ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನನ್ನ ಜನರನ್ನು ಪೂರ್ವ ದಿಕ್ಕಿನ ದೇಶದಿಂದಲೂ ಪಶ್ಚಿಮ ದಿಕ್ಕಿನ ದೇಶದಿಂದಲೂ ರಕ್ಷಿಸುವೆನು.
Cross references
ನಿನ್ನ ದೇವರಾದ ಕರ್ತನು ನಿನ್ನನ್ನು ಸೆರೆಯಿಂದ ಬಿಡಿಸಿ ನಿನ್ನ ಮೇಲೆ ಅಂತಃಕರಣಪಟ್ಟು ತಿರುಗಿಕೊಂಡು ನಿನ್ನನ್ನು ಚದುರಿಸಿದ ಎಲ್ಲಾ ಜನಾಂಗಗಳೊಳಗಿಂದ ನಿನ್ನನ್ನು ಕೂಡಿಸುವನು.
ಆದರೆ ನೀವು ನನ್ನ ಬಳಿಗೆ ತಿರುಗಿ ನನ್ನ ಆಜ್ಞೆಗಳನ್ನು ಕೈಕೊಂಡು ಅವುಗಳ ಪ್ರಕಾರ ಮಾಡಿದರೆ ನಿಮ್ಮಲ್ಲಿರುವವರು ಆಕಾಶದ ಅಂತ್ಯದ ವರೆಗೂ ಹೊರಡಿಸಲ್ಪಟ್ಟಿದ್ದರೂ ನಾನು ಅಲ್ಲಿಂದ ಅವ ರನ್ನು ಕೂಡಿಸಿ ನನ್ನ ಹೆಸರನ್ನಿಡಲು ಆದುಕೊಂಡ ಸ್ಥಳಕ್ಕೆ ಅವರನ್ನು ಬರಮಾಡುವೆನು ಎಂದು ಹೇಳಿದಿ.
ಬಲಿಷ್ಠ ದೇವರಾಗಿರುವ ಕರ್ತನು ತಾನೇ ಮಾತನಾಡಿ ಸೂರ್ಯೋದಯದಿಂದ ಅಸ್ತಮಾನದ ವರೆಗೂ ಭೂನಿವಾಸಿಗಳನ್ನು ಕರೆದಿದ್ದಾನೆ.
ಕರ್ತನು ವಿಮೋಚಿಸಿ ದವರು ಹಾಗೆಯೇ ಹೇಳಲಿ; ಆತನು ವೈರಿಯ ಕೈಯಿಂದ ಬಿಡುಗಡೆ ಮಾಡಿ,
ಸೂರ್ಯೋದಯ ದಿಂದ ಅದರ ಅಸ್ತಮಾನದ ವರೆಗೂ ಕರ್ತನ ಹೆಸರು ಸ್ತುತಿಸಲ್ಪಡತಕ್ಕದ್ದು.
ಕರ್ತನು ಯೆರೂಸಲೇಮನ್ನು ಕಟ್ಟುತ್ತಾನೆ; ಚದರಿಹೋದ ಇಸ್ರಾಯೇಲ್ಯರನ್ನು ಕೂಡಿಸುತ್ತಾನೆ.
ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವದಕ್ಕೆ ಎರಡನೇ ಸಾರಿ ಕೈಹಾಕಿ ಅಶ್ಶೂರ; ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಮತ್ತು ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.
ಜನಾಂಗ ಗಳಿಗೆ ಗುರುತಾಗಿ ಇಟ್ಟ ಇಸ್ರಾಯೇಲಿನಿಂದ ತಳ್ಳಿಬಿಟ್ಟವ ರನ್ನು ಕೂಡಿಸುವನು ಮತ್ತು ಯೆಹೂದದಿಂದ ಚದರಿದ ವರನ್ನು ಭೂಮಿಯ ನಾಲ್ಕು ಮೂಲೆಗಳಿಂದ ಒಟ್ಟುಗೂಡಿಸುವನು.
ಓ ಇಸ್ರಾಯೇಲ್ಯರ ಮಕ್ಕಳೇ, ಕರ್ತನು ನದಿಯ ಕಾಲುವೆ ಮೊದಲುಗೊಂಡು ಐಗುಪ್ತದೇಶದ ನದಿಯ ವರೆಗೆ ಹೊಡೆಯುವನು; ಆಗ ನಿಮ್ಮನ್ನು ಒಬ್ಬೊಬ್ಬರ ನ್ನಾಗಿ ಕೂಡಿಸುವನು.ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.
ಭಯಪಡಬೇಡ; ನಾನೇ ನಿನ್ನೊಂದಿಗೆ ಇದ್ದೇನೆ; ನಿನ್ನ ಸಂತತಿಯವರನ್ನು ಮೂಡಣದಿಂದ ತರುವೆನು; ಪಶ್ಚಿಮದಿಂದ ನಿನ್ನನ್ನು ಕೂಡಿಸುವೆನು.
ಇಗೋ, ಇವರು ದೂರದಿಂದ ಬರುತ್ತಾರೆ. ಇಗೋ, ಇವರು ಬಡಗಣದಿಂದ ಮತ್ತು ಪಡುವಣದಿಂದ, ಇವರು ಸೀನೀಮ್ ದೇಶದಿಂದ ಬರುತ್ತಿದ್ದಾರೆ.
ಆಗ ಪಶ್ಚಿ ಮದ ಕಡೆಯವರು ಕರ್ತನ ಹೆಸರಿಗೂ ಸೂರ್ಯೋ ದಯದ ಕಡೆಯವರು ಆತನ ಘನಕ್ಕೂ ಭಯಪಡು ವರು. ವೈರಿಯು ಪ್ರಳಯದಂತೆ ಬರುವಾಗ ಕರ್ತನ ಆತ್ಮನು ಅವನಿಗೆ ವಿರೋಧವಾಗಿ ಧ್ವಜವನ್ನೆತ್ತುವನು.
ಅವರ ಮಧ್ಯದಲ್ಲಿ ಒಂದು ಗುರುತನ್ನಿಟ್ಟು ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ ತಾರ್ಷೀಷಿಗೂ ಫೂಲಿಗೂ ಲೂದಿಗೂ ಬಿಲ್ಲು ಬೊಗ್ಗಿಸುವವರಿಗೂ ತೂಬಲಿಗೂ ಯಾವಾನಿಗೂ ನನ್ನ ಸಮಾಚಾರವನ್ನು ಕೇಳದೆ ನನ್ನ ಮಹಿಮೆಯನ್ನು ನೋಡದೆ ಇರುವ ದೂರದ ದ್ವೀಪ ಗಳಿಗೂ ಕಳುಹಿಸುವೆನು; ಅವರು ಅನ್ಯಜನಾಂಗಗಳಲ್ಲಿ ನನ್ನ ಮಹಿಮೆಯನ್ನು ತಿಳಿಸುವರು.
ಹಾಗೆಯೇ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕರ್ತನ ವಾಕ್ಯದ ಪ್ರಕಾರ ನನ್ನ ಬಳಿಗೆ ಸೆರೆಮನೆಯ ಅಂಗಳಕ್ಕೆಬಂದು--ಬೆನ್ಯಾವಿಾನನ ದೇಶದ ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ, ಬಾಧ್ಯದ ಅಧಿಕಾರವೂ ವಿಮೋಚನೆಯೂ ನಿನ್ನದು; ಅದನ್ನು ನಿನಗೋಸ್ಕರ ಕೊಂಡುಕೋ ಎಂದು ಬೇಡಿಕೊಂಡು ಹೇಳಿದನು. ಆಗ ಅದು ಕರ್ತನ ವಾಕ್ಯವೆಂದು ನಾನು ತಿಳುಕೊಂಡೆನು.
ಆದದರಿಂದ ನೀನು ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆಹೇಳುತ್ತಾನೆ--ನಾನು ನಿಶ್ಚ ಯವಾಗಿ ನಿಮ್ಮನ್ನು ಜನಾಂಗಗಳೊಳಗಿಂದ ನೀವು ಚದ ರಿಹೋದ ದೇಶಗಳೊಳಗಿಂದ ಕೂಡಿಸುತ್ತೇನೆ; ಇಸ್ರಾ ಯೇಲ್ ದೇಶವನ್ನು ನಿಮಗೆ ಕೊಡುತ್ತೇನೆ.
ಇಗೋ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು--ನಾನು ಎಫ್ರಾಯಾಮಿನ ಕೈಯಲ್ಲಿರುವ ಯೋಸೇಫನ ಕೋಲನ್ನೂ ಅವನ ಜೊತೆಗಾರರಾದ ಇಸ್ರಾಯೇಲ್ಯರ ಗೋತ್ರಗಳನ್ನೂ ತೆಗೆದುಕೊಂಡು ಅವನ ಸಂಗಡ ಅಂದರೆ ಯೆಹೂದನ ಕೋಲಿನ ಸಂಗಡ ಸೇರಿಸಿ ಅವುಗಳನ್ನು ಒಂದೇ ಕೋಲನ್ನಾಗಿ ಮಾಡುವೆನು. ಅವರು ನನ್ನ ಕೈಯಲ್ಲಿ ಒಂದಾಗುವರು ಎಂಬದು;
ಅವರು ಕರ್ತನ ಹಿಂದೆ ಹೋಗುವರು; ಆತನು ಸಿಂಹದ ಹಾಗೆ ಗರ್ಜಿಸುವನು; ಆತನು ಗರ್ಜಿಸುವಾಗ ಮಕ್ಕಳು ಪಶ್ಚಿಮದಿಂದ ನಡುಗಿಬರುವರು;
ಐಗುಪ್ತದ ಪಕ್ಷಿಯ ಹಾಗೆ ಮತ್ತು ಅಶ್ಯೂರ್ಯರ ದೇಶದ ಪಾರಿವಾಳದ ಹಾಗೆ ಅವರು ನಡುಗುವರು. ನಾನು ಅವರನ್ನು ಅವರ ಮನೆತನಗಳಲ್ಲಿ ಇಡುವೆನು ಎಂದು ಕರ್ತನು ಹೇಳುತ್ತಾನೆ.ಎಫ್ರಾಯಾಮು ಸುಳ್ಳಿನಿಂದ ಮತ್ತು ಇಸ್ರಾ ಯೇಲಿನ ಮನೆಯವರು ಮೋಸದಿಂದ ನನ್ನನ್ನು ಸುತ್ತಿಕೊಂಡಿದ್ದಾರೆ, ಆದರೆ ಯೆಹೂದನು ಇನ್ನೂ ದೇವರ ಸಂಗಡ ಆಳುತ್ತಾನೆ; ಮತ್ತು ಪರಿಶುದ್ಧರ ಸಂಗಡ ನಂಬಿಗಸ್ತನಾಗಿದ್ದಾನೆ.
ನನ್ನ ಜನರಾದ ಇಸ್ರಾಯೇಲ್ಯರನ್ನು ಸೆರೆಯಿಂದ ತಿರಿಗಿ ಬರಮಾಡುವೆನು; ಅವರು ಹಾಳಾದ ಪಟ್ಟಣಗಳನ್ನು ಕಟ್ಟಿ ವಾಸಮಾಡುವರು; ದ್ರಾಕ್ಷೇತೋಟ ಗಳನ್ನು ನೆಟ್ಟು ಅವುಗಳ ದ್ರಾಕ್ಷಾರಸವನ್ನು ಕುಡಿಯು ವರು; ತೋಟಗಳನ್ನು ಮಾಡಿ ಅವುಗಳ ಫಲವನ್ನು ತಿನ್ನುವರು.ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
ಸೂರ್ಯೋದಯವು ಮೊದಲುಗೊಂಡು ಅದರ ಅಸ್ತಮಾನದ ವರೆಗೂ ನನ್ನ ಹೆಸರು ಅನ್ಯಜನಾಂಗ ಗಳಲ್ಲಿ ಘನವಾಗಿರುವದು; ಸಕಲ ಸ್ಥಳಗಳಲ್ಲಿ ನನ್ನ ಹೆಸರಿಗೆ ಧೂಪವೂ ಶುದ್ಧಕಾಣಿಕೆಯೂ ಅರ್ಪಿಸ ಲ್ಪಡುವದು; ನನ್ನ ಹೆಸರು ಅನ್ಯಜನಾಂಗಗಳಲ್ಲಿ ಘನ ವಾಗಿ ರುವದೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತ ರೆಂಬದಾಗಿ ಎಣಿಸಿಕೊಳ್ಳದಂತೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ. ಅದೇನಂದರೆ, ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಕುರುಡುತನವು ಅನ್ಯಜನಗಳು ಸಂಪೂರ್ಣವಾಗಿ ದೇವರ ರಾಜ್ಯದಲ್ಲಿ ಸೇರುವ ತನಕ