ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯಮಾಡುವದಿಲ್ಲ; ಸುಳ್ಳು ಹೇಳುವದಿಲ್ಲ; ಅವರ ಬಾಯಲ್ಲಿ ಮೋಸದ ನಾಲಿಗೆ ಕಾಣುವದಿಲ್ಲ; ಅವರು ಮಂದೆಯಂತೆ ಮೇದು ಮಲಗುವರು; ಭಯಪಡಿಸು ವವನು ಒಬ್ಬನೂ ಇರುವದಿಲ್ಲ.
Cross references
ಆದದರಿಂದ ಯೆಹೋಷಾಫಾಟನ ರಾಜ್ಯವು ಶಾಂತವಾಗಿತ್ತು; ಅವನ ದೇವರು ಸುತ್ತಲೂ ಅವನಿಗೆ ವಿಶ್ರಾಂತಿ ಕೊಟ್ಟನು.
ಆತನು ಹಸರುಗಾವಲುಗಳಲ್ಲಿ ನನ್ನನ್ನು ತಂಗುವಂತೆ ಮಾಡುತ್ತಾನೆ. ಶಾಂತವಾದ ನೀರುಗಳ ಪಕ್ಕದಲ್ಲಿ ನನ್ನನ್ನು ನಡಿಸುತ್ತಾನೆ.
ನಿಶ್ಚಯವಾಗಿ ಅವರು ಅಪರಾಧ ವನ್ನು ಮಾಡದೆ ಆತನ ಮಾರ್ಗಗಳಲ್ಲಿ ನಡೆದುಕೊಳ್ಳು ತ್ತಾರೆ.
ಆದರೆ ಹತ್ತನೆಯ ಪಾಲು ಉಳಿದಿದ್ದರೂ ಸಹ ಅದು ಹಿಂತಿರುಗುವದ ರಿಂದ ಅದನ್ನು ತಿಂದು ಬಿಡುವದು; ಏಲಾಮರವೂ ಓಕ್ ಮರವೂ ತಮ್ಮ ಎಲೆಗಳನ್ನು ಬಿಡುವಾಗ ತಮ್ಮ ಸಾರವು ತಮ್ಮೊಳಗೆ ಇರುವಂತೆಯೇ ಪರಿಶುದ್ಧ ಸಂತಾನವು ಅದರ ಆಧಾರವಾಗಿರುವದು ಎಂದು ಉತ್ತರ ಕೊಟ್ಟನು.
ಆ ದಿನದಲ್ಲಿ ಇಸ್ರಾಯೇಲ್ಯರಲ್ಲಿ ಉಳಿದವರೂ ಯಾಕೋಬಿನ ಮನೆತನದಿಂದ ತಪ್ಪಿಸಿಕೊಂಡವರೂ ಇನ್ನು ಮೇಲೆ ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು ಇಸ್ರಾಯೇಲಿನ ಪರಿಶುದ್ಧನಾದ ಕರ್ತನ ಸತ್ಯವನ್ನು ಆಧಾರ ಮಾಡಿಕೊಳ್ಳುವರು.
ತೋಳವು ಕುರಿಯ ಸಂಗಡ ವಾಸಿಸುವದು, ಚಿರತೆಯು ಮೇಕೆ ಮರಿಯೊಂದಿಗೆ ಮಲಗುವದು; ಕರುವೂ ಪ್ರಾಯದ ಸಿಂಹವೂ ಪುಷ್ಟ ಪಶುವೂ ಒಟ್ಟಿಗಿರುವವು; ಇವುಗಳನ್ನು ಒಂದು ಚಿಕ್ಕ ಮಗುವು ನಡಿಸುವದು.
ಆರೋಯೇರಿನ ಪಟ್ಟಣಗಳು ತಳ್ಳಿಹಾಕ ಲ್ಪಟ್ಟಿವೆ; ಅವು ಯಾರ ಹೆದರಿಕೆಯೂ ಇಲ್ಲದೆ ಅಲ್ಲಿ ಮಲಗುವ ಮಂದೆಗಳಿಗೆ ಸ್ಥಳವಾಗುವದು.
ಅಲ್ಲಿ ರಾಜ ಮಾರ್ಗವಿರುವದು, ಅದು ಪರಿಶುದ್ಧ ಮಾರ್ಗವೆನಿಸಿಕೊಳ್ಳುವದು; ಯಾವ ಅಶು ದ್ಧನು ಅದರ ಮೇಲೆ ಹಾದುಹೋಗನು; ಅವರಿಗೋ ಸ್ಕರವೇ ಇರುವದು; ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.
ನೀನು ನೀತಿಯಲ್ಲಿ ನೆಲೆಗೊಂಡಿರುವಿ; ಹಿಂಸೆ ಯಿಂದ ದೂರವಾಗಿರುವಿ; ನೀನು ಭೀತಿಯಿಂದ ಭಯ ಪಡುವದಿಲ್ಲ; ಅದು ನಿನ್ನ ಸವಿಾಪಕ್ಕೆ ಬಾರದು.
ನಿನ್ನ ಜನರೆಲ್ಲರು ನೀತಿವಂತರಾಗಿರುವರು, ದೇಶವನ್ನು ಸದಾ ಕಾಲಕ್ಕೆ ಸ್ವಾಧೀನ ಮಾಡಿಕೊಳ್ಳುವರು; ನಾನು ಮಹಿಮೆ ಹೊಂದುವದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ ನನ್ನ ಕೈ ಸೃಷ್ಟಿಯೂ ದೇಶವನ್ನು ಸದಾ ಅನುಭವಿಸುವರು.ಚಿಕ್ಕವನಿಂದ ಸಾವಿರವಾಗುವರು. ಅಲ್ಪನಿಂದ ಬಲ ವಾದ ಜನಾಂಗವಾಗುವದು; ಕರ್ತನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಹು ಬೇಗನೆ ಉಂಟು ಮಾಡುವೆನು.
ಆತನು--ನಿಶ್ಚಯವಾಗಿ ಅವರು ನನ್ನ ಜನರೇ, ಸುಳ್ಳಾಡದ ಮಕ್ಕಳೇ ಎಂದು ಹೇಳಿದನು; ಆದದರಿಂದ ಅವರಿಗೆ ರಕ್ಷಕನಾಗಿದ್ದನು.
ನನ್ನನ್ನು ಹುಡುಕುವ ನನ್ನ ಜನರಿ ಗೋಸ್ಕರ ಶಾರೋನು ಮಂದೆಗಳ ಹಟ್ಟಿಯಾಗಿಯೂ ಆಕೋರಿನ ತಗ್ಗು, ದನಗಳು ಮಲಗುವ ಸ್ಥಳವಾ ಗಿಯೂ ಇರುವದು.
ಆಗ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ --
ಜನಾಂಗಗಳೇ, ಕರ್ತನ ವಾಕ್ಯವನ್ನು ಕೇಳಿರಿ; ದೂರದಲ್ಲಿರುವ ದ್ವೀಪಗಳಲ್ಲಿ ಅದನ್ನು ತಿಳಿಸಿ ಹೀಗೆ ಹೇಳಿರಿ--ಇಸ್ರಾಯೇಲನನ್ನು ಚದರಿಸಿದಾತನು ಅವ ನನ್ನು ಕೂಡಿಸುವನು; ಕುರುಬನು ತನ್ನ ಮಂದೆಯನ್ನು ಕಾಯುವ ಹಾಗೆ ಅವನನ್ನು ಕಾಯುವನು.
ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ನಾನು ಅವರಿಗೆ ಬೋಧಿಸಿದೆನು. ಬೆಳಿಗ್ಗೆ ಎದ್ದು ಬೋಧಿಸಿದೆನು, ಆದಾಗ್ಯೂ ಉಪದೇಶ ಹೊಂದುವದಕ್ಕೆ ಅವರು ಕಿವಿ ಗೊಡಲಿಲ್ಲ.
ಜನಗಳೊಳಗಿಂದ ಅವುಗಳನ್ನು ಹೊರಗೆ ತೆಗೆದು, ದೇಶಗಳಿಂದ ಅವುಗಳನ್ನು ಕೂಡಿಸಿ, ಅವುಗಳ ಸ್ವಂತ ದೇಶಕ್ಕೆ ತರುವೆನು. ಇಸ್ರಾಯೇಲಿನ ಪರ್ವತಗಳ ಮೇಲೆ ನದಿಗಳಲ್ಲಿ ನಿವಾಸಿಸುವ ಎಲ್ಲಾ ದೇಶಗಳಲ್ಲಿ ಮೇಯಿಸುವೆನು.
ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ.
ಅವರು ಇನ್ನು ಮೇಲೆ ಅನ್ಯಜನಾಂಗಗಳಿಗೆ ಕೊಳ್ಳೆಯಾಗು ವದಿಲ್ಲ; ಭೂಮಿಯ ಮೃಗಗಳು ಅವರನ್ನು ತಿನ್ನುವದಿಲ್ಲ; ಯಾರೂ ಅವರನ್ನು ಹೆದರಿಸುವವರಿಲ್ಲದೆ ನಿರ್ಭಯ ವಾಗಿ ವಾಸಿಸುವರು.
ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.
ಅವರು ಹೆದರಿಸುವವರಿಲ್ಲದೆ ಕ್ಷೇಮವಾಗಿ ತಮ್ಮ ದೇಶದಲ್ಲಿ ವಾಸಮಾಡಿದಾಗ ಉಂಟಾದ ತಮ್ಮ ನಾಚಿಕೆಯನ್ನೂ ನನಗೆ ವಿರೋಧವಾಗಿ ಅತಿಕ್ರಮಿಸಿದ ಎಲ್ಲಾ ಅತಿಕ್ರಮ ಗಳನ್ನು ಹೊತ್ತ ತರುವಾಯ,
ಹೀಗೆ ನನ್ನ ಪರಿಶುದ್ಧ ಪರ್ವತವಾದ ಚೀಯೋನಿ ನಲ್ಲಿ ವಾಸಿಸುವ ನಿಮ್ಮ ದೇವರಾದ ಕರ್ತನು ನಾನೇ ಎಂದು ನೀವು ತಿಳುಕೊಳ್ಳುವಿರಿ; ಆಗ ಯೆರೂಸಲೇಮು ಪರಿಶುದ್ಧವಾಗಿರುವದು; ಅನ್ಯರು ಇನ್ನು ಅದರಲ್ಲಿ ಹಾದುಹೋಗರು.
ನಾನು ಕ್ಷಮಿಸದೆ ಇದ್ದ ಅವರ ರಕ್ತಾಪರಾಧವನ್ನು ಕ್ಷಮಿಸುವೆನು, ಕರ್ತನು ಚೀಯೋನಿನಲ್ಲಿ ವಾಸವಾಗಿರುತ್ತಾನೆ.
ಆದರೆ ಒಬ್ಬೊಬ್ಬನು ತನ್ನ ತನ್ನ ದ್ರಾಕ್ಷೇ ಬಳ್ಳಿಯ ಕೆಳಗೂ ತನ್ನ ತನ್ನ ಅಂಜೂರದ ಗಿಡದ ಕೆಳಗೂ ಕೂತುಕೊಳ್ಳುವನು. ಭಯಪಡಿಸುವವನು ಯಾರೂ ಇರುವದಿಲ್ಲ. ಯಾಕಂದರೆ ಸೈನ್ಯಗಳ ಕರ್ತನ ಬಾಯಿ ಅದನ್ನು ನುಡಿದಿದೆ.
ಕುಂಟಾದದ್ದನ್ನು ಉಳಿದದ್ದ ನ್ನಾಗಿಯೂ ತಳ್ಳಿಬಿಟ್ಟಿದ್ದನ್ನು ಬಲವಾದ ಜನಾಂಗವಾ ಗಿಯೂ ಮಾಡುವೆನು; ಕರ್ತನು ಇಂದಿನಿಂದ ಸದಾ ಕಾಲವೂ ಚೀಯೋನ್ ಪರ್ವತದಲ್ಲಿ ಅವರ ಮೇಲೆ ಆಳುವನು,
ಆತನು ಕರ್ತನ ಬಲದಲ್ಲಿಯೂ ತನ್ನ ದೇವರಾದ ಕರ್ತನ ಹೆಸರಿನಲ್ಲಿ ಘನತೆಯಲ್ಲಿಯೂ ನಿಂತುಕೊಂಡು ಮೇಯಿಸುವನು; ಮತ್ತು ಅವರು ನೆಲೆಯಾಗಿರುವರು, ಈಗ ಆತನು ಭೂಮಿಯ ಅಂತ್ಯಗಳ ಮಟ್ಟಿಗೂ ದೊಡ್ಡವನಾಗಿ ರುವನು.
ನಿನ್ನ ಜನರನ್ನೂ ಏಕಾಂತವಾಗಿ ಅಡವಿಯಲ್ಲಿ ಕರ್ಮೆಲಿನ ನಡುವೆ ವಾಸವಾಗಿರುವ ನಿನ್ನ ಬಾಧ್ಯತೆಯ ಮಂದೆ ಯನ್ನೂ ನಿನ್ನ ಕೋಲಿನಿಂದ ಮೇಯಿಸು; ಅವರು ಪೂರ್ವದ ದಿವಸಗಳಲ್ಲಾದ ಹಾಗೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ.
ತೀರವು ಯೆಹೂದದ ಮನೆತನದವರ ಉಳಿದವರಿಗೆ ಆಗುವದು; ಅದರ ಮೇಲೆ ಮೇಯಿಸುವರು; ಅಷ್ಕೆ ಲೋನಿನ ಮನೆತನಗಳಲ್ಲಿ ಸಾಯಂಕಾಲ ಅವರು ಮಲಗಿಕೊಳ್ಳುವರು; ಅವರ ದೇವರಾದ ಕರ್ತನು ಅವರನ್ನು ದರ್ಶಿಸಿ ಅವರ ಸೆರೆಯನ್ನು ತಿರುಗಿಸುವನು.
ಬೀಜವುವೃದ್ಧಿಯಾಗುವದು; ದ್ರಾಕ್ಷೇ ಬಳ್ಳಿ ತನ್ನ ಫಲವನ್ನು ಕೊಡುವದು; ಭೂಮಿಯು ತನ್ನ ಹುಟ್ಟುವಳಿಯನ್ನು ಹೆಚ್ಚಾಗಿ ಕೊಡುವದು; ಆಕಾಶ ಗಳು ತಮ್ಮ ಮಂಜನ್ನು ಕೊಡುವವು; ಈ ಜನರಲ್ಲಿ ಉಳಿದವರು ಇವುಗಳನ್ನೆಲ್ಲಾ ಸ್ವಾಧೀನ ಮಾಡಿಕೊಳ್ಳು ವಂತೆ ಮಾಡುವೆನು.
ಆ ದಿನದಲ್ಲಿ ಕುದುರೆಗಳ ಗೆಜ್ಜೆಗಳ ಮೇಲೆ ಕರ್ತನಿಗೆ ಪರಿಶುದ್ಧವು ಎಂದಿರುವದು; ಕರ್ತನ ಆಲಯದ ಪಾತ್ರೆಗಳು ಬಲಿಪೀಠದ ಮುಂದಿನ ಪಾತ್ರೆಗಳ ಹಾಗಿರುವವು.ಹೌದು, ಯೆರೂಸಲೇಮಿ ನಲ್ಲಿಯೂ ಯೆಹೂದದಲ್ಲಿಯೂ ಇರುವ ಪ್ರತಿ ಯೊಂದು ಪಾತ್ರೆಯು ಸೈನ್ಯಗಳ ಕರ್ತನಿಗೆ ಪರಿಶುದ್ಧ ವಾಗಿರುವವು; ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳಲ್ಲಿ ತಕ್ಕೊಂಡು ಬೇಯಿಸುವರು; ಆ ದಿನದಲ್ಲಿ ಕಾನಾನ್ಯನು ಸೈನ್ಯಗಳ ಕರ್ತನ ಆಲಯದಲ್ಲಿ ಇನ್ನು ಮೇಲೆ ಇರುವದೇ ಇಲ್ಲ.
ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿ ಸುವನು; ಅವರು ಆತಂಕ ಮಾಡುವ ಎಲ್ಲವುಗಳನ್ನೂ ದುಷ್ಟತನ ಮಾಡುವವರನ್ನೂ ಆತನ ರಾಜ್ಯದೊಳಗಿಂದ ಕೂಡಿಸಿ ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು;
ಯೇಸು ತನ್ನ ಬಳಿಗೆ ಬರುವ ನತಾನಯೇಲನನ್ನು ಕಂಡು ಅವನ ವಿಷಯವಾಗಿ--ಇಗೋ, ಇವನು ನಿಜ ವಾಗಿಯೂ ಇಸ್ರಾಯೇಲನು; ಇವನಲ್ಲಿ ಕಪಟವಿಲ್ಲ ಅಂದನು.
ಆದರೆ ದೇವರು ಅವನಿಗೆ ಕೊಟ್ಟ ಉತ್ತರವೇನಂದರೆ--ಬಾಳನ ವಿಗ್ರಹಕ್ಕೆ ಮೊಣಕಾಲೂರದ ಏಳುಸಾವಿರ ಜನರನ್ನು ನಾನು ನನಗೋಸ್ಕರ ಉಳಿಸಿಕೊಂಡಿದ್ದೇನೆ ಎಂಬದು.
ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ; ನೀವು ಹಳೇ ಮನುಷ್ಯನನ್ನು ಅವನ ಕೃತ್ಯಗಳ ಕೂಡ ತೆಗೆದುಹಾಕಿದ್ದೀರಲ್ಲವೇ?
ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ಸಂತೋಷವುಳ್ಳವರು. ಅವರ ಬೆದರಿಸುವಿಕೆಗೆ ಹೆದರಬೇಡಿರಿ ಮತ್ತು ಕಳವಳ ಪಡಬೇಡಿರಿ.
ದೇವರಿಂದ ಹುಟ್ಟಿದವನು ಪಾಪಮಾಡನು; ಯಾಕಂದರೆ ಆತನ ಬೀಜವು ಅವನಲ್ಲಿ ನೆಲೆಗೊಂಡದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡ ಲಾರನು.
ದೇವರಿಂದ ಹುಟ್ಟಿರುವವನು ಪಾಪಮಾಡುವವ ನಲ್ಲವೆಂಬದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದ ವನು ತನ್ನನ್ನು ತಾನು ಕಾಪಾಡಿಕೊಳ್ಳುವನು; ಕೆಡುಕನು ಅವನನ್ನು ಮುಟ್ಟುವದಿಲ್ಲ.
ಈ ಕಾರಣದಿಂದ ಇವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳು ಆತನ ಸೇವೆ ಮಾಡುವವರಾ ಗಿದ್ದಾರೆ; ಸಿಂಹಾಸನದ ಮೇಲೆ ಕೂತಿರುವಾತನು ಅವರ ಮಧ್ಯದಲ್ಲಿ ವಾಸಿಸುವನು.
ಇವರ ಬಾಯಲ್ಲಿ ವಂಚನೆ ಸಿಕ್ಕಲಿಲ್ಲ; ಯಾಕಂದರೆ ಇವರು ದೇವರ ಸಿಂಹಾಸನದ ಮುಂದೆ ನಿರ್ದೋಷಿಗಳಾಗಿದ್ದಾರೆ.
ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.
ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.