ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರ ಗಾಳಿಯಿಂದ ಚದರಿಸಿಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು; ಹಾದುಹೋಗುವವನೂ ತಿರುಗಿಕೊಳ್ಳುವವನೂ ಇಲ್ಲದೆ ಹೋದರು. ರಮ್ಯವಾದ ದೇಶವನ್ನು ಹಾಳಾಗಿ ಮಾಡಿದರು.
Cross references
ನಿಮ್ಮ ಮೇಲೆ ಕಾಡುಮೃಗಗಳು ಬರುವಂತೆ ಮಾಡುವೆನು. ಅವು ನಿಮ್ಮನ್ನು ಮಕ್ಕಳಿಲ್ಲದ ವರನ್ನಾಗಿ ಮಾಡಿ ನಿಮ್ಮ ದನಗಳನ್ನು ತಿಂದುಬಿಡುವವು ಮತ್ತು ನಿಮ್ಮನ್ನು ಸ್ವಲ್ಪ ಮಂದಿಯಾಗಿ ಮಾಡುವವು; ನಿಮ್ಮ ಮಾರ್ಗಗಳು ಹಾಳಾಗಿಹೋಗುವವು.
ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು; ನಿಮ್ಮ ಭೂಮಿ ಹಾಳಾಗಿ ರುವದು; ನಿಮ್ಮ ಪಟ್ಟಣಗಳು ನಾಶವಾಗಿರುವವು.
ಆಗ ಕರ್ತನು ನಿಮ್ಮನ್ನು ಜನಾಂಗ ಗಳಲ್ಲಿ ಚದರಿಸುವನು; ಕರ್ತನು ನಿಮ್ಮನ್ನು ನಡಿಸುವಲ್ಲಿ ಅವರ ಮಧ್ಯದಲ್ಲಿ ಸ್ವಲ್ಪ ಮಂದಿಯಾಗಿ ಉಳಿಯುವಿರಿ.
ನಿನ್ನ ಭೂಮಿಯ ಫಲವನ್ನೂ ನಿನ್ನ ಎಲ್ಲಾ ಆದಾಯವನ್ನೂ ನೀನರಿಯದ ಜನವು ತಿಂದುಬಿಡುವದು; ನೀನು ಯಾವಾ ಗಲೂ ಬಲಾತ್ಕಾರವನ್ನೂ ಸಂಕಟವನ್ನೂ ಅನುಭವಿ ಸುವಿ.
ಕರ್ತನು ದೂರದಿಂದ ಅಂದರೆ ಭೂಮಿಯ ಅಂತ್ಯದಿಂದ ಹಾರುವ ಹದ್ದಿಗೆ ಸಮಾನವಾದ ಜನಾಂಗ ವನ್ನೂ ನಿನಗೆ ತಿಳಿಯದ ಭಾಷೆಯ ಜನಾಂಗವನ್ನೂ
ಇದ ಲ್ಲದೆ ಕರ್ತನು ನಿನ್ನನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯ ವರೆಗೂ ಎಲ್ಲಾ ಜನಗಳಲ್ಲಿ ಚದರಿಸು ವನು; ಅಲ್ಲಿ ನೀನೂ ನಿನ್ನ ಪಿತೃಗಳೂ ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಸೇವಿಸುವಿ.
ದೇಶವು ಎಪ್ಪತ್ತು ವರುಷ ತೀರುವ ಪರ್ಯಂತರ ಹಾಳಾಗಿದ್ದು ಸಬ್ಬತ್ತನ್ನು ಅನುಭವಿಸುತ್ತಾ ಇತ್ತು.
ನಿಮ್ಮ ಗಡಿಗೆಗಳಿಗೆ ಮುಳ್ಳಿನಕಾವು ತಾಗುವದಕ್ಕಿಂತ ಮುಂಚೆ ಅದು ಹಸಿ ಇರುವಾಗಲೇ ದೇವರು ಕೋಪದಿಂದ ಬಿರುಗಾಳಿಯಿಂ ದಲೋ ಎಂಬಂತೆ ಅವರನ್ನು ಹಾರಿಸಿಬಿಡುವನು.
ಮಹಾ ಜಲಪ್ರವಾಹ ಗಳು ಘೋಷಿಸುವಂತೆ ಜನಾಂಗಗಳು ಘೋಷಿಸು ತ್ತವೆ. ಆದರೆ ದೇವರು ಅವರನ್ನು ಗದರಿಸುತ್ತಲೇ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ ಸುಂಟರಗಾಳಿಯಿಂದ ಸುತ್ತಿ ಯಾಡುವ ದೂಳಿನಂತೆಯೂ ಅಟ್ಟಲ್ಪಡುವರು.ಇಗೋ, ಸಾಯಂಕಾಲದಲ್ಲಿ ಭಯಭ್ರಾಂತಿ; ಉದ ಯಕ್ಕೆ ಮುಂಚೆ ಅವನು ಇಲ್ಲದಂತಾಗುವನು. ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆ ಹೊಡೆಯುವವರ ಪಾಡು ಇದೇ.
ಸಮುದ್ರದ ಅಡವಿಯ ವಿಷಯವಾದ ದೈವೋಕ್ತಿ ದಕ್ಷಿಣ ಸೀಮೆಯಲ್ಲಿ ಬೀಸುವ ಬಿರುಗಾಳಿ ದಾಟಿಹೋಗುವಂತೆ ಅದು ಮರುಭೂಮಿ ಕಡೆಯಿಂದ ಭಯಂಕರವಾದ ದೇಶದಿಂದ ಬರುತ್ತದೆ.
ಇಗೋ, ಕರ್ತನು ಬೆಂಕಿಯೊಡನೆ ಬರುವನು. ಆತನ ರಥಗಳು ಬಿರುಗಾಳಿಯ ಹಾಗೆ ಇರುವವು; ಉಗ್ರದಿಂದ ತನ್ನ ಕೋಪವನ್ನೂ ಅಗ್ನಿಜ್ವಾಲೆಗಳಿಂದ ತನ್ನ ಗದರಿಕೆ ಯನ್ನೂ ಸಲ್ಲಿಸುವದಕ್ಕಾಗಿಯೇ ಬರುವನು.
ಆ ಸಮಯದಲ್ಲಿ ಈ ಜನರಿಗೂ ಯೆರೂಸಲೇಮಿಗೂ ಹೇಳಲ್ಪಡುವದೇನಂದರೆ--ಒಣ ಗಾಳಿಯು ಅರಣ್ಯದ ಉನ್ನತ ಸ್ಥಳಗಳಿಂದ ನನ್ನ ಜನರ ಕುಮಾರಿಯ ಕಡೆಗೆ ಬರುತ್ತದೆ. ಅದು ತೂರುವದಕ್ಕೂ ಶುದ್ಧಮಾಡುವದಕ್ಕೂ ಆಗತಕ್ಕದ್ದಲ್ಲ.
ಅಸಹ್ಯವನ್ನು ಮಾಡಿದ ಮೇಲೆ ನಾಚಿಕೆಪಟ್ಟರೋ? ಇಲ್ಲ, ಸ್ವಲ್ಪವಾದರೂ ನಾಚಿಕೆಪಡ ಲಿಲ್ಲ; ಇಲ್ಲವೆ ಲಜ್ಜೆಯನ್ನು ಅರಿಯರು; ಆದದರಿಂದ ಅವರು ಬೀಳುವವರೊಳಗೆ ಬೀಳುವರು; ನಾನು ಅವ ರನ್ನು ವಿಚಾರಿಸುವ ಕಾಲದಲ್ಲಿ ಅವರು ಕೆಳಗೆ ಹಾಕ ಲ್ಪಡುವರು ಎಂದು ಕರ್ತನು ಹೇಳುತ್ತಾನೆ.
ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ; ಯೆಹೂದ ದೇಶದಲ್ಲಿಯೂ ಅದರ ಪಟ್ಟಣಗಳಲ್ಲಿಯೂ ನಾನು ಅವರನ್ನು ಸೆರೆಯಿಂದ ತಿರುಗಿ ತರುವಾಗ ನೀತಿಯ ನಿವಾಸವೇ, ಪರಿಶುದ್ಧ ಪರ್ವತವೇ, ಕರ್ತನು ನಿನ್ನನ್ನು ಆಶೀರ್ವದಿಸಲಿ ಎಂದು ಇನ್ನೂ ಹೇಳುವರು.
ಬಾಬೆಲಿನ ಅರಸನು ನಿಮ್ಮ ಮೇಲೆಯೂ ಈ ದೇಶದ ಮೇಲೆಯೂ ಬರುವದಿಲ್ಲವೆಂದು ನಿಮಗೆ ಪ್ರವಾದಿಸಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ? ಆದದರಿಂದ ಈಗ ಕಿವಿಗೊಡು,
ನಿನ್ನ ದೇಶದ ಜನರಿಗೆ ಹೀಗೆ ಹೇಳು--ಯೆರೂಸಲೇಮಿನ ನಿವಾಸಿ ಗಳಿಗೆ ಮತ್ತು ಇಸ್ರಾಯೇಲ್ಯರ ದೇಶಕ್ಕೆ ದೇವರಾದ ಕರ್ತನು ಹೇಳಿದ್ದೇನಂದರೆ--ಅವರು ತಮ್ಮ ರೊಟ್ಟಿ ಯನ್ನು ಎಚ್ಚರಿಕೆಯಿಂದಲೇ ತಿನ್ನುವರು; ನೀರನ್ನು ವಿಸ್ಮಯ ದಿಂದಲೇ ಕುಡಿಯುವರು. ಯಾಕಂದರೆ ಅದರಲ್ಲಿ ವಾಸ ವಾಗಿರುವವರೆಲ್ಲರ ಬಲಾತ್ಕಾರದಿಂದ ಅವರ ದೇಶವು ಅವರ ಪರಿಪೂರ್ಣತೆಯನ್ನೆಲಾ ಬಿಟ್ಟು ಹಾಳಾಗು ವದು.
ಅವುಗಳಲ್ಲಿ ಒಂದರೊಳಗಿಂದ ಚಿಕ್ಕ ಕೊಂಬು ಮೊಳೆತು, ಬಹಳ ದೊಡ್ಡದಾಗಿ ಬೆಳೆದು, ದಕ್ಷಿಣದ ಕಡೆಗೂ ಪೂರ್ವದ ಕಡೆಗೂ ರಮ್ಯ ದೇಶದ ಕಡೆಗೂ ಪ್ರಬಲವಾಯಿತು.
ಓ ಕರ್ತನೇ, ನಿನ್ನ ಎಲ್ಲಾ ನೀತಿಗಳ ಪ್ರಕಾರ ನಾನು ನಿನ್ನನ್ನು ಬೇಡುತ್ತೇನೆ. ನಿನ್ನ ಕೋಪವು ನಿನ್ನ ಉಗ್ರತೆಯೂ ನಿನ್ನ ಪಟ್ಟಣವಾದ ಯೆರೂಸಲೇಮಿನಿಂದಲೂ ನಿನ್ನ ಪರಿಶುದ್ಧ ಪರ್ವತ ದಿಂದಲೂ ತಿರುಗಿಸಲ್ಪಡಲಿ. ಯಾಕಂದರೆ ನಮ್ಮ ಪಾಪ ಗಳ ನಿಮಿತ್ತದಿಂದಲೂ ನಮ್ಮ ಪಿತೃಗಳ ಅಕ್ರಮಗಳ ನಿಮಿತ್ತದಿಂದಲೂ ಯೆರೂಸಲೇಮೂ ಮತ್ತು ನಿನ್ನ ಜನರೂ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿರು ವೆವಲ್ಲಾ.
ನನ್ನ ದೇವರು ಅವರನ್ನು ತಳ್ಳಿಬಿಡುವನು; ಅವರು ಆತನಿಗೆ ಕಿವಿಗೊಡಲಿಲ್ಲ; ಅವರು ಜನಾಂಗಗಳಲ್ಲಿ ಅಲೆದಾಡುವವರಾಗಿರುವರು.
ಆದರೆ ನಾನು ರಬ್ಬದ ಗೋಡೆಯಲ್ಲಿ ಬೆಂಕಿಯನ್ನು ಹತ್ತಿಸುವೆನು; ಅದು ಯುದ್ಧದ ದಿನದಲ್ಲಿ ಆರ್ಭಟದ ಸಂಗಡವೂ ಬಿರುಗಾಳಿಯ ದಿನದಲ್ಲಿ ಸುಳಿಗಾಳಿಯ ಸಂಗಡವೂ ಅಲ್ಲಿಯ ಅರಮನೆಗಳನ್ನು ನುಂಗಿಬಿಡುವದು.ಅವರ ಅರಸನು ತಾನು ತನ್ನ ರಾಜಕುಮಾರರ ಸಂಗಡ ಸೆರೆಗೆ ಹೋಗುವನೆಂದು ಕರ್ತನು ಹೇಳುತ್ತಾನೆ.
ಕರ್ತನು ಕೋಪಿಸುವದರಲ್ಲಿ ನಿಧಾನ ಮಾಡುವವನಾದರೂ ಶಕ್ತಿಯಲ್ಲಿ ಮಹತ್ತಾದವನು; ದುರ್ಮಾರ್ಗದವರನ್ನು ಎಷ್ಟು ಮಾತ್ರಕ್ಕೂ ನಿರ್ಮಲರೆಂದು ತೀರ್ಮಾನಿಸ ದವನು; ಕರ್ತನ ಮಾರ್ಗವು ಸುಳಿಗಾಳಿಯಲ್ಲಿಯೂ ಬಿರುಗಾಳಿಯಲ್ಲಿಯೂ ಉಂಟು; ಮೇಘಗಳು ಆತನ ಕಾಲುಗಳ ಧೂಳೇ.
ಅವನ ದೊಣ್ಣೆಗಳಿಂದಲೇ ತನ್ನ ಹಳ್ಳಿಗಳ ಮುಖ್ಯಸ್ಥನನ್ನು ಹೊಡೆದಿದ್ದೀ; ಅವರು ನನ್ನನ್ನು ಚದುರಿಸುವದಕ್ಕೆ ಬಿರುಗಾಳಿಯಂತೆ ಬಂದರು; ಬಡವರನ್ನು ಅಂತರಂಗದಲ್ಲಿ ನುಂಗಿಬಿಡುವ ಹಾಗೆ ಅವರಿಗೆ ಸಂತೋಷವು ಇರುವದು.
ನಾನು ಜನಾಂಗಗಳನ್ನು ಕಡಿದು ಬಿಟ್ಟಿದ್ದೇನೆ; ಅವುಗಳ ಗೋಪುರಗಳು ಹಾಳಾಗಿವೆ; ಅವರ ಬೀದಿಗಳನ್ನು ಯಾರೂ ಹಾದು ಹೋಗದ ಹಾಗೆ ಹಾಳು ಮಾಡಿದ್ದೇನೆ; ಅವುಗಳ ಪಟ್ಟಣಗಳು ನಾಶವಾದವು, ಹೀಗೆ ಅಲ್ಲಿ ಯಾವನೂ ಇರುವದಿಲ್ಲ, ಯಾವ ಮನುಷ್ಯನು ಅಲ್ಲಿ ವಾಸಿಸುವದೂ ಇಲ್ಲ.
ಓಹೋ, ನೀವು ಹೊರಗೆ ಬಂದು ಉತ್ತರ ದೇಶ ದಿಂದ ಓಡಿಹೋಗಿರಿ; ಆಕಾಶದ ನಾಲ್ಕು ದಿಕ್ಕುಗಳಂತೆ ನಿಮ್ಮನ್ನು ಚದರಿಸಿದ್ದೇನೆಂದು ಕರ್ತನು ಅನ್ನುತ್ತಾನೆ.
ಇದಲ್ಲದೆ ಕರ್ತನು ಅವರ ಮೇಲೆ ಕಾಣಿಸಿಕೊಳ್ಳುವನು; ಆತನ ಬಾಣಗಳು ಮಿಂಚಿನ ಹಾಗೆ ಹೊರಡುವವು; ಕರ್ತನಾದ ದೇವರು ತುತೂರಿ ಯನ್ನು ಊದಿ, ದಕ್ಷಿಣದ ಸುಳಿಗಾಳಿಯಲ್ಲಿ ಹೋಗು ವನು.