ಕರ್ತನ ರೌದ್ರದ ದಿನದಲ್ಲಿ ಅವರ ಬೆಳ್ಳಿಯಾದರೂ ಅವರ ಬಂಗಾರ ವಾದರೂ ಅವರನ್ನು ತಪ್ಪಿಸಲಾರವು; ಆತನ ಕೋಪದ ಬೆಂಕಿಯು ದೇಶವನ್ನೆಲ್ಲಾ ನುಂಗುವದು.
Cross references
ಇದಲ್ಲದೆ ಕರ್ತನು--ನಾನು ಸೃಷ್ಟಿಸಿದ ಮನುಷ್ಯ ನನ್ನೂ ಮನುಷ್ಯನ ಸಂಗಡ ಸಕಲ ಮೃಗ, ಕ್ರಿಮಿ, ಆಕಾಶದ ಪಕ್ಷಿಗಳನ್ನೂ ಭೂಮುಖದಿಂದ ನಾಶಮಾಡು ವೆನು; ನಾನು ಅವರನ್ನು ಉಂಟುಮಾಡಿದ್ದಕ್ಕೆ ಅದು ಪಶ್ಚಾತ್ತಾಪಪಡುವಂತೆ ಆಯಿತು ಅಂದನು.
ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು; ನಿಮ್ಮ ಭೂಮಿ ಹಾಳಾಗಿ ರುವದು; ನಿಮ್ಮ ಪಟ್ಟಣಗಳು ನಾಶವಾಗಿರುವವು.
ಅಂಥವನನ್ನು ಕರ್ತನು ಉಳಿಸುವದಿಲ್ಲ; ಆಗಲೇ ಕರ್ತನ ಕೋಪವೂ ರೋಷವೂ ಆ ಮನುಷ್ಯನ ಮೇಲೆ ಹೊಗೆ ಹಾಯುವವು. ಈ ಪುಸ್ತಕದಲ್ಲಿ ಬರೆದಿ ರುವ ಶಾಪವೆಲ್ಲಾ ಅವನ ಮೇಲೆ ನೆಲೆಯಾಗುವದು; ಕರ್ತನು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವನು.
ಆ ದಿವಸದಲ್ಲಿ ನನ್ನ ಕೋಪವು ಅವರ ಮೇಲೆ ಉರಿಯು ವದು. ನಾನು ಅವರನ್ನು ಬಿಟ್ಟುಬಿಟ್ಟು ನನ್ನ ಮುಖವನ್ನು ಅವರಿಗೆ ಮರೆಮಾಡುವೆನು; (ವಿರೋಧಿಗಳು) ಅವ ರನ್ನು ನುಂಗಿ ಬಿಡುವರು; ಬಹಳ ಕೇಡುಗಳೂ ಇಕ್ಕಟ್ಟು ಗಳೂ ಅವರಿಗೆ ಸಂಭವಿಸುವವು; ಆ ದಿವಸದಲ್ಲಿ ಅವರು--ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದ ಕಾರಣ ಈ ಕೇಡುಗಳು ನಮ್ಮನ್ನು ಹಿಡಿದವಲ್ಲಾ ಎಂದು ಹೇಳುವರು.
ದೇವರಲ್ಲದ್ದರಿಂದ ಅವರು ನನಗೆ ರೋಷ ಹುಟ್ಟಿಸಿ ದರು; ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪ ವನ್ನು ಎಬ್ಬಿಸಿದರು. ಜನವಲ್ಲದ್ದರಿಂದ ನಾನು ಅವರಿಗೆ ರೋಷ ಹುಟ್ಟಿಸುವೆನು; ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು.
ನನ್ನ ಕೋಪದಲ್ಲಿ ಬೆಂಕಿಹತ್ತಿತು; ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ ಅದರ ಫಲವನ್ನೂ ತಿಂದುಬಿಟ್ಟು ಬೆಟ್ಟಗಳ ಅಸ್ತಿವಾರವನ್ನು ದಹಿಸುವದು.
ಆದರೆ ಯೆಹೂದದವರು ಕರ್ತನ ಸಮ್ಮುಖದಲ್ಲಿ ಕೆಟ್ಟತನ ಮಾಡಿ ತಮ್ಮ ಪಿತೃಗಳು ಮಾಡಿದ ಸಮಸ್ತ ಪಾಪಗಳಿ ಗಿಂತ ತಾವು ಹೆಚ್ಚಾಗಿ ಪಾಪಮಾಡಿ ಆತನಿಗೆ ರೋಷ ವನ್ನೆಬ್ಬಿಸಿದರು.
ಇಲ್ಲವೆ ಬಂಗಾರ ಇರುವ ತಮ್ಮ ಮನೆಗಳನ್ನು ಬೆಳ್ಳಿಯಿಂದ ತುಂಬಿಸುವಂಥ ಪ್ರಧಾನರ ಸಂಗಡ ಆಗಲೇ ನನಗೆ ಶಾಂತಿಯಾಗಿರುವದು.
ಆಪತ್ತಿನ ದಿವಸಕ್ಕೆ ಕೆಟ್ಟ ವನು ಇರಿಸಲ್ಪಟ್ಟಿದ್ದಾನೆ. ಉಗ್ರದ ದಿವಸಕ್ಕೆ ಹೊರಗೆ ತರಲ್ಪಡುವನು.
ಅವರು ತಮ್ಮ ಸಂಪತ್ತಿನಲ್ಲಿ ಭರವಸವಿಟ್ಟು ಅಧಿಕ ಐಶ್ವರ್ಯಗಳಲ್ಲಿ ಹೆಚ್ಚಳಪಡುವರು.
ಆದದರಿಂದ ದೇವರು ಅದೇ ರೀತಿಯಲ್ಲಿ ನಿನ್ನನ್ನು ಸದಾಕಾಲಕ್ಕೂ ನಾಶಮಾಡಿ, ತೆಗೆದುಬಿಡುವನು. ನಿನ್ನ ವಾಸಸ್ಥಳದಿಂದ ಕಿತ್ತುಹಾಕುವನು; ಜೀವಿತರ ದೇಶ ದೊಳಗಿಂದ ನಿನ್ನನ್ನು ಬೇರುಸಹಿತ ಕೀಳುವನು. ಸೆಲಾ.
ತಮ್ಮ ಉನ್ನತ ಸ್ಥಳಗಳಿಂದ ಆತನಿಗೆ ಕೋಪವನ್ನೆಬ್ಬಿಸಿ ಕೆತ್ತಿದ ತಮ್ಮ ವಿಗ್ರಹಗಳಿಂದ ಆತನಿಗೆ ರೋಷವನ್ನೆಬ್ಬಿಸಿದರು.
ಕರ್ತನೇ, ನೀನು ಯಾವಾಗಲೂ ಕೋಪ ಮಾಡು ವದೂ ನಿನ್ನ ರೋಷವು ಬೆಂಕಿಯ ಹಾಗೆ ಉರಿಯು ವದೂ ಎಷ್ಟರವರೆಗೆ?
ಉಗ್ರತೆಯ ದಿನದಲ್ಲಿ ಐಶ್ವರ್ಯವು ಲಾಭಕರವಾಗುವದಿಲ್ಲ; ನೀತಿಯು ಮರಣ ದಿಂದ ಬಿಡಿಸುತ್ತದೆ.
ಧನವಂತನ ಐಶ್ವರ್ಯವು ಅವನಿಗೆ ಬಲವಾದ ಪಟ್ಟಣವೂ ತನ್ನ ಅಭಿಪ್ರಾಯ ದಲ್ಲಿ ಎತ್ತರವಾದ ಗೋಡೆಯೂ ಆಗಿದೆ.
ಆದದರಿಂದ ಸೈನ್ಯಗಳ ಕರ್ತನೂ ಇಸ್ರಾಯೇಲಿನ ಪರಾಕ್ರಮಿಯೂ ಆದ ಕರ್ತನು ಹೇಳುವದೇನಂದರೆ ಹಾ, ನನ್ನ ವಿರೋಧಿಗಳಿಂದ ನಾನು ಶಾಂತನಾಗಿರು ವೆನು, ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು.
ಆ ದಿನದಲ್ಲಿ ಮನುಷ್ಯನು ಅಡ್ಡಬೀಳುವದಕ್ಕೋಸ್ಕರ ತಾವು ಮಾಡಿ ಕೊಂಡ ಬೆಳ್ಳಿಯ ವಿಗ್ರಹಗಳನ್ನೂ ಚಿನ್ನದ ವಿಗ್ರಹ ಗಳನ್ನೂ ಇಲಿ ಬಾವಲಿಗಳಿಗೆ ಬಿಸಾಡಿಬಿಡುವನು.
ವಿಚಾರಣೆಯ ದಿನದಲ್ಲಿಯೂ ದೂರ ದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡು ವಿರಿ? ಸಹಾಯಕ್ಕಾಗಿ ನೀವು ಯಾರ ಬಳಿಗೆ ಓಡುವಿರಿ? ನಿಮ್ಮ ವೈಭವವನ್ನು ಎಲ್ಲಿ ಬಿಡುವಿರಿ?
ಇಸ್ರಾಯೇಲಿನ ಬೆಳಕು ಬೆಂಕಿಯಾಗುವದು, ಅದರ ಪರಿಶುದ್ಧನು ಜ್ವಾಲೆ ಯಂತಿರುವನು; ಅದು ಒಂದೇ ದಿನದಲ್ಲಿ ಅವನ ಮುಳ್ಳು ದತ್ತೂರಿಗಳನ್ನು ದಹಿಸಿನುಂಗಿಬಿಡುವದು;
ಇಗೋ, ಕರ್ತನು ಭೂಮಿಯನ್ನು (ಲೋಕವನ್ನು) ಬರಿದುಮಾಡಿ ನಿರ್ಜನ ಪ್ರದೇಶ ವನ್ನಾಗಿ ಮಾಡಿ ತಲೆಕೆಳಕಾಗಿ ತಿರುಗಿಸಿ ಅದರ ನಿವಾಸಿ ಗಳನ್ನು ಚದರಿಸಿಬಿಡುವವನಾಗಿದ್ದಾನೆ.
ನಾನು ನೋಡಿದೆನು, ಇಗೋ, ಫಲವುಳ್ಳ ಸ್ಥಳವು ಅರಣ್ಯವಾಯಿತು; ಅದರ ಪಟ್ಟಣಗಳೆಲ್ಲಾ ಕರ್ತನ ಮುಂದೆಯೂ ಆತನ ಕೋಪದ ಉರಿಯ ಮುಂದೆಯೂ ಕೆಡವಲ್ಪಟ್ಟಿದ್ದವು.
ಕರ್ತನು ಹೀಗೆ ಹೇಳಿದ್ದಾನೆ--ದೇಶವೆಲ್ಲಾ ಹಾಳಾಗುವದು; ಆದಾಗ್ಯೂ ನಾನು ಅದನ್ನು ಪೂರ್ಣ ಮಾಡಿಲ್ಲ.
ಸುಗ್ಗಿ ಹೋಯಿತು, ಬೇಸಿಗೆಕಾಲ ತೀರಿತು; ಆದರೆ ನಾವು ರಕ್ಷಿಸಲ್ಪಡಲಿಲ್ಲ.
ನೀವು ಅವರಿಗೆ ಹೀಗೆ ಹೇಳಬೇಕು--ಆಕಾಶ ಗಳನ್ನೂ ಭೂಮಿಯನ್ನೂ ಸೃಷ್ಟಿಸದ ದೇವರುಗಳು ಭೂಮಿಯ ಮೇಲಿನಿಂದಲೂ ಈ ಆಕಾಶಗಳ ಕೆಳಗಿ ನಿಂದಲೂ ನಾಶವಾಗುವವು.
ಕರ್ತನೇ, ಮನುಷ್ಯನ ಮಾರ್ಗವು ತನ್ನಲ್ಲಿಲ್ಲವೆಂದೂ ತನ್ನ ಹೆಜ್ಜೆ ನೆಟ್ಟಗೆ ಮಾಡುವದು ನಡೆಯುವ ಮನುಷ್ಯನದಲ್ಲವೆಂದೂ ಬಲ್ಲೆನು.
ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು; ಅವರ ಬಂಗಾರವು ತೆಗೆದುಹಾಕಲ್ಪಡುವದು, ಅವರ ಬೆಳ್ಳಿ ಬಂಗಾರಗಳು ಕರ್ತನ ಕೋಪದ ದಿವಸದಲ್ಲಿ ಅವರನ್ನು ತಪ್ಪಿಸಲಾರವು ಮತ್ತು ಅವರ ಪ್ರಾಣಗಳನ್ನು ತೃಪ್ತಿಪಡಿ ಸುವದಿಲ್ಲ. ಅವರ ಕರುಳುಗಳನ್ನು ತುಂಬಿಸುವದಿಲ್ಲ. ಯಾಕಂದರೆ ಅದು ಅವರ ಅಕ್ರಮಗಳ ಎಡತಡೆಯ ಭಾಗವಾಗಿದೆ.
ಕೈಯ ಹಾಗಿರುವ ಹಸ್ತವನ್ನು ಚಾಚಿ, ನನ್ನ ತಲೆಯ ಕೂದಲಿನಿಂದ ನನ್ನನ್ನು ಹಿಡಿ ದನು; ಆಗ ಆತ್ಮನು ನನ್ನನ್ನು ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ಎತ್ತಿ ನನ್ನನ್ನು ದೇವರದರ್ಶನಗಳಲ್ಲಿ ಯೆರೂ ಸಲೇಮಿಗೆ ಉತ್ತರದ ಕಡೆಗೆ ಎದುರಾಗಿರುವ ಒಳ ಬಾಗಲಿನ ಕಡೆಗೆ ಅಸೂಯೆ ಎಬ್ಬಿಸುವ ವಿಗ್ರಹವು ಇದ್ದಲ್ಲಿಗೆ ತೆಗೆದುಕೊಂಡು ಹೋದನು.
ದಾಂಪತ್ಯವನ್ನು ಮುರಿದು ರಕ್ತ ಸುರಿಸುವಂಥ ಹೆಂಗಸರಿಗೆ ವಿಧಿಸುವಂಥ ತಕ್ಕ ದಂಡನೆಗಳನ್ನು ನಿನಗೂ ವಿಧಿಸಿ, ಕೋಪೋದ್ರೇಕದಿಂದಲೂ ರೋಷಾವೇಶ ದಿಂದಲೂ ನಿನಗೆ ರಕ್ತವನ್ನು ಸುರಿಸುವೆನು.
ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿಶ್ಚಯವಾಗಿ ನನ್ನ ರೋಷದ ಬೆಂಕಿ ಯಿಂದ ಅನ್ಯಜನಾಂಗಗಳಲ್ಲಿ ಉಳಿದವರಿಗೂ ಎಲ್ಲಾ ಎದೋಮಿಗೆ ವಿರುದ್ಧವಾಗಿ ನಾನು ಮಾತನಾಡಿದ್ದೇನೆ; ಅವರ ಸಂಪೂರ್ಣ ಹೃದಯದ ಸಂತೋಷದಿಂದಲೂ ತಮ್ಮ ಹಗೆಯ ಮನೋಭಾವದಿಂದಲೂ ನನ್ನ ದೇಶ ವನ್ನು ಕೊಳ್ಳೆಯಾಗಿ ಹೊರಗೆ ಹಾಕುವ ಹಾಗೆ ತಮಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದಾರೆ.
ಕರ್ತನು ಹೇಳುವದೇನಂದರೆ--ನಾನು ದೇಶ ದೊಳಗಿಂದ ಎಲ್ಲವುಗಳನ್ನು ಸಂಪೂರ್ಣವಾಗಿ ನಾಶ ಮಾಡುವೆನು.
ಮಕ್ತೇಷಿನ ನಿವಾಸಿ ಗಳೇ, ಗೋಳಾಡಿರಿ; ವರ್ತಕರ ಜನರೆಲ್ಲಾ ಸಂಹಾರ ವಾದರು; ಬೆಳ್ಳಿ ಹೊತ್ತವರೆಲ್ಲರೂ ಕಡಿದುಬಿಡಲ್ಪಟ್ಟಿ ದ್ದಾರೆ.
ಆ ದಿನವು ರೌದ್ರದ ದಿನವು, ಇಕ್ಕಟ್ಟು ಸಂಕಟಗಳ ದಿನವು, ಹಾಳು ಪಾಳುಗಳ ದಿನವು, ಕತ್ತಲೆ ಮೊಬ್ಬುಗಳ ದಿನವು, ಮೇಘ ಮೋಡಗಳ ದಿನವು.
ಆದದರಿಂದ ನಾನು ಕೊಳ್ಳೆಗೆ ಏಳುವ ದಿನದ ವರೆಗೂ ನನಗೆ ಕಾದುಕೊಳ್ಳಿರಿ; ಜನಾಂಗಗಳನ್ನು ಕೂಡಿಸುವದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವದಕ್ಕೂ ತೀರ್ಮಾನಿಸಿಕೊಂಡಿದ್ದೇನೆ; ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸ ಲ್ಪಡುವದು.
ಒಬ್ಬ ಮನುಷ್ಯನು ಇಡೀ ಲೋಕವನ್ನು ಸಂಪಾದಿಸಿ ಕೊಂಡು ತನ್ನ ಆತ್ಮವನ್ನು ನಷ್ಟಪಡಿಸಿ ಕೊಂಡರೆ ಅವನಿಗೆ ಲಾಭವೇನು? ಇಲ್ಲವೆ ತನ್ನ ಆತ್ಮಕ್ಕೆ ಬದಲಾಗಿ ಒಬ್ಬ ಮನುಷ್ಯನು ಏನು ಕೊಟ್ಟಾನು?
ನಾನು ನನ್ನ ಆತ್ಮಕ್ಕೆ--ಆತ್ಮವೇ, ಅನೇಕ ವರುಷ ಗಳಿಗಾಗಿ ನಿನಗೆ ಬಹಳ ಸರಕು ಇಡಲ್ಪಟ್ಟಿದೆ; ನೀನು ವಿಶ್ರಮಿಸಿಕೋ, ತಿನ್ನು, ಕುಡಿ ಆನಂದವಾಗಿರು ಎಂದು ಹೇಳುವೆನು ಎಂದು ಅಂದುಕೊಂಡನು.
ಇದಾದ ಮೇಲೆ ಆ ಭಿಕ್ಷುಕನು ಸತ್ತನು; ದೂತರು ಅವನನ್ನು ಅಬ್ರಹಾಮನ ಎದೆಗೆ ತೆಗೆದುಕೊಂಡು ಹೋದರು; ಐಶ್ವರ್ಯವಂತನು ಸಹ ಸತ್ತನು; ಅವನನ್ನು ಹೂಣಿ ಟ್ಟರು.
ಕರ್ತ ನನ್ನು ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೇನು?