ಕರ್ತನು ಹೇಳುವದೇನಂದರೆ--ನಾನು ದೇಶ ದೊಳಗಿಂದ ಎಲ್ಲವುಗಳನ್ನು ಸಂಪೂರ್ಣವಾಗಿ ನಾಶ ಮಾಡುವೆನು.
Cross references
ಇದಲ್ಲದೆ ಕರ್ತನು--ನಾನು ಸೃಷ್ಟಿಸಿದ ಮನುಷ್ಯ ನನ್ನೂ ಮನುಷ್ಯನ ಸಂಗಡ ಸಕಲ ಮೃಗ, ಕ್ರಿಮಿ, ಆಕಾಶದ ಪಕ್ಷಿಗಳನ್ನೂ ಭೂಮುಖದಿಂದ ನಾಶಮಾಡು ವೆನು; ನಾನು ಅವರನ್ನು ಉಂಟುಮಾಡಿದ್ದಕ್ಕೆ ಅದು ಪಶ್ಚಾತ್ತಾಪಪಡುವಂತೆ ಆಯಿತು ಅಂದನು.
ಅಂದರೆ ಯೆಹೂದದ ಅರಸನು ಓದಿದ ಪುಸ್ತಕದ ಮಾತುಗ ಳನ್ನೆಲ್ಲಾ ಬರಮಾಡುವೆನು.
ಅವರು ತಮ್ಮ ಪಿತೃಗಳ ದೇವರಾದ ಕರ್ತನನ್ನು ಬಿಟ್ಟದ್ದರಿಂದ ಅರಾಮ್ಯರು ಅಲ್ಪಜನವಾದ ಸೈನ್ಯದ ಸಂಗಡ ಬಂದಾಗ ಕರ್ತನು ಬಹು ಅಧಿಕ ವಾದ ಸೈನ್ಯವನ್ನು ಅವರ ಕೈಯಲ್ಲಿ ಒಪ್ಪಿಸಿದನು. ಹೀಗೆ ಅವರು ಯೆಹೋವಾಷನಿಗೆ ವಿರೋಧವಾಗಿ ನ್ಯಾಯ ತೀರ್ವಿಕೆ ಮಾಡಿದರು. ಅವನು ಕಠಿಣ ರೋಗದಲ್ಲಿ ಬಿದ್ದಿರುವಾಗ ಅವನನ್ನು ಬಿಟ್ಟುಹೋದರು.
ದೇಶವು ಎಪ್ಪತ್ತು ವರುಷ ತೀರುವ ಪರ್ಯಂತರ ಹಾಳಾಗಿದ್ದು ಸಬ್ಬತ್ತನ್ನು ಅನುಭವಿಸುತ್ತಾ ಇತ್ತು.
ಆಗ ನಾನು ಕರ್ತನೇ, ಇದು ಎಷ್ಟರ ವರೆಗೆ ಅಂದೆನು. ಅದಕ್ಕೆ ಆತನು--ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಮನುಷ್ಯ ನಿಲ್ಲದೆ ದೇಶವು ಸಂಪೂರ್ಣವಾಗಿ ಹಾಳಾಗುವ ವರೆಗೆ
ಇಗೋ, ನೀವು ಪ್ರಯೋಜನವಿಲ್ಲದ ಸುಳ್ಳಾದ ಮಾತುಗಳಲ್ಲಿ ನಂಬಿಕೆ ಇಡುತ್ತೀರಿ.
ಆದದರಿಂದ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--
ಕರ್ತನು ತಾನು ಸಂಕಲ್ಪಿಸಿದ್ದನ್ನು ಮಾಡಿದ್ದಾನೆ; ಆತನು ಪುರಾತನ ಕಾಲದ ದಿನಗಳಲ್ಲಿ ಆಜ್ಞಾಪಿಸಿದ ತನ್ನ ವಾಕ್ಯವನ್ನು ಪೂರೈಸಿದ್ದಾನೆ. ಆತನು ಕೆಡವಿ ಕನಿಕರಿಸಲಿಲ್ಲ; ಆತನು ನಿನ್ನ ಶತ್ರುವನ್ನು ನಿನ್ನ ವಿಷಯವಾಗಿ ಸಂತೋಷಪಡುವ ಹಾಗೆ ಮಾಡಿ ಅವನ ಕೊಂಬನ್ನು ಎತ್ತಿದ್ದಾನೆ.
ನೀನು ಅವರಿಗೆ ಹೇಳಬೇಕಾದ ದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನನ್ನ ಜೀವದಾಣೆ, ನಿಶ್ಚಯವಾಗಿ ಹಾಳು ಸ್ಥಳಗಳಲ್ಲಿರುವವರು ಕತ್ತಿಯಿಂದ ಬೀಳುವರು; ಬಯಲಿ ನಲ್ಲಿರುವವರಿಗೆ ಮೃಗಗಳನ್ನು ಆಹಾರವನ್ನಾಗಿ ಕೊಡು ತ್ತೇನೆ; ಕೋಟೆಗಳಲ್ಲಿಯೂ ಗುಹೆಗಳಲ್ಲಿಯೂ ಇರುವ ವರು ವ್ಯಾಧಿಗಳಿಂದ ಸಾಯುವರು.
ಆದರೂ ದೇಶವು ಅದರ ನಿವಾಸಿಗಳ ನಿಮಿತ್ತ ಅವರ ದುಷ್ಕ್ರಿಯೆಗಳ ಫಲದಿಂದ ಹಾಳಾಗುವದು.