ಆದದರಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೇಳು ವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ಮೋವಾಬು ಸೊದೋಮಿನ ಹಾಗಾಗುವದು; ಅಮ್ಮೋ ನನ ಮಕ್ಕಳು ಗೊಮೋರದ ಹಾಗಾಗುವರು; ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಣಿಗಳುಳ್ಳಂಥ ನಿತ್ಯವಾಗಿ ಹಾಳಾಗುವಂಥ ಸ್ಥಳವಾಗುವರು; ನನ್ನ ಜನರಲ್ಲಿ ಉಳಿದವರು ಅವರನ್ನು ಸುಲುಕೊಳ್ಳುವರು; ನನ್ನ ಜನರಲ್ಲಿ ಮಿಕ್ಕಾದವರು ಅವರನ್ನು ಸ್ವಾಧೀನ ಮಾಡಿಕೊಳ್ಳುವರು.
Cross references
ಆಗ ಕರ್ತನು ಸೊದೋಮ್ ಮತ್ತು ಗೊಮೋರದ ಮೇಲೆ ಗಂಧಕವನ್ನೂ ಬೆಂಕಿಯನ್ನೂ ಆಕಾಶದಿಂದ ಸುರಿಸಿದನು.
ಹೀಗೆ ಆತನು ಆ ಪಟ್ಟಣಗಳನ್ನೂ ಎಲ್ಲಾ ಮೈದಾನವನ್ನೂ ಪಟ್ಟಣಗಳ ಎಲ್ಲಾ ನಿವಾಸಿಗಳನ್ನೂ ಭೂಮಿಯ ಮೇಲೆ ಬೆಳೆದ ಬೆಳೆಯನ್ನೂ ಹಾಳುಮಾಡಿದನು.
ಆದಾಗ್ಯೂ ನನ್ನ ಜೀವದಾಣೆ, ಭೂಮಿಯೆಲ್ಲಾ ಕರ್ತನ ಮಹಿಮೆಯಿಂದ ತುಂಬಿರುವದು.
ಹೀಗೆ ನಿಮ್ಮ ತರುವಾಯ ಹುಟ್ಟುವ ನಿಮ್ಮ ಮಕ್ಕಳ ಮುಂದಿನ ಸಂತತಿಯೂ ದೂರ ದೇಶದಿಂದ ಬರುವ ಅನ್ಯನೂ ಆ ದೇಶದ ಬಾಧೆಗಳನ್ನೂ ಕರ್ತನು ಅದರಲ್ಲಿ ಬರಮಾಡಿದ ರೋಗಗಳನ್ನೂ ನೋಡಿ
ಕರ್ತನು ತನ್ನ ಕೋಪದಲ್ಲಿಯೂ ರೌದ್ರದಲ್ಲಿಯೂ ಕೆಡವಿ ಹಾಕಿದ ಸೊದೋಮ್ ಗೊಮೋರ ಅದ್ಮಾಚೆಬೋ ಯಾಮ್ ಇವುಗಳ ಹಾಗೆ ಆ ದೇಶವೆಲ್ಲಾ ಗಂಧಕವೂ ಉಪ್ಪೂ ಉರಿಯುತ್ತಾ ಬಿತ್ತಲ್ಪಡದೆ ಮೊಳೆಯದೆ ಯಾವ ಹುಲ್ಲನ್ನಾದರೂ ಬೆಳೆಸದೆ ಇರುವದನ್ನು ನೋಡಿ--
ಆದರೆ ಅವರು ಪಶ್ಚಿಮ ದಿಕ್ಕಿಗೆ ಫಿಲಿಷ್ಪಿಯರ ಹೆಗಲಿನ ಮೇಲೆ ಎರಗುವರು; ಅವರು ಜೊತೆಯಾಗಿ ಪೂರ್ವದವರನ್ನು ಹಾಳುಮಾಡುವರು; ಅವರು ಎದೋಮಿನ ಮತ್ತು ಮೋವಾಬಿನ ಮೇಲೆ ತಮ್ಮ ಕೈಯನ್ನು ಹಾಕುವರು; ಅಮ್ಮೋನ್ಯರ ಮಕ್ಕಳು ಅವರಿಗೆ ವಿಧೇಯರಾಗುವರು.
ರಾಜ್ಯಗಳ ಘನತೆಯೂ ಕಸ್ದೀಯರ ಶ್ರೇಷ್ಠವಾದ ಸೌಂದರ್ಯವೂ ಆದ ಬಾಬೆಲಿಗೆ ದೇವರು ಸೊದೋ ಮ್ ಗೊಮೋರಗಳನ್ನು ಕೆಡವಿಬಿಟ್ಟಂತೆ ಇದನ್ನು ಸಹ ಕೆಡವಿಬಿಡುವನು.
ಮೋವಾಬಿನ ವಿಷಯವಾದ ದೈವೋಕ್ತಿ. ಆ ರಾತ್ರಿಯಲ್ಲಿ ಮೋವಾಬಿನ ಆರ್ ಹಾಳಾಗಿ ನಿಶ್ಯಬ್ದವಾಯಿತು; ಆ ರಾತ್ರಿಯಲ್ಲಿ ಮೋವಾ ಬಿನ ಕಿರ್ ಹಾಳಾಗಿ ನಿಶ್ಯಬ್ಧವಾಯಿತು
ಈ ಪರ್ವತದಲ್ಲಿ ಕರ್ತನ ಕೈ ವಿಶ್ರ ಮಿಸಿಕೊಳ್ಳುವದು; (ನೆಲೆಯಾಗಿರುವದು) ಒಣ ಹುಲ್ಲ ನ್ನು ತಿಪ್ಪೆಗುಂಡಿಯಲ್ಲಿ ತುಳಿಯುವಂತೆ ಮೋವಾಬು ಆತನ ಕೆಳಗೆ ತುಳಿಯಲ್ಪಡುವದು.
ಪ್ರವಾಹಗಳು ಇಳಿಜಾರಾಗಿ ಮಾರ್ಪಡುವದೂ; ಅದರ ದೂಳು ಗಂಧಕವಾಗುವದು; ದೇಶವು ಉರಿ ಯುವ ಇಳಿಜಾರು ಪ್ರದೇಶವಾಗುವದು.
ನಿನ್ನ ಕಣ್ಣುಗಳನ್ನು ಎತ್ತಿ ಸುತ್ತಲೂ ನೋಡು. ಇಗೋ, ಇವರೆಲ್ಲರೂ ಕೂಡಿ ಕೊಂಡು ನಿನ್ನ ಬಳಿಗೆ ಬರುತ್ತಿದ್ದಾರೆ. ಕರ್ತನು ಹೇಳುವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ನೀನು ಅವರನ್ನೆಲ್ಲಾ ಆಭರಣಗಳಂತೆ ಧರಿಸಿಕೊಳ್ಳುವಿ ಮತ್ತು ನೀನು ಅವರನ್ನು ಮದಲಗಿತ್ತಿಯಂತೆ ಕಟ್ಟಿ ಕೊಳ್ಳುವಿ.
ಅಮ್ಮೋನ್ಯರ ವಿಷಯವಾಗಿ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾಯೇಲಿಗೆ ಕುಮಾರರಿ ಲ್ಲವೋ? ಅವನಿಗೆ ಬಾಧ್ಯನಿಲ್ಲವೋ? ಅವರ ಅರಸನು ಗಾದನ್ನು ಬಾಧ್ಯವಾಗಿ ತಕ್ಕೊಳ್ಳುವದು ಯಾಕೆ? ಅವನ ಜನರು ಅದರ ಪಟ್ಟಣಗಳಲ್ಲಿ ವಾಸಮಾಡುವದು ಯಾಕೆ?
ಆದದರಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಅಶ್ಶೂರಿನ ಅರಸನನ್ನು ಶಿಕ್ಷಿಸಿದ ಹಾಗೆ, ಬಾಬೆಲಿನ ಅರಸನನ್ನೂ ಅವನ ದೇಶವನ್ನೂ ಶಿಕ್ಷಿಸುತ್ತೇನೆ.
ಕುರಿಮರಿಗಳ ಹಾಗೆ ಟಗರು ಗಳ ಹೋತಗಳ ಹಾಗೆ ಅವರನ್ನು ಕೊಲೆಗೆ ಇಳಿಸುವೆನು.
ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
ಐಗುಪ್ತವು ಹಾಳಾಗು ವದು; ಎದೋಮು ಹಾಳಾದ ಅರಣ್ಯವಾಗುವದು; ಅವರು ಯೆಹೂದನ ಮಕ್ಕಳನ್ನು ಬಲಾತ್ಕಾರಮಾಡಿ ತಮ್ಮ ದೇಶದಲ್ಲಿ ಅಪರಾಧವಿಲ್ಲದ ರಕ್ತವನ್ನು ಚೆಲ್ಲಿ ದರು.
ಕರ್ತನು ಹೀಗೆ ಹೇಳುತ್ತಾನೆ--ಅಮ್ಮೋನಿನ ಮಕ್ಕಳ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ವಾಗಿ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವ ದಿಲ್ಲ; ತಮ್ಮ ಮೇರೆಯನ್ನು ವಿಸ್ತಾರ ಮಾಡುವದಕ್ಕಾಗಿ ಗಿಲ್ಯಾದಿನ ಗರ್ಭಿಣಿಯರನ್ನು ಸೀಳಿದ್ದಾರೆ.
ಇದಲ್ಲದೆ ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ ಕರ್ತನಿಂದ ಮಂಜಿನ ಹಾಗೆಯೂ ಹುಲ್ಲಿನ ಮೇಲೆ ಜಡಿಮಳೆಯ ಹಾಗೆಯೂ ಇರುವದು; ಅದು ಮನುಷ್ಯರಿಗೊಸ್ಕರ ತಡೆಮಾಡುವ ದಿಲ್ಲ; ಮನುಷ್ಯನ ಮಕ್ಕಳಿಗೋಸ್ಕರ ಕಾದುಕೊಳ್ಳುವದಿಲ್ಲ.
ತೀರವು ಯೆಹೂದದ ಮನೆತನದವರ ಉಳಿದವರಿಗೆ ಆಗುವದು; ಅದರ ಮೇಲೆ ಮೇಯಿಸುವರು; ಅಷ್ಕೆ ಲೋನಿನ ಮನೆತನಗಳಲ್ಲಿ ಸಾಯಂಕಾಲ ಅವರು ಮಲಗಿಕೊಳ್ಳುವರು; ಅವರ ದೇವರಾದ ಕರ್ತನು ಅವರನ್ನು ದರ್ಶಿಸಿ ಅವರ ಸೆರೆಯನ್ನು ತಿರುಗಿಸುವನು.
ಅದರ ಮಧ್ಯದಲ್ಲಿ ಮಂದೆಗಳೂ ಜನಾಂಗಗಳ ಮೃಗಗಳೆಲ್ಲವೂ ಮಲಗುವವು; ಬಕಪಕ್ಷಿಯೂ ಮುಳ್ಳು ಹಂದಿಯೂ ಅದರ ಮೇಲಿನ ಅವುಗಳ ಹಾಸುಗಳಲ್ಲಿ ಇಳುಕೊಳ್ಳುವವು; ಕಿಟಕಿಗಳಲ್ಲಿ ಹಾಡುವ ಶಬ್ದವಿರುವದು; ಹೊಸ್ತಿಲಗಳಲ್ಲಿ ಹಾಳು ಇರುವದು; ದೇವದಾ ರಿನ ಕೆಲಸವನ್ನು ಬೈಲುಮಾಡುವನು.ನಿಶ್ಚಿಂತೆಯಾಗಿ ವಾಸಿಸಿದಂಥ ತಾನೇ ಹೊರತು ಮತ್ತೊಂದಿಲ್ಲವೆಂದು ತನ್ನೊಳಗೆ ಅಂದುಕೊಂಡಂಥ ಉಲ್ಲಾಸದ ಪಟ್ಟಣವು ಇದೇ. ಅದು ಎಷ್ಟೋ ಹಾಳಾಯಿತು; ಮೃಗಗಳು ಮಲಗಿಕೊಳ್ಳುವ ಸ್ಥಳವಾಯಿತು. ಅದನ್ನು ಹಾದು ಹೋಗುವವರೆಲ್ಲರು ಸಿಳ್ಳಿಟ್ಟು ಕೈ ಅಲ್ಲಾಡಿಸುವರು.
ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯಮಾಡುವದಿಲ್ಲ; ಸುಳ್ಳು ಹೇಳುವದಿಲ್ಲ; ಅವರ ಬಾಯಲ್ಲಿ ಮೋಸದ ನಾಲಿಗೆ ಕಾಣುವದಿಲ್ಲ; ಅವರು ಮಂದೆಯಂತೆ ಮೇದು ಮಲಗುವರು; ಭಯಪಡಿಸು ವವನು ಒಬ್ಬನೂ ಇರುವದಿಲ್ಲ.
ಓ ಮನುಷ್ಯರೇ, ನೀವೆಲ್ಲಾ ಕರ್ತನ ಮುಂದೆ ಮೌನ ವಾಗಿರ್ರಿ; ಆತನು ತನ್ನ ಪರಿಶುದ್ಧ ನಿವಾಸದೊಳಗಿಂದ ಎದ್ದಿದ್ದಾನೆ.
ನನ್ನ ಜೀವದಾಣೆ, ಪ್ರತಿಯೊಬ್ಬನು ನನ್ನ ಮುಂದೆ ಮೊಣಕಾಲೂರುವನು ಮತ್ತು ಪ್ರತಿಯೊಂದು ನಾಲಿಗೆಯು ದೇವರಿಗೆ ಅರಿಕೆ ಮಾಡುವದು ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಬರೆದದೆ.