Cross references
ಆಗ ಅವರು ಏರಿಹೋಗಿ ಜಿನ್ ಎಂಬ ಅರಣ್ಯ ದಿಂದ ಹಮಾತಿನ ಕಡೆಯಲ್ಲಿರುವ ರೆಹೋಬಿನ ವರೆಗೂ ದೇಶವನ್ನು ಪಾಳತಿ ನೋಡಿದರು.
ನೀನೆದ್ದು ಚೀದೋನಿಗೆ ಸೇರಿದ ಚಾರೆಪ್ತಾಕ್ಕೆ ಹೋಗಿ ಅಲ್ಲಿ ವಾಸವಾಗಿರು; ಇಗೋ, ನಿನ್ನನ್ನು ಸಂರಕ್ಷಣೆ ಮಾಡಲು ಅಲ್ಲಿರುವ ಒಬ್ಬ ವಿಧವೆಗೆ ಆಜ್ಞಾಪಿಸಿದ್ದೇನೆ ಅಂದನು.
ಆದರೆ ಅವನು ಯೆರೂಸಲೇಮಿನಲ್ಲಿ ಆಳದ ಹಾಗೆ ಫರೋಹನೆಕೋ ಎಂಬವನು ಹಮಾತ್ ದೇಶದ ರಿಬ್ಲಾದಲ್ಲಿ ಅವನನ್ನು ಬಂಧಿಸಿ ದೇಶದ ಮೇಲೆ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರವನ್ನೂ ದಂಡ ತೆರಬೇಕಾ ಯಿತು.
ಬಾಬೆಲಿನ ಅರಸನು ಹಮಾತ್ ರಿಬ್ಲ ದಲ್ಲಿ ಅವರನ್ನು ಹೊಡೆದು ಕೊಂದುಹಾಕಿದನು. ಈ ಪ್ರಕಾರವೇ ಯೆಹೂದ್ಯರು ತಮ್ಮ ದೇಶದಲ್ಲಿಂದ ಸೆರೆ ಯಾಗಿ ಒಯ್ಯಲ್ಪಟ್ಟರು.
ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಗೋಳಾ ಡಿರಿ; ಅದು ಹಾಳಾಗಿರುವದರಿಂದ ನಿಮಗೆ ಮನೆಯಿಲ್ಲ ಮತ್ತು ಒಳಗೆ ಪ್ರವೇಶವೂ ಇಲ್ಲ. ಇದು ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು.
ಎಲ್ಲಾ ಭೂಮಿಯ ಸುತ್ತಿಗೆಯೂ ಹೇಗೆ ತುಂಡಾಗಿ ಮುರಿಯಲ್ಪಟ್ಟಿತು; ಬಾಬೆಲ್ ಹೇಗೆ ಜನಾಂಗಗಳೊಳಗೆ ಹಾಳಾಯಿತು!
ಹನ್ನೊಂದನೇ ವರುಷದ ತಿಂಗಳಿನ ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
ಕರ್ತನ ವಾಕ್ಯವು ಮತ್ತೆ ಬಂದು ನನಗೆ ಹೇಳಿದ್ದೇನಂದರೆ--
ಮನುಷ್ಯಪುತ್ರನೇ, ತೂರಿನ ಪ್ರಭುವಿಗೆ ಹೇಳಬೇಕಾದದ್ದೇನಂದರೆ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಹೃದಯವು ಹೆಚ್ಚಿಸಲ್ಪಟ್ಟಿದ್ದರಿಂದ--ನಾನೇ ದೇವರು ದೇವರ ಸ್ಥಾನದಲ್ಲಿ ಸಮುದ್ರಗಳ ಮಧ್ಯದಲ್ಲಿ ಕುಳಿತುಕೊಂಡಿ ರುವೆನೆಂದು ಹೇಳಿದ್ದರಿಂದ ನೀನು ದೇವರಲ್ಲ, ಮನು ಷ್ಯನೇ; ಆದರೂ ನೀನು ನಿನ್ನ ಹೃದಯವನ್ನು ದೇವರ ಹೃದಯದಂತೆ ಮಾಡಿಕೊಂಡಿರುವೆ.
ಮನುಷ್ಯಪುತ್ರನೇ, ತೂರಿನ ಅರಸನ ವಿಷಯದಲ್ಲಿ ಶೋಕಗೀತೆಯನ್ನೆತ್ತಿ ಅವನಿಗೆ ಹೀಗೆ ಹೇಳು--ದೇವರಾದ ಕರ್ತನು ಹೀಗೆ ಹೇಳು ತ್ತಾನೆ, ಸಂಪೂರ್ಣ ಜ್ಞಾನಿ, ಪರಿಪೂರ್ಣ ಸುಂದರವಾದ ನೀನು ಲೆಕ್ಕವನ್ನು ಮುದ್ರಿಸುತ್ತೀ.
ಮನುಷ್ಯಪುತ್ರನೇ, ನೀನು ಚೀದೋನಿಗೆ ಅಭಿಮುಖನಾಗಿ ಅದಕ್ಕೆ ವಿರುದ್ಧವಾಗಿ ಪ್ರವಾದಿಸು.
ಹೌದು, ಓ ತೂರೇ, ಚೀದೋನೇ, ಪಾಲೆಸ್ತಿನದ ಎಲ್ಲಾ ಪ್ರಾಂತ್ಯಗಳೇ, ನನ್ನ ಕೂಡ ನಿಮಗೇನು? ನನಗೆ ಮುಯ್ಯಿಗೆ ಮುಯ್ಯಿ ಸಲ್ಲಿಸುವಿರೋ? ನೀವು ನನಗೆ ಸಲ್ಲಿಸಿದರೆ ಜಾಗ್ರತೆಯಾಗಿಯೂ ತ್ವರೆಯಾಗಿಯೂ ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿ ತರಿಸುವೆನು.
ಕರ್ತನು ಹೀಗೆ ಹೇಳುತ್ತಾನೆ--ದಮಸ್ಕದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ನಾನು ಅವರನ್ನು ದಂಡಿಸದೆ ಹಿಂತಿರುಗುವದಿಲ್ಲ; ಅವರು ಕಬ್ಬಿಣದ ಆಯುಧಗಳಿಂದ ಗಿಲ್ಯಾದನ್ನು ಬಡಿದಿರುವರು.
ಕರ್ತನು ಹೀಗೆ ಹೇಳುತ್ತಾನೆ--ತೂರಿನ ಮೂರು ಮತ್ತು ನಾಲ್ಕರ ನಿಮಿತ್ತ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದಿಲ್ಲ; ಅವರು ಸಹೋದರರ ಒಡಂಬ ಡಿಕೆಯನ್ನು ಜ್ಞಾಪಕಮಾಡಲಿಲ್ಲ; ಪೂರ್ಣ ಸೆರೆಯನ್ನು ಎದೋಮಿಗೆ ಒಪ್ಪಿಸಿಬಿಟ್ಟರು.
ಇಗೋ, ಜನಾಂಗವನ್ನು ನಿಮಗೆ ವಿರೋಧವಾಗಿ ಎಬ್ಬಿಸುತ್ತೇನೆ; ಇಸ್ರಾಯೇಲಿನ ಮನೆತನದವರೇ, ಹಮಾತಿನ ಪ್ರದೇಶದಿಂದ ಹಿಡಿದು ಅರಣ್ಯದ ನದಿಯ ವರೆಗೂ ನಿಮ್ಮನ್ನು ಹಿಂಸಿಸುತ್ತೇನೆ ಎಂದು ಸೈನ್ಯಗಳ ದೇವರಾದ ಕರ್ತನು ಹೇಳುತ್ತಾನೆ.
ಇದಲ್ಲದೆ ಚಾರೆಪತಿನ ವರೆಗೂ ಕಾನಾನ್ಯರಲ್ಲಿರುವ ಇಸ್ರಾಯೇಲನ ಮಕ್ಕಳ ಈ ಸೈನ್ಯದ ಸೆರೆಯವರು ಸೆಫರಾದಿನಲ್ಲಿರುವ ಯೆರೂ ಸಲೇಮಿನ ಸೆರೆಯವರು ದಕ್ಷಿಣದ ಪಟ್ಟಣಗಳನ್ನು ಸ್ವಾಧೀ ನಮಾಡಿಕೊಳ್ಳುವರು.ಇದಲ್ಲದೆ ಚೀಯೋನ್ ಪರ್ವತದಲ್ಲಿ ರಕ್ಷಕರು ಏಸಾವಿನ ಬೆಟ್ಟಕ್ಕೆ ನ್ಯಾಯ ತೀರಿಸುವದಕ್ಕೋಸ್ಕರ ಏಳುವರು; ಆಗ ರಾಜ್ಯವು ಕರ್ತನದಾಗಿರುವದು.