ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು.
Cross references
ಆದರೆ ನಿಮ್ಮ ತಂದೆಯು ನನಗೆ ವಂಚನೆ ಮಾಡಿ ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿ ದನು. ಆದಾಗ್ಯೂ ದೇವರು ಅವನಿಂದ ನನಗೆ ಕೇಡುಮಾಡಗೊಡಿಸಲಿಲ್ಲ.
ನಿನ್ನ ಇಬ್ಬರು ಕುಮಾರ್ತೆಯರಿಗಾಗಿ ಹದಿನಾಲ್ಕು ವರುಷ, ನಿನ್ನ ಮಂದೆಗಳಿಗೋಸ್ಕರ ಆರು ವರುಷ, ಈ ಪ್ರಕಾರ ಇಪ್ಪತ್ತು ವರುಷ ನಿನ್ನ ಮನೆಯಲ್ಲಿ ಇದ್ದು ಸೇವೆಮಾಡಿದೆನು; ಆದರೆ ನೀನು ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದಿ.
ಮೋಶೆ ತನ್ನ ಮಾವನಾದ ಮಿದ್ಯಾನಿನ ರೆಗೂ ವೇಲನ ಮಗನಾದ ಹೋಬಾಬನಿಗೆ--ನಿಮಗೆ ಕೊಡು ತ್ತೇನೆಂದು ಕರ್ತನು ಹೇಳಿದ ದೇಶಕ್ಕೆ ಪ್ರಯಾಣ ಮಾಡುತ್ತಿದ್ದೇವೆ; ನಮ್ಮ ಸಂಗಡ ನೀನು ಬಾ; ನಾವು ನಿನಗೆ ಒಳ್ಳೇದನ್ನು ಮಾಡುವೆವು; ಕರ್ತನು ಇಸ್ರಾಯೇ ಲ್ಯರನ್ನು ಕುರಿತು ಒಳ್ಳೇದನ್ನು ಹೇಳಿದ್ದಾನೆ ಎಂದು ಹೇಳಿದನು.
ಅವರು ಈ ದೇಶದ ನಿವಾಸಿ ಗಳಿಗೆ ಅದನ್ನು ಹೇಳುವರು; ಯಾಕಂದರೆ ಕರ್ತನಾದ ನೀನೇ ಈ ಜನರ ಸಂಗಡ ಇದ್ದೀಯೆಂದೂ ಕರ್ತ ನಾದ ನೀನೇ ಮುಖಾಮುಖಿಯಾಗಿ ಕಾಣಿಸಿಕೊಳ್ಳುತ್ತೀ ಯೆಂದೂ ನಿನ್ನ ಮೇಘವು ಅವರ ಮೇಲೆ ನಿಂತಿದೆ ಯೆಂದೂ ನೀನು ಹಗಲು ಹೊತ್ತಿನಲ್ಲಿ ಮೇಘ ಸ್ತಂಭದಲ್ಲಿಯೂ ರಾತ್ರಿಯಲ್ಲಿ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ನಡೆಯುತ್ತೀಯೆಂದೂ ಅವರು ಕೇಳಿದ್ದಾರೆ.
ಐಗುಪ್ತ ದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿದ ಸೂಚಕಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದ ಈ ಸಕಲ ಮನುಷ್ಯರು ನನ್ನನ್ನು ಈಗ ಹತ್ತು ಸಾರಿ ಶೊಧಿಸಿ ಕೇಳದೆ ಹೋದದ್ದರಿಂದ
ಹೀಗಿರುವ ದರಿಂದ ನೀವು ಅವುಗಳನ್ನು ಕೈಕೊಂಡು ಅನುಸರಿಸಿರಿ; ಯಾಕಂದರೆ ಜನಾಂಗಗಳ ಮುಂದೆ ಇರುವ ನಿಮ್ಮ ಜ್ಞಾನವೂ ನಿಮ್ಮ ವಿವೇಕವೂ ಇದೇ ಆಗಿದೆ. ಅವರು ಈ ನಿಯಮಗಳನ್ನೆಲ್ಲಾ ಕೇಳಿ--ನಿಶ್ಚಯವಾಗಿ ಈ ದೊಡ್ಡ ಜನಾಂಗವು ಜ್ಞಾನವೂ ವಿವೇಕವೂ ಉಳ್ಳ ಜನವಾಗಿದೆ ಅನ್ನುವರು.
ಕರ್ತನು ನಿಮಗೆ ದೇಶವನ್ನು ಕೊಟ್ಟಿದ್ದಾನೆಂದೂ ನಿಮ್ಮ ನಿಮಿತ್ತ ನಮಗೆ ಮಹಾಭೀತಿ ಯಾಗಿದೆ ಎಂದೂ ನಿಮಗೋಸ್ಕರ ದೇಶದ ನಿವಾಸಿ ಗಳೆಲ್ಲರು ಕಂಗೆಟ್ಟು ಹೋಗಿದ್ದಾರೆಂದೂ ನಾನು ಬಲ್ಲೆನು.
ಅದಕ್ಕೆ ರೂತಳು ನಿನ್ನನ್ನು ಬಿಟ್ಟು ಹಿಂದಿರುಗಬೇಕೆಂದು ನನ್ನನ್ನು ಒತ್ತಾಯಮಾಡಬೇಡ; ಯಾಕಂದರೆ ನೀನು ಎಲ್ಲಿ ಹೋಗುವಿಯೋ ನಾನು ಅಲ್ಲಿಗೆ ಬರುವೆನು; ನೀನು ಎಲ್ಲಿ ಇಳುಕೊಳ್ಳುವಿಯೋ ನಾನು ಅಲ್ಲಿ ಇಳು ಕೊಳ್ಳುವೆನು; ನಿನ್ನ ಜನರೇ ನನ್ನ ಜನರು; ನಿನ್ನ ದೇವರೇ ನನ್ನ ದೇವರು.
ಸಮುವೇಲನು ಹೋಗುವದ ಕ್ಕೋಸ್ಕರ ತಿರುಗಿಕೊಳ್ಳುವಾಗ ಸೌಲನು ಅವನ ವಸ್ತ್ರದ ಕೊನೆಯನ್ನು ಹಿಡುಕೊಂಡನು. ಆಗ ಅದು ಹರಿದು ಹೋಯಿತು.
ಆಗ ಅರಸನು ಗಿತ್ತೀಯನಾದ ಇತ್ತೈಯನ್ನು ನೋಡಿ--ನೀನು ನಮ್ಮ ಸಂಗಡ ಬರುವದು ಯಾಕೆ? ನಿನ್ನ ಸ್ಥಳಕ್ಕೆ ಹಿಂದಿರುಗಿ ಹೋಗಿ ಅರಸನ ಸಂಗಡ ಇರು. ಯಾಕಂದರೆ ನೀನು ಸೆರೆಹಿಡಿಯಲ್ಪಟ್ಟವನಾದ ಅನ್ಯದೇಶದವನು.
ಅವರು ನಿನ್ನ ಮಹಾ ಹೆಸರನ್ನೂ ಬಲವಾದ ಕೈಯನ್ನೂ ಚಾಚಿದ ತೋಳನ್ನೂ ಕುರಿತು ಕೇಳುವರು.
ಎಲೀಯನು ಅವನಿಗೆ--ನೀನು ದಯಮಾಡಿ ಇಲ್ಲೇ ಇರು; ಕರ್ತನು ನನ್ನನ್ನು ಯೊರ್ದ ನಿಗೆ ಕಳುಹಿಸುತ್ತಾನೆ ಅಂದನು. ಅದಕ್ಕವನು--ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವದಿಲ್ಲ ಅಂದನು. ಹಾಗೆಯೇ ಅವರಿ ಬ್ಬರೂ ಮುಂದಕ್ಕೆ ನಡೆದರು.
ಆಗ ಆತ್ಮನು ಅದಿಪತಿಗಳ ಮುಖ್ಯಸ್ಥನಾದ ಅಮಸಾಯಿಯ ಮೇಲೆ ಬಂದನು; ಆಗ ಅವನು--ದಾವೀದನೇ, ನಾವು ನಿನ್ನವರು; ಇಷಯನ ಮಗನೇ, ನಾವು ನಿನ್ನ ಕಡೆಯವ ರಾಗಿದ್ದೇವೆ; ಸಮಾಧಾನ, ನಿನಗೆ ಸಮಾಧಾನ; ನಿನ್ನ ಸಹಾಯಕರಿಗೆ ಸಮಾಧಾನ; ನಿನ್ನ ದೇವರು ನಿನಗೆ ಸಹಾಯ ಮಾಡುತ್ತಾನೆ ಅಂದನು. ಆಗ ದಾವೀದನು ಅವರನ್ನು ಅಂಗೀಕರಿಸಿ ಅವರನ್ನು ದಂಡಿನ ಅಧಿಪತಿ ಗಳಾಗಿ ಮಾಡಿದನು.
ಇದಲ್ಲದೆ ಅವನು ಯೆಹೂದದ ಬೆನ್ಯಾ ವಿಾನನ ಸಮಸ್ತರನ್ನೂ ಎಫ್ರಾಯಾಮಿನಿಂದಲೂ ಮನಸ್ಸೆಯಿಂದಲೂ ಸಿಮೆಯೋನಿನಿಂದಲೂ ಅವರ ಕಡೆಗೆ ಬಂದ ಅನ್ಯರನ್ನೂ ಕೂಡಿಸಿದನು. ಅವನ ದೇವರಾದ ಕರ್ತನು ಅವನ ಸಂಗಡ ಇದ್ದಾನೆಂದು ಇವರು ಕಂಡು ಇಸ್ರಾಯೇಲಿನೊಳಗಿಂದ ಅನೇಕರು ಅವನ ಕಡೆಗೆ ಹೋದರು.
ಪ್ರತಿ ಪ್ರಾಂತ್ಯದಲ್ಲಿಯೂ ಪ್ರತಿ ಪಟ್ಟಣ ದಲ್ಲಿಯೂ ಅರಸನ ಮಾತೂ ಅವನ ಆಜ್ಞೆಯೂ ಎಲ್ಲಿಗೆ ಬಂತೋ ಅಲ್ಲಿ ಯೆಹೂದ್ಯರಿಗೆ ಸಂತೋಷವೂ ಆನಂದವೂ ಹಬ್ಬವೂ ಸುದಿನವೂ ಉಂಟಾಗಿದ್ದವು. ಇದಲ್ಲದೆ ಆ ದೇಶದ ಅನೇಕ ಜನರು ಯೆಹೂದ್ಯ ರಾದರು. ಯಾಕಂದರೆ ಯೆಹೂದ್ಯರ ಭಯವು ಅವರ ಮೇಲೆ ಇತ್ತು.
ಈಗ ಹತ್ತು ಸಾರಿ ನನ್ನನ್ನು ಅವಮಾನಪಡಿಸಿದಿರಿ; ನೀವು ನನಗೆ ಅನ್ಯರಂತೆ ಮಾಡುವುದಕ್ಕೆ ನಾಚಿಕೆಪಡು ವದಿಲ್ಲ.
ನಿನ್ನ ಭಾಗವನ್ನು ಏಳು ಮತ್ತು ಎಂಟು ಮಂದಿಗೆ ಸಹ ಕೊಡು; ಭೂಮಿಯ ಮೇಲೆ ಯಾವ ಕೇಡು ಬರುವದೋ ನಿನಗೆ ತಿಳಿಯದು.
ಒಬ್ಬನು ತನ್ನ ಸಹೋದರನನ್ನು ತಂದೆಯ ಮನೆಯಲ್ಲಿ ಹಿಡಿ ದು -- ನಿನಗೆ ವಸ್ತ್ರವಿದೆ, ನಮ್ಮನ್ನು ಆಳುವವನಾಗು ಮತ್ತು ಈ ಹಾಳಾದ ಪಟ್ಟಣವು ನಿನ್ನ ಕೈಕೆಳಗಿರಲಿ ಎಂದು ಹೇಳಲು
ಆ ದಿವಸದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಮನುಷ್ಯನನ್ನು ಹಿಡಿದು--ನಾವು ಸ್ವಂತವಾಗಿ ದುಡಿದು ಉಣ್ಣುವೆವು; ನಾವೇ ಸಂಪಾದಿಸಿ ವಸ್ತ್ರಗಳನ್ನು ಉಟ್ಟುಕೊಳ್ಳುವೆವು; ನಮ್ಮ ನಿಂದೆಯನ್ನು ನೀಗಿಸುವದಕ್ಕೆ ನಿನ್ನ ಹೆಸರು ನಮಗಿದ್ದರೆ ಸಾಕು ಎಂದು ಕೇಳಿಕೊಳ್ಳುವರು ಎಂಬದೇ.
ಕರ್ತನು ಹೇಳುವದೇನಂದರೆ--ಐಗುಪ್ತದ ಆದಾ ಯವೂ ಇಥಿಯೋಪ್ಯದ ವ್ಯಾಪಾರವೂ ಎತ್ತರದ ಮನುಷ್ಯರಾದ ಸೆಬಾಯರೂ ನಿಮ್ಮಲ್ಲಿಗೆ ಸೇರಿ ನಿಮ್ಮವ ರಾಗಿ ನಿಮ್ಮನ್ನು ಅನುಸರಿಸುವರು; ಸಂಕೋಲೆಗಳನ್ನು ಕಟ್ಟಿಕೊಂಡು ಬಂದು ನಿಮ್ಮ ಮುಂದೆ ಅಡ್ಡಬಿದ್ದು ನಿಶ್ಚಯವಾಗಿ ದೇವರು ನಿಮ್ಮಲ್ಲಿಯೇ ಇದ್ದಾನೆ, ಮತ್ತೊ ಬ್ಬನು ಇಲ್ಲ, ಬೇರೆ ದೇವರು ಇಲ್ಲವೇ ಇಲ್ಲ.
ಇಗೋ, ನಿನ್ನ ದೇವರಾದ ಕರ್ತನ ನಿಮಿತ್ತವೂ ಇಸ್ರಾಯೇಲಿನ ಪರಿಶುದ್ಧನ ನಿಮಿತ್ತವೂ ನೀನು ತಿಳಿಯದ ಜನಾಂಗಗಳನ್ನು ಕರೆ ಯುವಿ; ಆತನು ನಿನ್ನನ್ನು ಮಹಿಮೆ ಪಡಿಸಿದ್ದರಿಂದ ನಿನ್ನನ್ನು ತಿಳಿಯದ ಜನಾಂಗಗಳು ನಿನ್ನ ಬಳಿಗೆ ಓಡಿ ಬರುವವು.
ಅನ್ಯಜನಾಂಗಗಳು ನಿನ್ನ ಪ್ರಕಾಶಕ್ಕೂ ಅರಸರು ನಿನ್ನ ಉದಯದ ಕಾಂತಿಗೂ ಬರುವರು.
ನಾನು ಅವರ ಕ್ರಿಯೆಗಳನ್ನೂ ಅವರ ಆಲೋಚನೆಗಳನ್ನೂ ಬಲ್ಲೆನು. ಎಲ್ಲಾ ಜನಾಂಗ ಗಳನ್ನೂ ಭಾಷೆಯವರನ್ನೂ ಇನ್ನು ಮುಂದೆ ಒಟ್ಟಿಗೆ ಬರಮಾಡುವೆನು; ಆಗ ಅವರು ಬಂದು ನನ್ನ ಮಹಿ ಮೆಯನ್ನು ನೋಡುವರು.
ಇದಲ್ಲದೆ ಅಶ್ಶೂರ್ಯನು ನಮ್ಮ ದೇಶದಲ್ಲಿ ಬಂದಾಗ ಈತನೇ ಸಮಾಧಾನವಾಗಿರುವನು; ನಮ್ಮ ಅರಮನೆಗಳಲ್ಲಿ ಅವನು ತುಳಿಯುವಾಗ ನಾವು ಆತನಿಗೆ ವಿರೋಧವಾಗಿ ಏಳು ಕುರುಬರನ್ನೂ ಎಂಟು ಮುಖ್ಯ ಮನುಷ್ಯರನ್ನೂ ಎಬ್ಬಿಸುವೆವು.
ತರುವಾಯ ಪೇತ್ರನು ಆತನ ಬಳಿಗೆ ಬಂದು--ಕರ್ತನೇ, ನನ್ನ ಸಹೋದರನು ನನಗೆ ವಿರೋಧ ವಾಗಿ ಪಾಪಮಾಡಿದರೆ ನಾನು ಎಷ್ಟು ಸಾರಿ ಅವನಿಗೆ ಕ್ಷಮಿಸಬೇಕು? ಏಳು ಸಾರಿಯೋ ಎಂದು ಕೇಳಿದನು.
ಆತನ ಹಿಂದೆ ಬಂದು ಆತನ ಉಡುಪಿನ ಅಂಚನ್ನು ಮುಟ್ಟಿದಳು; ಕೂಡಲೆ ಆಕೆಯ ರಕ್ತಸ್ರಾವವು ನಿಂತುಹೋಯಿತು.
ಯಾಕಂ ದರೆ--ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಣೆಗೆ ಕಾರಣವಾಗಿರುವಂತೆ ನಾನು ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ಹೇಳಿದ ಹಾಗೆ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ.
ಜನರು ಅವನ ಮೈಮೇಲಿನಿಂದ ಕೈವಸ್ತ್ರಗಳನ್ನೂ ಉಡಿವಸ್ತ್ರಗಳನ್ನೂ ತಂದು ರೋಗಿಗಳ ಮೇಲೆ ಹಾಕಲು ಅವರವರ ರೋಗಗಳು ವಾಸಿಯಾದವು, ದೆವ್ವಗಳೂ ಬಿಟ್ಟುಹೋದವು.
ಹೀಗೆ ಅವನ ಹೃದಯದ ರಹಸ್ಯಗಳು ತೋರಿಬರುತ್ತವೆ; ಅವನು ಸಾಷ್ಟಾಂಗವೆರಗಿ ದೇವರನ್ನು ಆರಾಧಿಸಿ ನಿಜಕ್ಕೂ ನಿಮ್ಮಲ್ಲಿ ದೇವರಿದ್ದಾನೆಂದು ಹೇಳುವನು.
ಇದಾದ ಮೇಲೆ ಇಗೋ, ನಾನು ನೋಡಲಾಗಿ ಸಮಸ್ತ ಜನಾಂಗ ಕುಲ ಪ್ರಜೆ ಭಾಷೆಗಳೊಳಗಿಂದ ಯಾರೂ ಎಣಿಸಲಾಗದಂತ ಮಹಾ ಸಮೂಹವು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡವರಾಗಿ ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಸಿಂಹಾಸನದ ಮುಂದೆಯೂ ಕುರಿಮರಿಯಾದಾತನ ಮುಂದೆಯೂ
ಭೂಮಿಯಲ್ಲಿ ವಾಸಿಸುವ ಪ್ರತಿಯೊಂದು ಜನಾಂಗ ಕ್ಕೂ ಕುಲದವರಿಗೂ ಭಾಷೆಯವರಿಗೂ ಮತ್ತು ಜನ ರಿಗೂ ಸಾರುವದಕ್ಕೆ ನಿತ್ಯವಾದ ಸುವಾರ್ತೆ ಇದ್ದ ಇನ್ನೊಬ್ಬ ದೂತನು ಆಕಾಶದ ಮಧ್ಯದಲ್ಲಿ ಹಾರುವದನ್ನು ನಾನು ಕಂಡೆನು.