Home Bibles ಜೆಕರ್ಯ 6:13 · ಕನ್ನಡ ಬೈಬಲ್
ಜೆಕರ್ಯ 6:13 · ಕನ್ನಡ ಬೈಬಲ್

ಹೌದು, ಆತನು ಕರ್ತನ ದೇವಾಲಯವನ್ನು ಕಟ್ಟು ವನು; ಆತನು ಮಹಿಮೆಯನ್ನು ಧರಿಸುವನು; ಕೂತು ಕೊಂಡು ತನ್ನ ಸಿಂಹಾಸನದಲ್ಲಿ ಆಳುವನು, ತನ್ನ ಸಿಂಹಾಸನದಲ್ಲಿ ಯಾಜಕನಾಗಿರುವನು; ಸಮಾಧಾನದ ಆಲೋಚನೆ ಅವರಿಬ್ಬರೊಳಗೆ ಇರುವದು.

Cross references

ಆದಿಕಾಂಡ 14:18

ಸಾಲೇಮಿನ ಅರಸನಾದ ಮೆಲ್ಕೀಚೆದೇಕನು ರೊಟ್ಟಿಯನ್ನೂ ದ್ರಾಕ್ಷಾ ರಸವನ್ನೂ ತಂದನು. ಇವನು ಮಹೋನ್ನತನಾದ ದೇವರ ಯಾಜಕನು.

2 ಸಮುವೇಲ 7:13

ಅವನು ನನ್ನ ಹೆಸ ರಿಗೆ ಮನೆಯನ್ನು ಕಟ್ಟುವನು; ನಾನು ಅವನ ರಾಜ್ಯದ ಸಿಂಹಾಸನವನ್ನು ಸದಾಕಾಲಕ್ಕೂ ಸ್ಥಿರಮಾಡುವೆನು. ನಾನು ಅವನ ತಂದೆಯಾಗಿರುವೆನು; ಅವನು ನನ್ನ ಮಗನಾಗಿರುವನು.

ಕೀರ್ತನೆಗಳು 21:4

ಜೀವವನ್ನು ಅವನು ನಿನ್ನಿಂದ ಬೇಡಲು ನೀನು ಅವನಿಗೆ ಯುಗಯುಗಾಂತರಗಳಿಗೂ ದೀರ್ಘಾಯುಷ್ಯವನ್ನು ಕೊಟ್ಟೆ.

ಕೀರ್ತನೆಗಳು 21:5

ನ್ನ ರಕ್ಷಣೆಯಲ್ಲಿ ಅವನ ಹೆಚ್ಚಳವು ದೊಡ್ಡದಾಗಿದೆ, ಗೌರವವನ್ನೂ ಘನತೆಯನ್ನೂ ಅವನ ಮೇಲೆ ಇಡುತ್ತೀ.

ಕೀರ್ತನೆಗಳು 45:3

ಓ ಪರಾಕ್ರಮಿಯೇ, ನಿನ್ನ ಮಹಿಮೆಯಿಂದಲೂ ಘನತೆಯಿಂದಲೂ ನಿನ್ನ ಕತ್ತಿಯನ್ನು ಸೊಂಟಕ್ಕೆ ಬಿಗಿ ದುಕೋ.

ಕೀರ್ತನೆಗಳು 72:17

ಆತನ ನಾಮವು ಎಂದೆಂದಿಗೂ ಇರುವದು; ಸೂರ್ಯನು ಇರುವವರೆಗೂ ಆತನ ಹೆಸರು ಇರು ವದು. ಮನುಷ್ಯರು ಆತನಲ್ಲಿ ಆಶೀರ್ವಾದ ಹೊಂದು ವರು. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತ ನೆಂದು ಕರೆಯುವರು.

ಕೀರ್ತನೆಗಳು 85:9

ನಿಶ್ಚ ಯವಾಗಿ ಘನವು ನಮ್ಮ ದೇಶದಲ್ಲಿ ವಾಸವಾಗಿರುವ ಹಾಗೆ, ಆತನಿಗೆ ಭಯಪಡುವವರಿಗೆ ಆತನ ರಕ್ಷಣೆಯು ಸವಿಾಪವಾಗಿದೆ.

ಕೀರ್ತನೆಗಳು 110:1

ಕರ್ತನು ನನ್ನ ಕರ್ತನಿಗೆ ಹೇಳಿದ್ದೇನೆಂದರೆ ನಾನು ನಿನ್ನ ಶತ್ರುಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನನ್ನ ಬಲ ಪಾರ್ಶ್ವದಲ್ಲಿ ಕುಳಿತುಕೋ,

ಕೀರ್ತನೆಗಳು 110:4

ನೀನು ಎಂದೆಂದಿಗೂ ಮೆಲ್ಕೀಜೆದೇಕನ ತರದ ಯಾಜಕನಾಗಿದ್ದೀ ಎಂದು ಕರ್ತನು ಆಣೆಯಿಟ್ಟು ನುಡಿ ದಿದ್ದಾನೆ; ಪಶ್ಚಾತ್ತಾಪಪಡನು.

ಯೆಶಾಯ 9:5

ಯುದ್ಧವೀರರ ಪ್ರತಿಯುದ್ಧವು ಗಲಿಬಿಲಿಯ ಗದ್ದಲ ದಿಂದ ಕೂಡಿದ್ದಾಗಿಯೂ ವಸ್ತ್ರಗಳು ರಕ್ತದಲ್ಲಿ ಹೊರಳಾ ಡಿದವುಗಳಾಗಿಯೂ ಇರುತ್ತವೆ; ಆದರೆ ಇವು ಬೆಂಕಿಗೆ ಆಹುತಿಯಾಗಿ ಸುಟ್ಟುಹೋಗುವವು.

ಯೆಶಾಯ 9:6

ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.

ಯೆಶಾಯ 11:10

ಆ ದಿನದಲ್ಲಿ ಹುಡುಕುವ ಅನ್ಯಜನರಿಗೆ ಇಷ ಯನ ಬೇರು ಒಂದು ಗುರುತಾಗಿ ನಿಲ್ಲುವದು; ಅವನ ವಿಶ್ರಾಂತಿ ವೈಭವವುಳ್ಳದ್ದಾಗಿರುವದು.

ಯೆಶಾಯ 22:24

ಬಟ್ಟಲು ಮೊದಲುಗೊಂಡು ಕೊಡದ ತನಕ ಸಕಲ ಸಾಧಾರಣ ಪಾತ್ರೆಗಳನ್ನು ಅಂದರೆ ತಂದೆಯ ಸಂತಾನ, ಸಂತತಿಯಾದ ಅವನ ಮನೆಯ ಎಲ್ಲಾ ವೈಭವವನ್ನು ಅವರು ಅವನಿಗೆ ವಹಿ ಸುವರು.ಆ ದಿನದಲ್ಲಿ ಸೈನ್ಯಗಳ ಕರ್ತನು ಇಂತೆನ್ನುತ್ತಾನೆ--ಭದ್ರವಾದ ಸ್ಥಳದಲ್ಲಿ ಮೊಳೆಯನ್ನು ತೆಗೆದುಹಾಕಿ, ಅದು ಕೀಳಲ್ಪಟ್ಟು, ಬೀಳುವದು. ಅದ ರಲ್ಲಿ ಇದ್ದ ಭಾರವೂ ತೆಗೆದುಹಾಕಲ್ಪಡುವದು; ಕರ್ತನೇ ಇದನ್ನು ನುಡಿದಿದ್ದಾನೆ.

ಯೆಶಾಯ 49:5

ಯಾಕೋಬನ್ನು ತನ್ನ ಕಡೆಗೆ ತಿರಿಗಿ ಸೇರಿಸಿಕೊಳ್ಳ ಬೇಕೆಂತಲೂ ಇಸ್ರಾಯೇಲು ತನ್ನ ಕಡೆಗೆ ಕೂಡಿಕೊಳ್ಳು ವಂತೆಯೂ ಆತನು ಗರ್ಭದಲ್ಲಿಯೇ ನನ್ನನ್ನು ತನ್ನ ಸೇವಕನನ್ನಾಗಿ ರೂಪಿಸಿದನು. ಆದರೂ ನಾನು ಕರ್ತನ ದೃಷ್ಟಿಯಲ್ಲಿ ಗೌರವವುಳ್ಳವನಾಗಿರುವೆನು; ನನ್ನ ದೇವರೇ ನನಗೆ ಬಲವಾಗಿರುವನು.

ಯೆಶಾಯ 54:10

ಪರ್ವತಗಳು ಹೊರಟುಹೋಗುವವು, ಮತ್ತು ಗುಡ್ಡಗಳು ತೆಗೆದುಹಾಕಲ್ಪಡುವವು; ಆದರೆ ನನ್ನ ದಯೆಯು ನಿನ್ನನ್ನು ಬಿಟ್ಟುಹೋಗದು ಇಲ್ಲವೆ ನನ್ನ ಸಮಾಧಾನದ ಒಡಂಬಡಿಕೆಯು ತೆಗೆಯಲ್ಪಡುವದಿಲ್ಲ ಎಂದು ನಿನ್ನ ಮೇಲೆ ಕರುಣೆಯನ್ನು ಇಟ್ಟಿರುವ ಕರ್ತನು ಹೇಳುತ್ತಾನೆ.

ಯೆರೆಮಿಯ 23:6

ನಾನು ನನ್ನ ಕಣ್ಣುಗಳನ್ನು ಅವರ ಮೇಲೆ ಒಳ್ಳೇದಕ್ಕಾಗಿ ಇಡುವೆನು. ಈ ದೇಶಕ್ಕೆ ಅವರನ್ನು ತಿರಿಗಿ ಬರಮಾಡುವೆನು; ಕೆಡವಿ ಹಾಕದೆ ಅವರನ್ನು ಕಟ್ಟುವೆನು, ಕೀಳದೆ ಅವರನ್ನು ನೆಡುವೆನು.

ದಾನಿಯೇಲ 7:13

ನಾನು ಕಂಡ ರಾತ್ರಿಯ ದರ್ಶನದಲ್ಲಿ ಇಗೋ, ಮನುಷ್ಯ ಕುಮಾರನಂತಿರುವ ಒಬ್ಬನು ಆಕಾಶದ ಮೇಘಗಳ ಸಂಗಡ ಪೂರ್ವಿಕನ ಬಳಿಗೆ ಸವಿಾಪಿಸಿದನು. ಅವನನ್ನು ಆತನ ಬಳಿಗೆ ಕರೆತಂದರು.

ದಾನಿಯೇಲ 9:25

ಆದದರಿಂದ ನೀನು ತಿಳಿಯಬೇಕಾದದ್ದು ಏನಂದರೆ --ಯೆರೂಸಲೇಮನ್ನು ತಿರಿಗಿ ಸ್ಥಾಪಿಸಿ ಕಟ್ಟಲು ಆಜ್ಞೆ ಹೊರಡುವದು ಮೊದಲುಗೊಂಡು ಅಭಿಷಿಕ್ತನಾದ (ಮೆಸ್ಸೀಯನ) ಪ್ರಭುವಿನ ವರೆಗೂ ಏಳು ವಾರಗಳು ಕಳೆಯಬೇಕು. ಅದು ಪುನಃ ಸ್ಥಾಪಿಸಲ್ಪಟ್ಟು ಅರವತ್ತೆರಡು ವಾರಗಳು ಇರುವದು. ಅದಕ್ಕೆ ಬೀದಿಯೂ ಗೋಡೆ ಗಳೂ ಕಷ್ಟಕಾಲದಲ್ಲಿ ಕಟ್ಟಲ್ಪಡುವದು.

ಮೀಕ 5:4

ಆತನು ಕರ್ತನ ಬಲದಲ್ಲಿಯೂ ತನ್ನ ದೇವರಾದ ಕರ್ತನ ಹೆಸರಿನಲ್ಲಿ ಘನತೆಯಲ್ಲಿಯೂ ನಿಂತುಕೊಂಡು ಮೇಯಿಸುವನು; ಮತ್ತು ಅವರು ನೆಲೆಯಾಗಿರುವರು, ಈಗ ಆತನು ಭೂಮಿಯ ಅಂತ್ಯಗಳ ಮಟ್ಟಿಗೂ ದೊಡ್ಡವನಾಗಿ ರುವನು.

ಜೆಕರ್ಯ 4:14

ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು--ಸಮಸ್ತ ಭೂಮಿಯ ಕರ್ತನ ಬಳಿಯಲ್ಲಿ ನಿಲ್ಲುವ ಇಬ್ಬರು ಅಭಿಷೇಕಿಸಲ್ಪಟ್ಟವರು ಇವರೇ ಅಂದನು.

ಜೆಕರ್ಯ 6:11

ಬೆಳ್ಳಿಬಂಗಾರವನ್ನು ತಕ್ಕೊಂಡು ಕಿರೀಟಗಳನ್ನು ಮಾಡಿ ಅವುಗಳನ್ನು ಯೆಹೋಚಾದಾಕನ ಮಗನಾದ ಪ್ರಧಾನ ಯಾಜಕ ನಾದ ಯೆಹೋಶುವನ ತಲೆಯ ಮೇಲೆ ಇಟ್ಟು

ಯೋಹಾನ 13:31

ಅವನು ಹೊರಗೆ ಹೋದಮೇಲೆ ಯೇಸು-- ಈಗ ಮನುಷ್ಯಕುಮಾರನು ಮಹಿಮೆಪಟ್ಟಿದ್ದಾನೆ. ದೇವರು ಆತನಲ್ಲಿ ಮಹಿಮೆಪಟ್ಟಿದ್ದಾನೆ.

ಯೋಹಾನ 17:1

ಯೇಸು ಈ ಮಾತುಗಳನ್ನು ಹೇಳಿ ಪರಲೋಕದ ಕಡೆಗೆ ಕಣ್ಣುಗಳನ್ನೆತ್ತಿ-- ತಂದೆಯೇ, ಈಗ ಗಳಿಗೆ ಬಂದಿದೆ; ನಿನ್ನ ಮಗನನ್ನು ಮಹಿಮೆಪಡಿಸು; ಆಗ ನಿನ್ನ ಮಗನೂ ನಿನ್ನನ್ನು ಮಹಿಮೆಪಡಿಸುವದಕ್ಕಾಗುವದು.

ಅಪೋಸ್ತಲರ ಕೃತ್ಯಗಳು 10:36

ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನವನ್ನು ಪ್ರಕಟಿಸುತ್ತಾ ಇಸ್ರಾಯೇಲ್‌ ಜನರಿಗೆ ವಾಕ್ಯವನ್ನು ಅನುಗ್ರಹಿಸಿದ್ದಾನೆ; (ಆತನು ಎಲ್ಲರಿಗೂ ಕರ್ತನಾಗಿದ್ದಾನೆ.)

ರೋಮಾಪುರದವರಿಗೆ 5:1

ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನ ಉಂಟಾಗಿದೆ.

ಎಫೆಸದವರಿಗೆ 1:20

ಬಲಾತಿಶಯವು ಕ್ರಿಸ್ತನಲ್ಲಿ ತೋರಿಬಂದಿದೆ; ಹೇಗಂ ದರೆ ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿ

ಎಫೆಸದವರಿಗೆ 2:13

ಈಗಲಾ ದರೋ ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವಿನಲ್ಲಿ ಆತನ ರಕ್ತದ ಮೂಲಕ ಸವಿಾಪಸ್ಥ ರಾದಿರಿ.

ಫಿಲಿಪ್ಪಿಯವರಿಗೆ 2:7

ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡಾಗ ಮನುಷ್ಯರ ಹೋಲಿಕೆ ಯಲ್ಲಿ ಮಾಡಲ್ಪಟ್ಟನು.

ಕೊಲೊಸ್ಸೆಯವರಿಗೆ 1:2

ಕೊಲೊಸ್ಸೆಯಲ್ಲಿ ಕ್ರಿಸ್ತನಲ್ಲಿರುವ ಪರಿಶುದ್ಧರಿಗೆ ಮತ್ತು ನಂಬಿಗಸ್ತರಾದ ಸಹೋದರರಿಗೆ--ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.

ಕೊಲೊಸ್ಸೆಯವರಿಗೆ 1:18

ಸಭೆಯೆಂಬ ದೇಹಕ್ಕೆ ಆತನು ಶಿರಸ್ಸಾಗಿದ್ದಾನೆ. ಆತನೇ ಆದಿಯಾಗಿದ್ದು ಎಲ್ಲಾದರಲ್ಲಿ ಪ್ರಮುಖನಾಗಿರುವಂತೆ ಆತನು ಸತ್ತವರೊಳಗಿಂದ ಬಂದ ಜ್ಯೇಷ್ಠನೂ ಆಗಿದ್ದಾನೆ.

ಹೆಬ್ರಿಯರಿಗೆ 2:7

ನೀನು ಅವನನ್ನು ದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಮಾಡಿದಿಯಲ್ಲಾ; ಪ್ರಭಾವ ವನ್ನೂ ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟು ನಿನ್ನ ಕೈಕೆಲಸಗಳ ಮೇಲೆ ಅವನನ್ನು ನೇಮಿಸಿದ್ದೀ;

ಹೆಬ್ರಿಯರಿಗೆ 3:1

ಆದದರಿಂದ ಪರಿಶುದ್ಧರಾದ ಸಹೋ ದರರೇ, ಪರಲೋಕದ ಕರೆಯುವಿಕೆಯಲ್ಲಿ ಪಾಲುಗಾರರೇ, ನಾವು ಒಪ್ಪಿಕೊಂಡಿರುವ ಅಪೊ ಸ್ತಲನೂ ಮಹಾಯಾಜಕನೂ ಆಗಿರುವ ಕ್ರಿಸ್ತ ಯೇಸುವನ್ನು ಆಲೋಚಿಸಿರಿ.

ಹೆಬ್ರಿಯರಿಗೆ 4:14

ಆಕಾಶಗಳನ್ನು ದಾಟಿಹೋದ ದೇವಕುಮಾರ ನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿರುವದರಿಂದ ನಾವು ಮಾಡಿರುವ ಅರಿಕೆಯನ್ನು ಬಿಗಿಯಾಗಿ ಹಿಡಿಯೋಣ.

ಹೆಬ್ರಿಯರಿಗೆ 6:20

ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ ಮಾಡಲ್ಪಟ್ಟು ನಮಗೋಸ್ಕರ ಮುಂದಾಗಿ ಅದರೊಳಗೆ ಪ್ರವೇಶಿಸಿದ್ದಾನೆ.

ಹೆಬ್ರಿಯರಿಗೆ 7:24

ಈತನಾ ದರೋ ಸದಾಕಾಲವಿರುವದರಿಂದ ಬದಲಾವಣೆಯಾ ಗದ ಯಾಜಕತ್ವವನ್ನು ಹೊಂದಿದ್ದಾನೆ.

ಹೆಬ್ರಿಯರಿಗೆ 10:12

ಆದರೆ ಈ ಮನುಷ್ಯನು ಪಾಪಗಳಿಗೋಸ್ಕರ ನಿರಂತರವಾದ ಒಂದೇ ಯಜ್ಞವನ್ನು ಅರ್ಪಿಸಿದ ಮೇಲೆ ದೇವರ ಬಲ ಗಡೆಯಲ್ಲಿ ಕೂತುಕೊಂಡನು.

1 ಪೇತ್ರ 3:22

ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.

ಪ್ರಕಟನೆ 3:21

ನಾನು ಜಯಹೊಂದಿ ನನ್ನ ತಂದೆಯೊಡನೆ ಆತನ ಸಿಂಹಾಸನದಲ್ಲಿ ಕೂತುಕೊಂಡ ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ನನ್ನ ಸಿಂಹಾಸನದಲ್ಲಿ ನನ್ನ ಕೂಡ ಕೂತುಕೊಳ್ಳುವಂತೆ ಅನು ಗ್ರಹಿಸುವೆನು.ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.

ಪ್ರಕಟನೆ 5:9

ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;

ಪ್ರಕಟನೆ 19:11

ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಬಿಳೀ ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದಾತನು ನಂಬಿಗಸ್ತನೂ ಸತ್ಯವಂತನೂ ಎಂದು ಕರೆಯಲ್ಪಟ್ಟನು. ಆತನು ನೀತಿಯಿಂದ ನ್ಯಾಯವಿಚಾರಣೆ ಮಾಡಿ ಯುದ್ಧ ಮಾಡುತ್ತಾನೆ;

Interlinear

Choose Theme