ ರಸವನ್ನೂ ತಂದನು. ಇವನು ಮಹೋನ್ನತನಾದ ದೇವರ ಯಾಜಕನು.
ಅವನು ನನ್ನ ಹೆಸ ರಿಗೆ ಮನೆಯನ್ನು ಕಟ್ಟುವನು; ನಾನು ಅವನ ರಾಜ್ಯದ ಸಿಂಹಾಸನವನ್ನು ಸದಾಕಾಲಕ್ಕೂ ಸ್ಥಿರಮಾಡುವೆನು. ನಾನು ಅವನ ತಂದೆಯಾಗಿರುವೆನು; ಅವನು ನನ್ನ ಮಗನಾಗಿರುವನು.
ಜೀವವನ್ನು ಅವನು ನಿನ್ನಿಂದ ಬೇಡಲು ನೀನು ಅವನಿಗೆ ಯುಗಯುಗಾಂತರಗಳಿಗೂ ದೀರ್ಘಾಯುಷ್ಯವನ್ನು ಕೊಟ್ಟೆ.
ನ್ನ ರಕ್ಷಣೆಯಲ್ಲಿ ಅವನ ಹೆಚ್ಚಳವು ದೊಡ್ಡದಾಗಿದೆ, ಗೌರವವನ್ನೂ ಘನತೆಯನ್ನೂ ಅವನ ಮೇಲೆ ಇಡುತ್ತೀ.
ಓ ಪರಾಕ್ರಮಿಯೇ, ನಿನ್ನ ಮಹಿಮೆಯಿಂದಲೂ ಘನತೆಯಿಂದಲೂ ನಿನ್ನ ಕತ್ತಿಯನ್ನು ಸೊಂಟಕ್ಕೆ ಬಿಗಿ ದುಕೋ.
ಆತನ ನಾಮವು ಎಂದೆಂದಿಗೂ ಇರುವದು; ಸೂರ್ಯನು ಇರುವವರೆಗೂ ಆತನ ಹೆಸರು ಇರು ವದು. ಮನುಷ್ಯರು ಆತನಲ್ಲಿ ಆಶೀರ್ವಾದ ಹೊಂದು ವರು. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತ ನೆಂದು ಕರೆಯುವರು.
ನಿಶ್ಚ ಯವಾಗಿ ಘನವು ನಮ್ಮ ದೇಶದಲ್ಲಿ ವಾಸವಾಗಿರುವ ಹಾಗೆ, ಆತನಿಗೆ ಭಯಪಡುವವರಿಗೆ ಆತನ ರಕ್ಷಣೆಯು ಸವಿಾಪವಾಗಿದೆ.
ಕರ್ತನು ನನ್ನ ಕರ್ತನಿಗೆ ಹೇಳಿದ್ದೇನೆಂದರೆ ನಾನು ನಿನ್ನ ಶತ್ರುಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನನ್ನ ಬಲ ಪಾರ್ಶ್ವದಲ್ಲಿ ಕುಳಿತುಕೋ,
ನೀನು ಎಂದೆಂದಿಗೂ ಮೆಲ್ಕೀಜೆದೇಕನ ತರದ ಯಾಜಕನಾಗಿದ್ದೀ ಎಂದು ಕರ್ತನು ಆಣೆಯಿಟ್ಟು ನುಡಿ ದಿದ್ದಾನೆ; ಪಶ್ಚಾತ್ತಾಪಪಡನು.
ಯುದ್ಧವೀರರ ಪ್ರತಿಯುದ್ಧವು ಗಲಿಬಿಲಿಯ ಗದ್ದಲ ದಿಂದ ಕೂಡಿದ್ದಾಗಿಯೂ ವಸ್ತ್ರಗಳು ರಕ್ತದಲ್ಲಿ ಹೊರಳಾ ಡಿದವುಗಳಾಗಿಯೂ ಇರುತ್ತವೆ; ಆದರೆ ಇವು ಬೆಂಕಿಗೆ ಆಹುತಿಯಾಗಿ ಸುಟ್ಟುಹೋಗುವವು.
ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
ಆ ದಿನದಲ್ಲಿ ಹುಡುಕುವ ಅನ್ಯಜನರಿಗೆ ಇಷ ಯನ ಬೇರು ಒಂದು ಗುರುತಾಗಿ ನಿಲ್ಲುವದು; ಅವನ ವಿಶ್ರಾಂತಿ ವೈಭವವುಳ್ಳದ್ದಾಗಿರುವದು.
ಬಟ್ಟಲು ಮೊದಲುಗೊಂಡು ಕೊಡದ ತನಕ ಸಕಲ ಸಾಧಾರಣ ಪಾತ್ರೆಗಳನ್ನು ಅಂದರೆ ತಂದೆಯ ಸಂತಾನ, ಸಂತತಿಯಾದ ಅವನ ಮನೆಯ ಎಲ್ಲಾ ವೈಭವವನ್ನು ಅವರು ಅವನಿಗೆ ವಹಿ ಸುವರು.ಆ ದಿನದಲ್ಲಿ ಸೈನ್ಯಗಳ ಕರ್ತನು ಇಂತೆನ್ನುತ್ತಾನೆ--ಭದ್ರವಾದ ಸ್ಥಳದಲ್ಲಿ ಮೊಳೆಯನ್ನು ತೆಗೆದುಹಾಕಿ, ಅದು ಕೀಳಲ್ಪಟ್ಟು, ಬೀಳುವದು. ಅದ ರಲ್ಲಿ ಇದ್ದ ಭಾರವೂ ತೆಗೆದುಹಾಕಲ್ಪಡುವದು; ಕರ್ತನೇ ಇದನ್ನು ನುಡಿದಿದ್ದಾನೆ.
ಯಾಕೋಬನ್ನು ತನ್ನ ಕಡೆಗೆ ತಿರಿಗಿ ಸೇರಿಸಿಕೊಳ್ಳ ಬೇಕೆಂತಲೂ ಇಸ್ರಾಯೇಲು ತನ್ನ ಕಡೆಗೆ ಕೂಡಿಕೊಳ್ಳು ವಂತೆಯೂ ಆತನು ಗರ್ಭದಲ್ಲಿಯೇ ನನ್ನನ್ನು ತನ್ನ ಸೇವಕನನ್ನಾಗಿ ರೂಪಿಸಿದನು. ಆದರೂ ನಾನು ಕರ್ತನ ದೃಷ್ಟಿಯಲ್ಲಿ ಗೌರವವುಳ್ಳವನಾಗಿರುವೆನು; ನನ್ನ ದೇವರೇ ನನಗೆ ಬಲವಾಗಿರುವನು.
ಪರ್ವತಗಳು ಹೊರಟುಹೋಗುವವು, ಮತ್ತು ಗುಡ್ಡಗಳು ತೆಗೆದುಹಾಕಲ್ಪಡುವವು; ಆದರೆ ನನ್ನ ದಯೆಯು ನಿನ್ನನ್ನು ಬಿಟ್ಟುಹೋಗದು ಇಲ್ಲವೆ ನನ್ನ ಸಮಾಧಾನದ ಒಡಂಬಡಿಕೆಯು ತೆಗೆಯಲ್ಪಡುವದಿಲ್ಲ ಎಂದು ನಿನ್ನ ಮೇಲೆ ಕರುಣೆಯನ್ನು ಇಟ್ಟಿರುವ ಕರ್ತನು ಹೇಳುತ್ತಾನೆ.
ನಾನು ನನ್ನ ಕಣ್ಣುಗಳನ್ನು ಅವರ ಮೇಲೆ ಒಳ್ಳೇದಕ್ಕಾಗಿ ಇಡುವೆನು. ಈ ದೇಶಕ್ಕೆ ಅವರನ್ನು ತಿರಿಗಿ ಬರಮಾಡುವೆನು; ಕೆಡವಿ ಹಾಕದೆ ಅವರನ್ನು ಕಟ್ಟುವೆನು, ಕೀಳದೆ ಅವರನ್ನು ನೆಡುವೆನು.
ನಾನು ಕಂಡ ರಾತ್ರಿಯ ದರ್ಶನದಲ್ಲಿ ಇಗೋ, ಮನುಷ್ಯ ಕುಮಾರನಂತಿರುವ ಒಬ್ಬನು ಆಕಾಶದ ಮೇಘಗಳ ಸಂಗಡ ಪೂರ್ವಿಕನ ಬಳಿಗೆ ಸವಿಾಪಿಸಿದನು. ಅವನನ್ನು ಆತನ ಬಳಿಗೆ ಕರೆತಂದರು.
ಆದದರಿಂದ ನೀನು ತಿಳಿಯಬೇಕಾದದ್ದು ಏನಂದರೆ --ಯೆರೂಸಲೇಮನ್ನು ತಿರಿಗಿ ಸ್ಥಾಪಿಸಿ ಕಟ್ಟಲು ಆಜ್ಞೆ ಹೊರಡುವದು ಮೊದಲುಗೊಂಡು ಅಭಿಷಿಕ್ತನಾದ (ಮೆಸ್ಸೀಯನ) ಪ್ರಭುವಿನ ವರೆಗೂ ಏಳು ವಾರಗಳು ಕಳೆಯಬೇಕು. ಅದು ಪುನಃ ಸ್ಥಾಪಿಸಲ್ಪಟ್ಟು ಅರವತ್ತೆರಡು ವಾರಗಳು ಇರುವದು. ಅದಕ್ಕೆ ಬೀದಿಯೂ ಗೋಡೆ ಗಳೂ ಕಷ್ಟಕಾಲದಲ್ಲಿ ಕಟ್ಟಲ್ಪಡುವದು.
ಆತನು ಕರ್ತನ ಬಲದಲ್ಲಿಯೂ ತನ್ನ ದೇವರಾದ ಕರ್ತನ ಹೆಸರಿನಲ್ಲಿ ಘನತೆಯಲ್ಲಿಯೂ ನಿಂತುಕೊಂಡು ಮೇಯಿಸುವನು; ಮತ್ತು ಅವರು ನೆಲೆಯಾಗಿರುವರು, ಈಗ ಆತನು ಭೂಮಿಯ ಅಂತ್ಯಗಳ ಮಟ್ಟಿಗೂ ದೊಡ್ಡವನಾಗಿ ರುವನು.
ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು--ಸಮಸ್ತ ಭೂಮಿಯ ಕರ್ತನ ಬಳಿಯಲ್ಲಿ ನಿಲ್ಲುವ ಇಬ್ಬರು ಅಭಿಷೇಕಿಸಲ್ಪಟ್ಟವರು ಇವರೇ ಅಂದನು.
ಬೆಳ್ಳಿಬಂಗಾರವನ್ನು ತಕ್ಕೊಂಡು ಕಿರೀಟಗಳನ್ನು ಮಾಡಿ ಅವುಗಳನ್ನು ಯೆಹೋಚಾದಾಕನ ಮಗನಾದ ಪ್ರಧಾನ ಯಾಜಕ ನಾದ ಯೆಹೋಶುವನ ತಲೆಯ ಮೇಲೆ ಇಟ್ಟು
ಅವನು ಹೊರಗೆ ಹೋದಮೇಲೆ ಯೇಸು-- ಈಗ ಮನುಷ್ಯಕುಮಾರನು ಮಹಿಮೆಪಟ್ಟಿದ್ದಾನೆ. ದೇವರು ಆತನಲ್ಲಿ ಮಹಿಮೆಪಟ್ಟಿದ್ದಾನೆ.
ಯೇಸು ಈ ಮಾತುಗಳನ್ನು ಹೇಳಿ ಪರಲೋಕದ ಕಡೆಗೆ ಕಣ್ಣುಗಳನ್ನೆತ್ತಿ-- ತಂದೆಯೇ, ಈಗ ಗಳಿಗೆ ಬಂದಿದೆ; ನಿನ್ನ ಮಗನನ್ನು ಮಹಿಮೆಪಡಿಸು; ಆಗ ನಿನ್ನ ಮಗನೂ ನಿನ್ನನ್ನು ಮಹಿಮೆಪಡಿಸುವದಕ್ಕಾಗುವದು.
ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ವಾಕ್ಯವನ್ನು ಅನುಗ್ರಹಿಸಿದ್ದಾನೆ; (ಆತನು ಎಲ್ಲರಿಗೂ ಕರ್ತನಾಗಿದ್ದಾನೆ.)
ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನ ಉಂಟಾಗಿದೆ.
ಬಲಾತಿಶಯವು ಕ್ರಿಸ್ತನಲ್ಲಿ ತೋರಿಬಂದಿದೆ; ಹೇಗಂ ದರೆ ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿ
ಈಗಲಾ ದರೋ ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವಿನಲ್ಲಿ ಆತನ ರಕ್ತದ ಮೂಲಕ ಸವಿಾಪಸ್ಥ ರಾದಿರಿ.
ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡಾಗ ಮನುಷ್ಯರ ಹೋಲಿಕೆ ಯಲ್ಲಿ ಮಾಡಲ್ಪಟ್ಟನು.
ಕೊಲೊಸ್ಸೆಯಲ್ಲಿ ಕ್ರಿಸ್ತನಲ್ಲಿರುವ ಪರಿಶುದ್ಧರಿಗೆ ಮತ್ತು ನಂಬಿಗಸ್ತರಾದ ಸಹೋದರರಿಗೆ--ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
ಸಭೆಯೆಂಬ ದೇಹಕ್ಕೆ ಆತನು ಶಿರಸ್ಸಾಗಿದ್ದಾನೆ. ಆತನೇ ಆದಿಯಾಗಿದ್ದು ಎಲ್ಲಾದರಲ್ಲಿ ಪ್ರಮುಖನಾಗಿರುವಂತೆ ಆತನು ಸತ್ತವರೊಳಗಿಂದ ಬಂದ ಜ್ಯೇಷ್ಠನೂ ಆಗಿದ್ದಾನೆ.
ನೀನು ಅವನನ್ನು ದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಮಾಡಿದಿಯಲ್ಲಾ; ಪ್ರಭಾವ ವನ್ನೂ ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟು ನಿನ್ನ ಕೈಕೆಲಸಗಳ ಮೇಲೆ ಅವನನ್ನು ನೇಮಿಸಿದ್ದೀ;
ಆದದರಿಂದ ಪರಿಶುದ್ಧರಾದ ಸಹೋ ದರರೇ, ಪರಲೋಕದ ಕರೆಯುವಿಕೆಯಲ್ಲಿ ಪಾಲುಗಾರರೇ, ನಾವು ಒಪ್ಪಿಕೊಂಡಿರುವ ಅಪೊ ಸ್ತಲನೂ ಮಹಾಯಾಜಕನೂ ಆಗಿರುವ ಕ್ರಿಸ್ತ ಯೇಸುವನ್ನು ಆಲೋಚಿಸಿರಿ.
ಆಕಾಶಗಳನ್ನು ದಾಟಿಹೋದ ದೇವಕುಮಾರ ನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿರುವದರಿಂದ ನಾವು ಮಾಡಿರುವ ಅರಿಕೆಯನ್ನು ಬಿಗಿಯಾಗಿ ಹಿಡಿಯೋಣ.
ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ ಮಾಡಲ್ಪಟ್ಟು ನಮಗೋಸ್ಕರ ಮುಂದಾಗಿ ಅದರೊಳಗೆ ಪ್ರವೇಶಿಸಿದ್ದಾನೆ.
ಈತನಾ ದರೋ ಸದಾಕಾಲವಿರುವದರಿಂದ ಬದಲಾವಣೆಯಾ ಗದ ಯಾಜಕತ್ವವನ್ನು ಹೊಂದಿದ್ದಾನೆ.
ಆದರೆ ಈ ಮನುಷ್ಯನು ಪಾಪಗಳಿಗೋಸ್ಕರ ನಿರಂತರವಾದ ಒಂದೇ ಯಜ್ಞವನ್ನು ಅರ್ಪಿಸಿದ ಮೇಲೆ ದೇವರ ಬಲ ಗಡೆಯಲ್ಲಿ ಕೂತುಕೊಂಡನು.
ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.
ನಾನು ಜಯಹೊಂದಿ ನನ್ನ ತಂದೆಯೊಡನೆ ಆತನ ಸಿಂಹಾಸನದಲ್ಲಿ ಕೂತುಕೊಂಡ ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ನನ್ನ ಸಿಂಹಾಸನದಲ್ಲಿ ನನ್ನ ಕೂಡ ಕೂತುಕೊಳ್ಳುವಂತೆ ಅನು ಗ್ರಹಿಸುವೆನು.ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.
ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;
ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಬಿಳೀ ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದಾತನು ನಂಬಿಗಸ್ತನೂ ಸತ್ಯವಂತನೂ ಎಂದು ಕರೆಯಲ್ಪಟ್ಟನು. ಆತನು ನೀತಿಯಿಂದ ನ್ಯಾಯವಿಚಾರಣೆ ಮಾಡಿ ಯುದ್ಧ ಮಾಡುತ್ತಾನೆ;