ನಿರೀಕ್ಷೆಯ ಸೆರೆಯವರೇ, ಬಲವಾದ ದುರ್ಗಸ್ಥಾನಕ್ಕೆ ತಿರಿಗಿರಿ, ಎರಡ ರಷ್ಟು ನಿಮಗೆ ಕೊಡುವೆನೆಂದು ಈ ಹೊತ್ತೇ ಪ್ರಕಟಿ ಸುತ್ತೇನೆ.
Cross references
ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥನೆ ಮಾಡಿದಾಗ ಕರ್ತನು ಅವನ ಸೆರೆಯನ್ನು ತಿರುಗಿ ಸಿದನು. ಕರ್ತನು ಯೋಬನಿಗೆ ಮೊದಲು ಇದ್ದವು ಗಳಿಗಿಂತ ಎರಡರಷ್ಟು ಕೊಟ್ಟನು.
ಸಮಾಧಿಯು ನಿನ್ನನ್ನು ಹೊಗಳುವದಿಲ್ಲ, ಮರಣವು ನಿನ್ನನ್ನು ಕೊಂಡಾಡುವದಿಲ್ಲ; ಕುಣಿಯೊಳಕ್ಕೆ ಹೋಗುವವರು ನಿನ್ನ ಸತ್ಯತೆಯಲ್ಲಿ ಭರವಸವಿಡಲಾರರು.
ಯೆರೂಸಲೇಮಿನ ಸಂಗಡ ನೀವು ಹೃದಯಾಂಗಮ ವಾಗಿ ಮಾತಾಡಿರಿ; ಅದರ ಯುದ್ಧವು ತೀರಿತೆಂದೂ ದೋಷವು ಕ್ಷಮಿಸಲ್ಪಟ್ಟಿದೆ ಎಂದು ಕೂಗಿರಿ; ಅದು ಎಲ್ಲಾ ಪಾಪಗಳಿಗೂ ಕರ್ತನಿಂದ ಎರಡರಷ್ಟು ಹೊಂದಿ ದ್ದಾಯಿತು.
ನೀನು ಬಂದಿ ಸಲ್ಪಟ್ಟವರಿಗೆ--ಹೊರಗೆ ಹೋಗಿರಿ, ಕತ್ತಲೆಯಲ್ಲಿರು ವವರಿಗೆ--ನಿಮ್ಮನ್ನು ತೋರ್ಪಡಿಸಿಕೊಳ್ಳಿರಿ ಎಂದು ಹೇಳಬಹುದು. ಅವರು ದಾರಿಗಳಲ್ಲಿ ಮೇಯಿಸುವರು, ಅವರ ಎಲ್ಲಾ ಎತ್ತರವಾದ ಪ್ರದೇಶಗಳು ಕೂಡ ಅವ ರಿಗೆ ಹುಲ್ಲುಗಾವಲಾಗಿರುವವು.
ಓ ಯೆರೂಸ ಲೇಮೇ, ಧೂಳನ್ನು ಝಾಡಿಸಿಕೋ; ಎದ್ದು ಕೂತು ಕೋ, ಓ ಸೆರೆಯಾದ ಚೀಯೋನ್ ಕುಮಾರಿಯೇ, ನಿನ್ನ ಕುತ್ತಿಗೆಯ ಪಾಶಗಳನ್ನು ಬಿಚ್ಚಿಕೋ.
ನಿಮ್ಮ ಅವಮಾನಕ್ಕೆ ಬದಲಾಗಿ ಮಾನವು ಎರಡರಷ್ಟಾಗು ವದು. ಬದಲಾಗಿ ತಮ್ಮ ಪಾಲಿನಲ್ಲಿ ಹರ್ಷಿಸುವರು; ಆದದರಿಂದ ತಮ್ಮ ದೇಶದಲ್ಲಿ ಎರಡರಷ್ಟು ಸ್ವಾಧೀನ ಮಾಡಿಕೊಳ್ಳುವರು, ನಿತ್ಯವಾದ ಸಂತೋಷವು ಅವರಿಗೆ ಆಗುವದು.
ಆಗ ಯೆರೆವಿಾಯನು ಹೇಳಿದ್ದೇನೆಂದರೆ--ಕರ್ತನ ವಾಕ್ಯವು ನನಗೆ ಬಂತು, ಹೇಗಂದರೆ--
ಓ ಕರ್ತನಾದ ದೇವರೇ, ಇಗೋ, ನೀನು ನಿನ್ನ ಮಹಾಬಲದಿಂದ ನಿನ್ನ ಕೈಚಾಚಿ ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ್ದೀ; ನಿನಗೆ ಕಠಿಣವಾದ ಕಾರ್ಯ ಒಂದೂ ಇಲ್ಲ.
ಈ ಪ್ರಕಾರ ಕಸ್ದೀಯರ ದೇಶದಲ್ಲಿ ಕೊಂದುಹಾಕಲ್ಪ ಟ್ಟವರೂ ಅದರ ಬೀದಿಗಳಲ್ಲಿ ತಿವಿಯಲ್ಪಟ್ಟವರೂ ಬೀಳುವರು.
ಅದಕ್ಕೆ ವಿರೋಧವಾಗಿ ಜನಾಂಗಗಳನ್ನೂ ಮೇದ್ಯರ ಅರಸರನ್ನೂ ಅದರ ಅಧಿಪತಿಗಳನ್ನೂ ಅಧಿಕಾರಿಗಳೆಲ್ಲರನ್ನೂ ಅವನ ರಾಜ್ಯದ ದೇಶವನ್ನೆಲ್ಲಾ ಸಿದ್ಧಮಾಡಿರಿ.
ಬಾಬೇಲಿನ ಅರಸನು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣುಗಳ ಮುಂದೆ ಕೊಂದು ಹಾಕಿಸಿದನು. ಯೆಹೂದದ ಪ್ರಧಾನರೆಲ್ಲ ರನ್ನೂ ಸಹ ರಿಬ್ಲದಲ್ಲಿ ಕೊಂದು ಹಾಕಿಸಿದನು.
ಇದನ್ನು ನಾನು ನನ್ನ ಮನಸ್ಸಿಗೆ ತರುತ್ತೇನೆ, ಆದದರಿಂದ ನನಗೆ ನಿರೀಕ್ಷೆ ಇದೆ.
ಆಮೇಲೆ ಆತನು ನನಗೆ ಹೇಳಿದ್ದೇನಂದರೆ--ಮನುಷ್ಯಪುತ್ರನೇ, ಈ ಎಲುಬುಗಳು ಸಂಪೂರ್ಣ ಇಸ್ರಾಯೇಲ್ ಮನೆತನಗಳೇ; ಇಗೋ, ನಮ್ಮ ಎಲುಬುಗಳು ಒಣಗಿಸಲ್ಪಟ್ಟಿವೆ ಮತ್ತು ನಮ್ಮ ನಿರೀಕ್ಷೆಯು ಕಳೆದುಹೋಗಿದೆ; ನಾವು ಶುದ್ಧವಾಗಿ ನಮ್ಮ ಭಾಗಗಳನ್ನು ಕತ್ತರಿಸಿಕೊಂಡಿದ್ದೇವೆ ಎಂದು ಅವರು ಹೇಳುವರು.
ಅವಳ ದ್ರಾಕ್ಷೇ ತೋಟಗಳನ್ನು ಅಲ್ಲಿರುವಾ ಗಲೇ ಅವಳಿಗೆ ಹಿಂದಕ್ಕೆ ಕೊಡುವೆನು. ಆಕೋರಿನ ತಗ್ಗನ್ನೇ ಅವಳ ನಿರೀಕ್ಷೆಗೆ ದ್ವಾರವನ್ನಾಗಿ ಮಾಡುವೆನು; ಅಲ್ಲಿ ಅವಳು ಯೌವನದ ದಿನಗಳಲ್ಲಿಯೂ ಐಗುಪ್ತ ದೇಶದೊಳಗಿಂದ ಹೊರಟುಬಂದ ದಿನದಲ್ಲಿಯೂ ಆದ ಹಾಗೆ ಹಾಡುವಳು.
ಕರ್ತನು ಚೀಯೋನಿನೊಳಗಿಂದ ಘರ್ಜಿಸಿ ಯೆರೂಸಲೇಮಿನೊಳಗಿಂದ ತನ್ನ ಶಬ್ದವನ್ನು ಕೊಡುವನು. ಆಕಾಶಗಳೂ ಭೂಮಿಯೂ ಕದಲು ವವು; ಆದರೆ ಕರ್ತನು ತನ್ನ ಜನರಿಗೆ ನಿರೀಕ್ಷೆಯೂ ಇಸ್ರಾಯೇಲನ ಮಕ್ಕಳಿಗೆ ಬಲವೂ ಆಗಿರುವನು.
ಇದಲ್ಲದೆ ನೀನು ಮಂದೆಯ ಬುರುಜೇ ಚೀಯೋನಿನ ಕುಮಾರ್ತೆಯ ದುರ್ಗವೇ, ನಿನಗೆ ಬರು ವದು, ಹೌದು, ಮೊದಲನೇ ದೊರೆತನವೂ ಯೆರೂ ಸಲೇಮಿನ ಕುಮಾರ್ತೆಗೆ ರಾಜ್ಯವೂ ಬರುವದು.
ಕರ್ತನು ಒಳ್ಳೆಯವನು; ಇಕ್ಕಟ್ಟಿನ ದಿನದಲ್ಲಿ ಬಲವಾದ ಕೋಟೆಯಾಗಿದ್ದಾನೆ; ತನ್ನಲ್ಲಿ ನಂಬಿಕೆಯಿಡು ವವರನ್ನು ಬಲ್ಲನು.
ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.