ಇದಲ್ಲದೆ ಹೋಗುತ್ತಾ ಬರುತ್ತಾ ಇರುವವನ ನಿಮಿತ್ತವೂ ಸೈನ್ಯದ ನಿಮಿತ್ತವೂ ನನ್ನ ಮನೆಯ ಹತ್ತಿರ ಪಾಳೆಯಮಾಡುತ್ತೇನೆ; ಇನ್ನು ಮೇಲೆ ಉಪದ್ರ ಕೊಡುವವನು ಅವರ ಮೇಲೆ ಹಾದು ಹೋಗುವದಿಲ್ಲ; ಯಾಕಂದರೆ ಈಗ ನನ್ನ ಕಣ್ಣುಗಳಿಂದ ನೋಡಿದ್ದೇನೆ.
Cross references
ಯಾಕೋಬನು ತನ್ನ ಮಾರ್ಗವಾಗಿ ಹೋಗುತ್ತಿದ್ದಾಗ ದೇವದೂತರು ಅವನೆ ದುರಿಗೆ ಬಂದರು.
ಆಗ ಕರ್ತನು--ಐಗುಪ್ತದಲ್ಲಿರುವ ನನ್ನ ಜನರ ವ್ಯಥೆಯನ್ನು ನಿಶ್ಚಯವಾಗಿಯೂ ಕಂಡಿದ್ದೇನೆ, ಬಿಟ್ಟೀ ಕೆಲಸಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು.
ಆದದರಿಂದ ಈಗ ಕೇಳು, ಇಸ್ರಾಯೇಲ್ ಮಕ್ಕಳ ಕೂಗು ನನ್ನ ಬಳಿಗೆ ಬಂದಿತು; ಐಗುಪ್ತ್ಯರು ಅವರನ್ನು ಬಾಧಿಸುವ ಬಾಧೆಯನ್ನು ನಾನು ನೋಡಿದ್ದೇನೆ.
ಒಂದು ವೇಳೆ ಕರ್ತನು ನನ್ನ ಶ್ರಮೆಯನ್ನು ನೋಡಿ ಈ ದಿನ ದಲ್ಲಿ ಅವನು ಮಾಡಿದ ದೂಷಣೆಗೆ ಪ್ರತಿಯಾಗಿ ನನಗೆ ಒಳ್ಳೆಯದನ್ನು ಮಾಡಬಹುದು ಅಂದನು.
ನನ್ನ ನಿಮಿತ್ತವೂ ನನ್ನ ಸೇವಕನಾದ ದಾವೀದನ ನಿಮಿತ್ತವೂ ನಾನು ಈ ಪಟ್ಟಣವನ್ನು ಕಾಪಾಡಿ ಅದನ್ನು ರಕ್ಷಿಸುವೆನು ಎಂಬದೇ.
ಅವನ ದಿವಸಗಳಲ್ಲಿ ಐಗುಪ್ತದ ಅರಸನಾದ ಫರೋಹನೆಕೋ ಎಂಬವನು ಅಶ್ಶೂರಿನ ಅರಸನ ಮೇಲೆ ಯೂಫ್ರೇ ಟೀಸ್ ನದಿಗೆ ಹೋದನು; ಅರಸನಾದ ಯೋಷೀ ಯನು ಅವನ ಮೇಲೆ ಹೋದನು; ಅವನು ಇವನನ್ನು ನೋಡಿದಾಗ ಮೆಗಿದ್ದೋವಿನ ಬಳಿಯಲ್ಲಿ ಕೊಂದು ಹಾಕಿದನು.
ಅವನ ದಿವಸಗಳಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚರನು ಬಂದನು. ಯೆಹೋಯಾಕೀಮನು ಮೂರು ವರುಷ ಅವನ ಸೇವಕನಾಗಿದ್ದು ತರುವಾಯ ಅವನ ಮೇಲೆ ತಿರುಗಿ ಬಿದ್ದನು.
ಆತನಿಗೆ ಭಯಪಡುವವರ ಸುತ್ತಲೂ ಕರ್ತನ ದೂತನು ಇಳು ಕೊಂಡು ಅವರನ್ನು ಕಾಪಾಡುತ್ತಾನೆ.
ನಮ್ಮ ಆಶ್ರಯವೂ ಬಲವೂ ಆಗಿರುವ ದೇವರು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
ಆತನು ಜನರಲ್ಲಿ ದೀನರಿಗೆ ನ್ಯಾಯತೀರಿಸುವನು; ಬಡವನ ಮಕ್ಕಳನ್ನು ರಕ್ಷಿಸುವನು; ಬಲಾತ್ಕಾರಿಯನ್ನು ಮುರಿದು ತುಂಡು ಮಾಡುವನು.
ಕರ್ತನಲ್ಲಿ ಭರವಸವಿಡುವವರು ಚೀಯೋನ್ ಪರ್ವತದ ಹಾಗಿ ದ್ದಾರೆ; ಅದು ಕದಲದೆ ಯುಗಯುಗಕ್ಕೂ ಇರುವದು.
ಆಕಸ್ಮತ್ತಾದ ಭಯ ಕ್ಕಾಗಲಿ ಇಲ್ಲವೆ ಅವರ ಮೇಲೆ ಬರುವ ದುಷ್ಟರ ನಾಶನಕ್ಕಾಗಲಿ ನೀನು ಭಯಪಡದಿರು.
ಕರ್ತನು ಚೀಯೋನ್ ಪರ್ವತದ ಪ್ರತಿಯೊಂದು ವಾಸಿಸುವ ಸ್ಥಳದ ಮೇಲೂ ಅವಳ ಸಭೆಗಳ ಮೇಲೂ ಹಗಲಿನಲ್ಲಿ ಹೊಗೆಯನ್ನೂ ಮೇಘವನ್ನೂ ಇರುಳಿನಲ್ಲಿ ಪ್ರಜ್ವಲಿ ಸುವ ಅಗ್ನಿಪ್ರಕಾಶವನ್ನೂ ಉಂಟುಮಾಡುವನು; ಎಲ್ಲಾ ಮಹಿಮೆಯ ಮೇಲೆ ಕಾವಲಿರುವದು.ಹಗಲಲ್ಲಿ ಬಿಸಿಲಿಗೆ ನೆರಳಾಗುವ ಹಾಗೂ ಬಿರುಗಾಳಿಗೂ ಮಳೆಗೂ ಮರೆಯಾಗಲು ಆಶ್ರಯ ಸ್ಥಾನವಾಗಿ ಒಂದು ಗುಡಾರವಿರುವದು.
ಆ ದಿವಸದಲ್ಲಿ ಯೆಹೂದ ದೇಶದೊಳಗೆ ಈ ಹಾಡನ್ನು ಹಾಡುವರು; ನಮಗೆ ಬಲ ವಾದ ಪಟ್ಟಣವಿದೆ. ರಕ್ಷಣೆಯನ್ನು ಕೋಟೆಯನ್ನಾ ಗಿಯೂ ಹೊರಪೌಳಿಯನ್ನಾಗಿಯೂ ದೇವರು ಮಾಡು ವನು.
ಹಾರುವ ಪಕ್ಷಿಗಳಂತೆ ಸೈನ್ಯಗಳ ಕರ್ತನು ಯೆರೂಸಲೇಮನ್ನು ಕಾಪಾಡುವನು; ಅದನ್ನು ರಕ್ಷಿಸಿ ಕಾಯುವನು. ಹಾದುಹೋಗುತ್ತಾ ಅಪಾಯದಿಂದ ತಪ್ಪಿಸುವನು.
ನಮ್ಮ ಹಬ್ಬಗಳು ನಡೆಯುವ ಚೀಯೋನ್ ಪಟ್ಟಣವನ್ನು ದೃಷ್ಟಿಸಿರಿ, ಯೆರೂಸಲೇಮ್ ನೆಮ್ಮದಿಯ ನಿವಾಸವಾಗಿಯೂ ಗೂಟಕೀಳದ, ಹಗ್ಗ ಹರಿಯದ, ಒಂದೇ ಕಡೆ ಇರುವ ಗುಡಾರವಾಗಿಯೂ ಇರುವದನ್ನು ನೀವು ಕಣ್ಣಾರೆ ಕಾಣುವಿರಿ.
ಓ ಚೀಯೋನೇ, ಎಚ್ಚರವಾಗು, ಎಚ್ಚರವಾಗು, ನಿನ್ನ ಬಲವನ್ನು ಹೊಂದಿಕೋ, ಓ ಯೆರೂಸಲೇಮೇ, ಪರಿಶುದ್ಧ ಪಟ್ಟಣವೇ, ನಿನ್ನ ಸೌಂದರ್ಯವಾದ ಉಡುಪುಗಳನ್ನು ಧರಿಸಿಕೋ; ಯಾಕಂದರೆ ಇಂದಿನಿಂದ ಸುನ್ನತಿಯಿಲ್ಲದವರೂ ಅಶುದ್ಧರೂ ನಿನ್ನೊಳಗೆ ಬರುವದಿಲ್ಲ.
ನೀವು ತ್ವರೆಯಾಗಿ ಹೋಗುವದಿಲ್ಲ; ಇಲ್ಲವೆ ಹಾರುವದ ರಿಂದಲೂ ಹೋಗುವದಿಲ್ಲ; ಯಾಕಂದರೆ ಕರ್ತನೇ ನಿಮ್ಮ ಮುಂದೆ ಹೋಗುವನು; ಇಸ್ರಾಯೇಲಿನ ದೇವರು ನಿಮ್ಮ ಬಹುಮಾನವಾಗಿರುವನು.
ನೀನು ನೀತಿಯಲ್ಲಿ ನೆಲೆಗೊಂಡಿರುವಿ; ಹಿಂಸೆ ಯಿಂದ ದೂರವಾಗಿರುವಿ; ನೀನು ಭೀತಿಯಿಂದ ಭಯ ಪಡುವದಿಲ್ಲ; ಅದು ನಿನ್ನ ಸವಿಾಪಕ್ಕೆ ಬಾರದು.
ಬಲಾತ್ಕಾರವೂ ನಿನ್ನ ದೇಶದೊಳಗೆ ಹಾಳಾದದ್ದೂ ನಾಶವೂ ನಿನ್ನ ಮೇರೆ ಗಳಲ್ಲಿ ಕೇಳಲ್ಪಡುವದಿಲ್ಲ; ನಿನ್ನ ಗೋಡೆಗಳಿಗೆ ರಕ್ಷಣೆ ಎಂದೂ ನಿನ್ನ ಬಾಗಿಲುಗಳಿಗೆ ಸ್ತೋತ್ರವೆಂದೂ ಹೆಸರಿ ಡುವಿ.
ಆ ಕ್ರಯಪತ್ರವನ್ನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನ ಮುಂದೆಯೂ ಕ್ರಯಪತ್ರ ದಲ್ಲಿ ರುಜು ಹಾಕಿದ ಸಾಕ್ಷಿಗಳ ಮುಂದೆಯೂ ಸೆರೆ ಮನೆಯ ಅಂಗಳದಲ್ಲಿ ಕೂತುಕೊಂಡಿದ್ದ ಯೆಹೂದ್ಯ ರೆಲ್ಲರ ಮುಂದೆಯೂ ಮಹ್ಸೇಮನ ಮಗನಾದ ನೇರೀ ಯನ ಮಗನಾದ ಬಾರೂಕನಿಗೆ ಕೊಟ್ಟೆನು.
ಕರ್ತನು ಹೀಗೆ ಹೇಳು ತ್ತಾನೆ--ಇಗೋ, ಪ್ರವಾಹಗಳು ಉತ್ತರದಿಂದ ಬರು ತ್ತವೆ, ಅವು ತುಂಬಿ ತುಳುಕುವ ಪ್ರಳಯವಾಗುವದು; ದೇಶವನ್ನೂ ಅದರಲ್ಲಿರುವ ಸಮಸ್ತವನ್ನೂ ಪಟ್ಟಣವನ್ನೂ ಅದರ ನಿವಾಸಿಗಳನ್ನೂ ಆಕ್ರಮಿಸುವವು, ಆಗ ಮನು ಷ್ಯರು ಕೂಗುವರು, ದೇಶದ ನಿವಾಸಿಗಳೆಲ್ಲರೂ ಗೋಳಾ ಡುವರು.
ಇಸ್ರಾಯೇಲ್ ವಂಶದವರಿಗೆ ಚುಚ್ಚುವ ದತ್ತೂರಿ ಸುತ್ತಲೂ ಹೀನೈಸುವ ನೋಯಿಸುವ ಮುಳ್ಳು ಇನ್ನಿರದು; ನಾನೇ ದೇವರಾದ ಕರ್ತನೆಂದು ಅವರಿಗೆ ತಿಳಿಯುವದು.
ಇಲ್ಲವೇ ನಾನು ನನ್ನ ಮುಖವನ್ನು ಎಂದಿಗೂ ಮರೆಮಾಡುವದಿಲ್ಲ; ನಾನು ನನ್ನ ಆತ್ಮವನ್ನು ಇಸ್ರಾ ಯೇಲಿನ ಮನೆತನದವರ ಮೇಲೆ ಸುರಿದಿರುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
ವರುಷಗಳ ಅಂತ್ಯದಲ್ಲಿ ಅವರು ಒಬ್ಬರಿಗೊಬ್ಬರು ಒಂದಾಗುವರು; ಹೇಗಂದರೆ ದಕ್ಷಿಣದ ಅರಸನ ಮಗಳು ಉತ್ತರದ ಅರಸನ ಬಳಿಗೆ ಬಂದು ಒಪ್ಪಂದ ಮಾಡಿಕೊಳ್ಳುವಳು; ಆದರೆ ಅವಳು ಭುಜ ಬಲವನ್ನು ಉಳಿಸಿಕೊಳ್ಳುವದಿಲ್ಲ; ಅವನೂ ಅವನ ತೋಳುಗಳೂ ನಿಲ್ಲುವದಿಲ್ಲ; ಅವಳೂ ಅವಳನ್ನು ಕರೆ ತಂದವರೂ ಅವಳನ್ನು ಪಡೆದವನೂ ಆ ಕಾಲದಲ್ಲಿ ಅವಳನ್ನು ಬಲಪಡಿಸಿದವನೂ ಉಳಿಯುವದಿಲ್ಲ.
ಆಮೇಲೆ ಅವನ ಮಕ್ಕಳು ಸನ್ನದ್ಧರಾಗಿ ದೊಡ್ಡ ಸೈನ್ಯಗಳ ಸಮೂಹವನ್ನು ಕೂಡಿಸುವರು; ಅವರಲ್ಲಿ ಒಬ್ಬನು ನಿಶ್ಚಯವಾಗಿ ಬಂದು ಅದರಲ್ಲಿ ಪ್ರಳಯದಂತೆ ಹಾದುಹೋಗುವನು. ಅವನು ಮತ್ತೆ ಸನ್ನದ್ಧನಾಗಿ ಕೋಟೆಯನ್ನು ಮುತ್ತುವನು.
ಈ ಇಬ್ಬರು ಅರಸರ ಹೃದಯ ಗಳನ್ನು ಕೇಡನ್ನು ಮಾಡುವಂತವುಗಳಾಗಿರುವವು; ಒಂದೇ ಮೇಜಿನಲ್ಲಿ ಕುಳಿತು ಸುಳ್ಳು ಹೇಳುವರು; ಆದರೆ ಅದು ಅನುಕೂಲವಾಗದು; ಅದು ಹೇಗಾದರೂ ನಿಯಮಿಸಲ್ಪಟ್ಟ ಕಾಲದಲ್ಲಿ ಅಂತ್ಯವಾಗುವದು.
ಅಂತ್ಯಕಾಲದಲ್ಲಿ ದಕ್ಷಿಣದ ಅರಸನು ಅವನ ಮೇಲೆ ಬೀಳುವನು; ಉತ್ತರದ ಅರಸನು ರಥಗಳೊಂ ದಿಗೂ ಸವಾರರೊಂದಿಗೂ ಅನೇಕ ಹಡಗುಗಳೊಂ ದಿಗೂ ಸುಳಿಗಾಳಿಯಂತೆ ಅವನಿಗೆ ವಿರೋಧವಾಗಿ ದೇಶಗಳನ್ನು ಪ್ರವೇಶಿಸಿ ಪ್ರಳಯದಂತೆ ಹಾದು ಹೋಗುವನು.
ಕರ್ತನು ಚೀಯೋನಿನೊಳಗಿಂದ ಘರ್ಜಿಸಿ ಯೆರೂಸಲೇಮಿನೊಳಗಿಂದ ತನ್ನ ಶಬ್ದವನ್ನು ಕೊಡುವನು. ಆಕಾಶಗಳೂ ಭೂಮಿಯೂ ಕದಲು ವವು; ಆದರೆ ಕರ್ತನು ತನ್ನ ಜನರಿಗೆ ನಿರೀಕ್ಷೆಯೂ ಇಸ್ರಾಯೇಲನ ಮಕ್ಕಳಿಗೆ ಬಲವೂ ಆಗಿರುವನು.
ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
ತಿರುಗಿ ನನ್ನ ಕಣ್ಣುಗಳನ್ನೆತ್ತಿ ನೋಡಲು ಇಗೋ, ತನ್ನ ಕೈಯಲ್ಲಿ ಅಳೆಯುವ ನೂಲಿದ್ದ ಒಬ್ಬ ಮನುಷ್ಯನನ್ನು ಕಂಡೆನು.
ಆ ದಿನದಲ್ಲಿ ಕರ್ತನು--ನಾನು ಕುದುರೆಗಳನ್ನೆಲ್ಲಾ ಬೆದರಿಕೆಯಿಂದಲೂ ಹತ್ತಿ ದವನನ್ನು ಹುಚ್ಚುತನದಿಂದಲೂ ಹೊಡೆಯುವೆನು; ಯೆಹೂದನ ಮನೆಯ ಮೇಲೆ ನನ್ನ ಕಣ್ಣುಗಳನ್ನು ತೆರೆಯುವೆನು; ಜನಗಳ ಕುದುರೆಗಳನ್ನೆಲ್ಲಾ ಕುರುಡುತನ ದಿಂದ ಹೊಡೆಯುವೆನು.
ಆ ದಿನದಲ್ಲಿ ಕರ್ತನು ಯೆರೂಸಲೇಮಿನ ನಿವಾಸಿಗಳನ್ನು ಕಾಪಾಡುವನು; ಆ ದಿನದಲ್ಲಿ ಅವರೊಳಗೆ ಬಲಹೀನನು ದಾವೀದನ ಹಾಗೆಯೂ ದಾವೀದನ ಮನೆತನದವರು ದೇವರ ಹಾಗೆಯೂ ಅಂದರೆ ಅವರ ಮುಂದೆ ಕರ್ತನ ದೂತನ ಹಾಗೆಯೂ ಇರುವರು.
ಅದರಲ್ಲಿ ಜನರು ವಾಸವಾಗಿರುವರು; ಅಲ್ಲಿ ಇನ್ನು ಮೇಲೆ ಸಂಪೂರ್ಣವಾದ ನಾಶವಿರದು; ಆದರೆ ಯೆರೂಸಲೇಮು ಭದ್ರವಾಗಿ ವಾಸಿಸುವದು.
ನಾನು ಐಗುಪ್ತದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ; ಅವರ ಮೊರೆಯನ್ನು ಕೇಳಿ ಅವರನ್ನು ಬಿಡಿಸುವದಕ್ಕೆ ಇಳಿದು ಬಂದಿದ್ದೇನೆ; ಈಗ ನಿನ್ನನ್ನು ಐಗುಪ್ತ ದೇಶಕ್ಕೆ ಕಳುಹಿಸುತ್ತೇನೆ, ಬಾ ಎಂದು ಹೇಳಿದನು.
ಆಗ ಒಬ್ಬ ದೂತನು ತಳವಿಲ್ಲದ ತಗ್ಗಿನ ಬೀಗದ ಕೈಯನ್ನೂ ದೊಡ್ಡ ಸರಪಣಿ ಯನ್ನೂ ತನ್ನ ಕೈಯಲ್ಲಿ ಹಿಡಿದುಕೊಂಡು ಪರಲೋಕ ದಿಂದ ಇಳಿದು ಬರುವದನ್ನು ನಾನು ಕಂಡೆನು.
ಅವರು ಭೂಮಿಯಲ್ಲೆಲ್ಲಾ ಹರಡಿಕೊಂಡು ಪರಿಶುದ್ಧರ ದಂಡಿಗೂ ಆ ಪ್ರಿಯ ಪಟ್ಟಣಕ್ಕೂ ಮುತ್ತಿಗೆ ಹಾಕಿದರು. ಆಗ ದೇವರ ಬಳಿಯಿಂದ ಬೆಂಕಿಯು ಪರಲೋಕ ದೊಳಗಿಂದ ಇಳಿದು ಬಂದು ಅವರನ್ನು ನುಂಗಿಬಿಟ್ಟಿತು.