ಕರ್ತ ನಾದ ದೇವರ ಮುಂದೆ ಮೌನವಾಗಿರ್ರಿ: ಕರ್ತನ ದಿನವು ಸವಿಾಪವಾಗಿದೆ; ಕರ್ತನು ಬಲಿಯನ್ನು ಸಿದ್ಧ ಮಾಡಿದ್ದಾನೆ; ತನ್ನ ಅತಿಥಿಗಳನ್ನು ಆಹ್ವಾನಿಸಿದ್ದಾನೆ.
Cross references
ಆತನು ತನ್ನ ಪರಿಶುದ್ಧರ ಕಾಲುಗಳನ್ನು ಕಾಯು ವನು; ಆದರೆ ದುಷ್ಟರು ಕತ್ತಲಲ್ಲಿ ಮೌನವಾಗಿರುವರು; ಶಕ್ತಿಯಿಂದ ಒಬ್ಬನೂ ಜಯಿಸನು.
ಅದಕ್ಕವನು--ಸಮಾಧಾನವೇ; ಕರ್ತನಿಗೆ ಬಲಿಯನ್ನು ಅರ್ಪಿಸ ಬಂದೆನು. ನೀವು ನಿಮ್ಮನ್ನು ಶುದ್ಧಮಾಡಿ ಕೊಂಡು ನನ್ನ ಸಂಗಡ ಯಜ್ಞಅರ್ಪಿಸುವದಕ್ಕೆ ಬನ್ನಿರಿ ಅಂದನು. ಇಷಯನನ್ನು ಅವನ ಮಕ್ಕಳನ್ನು ಶುದ್ಧಿಮಾಡಿ ಅವರನ್ನು ಯಜ್ಞ ಅರ್ಪಿಸುವದಕ್ಕೆ ಕರೆದನು.
ದಾವೀದನು ಇರುವ ಸ್ಥಳವು ಬರಿದಾಗಿತ್ತು. ಆದಾಗ್ಯೂ ಸೌಲನು ಆ ದಿವಸದಲ್ಲಿ ಅವನನ್ನು ಕುರಿತು ಏನೂ ಹೇಳದೆ ಅವನಿಗೆ ಏನಾದರೂ ಸಂಭವಿಸಿರಬೇಕು; ಅವನು ಅಶುಚಿಯಾಗಿದ್ದಾನೆ, ನಿಶ್ಚಯವಾಗಿ ಅಶುಚಿಯಾಗಿದ್ದಾನೆ ಎಂದು ಅಂದುಕೊಂಡನು.
ಇಗೋ, ನೀಚನಾಗಿದ್ದೇನೆ; ನಿನಗೆ ಏನು ಪ್ರತ್ಯುತ್ತರ ಕೊಡಲಿ? ನನ್ನ ಕೈಯಿಂದ ಬಾಯಿ ಮುಚ್ಚಿಕೊಳ್ಳುತ್ತೇನೆ.
ಶಾಂತ ವಾಗಿರ್ರಿ, ನಾನೇ ದೇವರಾಗಿದ್ದೇನೆಂದು ತಿಳುಕೊಳ್ಳಿರಿ; ಜನಾಂಗಗಳಲ್ಲಿ ಉನ್ನತನಾಗಿರುವೆನು; ಭೂಮಿಯಲ್ಲಿ ನಾನು ಹೆಚ್ಚಿಸಲ್ಪಡುವೆನು.ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
ಆಕಾಶದಿಂದ ನ್ಯಾಯತೀರ್ವಿಕೆಯನ್ನು ಕೇಳಮಾಡಿದಿ.
ಜ್ಞಾನವೆಂಬಾಕೆಯು ತನ್ನ ಮನೆಯನ್ನು ಕಟ್ಟಿ ಕೊಂಡಿದ್ದಾಳೆ; ಆಕೆಯು ತನ್ನ ಏಳು ಕಂಬ ಗಳನ್ನು ಕೆತ್ತಿಸಿದ್ದಾಳೆ.
ಸೈನ್ಯಗಳ ಕರ್ತನ ದಿನವು ಗರ್ವ ಮತ್ತು ಅಹಂಭಾವದಿಂದ ತುಂಬಿರು ವವರ ಮೇಲೆಯೂ ತನ್ನನ್ನು ಹೆಚ್ಚಿಸಿಕೊಂಡಿರುವ ಪ್ರತಿಯೊಬ್ಬನ ಮೇಲೆಯೂ ಬರುವದು; ಆತನು ಅವರನ್ನು ತಗ್ಗಿಸುವನು.
ಆಗ ನಾನು--ಅಯ್ಯೋ, ನಾನು ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು, ನಾನು ಹೊಲಸು ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು; ಆದರೂ ಸೈನ್ಯಗಳ ಕರ್ತನಾದ ಅರಸನನ್ನು ನನ್ನ ಕಣ್ಣುಗಳು ಕಂಡವಲ್ಲಾ ಅಂದೆನು.
ನೀವು ಗೋಳಾ ಡಿರಿ, ಕರ್ತನ ದಿನವು ಸವಿಾಪವಾಯಿತು; ಅದು ಸರ್ವಶಕ್ತನಿಂದ ನಾಶನದಂತೆ ಬರುವದು.
ಆದಾಗ್ಯೂ ನಾನು ಅರೀಯೇಲಿಗೆ ಇಕ್ಕಟ್ಟನ್ನು ಉಂಟುಮಾಡುವೆನು. ಅಲ್ಲಿ ಕಷ್ಟವೂ ದುಃಖವೂ ಇರುವದು.
ನನ್ನ ಖಡ್ಗವು ಪರಲೋಕದಲ್ಲಿ ರೋಷ ಪಾನಮಾಡುವದು; ಇಗೋ, ಅದು ಎದೋ ಮಿನ ಮತ್ತು ನಾನು ಶಪಿಸಿದ ಜನರ ಮೇಲೆ ನ್ಯಾಯ ತೀರಿಸುವದಕ್ಕಾಗಿ ಕೆಳಗೆ ಇಳಿದು ಬರುವದು.
ಕರ್ತನ ಖಡ್ಗವು ರಕ್ತದಿಂದ ತುಂಬಿದೆ; ಅದು ಕುರಿಹೋತಗಳ ರಕ್ತದಿಂದಲೂ ಟಗರುಗಳ ಮೂತ್ರಪಿಂಡದ ಕೊಬ್ಬಿ ನಿಂದಲೂ ಪುಷ್ಟಿಯಾಯಿತು; ಯಾಕಂದರೆ ಕರ್ತನು ಬೊಚ್ರದಲ್ಲಿ ಬಲಿಯನ್ನೂ ಎದೋಮಿನ ದೇಶದಲ್ಲಿ ದೊಡ್ಡ ಕೊಲೆಯನ್ನೂ ಉಂಟು ಮಾಡಿದ್ದಾನೆ.
ಓ ದೇಶದಲ್ಲಿ ವಾಸಿಸುವವನೇ, ನಿನಗಾಗಿ ಮುಂಜಾನೆ ಬಂತು, ಕಾಲವು ಬಂತು, ತೊಂದರೆಯ ದಿನವು ಹತ್ತಿರವಾಯಿತು ಮತ್ತು ಪರ್ವತಗಳ ಆರ್ಭಟದ ಧ್ವನಿ ಇಲ್ಲ.
ಇಗೋ, ಆ ದಿನವು ಬಂತು, ಮುಂಜಾನೆ ಹೊರಟುಹೋಯಿತು. ಕೋಲು ಚಿಗು ರಿತು, ಗರ್ವ ಅರಳಿತು.
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಮನುಷ್ಯಪುತ್ರನೇ, ನೀನು ಪ್ರತಿಯೊಂದು ರೀತಿಯ ಪಕ್ಷಿಗಳಿಗೂ ಮತ್ತು ಬಯಲಿನ ಪ್ರತಿಯೊಂದು ಪ್ರಾಣಿ ಗಳಿಗೂ ಮಾತನಾಡಿ--ಒಟ್ಟಾಗಿ ಬನ್ನಿರಿ. ನಾನು ನಿಮ ಗಾಗಿ ಅರ್ಪಿಸುವ ನನ್ನ ಯಜ್ಞಕ್ಕೋಸ್ಕರ ಪ್ರತಿಯೊಂದು ಕಡೆಯಿಂದಲೂ ಸೇರಿರಿ; ಇದು ಇಸ್ರಾಯೇಲ್ ಪರ್ವತಗಳ ಮೇಲೆ ನಡೆಯುವ ಮಹಾಯಜ್ಞವಾಗಿದೆ. ನೀವು ಮಾಂಸವನ್ನು ತಿಂದು ರಕ್ತವನ್ನು ಕುಡಿಯ ಬಹುದು.
ಆ ದಿನಕ್ಕಾಗಿ ಅಯ್ಯೋ, ಯಾಕಂದರೆ ಕರ್ತನ ದಿನವು ಸವಿಾಪವಾಗಿದೆ; ಸರ್ವಶಕ್ತನ ಕಡೆಯಿಂದ ನಾಶದಂತೆ ಬರುತ್ತದೆ.
ನೀವು ಚೀಯೋನಿನಲ್ಲಿ ಕೊಂಬುಊದಿರಿ, ನನ್ನ ಪರಿಶುದ್ಧ ಪರ್ವತದಲ್ಲಿ ಆರ್ಭಟಿಸಿರಿ; ದೇಶದ ನಿವಾಸಿಗಳೆಲ್ಲರೂ ನಡುಗಲಿ; ಯಾಕಂದರೆ ಕರ್ತನ ದಿನವು ಬರುತ್ತದೆ; ಅದು ಸವಿಾಪ ವಾಗಿದೆ.
ಕತ್ತಲೆಯೂ ಮೊಬ್ಬೂ ಉಳ್ಳ ದಿವಸವೂ; ಮೇಘವೂ ಕಾರ್ಗತ್ತಲೂ ಉಳ್ಳ ದಿವಸ ವೂ; ಬೆಟ್ಟಗಳ ಮೇಲೆ ಹಾಸಿರುವ ಉದಯದ ಹಾಗಿದೆ. ದೊಡ್ಡ ಬಲವಾದ ಜನವು; ಅದರ ಹಾಗೆ ಎಂದೂ ಇದ್ದದ್ದಿಲ್ಲ; ಅದರ ತರುವಾಯ ತಲತಲಾಂತರಗಳ ವರುಷಗಳ ವರೆಗೆ ಇನ್ನು ಇರುವದೇ ಇಲ್ಲ.
ಕರ್ತನು ತನ್ನ ಸೈನ್ಯದ ಮುಂದೆ ತನ್ನ ಶಬ್ದವನ್ನು ಮಾಡುತ್ತಾನೆ; ಆತನ ದಂಡು ಬಹು ದೊಡ್ಡದಾಗಿದೆ; ಹೌದು, ಬಲವಾದ ದ್ದಾಗಿದ್ದು ಆತನ ವಾಕ್ಯವನ್ನು ನಡಿಸುತ್ತದೆ; ಕರ್ತನ ದಿನವು ದೊಡ್ಡದು, ಮಹಾ ಭಯಂಕರವಾದದ್ದು, ಅದನ್ನು ತಾಳಿಕೊಳ್ಳುವವನ್ಯಾರು?
ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ, ಸೂರ್ಯನು ಕತ್ತಲೆಗೂ ಚಂದ್ರನು ರಕ್ತಕ್ಕೂ ಮಾರ್ಪಡುವವು.ಆಗುವದೇನಂದರೆ--ಕರ್ತನ ಹೆಸರನ್ನು ಹೇಳಿ ಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು; ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಕರ್ತನು ಕರೆಯುವ ಉಳಿದವರಲ್ಲಿಯೂ ಕರ್ತನು ಹೇಳಿದ ಪ್ರಕಾರ ಬಿಡುಗಡೆಯು ಇರುವದು.
ಕರ್ತನ ದಿನವನ್ನು ಅಪೇಕ್ಷಿಸುವ ನಿಮಗೆ ಅಯ್ಯೋ! ನಿಮ್ಮ ಅಂತ್ಯವೇನಾಗುವದು? ಅಯ್ಯೋ, ಕರ್ತನ ದಿನವು ನಿಮಗೆ ಬೆಳಕಲ್ಲ, ಕತ್ತಲೆಯೇ.
ಒಬ್ಬ ನೆಂಟನೂ ಅವನನ್ನು ಸುಡುವವನೂ ಮನೆಯೊಳಗಿಂದ ಅವನ ಎಲುಬುಗಳನ್ನು ತೆಗೆದುಕೊಂಡು ಹೋಗುವದಕ್ಕೆ ಅವ ನನ್ನು ಎತ್ತಿಕೊಳ್ಳುವಾಗ ಮನೆಯ ಒಳಭಾಗದಲ್ಲಿ ಇರುವ ವರಿಗೆ--ಇನ್ನೂ ಯಾರಾದರೂ ನಿನ್ನ ಬಳಿಯಲ್ಲಿ ಇದ್ದಾರೆಯೇ? ಎಂದು ಹೇಳುವನು; ಆಗ ಅವನು--ಯಾರೂ ಇಲ್ಲವೆಂದರೆ ಇವನು--ಸುಮ್ಮನಿರು, ನಾವು ಕರ್ತನ ಹೆಸರನ್ನು ಜ್ಞಾಪಕ ಮಾಡಿಕೊಳ್ಳಬಾರದೆಂದು ಹೇಳುವನು.
ಆ ದಿನದಲ್ಲಿ ದೇವಾಲಯದ ಹಾಡುಗಳು ಕಿರಿಚಾಟವಾ ಗುವವು ಎಂದು ಕರ್ತನಾದ ದೇವರು ಹೇಳುತ್ತಾನೆ; ಎಲ್ಲಾ ಕಡೆಗಳಲ್ಲಿ ಅನೇಕ ಹೆಣಗಳು ಬಿದ್ದಿರುವವು; ಮೌನವಾಗಿ ಅವುಗಳನ್ನು ಬಿಸಾಡುವರು.
ಆದರೆ ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಆತನ ಮುಂದೆ ಭೂಮಿಯೆಲ್ಲಾ ಮೌನವಾಗಿರಲಿ.
ಕರ್ತನ ಮಹಾದಿನವು ಸವಿಾಪವಾಗಿದೆ, ಅದು ಬಹು ತ್ವರೆಪಡುತ್ತದೆ; ಕರ್ತನ ದಿನದ ಶಬ್ದವು ತ್ವರೆ ಪಡುತ್ತದೆ; ಶೂರನು ಅಲ್ಲಿ ಘೋರವಾಗಿ ಗೋಳಿಡು ವನು.
ಓ ಮನುಷ್ಯರೇ, ನೀವೆಲ್ಲಾ ಕರ್ತನ ಮುಂದೆ ಮೌನ ವಾಗಿರ್ರಿ; ಆತನು ತನ್ನ ಪರಿಶುದ್ಧ ನಿವಾಸದೊಳಗಿಂದ ಎದ್ದಿದ್ದಾನೆ.
ಇಗೋ, ಕರ್ತನ ದಿನವು ಬರುತ್ತದೆ.
ಇಗೋ, ಆ ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ಆ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಅವನು ತಿರಿಗಿ ಬೇರೆ ಸೇವಕರನ್ನು ಕಳುಹಿಸಿ ಅವರಿಗೆ--ಇಗೋ, ನಾನು ಔತಣವನ್ನು ಸಿದ್ಧಮಾಡಿದ್ದೇನೆ, ನನ್ನ ಎತ್ತುಗಳೂ ಕೊಬ್ಬಿದ ಪಶುಗಳೂ ಕೊಯ್ಯಲ್ಪಟ್ಟಿವೆ ಮತ್ತು ಎಲ್ಲವು ಗಳು ಸಿದ್ಧವಾಗಿವೆ; ಮದುವೆಗೆ ಬನ್ನಿರಿ ಎಂದು ಕರೆಯಲ್ಪಟ್ಟವರಿಗೆ ಹೇಳಿರಿ ಅಂದನು.
ಆಗ ಆತನು ಅವನಿಗೆ--ಒಬ್ಬಾನೊಬ್ಬ ಮನುಷ್ಯನು ಒಂದು ದೊಡ್ಡ ಔತಣಮಾಡಿಸಿ ಅನೇಕರನ್ನು ಕರೆದನು.
ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.
ಆದರೆ ಓ ಮನುಷ್ಯನೇ, ದೇವರಿಗೆ ಎದುರು ಮಾತನಾಡುವದಕ್ಕೆ ನೀನು ಯಾರು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ--ನನ್ನನ್ನು ಹೀಗೇಕೆ ಮಾಡಿದೆ ಎಂದು ಕೇಳುವದುಂಟೇ?
ನಿಮ್ಮ ಸೈರಣೆಯು ಎಲ್ಲಾ ಮನುಷ್ಯರಿಗೆ ಗೊತ್ತಾಗಲಿ; ಕರ್ತನು ಹತ್ತಿರವಾಗಿದ್ದಾನೆ.
ಬೆಳಕಿ ನಲ್ಲಿರುವ ಪರಿಶುದ್ದರ ಬಾಧ್ಯತೆಯಲ್ಲಿ ಪಾಲುಗಾರ ರಾಗುವದಕ್ಕೆ ನಮ್ಮನ್ನು ಯೋಗ್ಯರನ್ನಾಗಿ ಮಾಡಿದ ತಂದೆಗೆ ಕೃತಜ್ಞತಾಸ್ತುತಿ ಮಾಡುವವರಾಗಿರಬೇಕೆಂತಲೂ ನಾನು ಆಶಿಸುತ್ತೇನೆ.
ಆದರೂ ಕರ್ತನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗು ವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು; ಭೂಮಿಯೂ ಅದರಲ್ಲಿ ರುವ ಕೆಲಸಗಳೂ ಸುಟ್ಟುಹೋಗುವವು.
ಆಮೇಲೆ ಒಬ್ಬ ದೂತನು ಸೂರ್ಯನಲ್ಲಿ ನಿಂತಿರುವದನ್ನು ನಾನು ಕಂಡೆನು. ಅವನು ಮಹಾ ಶಬ್ದದಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ--ಬನ್ನಿರಿ, ಮಹಾ ದೇವರ ಭೋಜನಕ್ಕೆ ಕೂಡಿಕೊಳ್ಳಿರಿ,