ಸೈನ್ಯಗಳ ಕರ್ತನು ಅವರನ್ನು ಕಾಪಾಡುವನು; ಅವರು ನುಂಗಿ ಕವಣೆ ಕಲ್ಲುಗಳನ್ನು ಸ್ವಾಧೀನಮಾಡಿ ಕೊಳ್ಳುವರು; ಕುಡಿದು ದ್ರಾಕ್ಷಾರಸದಿಂದಾದ ಹಾಗೆ ಓಲಾಡುವರು, ಪಾತ್ರೆಯ ಹಾಗೆಯೂ ಬಲಿಪೀಠದ ಮೂಲೆಗಳ ಹಾಗೆಯೂ ತುಂಬಿರುವರು.
Cross references
ಅದರ ನಾಲ್ಕು ಮೂಲೆಗಳಲ್ಲಿ ಕೊಂಬುಗಳನ್ನು ಮಾಡಬೇಕು. ಆ ಕೊಂಬುಗಳು ಯಜ್ಞವೇದಿಗೆ ಎತ್ತರವಾಗಿರಬೇಕು; ನೀನು ಅದನ್ನು ಹಿತ್ತಾಳೆಯಿಂದ ಹೊದಿಸಬೇಕು.
ಯಾಜಕನು ಸ್ವಲ್ಪ ರಕ್ತವನ್ನು ಸಭೆಯ ಗುಡಾರ ದೊಳಗಿರುವ ಸುವಾಸನೆಯುಳ್ಳ ಧೂಪ ಯಜ್ಞವೇದಿಯ ಕೊಂಬುಗಳಿಗೆ ಕರ್ತನ ಮುಂದೆ ಹಚ್ಚಬೇಕು; ಅಲ್ಲದೆ ಆ ಹೋರಿಯ ಎಲ್ಲಾ ರಕ್ತವನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿರುವ ದಹನಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.
ಇದಲ್ಲದೆ ಅವನು ಸ್ವಲ್ಪ ರಕ್ತ ವನ್ನು ಸಭೆಯ ಗುಡಾರದೊಳಗಿರುವ ಯಜ್ಞವೇದಿಯ ಕೊಂಬುಗಳಿಗೆ ಕರ್ತನ ಎದುರಿನಲ್ಲಿ ಹಚ್ಚಿ ಉಳಿದ ಎಲ್ಲಾ ರಕ್ತವನ್ನು ಸಭೆಯ ಗುಡಾರದೊಳಗಿರುವ ದಹನ ಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.
ಯಾಜಕನು ಪಾಪದ ಬಲಿಯ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು ದಹನಬಲಿ ಯಜ್ಞವೇದಿಯ ಕೊಂಬುಗಳ ಮೇಲೆ ಹಚ್ಚಿ ಅದರ ರಕ್ತವನ್ನು ದಹನಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.
ಆಗ ದಾವೀದನು ಫಿಲಿಷ್ಟಿಯನಿಗೆ--ನೀನು ಕತ್ತಿ ಈಟಿಯ ಗುರಾಣಿಯ ಸಂಗಡ ನನ್ನ ಬಳಿಗೆ ಬರುತ್ತೀ; ಆದರೆ ನೀನು ನಿಂದಿಸಿದ ಇಸ್ರಾಯೇ ಲಿನ ಸೈನ್ಯಗಳ ದೇವರಾದಂಥ ಸೈನ್ಯಗಳ ಕರ್ತನ ಹೆಸರಿ ನಲ್ಲಿ ನಾನು ನಿನ್ನ ಬಳಿಗೆ ಬರುತ್ತೇನೆ.
ಆಗ ಕರ್ತನು ನಿದ್ದೆಯಿಂದ ಎಚ್ಚತ್ತವನ ಹಾಗೆಯೂ ದ್ರಾಕ್ಷಾರಸದಿಂದ ಆರ್ಭಟಿಸುವ ಪರಾಕ್ರಮಶಾಲಿಯ ಹಾಗೆಯೂ ಎಚ್ಚತ್ತು,
ನನ್ನನ್ನು ಎಳಕೋ, ನಾವು ನಿನ್ನ ಹಿಂದೆ ಓಡುವೆವು; ಅರಸನು ನನ್ನನ್ನು ತನ್ನ ಕೊಠಡಿಗಳಿಗೆ ಕರಕೊಂಡು ಬಂದಿದ್ದಾನೆ. ನಾವು ನಿನ್ನಲ್ಲಿ ಉಲ್ಲಾಸಪಟ್ಟು ಸಂತೋಷಪಡುತ್ತೇವೆ; ದ್ರಾಕ್ಷಾರಸ ಕ್ಕಿಂತ ನಿನ್ನ ಪ್ರೀತಿಯನ್ನು ಜ್ಞಾಪಕಮಾಡುತ್ತೇವೆ; ಯಥಾ ರ್ಥರು ನಿನ್ನನ್ನು ಪ್ರೀತಿಮಾಡುತ್ತಾರೆ.
ನನ್ನ ತೋಟಕ್ಕೆ ಬಂದೆನು, ನನ್ನ ಸಹೋದರಿಯೇ, ವಧುವೇ; ನನ್ನ ರಕ್ತಬೋಳ ವನ್ನೂ ನನ್ನ ಸುಗಂಧಗಳನ್ನೂ ಕೂಡಿಸಿದ್ದೇನೆ; ನನ್ನ ಜೇನು ಗೂಡನ್ನೂ ಜೇನು ತುಪ್ಪವನ್ನೂ ತಿಂದಿದ್ದೇನೆ; ನನ್ನ ದ್ರಾಕ್ಷಾರಸವನ್ನೂ ನನ್ನ ಹಾಲನ್ನೂ ಕುಡಿದಿದ್ದೇನೆ. ತಿನ್ನಿರಿ, ಓ ಸ್ನೇಹಿತರೇ; ಕುಡಿಯಿರಿ. ಹೌದು, ನನ್ನ ಪ್ರಿಯರೇ, ಸಮೃದ್ಧಿಯಾಗಿ ಕುಡಿಯಿರಿ.
ನಿನ್ನ ಬಾಯಿಯ ಅಂಗಳವು ನನ್ನ ಪ್ರಿಯನ ಉತ್ತಮವಾದ ದ್ರಾಕ್ಷಾರಸದ ಹಾಗಿರುವದು. ಅದು ಸಿಹಿಯಾಗಿ ಹೋಗುವಂಥದ್ದು, ನಿದ್ರೆಮಾಡುವವರ ತುಟಿಗಳನ್ನು ಮಾತಾಡಿಸುವಂಥದ್ದು.
ಈ ಪಟ್ಟಣವನ್ನು ನನಗಾಗಿಯೂ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಇದನ್ನು ಕಾಪಾಡು ವೆನು ಎಂದು ಕರ್ತನು ಹೇಳುತ್ತಾನೆ.
ಹಾ, ಬಾಯಾರಿದ ಸಕಲಜನರೇ, ನೀವು ನೀರಿನ ಬಳಿಗೆ ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ; ಹೌದು, ಬನ್ನಿರಿ; ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡು ಕೊಳ್ಳಿರಿ.
ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ, ಜನಾಂಗಗಳೊಳಗೆ ಅಡವಿಯ ಮೃಗಗಳಲ್ಲಿ ಸಿಂಹದಂತೆಯೂ ಕುರಿಮಂದೆಗಳಲ್ಲಿ ಪ್ರಾಯದ ಸಿಂಹದಂತೆಯೂ ಇರುವದು; ಅದು ಹಾದುಹೋದರೆ ಇಳಿದುಬಿಟ್ಟು ಹರಿದುಬಿಡುತ್ತದೆ, ಯಾರೂ ಬಿಡಿಸ ಲಾರರು.
ಇಗೋ, ನಾನು ನನ್ನ ಕೈಯನ್ನು ಅವರ ಮೇಲೆ ಜಾಡಿಸುತ್ತೇನೆ; ಆಗ ಅವರು ತಮ್ಮ ದಾಸರಿಗೆ ಕೊಳ್ಳೆಯಾಗುವರು; ಸೈನ್ಯಗಳ ಕರ್ತನು ನನ್ನನ್ನು ಕಳುಹಿಸಿದನೆಂದು ನೀವು ತಿಳಿಯುವಿರಿ.
ಆತನ ಒಳ್ಳೇತನವು ಎಷ್ಟೋ ದೊಡ್ಡದು; ಆತನ ಸೌಂದರ್ಯವು ಎಷ್ಟು ಮಹತ್ತಾ ದದ್ದು! ಧಾನ್ಯವು ಯೌವನಸ್ಥರನ್ನೂ ದ್ರಾಕ್ಷಾರಸವು ಯುವತಿಯರನ್ನೂ ಹರ್ಷಗೊಳಿಸುವವು.
ಅವರು ಯುದ್ಧ ದಲ್ಲಿ ಶತ್ರುವನ್ನು ಬೀದಿಗಳ ಕೆಸರಿನಲ್ಲಿ ತುಳಿಯುವ ಶೂರರ ಹಾಗಿರುವರು; ಕರ್ತನು ಅವರ ಸಂಗಡ ಇರುವದರಿಂದ ಯುದ್ಧಮಾಡುವರು; ಕುದುರೆಗಳ ಮೇಲೆ ಸವಾರಿ ಮಾಡುವವರನ್ನು ನಾಚಿಕೆಪಡಿಸುವರು.
ಎಫ್ರಾಯಾಮಿನವರು ಶೂರನಂತೆ ಇರುವರು; ಅವರ ಹೃದಯವು ದ್ರಾಕ್ಷಾರಸದಿಂದಾದ ಹಾಗೆ ಸಂತೋಷಪಡುವದು; ಹೌದು, ಅವರ ಮಕ್ಕಳು ನೋಡಿ ಸಂತೋಷಿಸುವರು; ಅವರ ಹೃದಯವು ಕರ್ತ ನಲ್ಲಿ ಉಲ್ಲಾಸಪಡುವದು.
ಆ ದಿನದಲ್ಲಿ ನಾನು ಯೆಹೂದದ ದೊರೆಗಳನ್ನು ಕಟ್ಟಿಗೆಯ ಮಧ್ಯದಲ್ಲಿರುವ ಬೆಂಕಿಯ ಒಲೆಯ ಹಾಗೆಯೂ ಸಿವುಡುಗಳಲ್ಲಿರುವ ಬೆಂಕಿಯ ಕೊಳ್ಳಿಯ ಹಾಗೆಯೂ ಮಾಡುವೆನು. ಅವರು ಬಲಗಡೆಯಲ್ಲಿಯೂ ಎಡಗಡೆ ಯಲ್ಲಿಯೂ ಸುತ್ತಲಿರುವ ಎಲ್ಲಾ ಜನಗಳನ್ನು ನುಂಗಿ ಬಿಡುವರು; ಯೆರೂಸಲೇಮು ತಿರುಗಿ ತನ್ನ ಸ್ಥಳದಲ್ಲಿ, ಯೆರೂಸಲೇಮಿನಲ್ಲಿಯೇ ವಾಸಿಸುವದು.
ಆ ದಿನದಲ್ಲಿ ಕರ್ತನು ಯೆರೂಸಲೇಮಿನ ನಿವಾಸಿಗಳನ್ನು ಕಾಪಾಡುವನು; ಆ ದಿನದಲ್ಲಿ ಅವರೊಳಗೆ ಬಲಹೀನನು ದಾವೀದನ ಹಾಗೆಯೂ ದಾವೀದನ ಮನೆತನದವರು ದೇವರ ಹಾಗೆಯೂ ಅಂದರೆ ಅವರ ಮುಂದೆ ಕರ್ತನ ದೂತನ ಹಾಗೆಯೂ ಇರುವರು.
ಆ ದಿನದಲ್ಲಿ ಕುದುರೆಗಳ ಗೆಜ್ಜೆಗಳ ಮೇಲೆ ಕರ್ತನಿಗೆ ಪರಿಶುದ್ಧವು ಎಂದಿರುವದು; ಕರ್ತನ ಆಲಯದ ಪಾತ್ರೆಗಳು ಬಲಿಪೀಠದ ಮುಂದಿನ ಪಾತ್ರೆಗಳ ಹಾಗಿರುವವು.ಹೌದು, ಯೆರೂಸಲೇಮಿ ನಲ್ಲಿಯೂ ಯೆಹೂದದಲ್ಲಿಯೂ ಇರುವ ಪ್ರತಿ ಯೊಂದು ಪಾತ್ರೆಯು ಸೈನ್ಯಗಳ ಕರ್ತನಿಗೆ ಪರಿಶುದ್ಧ ವಾಗಿರುವವು; ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳಲ್ಲಿ ತಕ್ಕೊಂಡು ಬೇಯಿಸುವರು; ಆ ದಿನದಲ್ಲಿ ಕಾನಾನ್ಯನು ಸೈನ್ಯಗಳ ಕರ್ತನ ಆಲಯದಲ್ಲಿ ಇನ್ನು ಮೇಲೆ ಇರುವದೇ ಇಲ್ಲ.
ಕೆಲವರು--ಈ ಮನುಷ್ಯರು ಹೊಸ ಮದ್ಯಪಾನ ಮಾಡಿ ಮತ್ತರಾಗಿದ್ದಾರೆ ಎಂದು ಹೇಳಿ ಹಾಸ್ಯ ಮಾಡಿದರು.
ನಾಶವಾಗುವವರಿಗೆ ಶಿಲುಬೆಯ ವಿಷಯವಾದ ಸಾರೋಣವು ಹುಚ್ಚುತನವಾಗಿದೆ; ರಕ್ಷಣೆ ಹೊಂದಿದ ನಮಗಾದರೋ ಅದು ದೇವರ ಶಕ್ತಿಯಾಗಿದೆ.
ಮದ್ಯಪಾನ ಮಾಡಿ ಮತ್ತರಾಗಬೇಡಿರಿ, ಯಾಕಂದರೆ ಅದರಿಂದ ಪಟಿಂಗತನವು ಹುಟ್ಟುತ್ತದೆ. ಪವಿತ್ರಾತ್ಮನಿಂದ ತುಂಬಿದವರಾಗಿರ್ರಿ.
ಆತನು ರಕ್ತದಲ್ಲಿ ಅದ್ದಿದ ವಸ್ತ್ರವನ್ನು ಧರಿಸಿ ಕೊಂಡಿದ್ದನು. ಆತನ ಹೆಸರು ದೇವರವಾಕ್ಯ ವೆಂದು ಕರೆಯಲ್ಪಡುತ್ತದೆ.