ಹದ್ರಾಕಿನ ದೇಶದ ವಿಷಯವಾದ ಕರ್ತನ ವಾಕ್ಯದ ಭಾರವು; ಅದು ದಮಸ್ಕದಲ್ಲಿ ತಂಗುವದು; ಮನುಷ್ಯನ ಕಣ್ಣುಗಳು ಇಸ್ರಾಯೇಲಿನ ಎಲ್ಲಾ ಗೋತ್ರಗಳಂತೆ ಕರ್ತನ ಕಡೆಗೆ ಇರುವವು.
Cross references
ರಾತ್ರಿಯಲ್ಲಿ ಅವರಿಗೆ ವಿರೋಧ ವಾಗಿ ತನ್ನ ಸೇವಕರ ಸೈನ್ಯವನ್ನು ವಿಭಾಗಿಸಿ ಅವರನ್ನು ಹೊಡೆದು ದಮಸ್ಕದ ಬಲಗಡೆಯಲ್ಲಿರುವ ಹೋಬಾದ ವರೆಗೆ ಅವರನ್ನು ಸಂಹರಿಸಿ
ಓ ನಮ್ಮ ದೇವರೇ, ನೀನು ಅವರಿಗೆ ನ್ಯಾಯತೀರಿಸುವದಿಲ್ಲವೋ? ನಮಗೆ ವಿರೋಧವಾಗಿ ಬರುವ ಈ ಮಹಾಗುಂಪನ್ನು ಎದು ರಿಸಲು ನಮಗೆ ಶಕ್ತಿ ಇಲ್ಲ. ನಾವು ಏನು ಮಾಡಬೇಕೋ ತಿಳಿಯಲಿಲ್ಲ. ಆದರೆ ನಮ್ಮ ಕಣ್ಣುಗಳು ನಿನ್ನ ಮೇಲೆ ಅವೆ ಅಂದರು.
ನನ್ನ ಕಣ್ಣುಗಳು ಯಾವಾಗಲೂ ಕರ್ತನ ಕಡೆಗೆ ಅವೆ; ಆತನೇ ನನ್ನ ಪಾದಗಳನ್ನು ಬಲೆಯಿಂದ ಹೊರಗೆ ಬರಮಾಡುವನು.
ಎಲ್ಲರ ಕಣ್ಣುಗಳು ನಿನಗೆ ಕಾದುಕೊಳ್ಳುತ್ತವೆ; ನೀನು ಅವರಿಗೆ ಅವರ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುತ್ತೀ.
ಕರ್ತನು ಯಾಕೋಬನಿಗೆ ಒಂದು ಮಾತನ್ನು ಹೇಳಿ ಕಳುಹಿಸಿದನು; ಅದು ಇಸ್ರಾಯೇಲ್ಯರ ಮೇಲೆ ಹೊಳೆಯಿತು.
ಆಮೋಚನ ಮಗನಾದ ಯೆಶಾಯನಿಗೆ ಬಾಬೆಲಿನ ವಿಷಯವಾಗಿ ಕಂಡುಬಂದ ದೈವೋಕ್ತಿ.
ದಮಸ್ಕದ ವಿಷಯವಾದ ದೈವೋಕ್ತಿ. ಇಗೋ, ದಮಸ್ಕವು ಇನ್ನು ಪಟ್ಟಣವಾಗಿ ರದೆ ತೆಗೆದುಹಾಕಲ್ಪಟ್ಟಿದೆ ಅದು ಹಾಳು ದಿಬ್ಬವಾಗಿ ರುವದು.
ಆ ದಿನದಲ್ಲಿ ಮನುಷ್ಯನು ತನ್ನನ್ನು ಉಂಟು ಮಾಡಿದವನ ಮೇಲೆ ದೃಷ್ಟಿಯಿಡು ವನು ಇಸ್ರಾಯೇಲಿನ ಪರಿಶುದ್ಧನ ಕಡೆಗೆ ಅವನ ಕಣ್ಣುಗಳು ಲಕ್ಷಿಸುವವು.
ಜನಾಂಗಗಳಲ್ಲಿ ತಪ್ಪಿಸಿಕೊಂಡವರಾದ ನೀವು ಒಟ್ಟಾಗಿ ಕೂಡಿಕೊಂಡು ಸವಿಾಪಕ್ಕೆ ಬನ್ನಿರಿ. ಮರದಿಂದ ಕೆತ್ತಿದ ತಮ್ಮ ವಿಗ್ರಹವನ್ನು ಹೊತ್ತು ಕೊಂಡು, ರಕ್ಷಿಸಲಾರದ ಆ ದೇವರಿಗೆ ಬಿನ್ನಹಿಸುವವರು ಏನೂ ತಿಳಿಯದವರಾಗಿದ್ದಾರೆ.
ಕರ್ತನು ತನ್ನ ಪರಿ ಶುದ್ಧವಾದ ಬಾಹುವನ್ನು ಸಕಲ ಜನಾಂಗಗಳ ಕಣ್ಣು ಗಳಿಗೆ ತೋರಮಾಡಿದ್ದಾನೆ. ಭೂಮಿಯ ಅಂತ್ಯದವ ರೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡುವರು.
ಕರ್ತನು ನನಗೆ ಹೀಗೆ ಹೇಳಿದನು--ಹೋಗಿ ಜನರ ಮಕ್ಕಳ ಬಾಗಿಲಲ್ಲಿಯೂ ಯೆಹೂದದ ಅರಸರು ಪ್ರವೇಶಿಸುವಲ್ಲಿಯೂ ಹೊರಡುವಲ್ಲಿಯೂ ಯೆರೂಸ ಲೇಮಿನ ಎಲ್ಲಾ ಬಾಗಿಲುಗಳಲ್ಲಿಯೂ ನಿಂತುಕೊಂಡು
ಇದಲ್ಲದೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇ ನಂದರೆ--ಕರ್ತನು ಹೀಗೆ ಹೇಳುತ್ತಾನೆ--
ಎಲ್ಲಾ ಭೂಮಿಯ ಸುತ್ತಿಗೆಯೂ ಹೇಗೆ ತುಂಡಾಗಿ ಮುರಿಯಲ್ಪಟ್ಟಿತು; ಬಾಬೆಲ್ ಹೇಗೆ ಜನಾಂಗಗಳೊಳಗೆ ಹಾಳಾಯಿತು!
ಕರ್ತನು ಹೀಗೆ ಹೇಳುತ್ತಾನೆ--ದಮಸ್ಕದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ನಾನು ಅವರನ್ನು ದಂಡಿಸದೆ ಹಿಂತಿರುಗುವದಿಲ್ಲ; ಅವರು ಕಬ್ಬಿಣದ ಆಯುಧಗಳಿಂದ ಗಿಲ್ಯಾದನ್ನು ಬಡಿದಿರುವರು.
ಕರ್ತನು ಹೀಗೆ ಹೇಳುತ್ತಾನೆ--ಕುರುಬರು ಸಿಂಹದ ಬಾಯಲ್ಲಿರುವ ಎರಡು ಕಾಲನ್ನು ಅಥವಾ ಕಿವಿಯ ಒಂದು ತುಂಡನ್ನು ಹೊರ ತೆಗೆಯುವ ಹಾಗೆ ಸಮಾರ್ಯ ದಲ್ಲಿ ಹಾಸಿಗೆಯ ಮೂಲೆಯಲ್ಲಿಯೂ ದಮಸ್ಕದಲ್ಲಿ ಸುಪ್ಪತ್ತಿಗೆಯಲ್ಲಿಯೂ ಇರುವ ಇಸ್ರಾಯೇಲಿನ ಮಕ್ಕಳು ತಪ್ಪಿಸಲ್ಪಡುವರು.
ಸಣ್ಣ ಕಾರ್ಯಗಳ ದಿನವನ್ನು ತಿರಸ್ಕರಿಸಿದವನ್ಯಾರು? ಆ ಏಳು ಅಂದರೆ ಭೂಮಿಯಲ್ಲೆಲ್ಲಾ ಅತ್ತಿತ್ತ ಓಡಾಡುವ ಕರ್ತನ ಕಣ್ಣುಗಳು ನೂಲು ಗುಂಡನ್ನು ಜೆರುಬ್ಬಾಬೆಲನ ಕೈಯಲ್ಲಿ ನೋಡುವಾಗ ಸಂತೋಷಪಡುತ್ತವೆ.
ನಾನು ಅದನ್ನು ಹೊರಗೆ ತರುತ್ತೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಅದು ಕಳ್ಳನ ಮನೆಯಲ್ಲಿಯೂ ನನ್ನ ಹೆಸರಿನಿಂದ ಸುಳ್ಳಾಗಿ ಆಣೆಯಿಡುವವನ ಮನೆಯ ಲ್ಲಿಯೂ ಪ್ರವೇಶಿಸಿ ಅವನ ಮನೆಯ ಮಧ್ಯದಲ್ಲಿ ನಿಂತು ಅದರ ಮರಗಳನ್ನೂ ಅದರ ಕಲ್ಲುಗಳನ್ನೂ ಅಳಿಸಿಬಿಡುವದು ಅಂದನು.
ಒಂದರ ನಿವಾಸಿಗಳು ಮತ್ತೊಂದಕ್ಕೆ ಹೋಗಿ--ನಾವು ಕರ್ತನ ಮುಂದೆ ಬೇಡಿಕೊಳ್ಳುವದಕ್ಕೂ ಸೈನ್ಯಗಳ ಕರ್ತನನ್ನು ಹುಡುಕುವದಕ್ಕೂ ಬೇಗ ಹೋಗೋಣ; ನಾನು ಕೂಡ ಹೋಗುತ್ತೇನೆ ಎಂದು ಹೇಳುವರು.
ಇಸ್ರಾಯೇಲಿಗೆ ಮಲಾಕಿಯಿಂದ ಉಂಟಾದ ಕರ್ತನ ವಾಕ್ಯದ ದೈವೋಕ್ತಿ.