Home Bibles ಸೆಫನ್ಯ 3:13 · ಕನ್ನಡ ಬೈಬಲ್
ಸೆಫನ್ಯ 3:13 · ಕನ್ನಡ ಬೈಬಲ್

ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯಮಾಡುವದಿಲ್ಲ; ಸುಳ್ಳು ಹೇಳುವದಿಲ್ಲ; ಅವರ ಬಾಯಲ್ಲಿ ಮೋಸದ ನಾಲಿಗೆ ಕಾಣುವದಿಲ್ಲ; ಅವರು ಮಂದೆಯಂತೆ ಮೇದು ಮಲಗುವರು; ಭಯಪಡಿಸು ವವನು ಒಬ್ಬನೂ ಇರುವದಿಲ್ಲ.

Cross references

2 ದಿನವೃತ್ತಾಂತ 20:30

ಆದದರಿಂದ ಯೆಹೋಷಾಫಾಟನ ರಾಜ್ಯವು ಶಾಂತವಾಗಿತ್ತು; ಅವನ ದೇವರು ಸುತ್ತಲೂ ಅವನಿಗೆ ವಿಶ್ರಾಂತಿ ಕೊಟ್ಟನು.

ಕೀರ್ತನೆಗಳು 23:2

ಆತನು ಹಸರುಗಾವಲುಗಳಲ್ಲಿ ನನ್ನನ್ನು ತಂಗುವಂತೆ ಮಾಡುತ್ತಾನೆ. ಶಾಂತವಾದ ನೀರುಗಳ ಪಕ್ಕದಲ್ಲಿ ನನ್ನನ್ನು ನಡಿಸುತ್ತಾನೆ.

ಕೀರ್ತನೆಗಳು 119:3

ನಿಶ್ಚಯವಾಗಿ ಅವರು ಅಪರಾಧ ವನ್ನು ಮಾಡದೆ ಆತನ ಮಾರ್ಗಗಳಲ್ಲಿ ನಡೆದುಕೊಳ್ಳು ತ್ತಾರೆ.

ಯೆಶಾಯ 6:13

ಆದರೆ ಹತ್ತನೆಯ ಪಾಲು ಉಳಿದಿದ್ದರೂ ಸಹ ಅದು ಹಿಂತಿರುಗುವದ ರಿಂದ ಅದನ್ನು ತಿಂದು ಬಿಡುವದು; ಏಲಾಮರವೂ ಓಕ್‌ ಮರವೂ ತಮ್ಮ ಎಲೆಗಳನ್ನು ಬಿಡುವಾಗ ತಮ್ಮ ಸಾರವು ತಮ್ಮೊಳಗೆ ಇರುವಂತೆಯೇ ಪರಿಶುದ್ಧ ಸಂತಾನವು ಅದರ ಆಧಾರವಾಗಿರುವದು ಎಂದು ಉತ್ತರ ಕೊಟ್ಟನು.

ಯೆಶಾಯ 10:20

ಆ ದಿನದಲ್ಲಿ ಇಸ್ರಾಯೇಲ್ಯರಲ್ಲಿ ಉಳಿದವರೂ ಯಾಕೋಬಿನ ಮನೆತನದಿಂದ ತಪ್ಪಿಸಿಕೊಂಡವರೂ ಇನ್ನು ಮೇಲೆ ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು ಇಸ್ರಾಯೇಲಿನ ಪರಿಶುದ್ಧನಾದ ಕರ್ತನ ಸತ್ಯವನ್ನು ಆಧಾರ ಮಾಡಿಕೊಳ್ಳುವರು.

ಯೆಶಾಯ 11:6

ತೋಳವು ಕುರಿಯ ಸಂಗಡ ವಾಸಿಸುವದು, ಚಿರತೆಯು ಮೇಕೆ ಮರಿಯೊಂದಿಗೆ ಮಲಗುವದು; ಕರುವೂ ಪ್ರಾಯದ ಸಿಂಹವೂ ಪುಷ್ಟ ಪಶುವೂ ಒಟ್ಟಿಗಿರುವವು; ಇವುಗಳನ್ನು ಒಂದು ಚಿಕ್ಕ ಮಗುವು ನಡಿಸುವದು.

ಯೆಶಾಯ 17:2

ಆರೋಯೇರಿನ ಪಟ್ಟಣಗಳು ತಳ್ಳಿಹಾಕ ಲ್ಪಟ್ಟಿವೆ; ಅವು ಯಾರ ಹೆದರಿಕೆಯೂ ಇಲ್ಲದೆ ಅಲ್ಲಿ ಮಲಗುವ ಮಂದೆಗಳಿಗೆ ಸ್ಥಳವಾಗುವದು.

ಯೆಶಾಯ 35:8

ಅಲ್ಲಿ ರಾಜ ಮಾರ್ಗವಿರುವದು, ಅದು ಪರಿಶುದ್ಧ ಮಾರ್ಗವೆನಿಸಿಕೊಳ್ಳುವದು; ಯಾವ ಅಶು ದ್ಧನು ಅದರ ಮೇಲೆ ಹಾದುಹೋಗನು; ಅವರಿಗೋ ಸ್ಕರವೇ ಇರುವದು; ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.

ಯೆಶಾಯ 54:14

ನೀನು ನೀತಿಯಲ್ಲಿ ನೆಲೆಗೊಂಡಿರುವಿ; ಹಿಂಸೆ ಯಿಂದ ದೂರವಾಗಿರುವಿ; ನೀನು ಭೀತಿಯಿಂದ ಭಯ ಪಡುವದಿಲ್ಲ; ಅದು ನಿನ್ನ ಸವಿಾಪಕ್ಕೆ ಬಾರದು.

ಯೆಶಾಯ 60:21

ನಿನ್ನ ಜನರೆಲ್ಲರು ನೀತಿವಂತರಾಗಿರುವರು, ದೇಶವನ್ನು ಸದಾ ಕಾಲಕ್ಕೆ ಸ್ವಾಧೀನ ಮಾಡಿಕೊಳ್ಳುವರು; ನಾನು ಮಹಿಮೆ ಹೊಂದುವದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ ನನ್ನ ಕೈ ಸೃಷ್ಟಿಯೂ ದೇಶವನ್ನು ಸದಾ ಅನುಭವಿಸುವರು.ಚಿಕ್ಕವನಿಂದ ಸಾವಿರವಾಗುವರು. ಅಲ್ಪನಿಂದ ಬಲ ವಾದ ಜನಾಂಗವಾಗುವದು; ಕರ್ತನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಹು ಬೇಗನೆ ಉಂಟು ಮಾಡುವೆನು.

ಯೆಶಾಯ 63:8

ಆತನು--ನಿಶ್ಚಯವಾಗಿ ಅವರು ನನ್ನ ಜನರೇ, ಸುಳ್ಳಾಡದ ಮಕ್ಕಳೇ ಎಂದು ಹೇಳಿದನು; ಆದದರಿಂದ ಅವರಿಗೆ ರಕ್ಷಕನಾಗಿದ್ದನು.

ಯೆಶಾಯ 65:10

ನನ್ನನ್ನು ಹುಡುಕುವ ನನ್ನ ಜನರಿ ಗೋಸ್ಕರ ಶಾರೋನು ಮಂದೆಗಳ ಹಟ್ಟಿಯಾಗಿಯೂ ಆಕೋರಿನ ತಗ್ಗು, ದನಗಳು ಮಲಗುವ ಸ್ಥಳವಾ ಗಿಯೂ ಇರುವದು.

ಯೆರೆಮಿಯ 23:4

ಆಗ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ --

ಯೆರೆಮಿಯ 30:10

ಜನಾಂಗಗಳೇ, ಕರ್ತನ ವಾಕ್ಯವನ್ನು ಕೇಳಿರಿ; ದೂರದಲ್ಲಿರುವ ದ್ವೀಪಗಳಲ್ಲಿ ಅದನ್ನು ತಿಳಿಸಿ ಹೀಗೆ ಹೇಳಿರಿ--ಇಸ್ರಾಯೇಲನನ್ನು ಚದರಿಸಿದಾತನು ಅವ ನನ್ನು ಕೂಡಿಸುವನು; ಕುರುಬನು ತನ್ನ ಮಂದೆಯನ್ನು ಕಾಯುವ ಹಾಗೆ ಅವನನ್ನು ಕಾಯುವನು.

ಯೆರೆಮಿಯ 31:33

ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ನಾನು ಅವರಿಗೆ ಬೋಧಿಸಿದೆನು. ಬೆಳಿಗ್ಗೆ ಎದ್ದು ಬೋಧಿಸಿದೆನು, ಆದಾಗ್ಯೂ ಉಪದೇಶ ಹೊಂದುವದಕ್ಕೆ ಅವರು ಕಿವಿ ಗೊಡಲಿಲ್ಲ.

ಯೆಹೆಜ್ಕೇಲ 34:13

ಜನಗಳೊಳಗಿಂದ ಅವುಗಳನ್ನು ಹೊರಗೆ ತೆಗೆದು, ದೇಶಗಳಿಂದ ಅವುಗಳನ್ನು ಕೂಡಿಸಿ, ಅವುಗಳ ಸ್ವಂತ ದೇಶಕ್ಕೆ ತರುವೆನು. ಇಸ್ರಾಯೇಲಿನ ಪರ್ವತಗಳ ಮೇಲೆ ನದಿಗಳಲ್ಲಿ ನಿವಾಸಿಸುವ ಎಲ್ಲಾ ದೇಶಗಳಲ್ಲಿ ಮೇಯಿಸುವೆನು.

ಯೆಹೆಜ್ಕೇಲ 34:23

ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ.

ಯೆಹೆಜ್ಕೇಲ 34:28

ಅವರು ಇನ್ನು ಮೇಲೆ ಅನ್ಯಜನಾಂಗಗಳಿಗೆ ಕೊಳ್ಳೆಯಾಗು ವದಿಲ್ಲ; ಭೂಮಿಯ ಮೃಗಗಳು ಅವರನ್ನು ತಿನ್ನುವದಿಲ್ಲ; ಯಾರೂ ಅವರನ್ನು ಹೆದರಿಸುವವರಿಲ್ಲದೆ ನಿರ್ಭಯ ವಾಗಿ ವಾಸಿಸುವರು.

ಯೆಹೆಜ್ಕೇಲ 36:25

ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.

ಯೆಹೆಜ್ಕೇಲ 39:26

ಅವರು ಹೆದರಿಸುವವರಿಲ್ಲದೆ ಕ್ಷೇಮವಾಗಿ ತಮ್ಮ ದೇಶದಲ್ಲಿ ವಾಸಮಾಡಿದಾಗ ಉಂಟಾದ ತಮ್ಮ ನಾಚಿಕೆಯನ್ನೂ ನನಗೆ ವಿರೋಧವಾಗಿ ಅತಿಕ್ರಮಿಸಿದ ಎಲ್ಲಾ ಅತಿಕ್ರಮ ಗಳನ್ನು ಹೊತ್ತ ತರುವಾಯ,

ಯೋವೇಲ 3:17

ಹೀಗೆ ನನ್ನ ಪರಿಶುದ್ಧ ಪರ್ವತವಾದ ಚೀಯೋನಿ ನಲ್ಲಿ ವಾಸಿಸುವ ನಿಮ್ಮ ದೇವರಾದ ಕರ್ತನು ನಾನೇ ಎಂದು ನೀವು ತಿಳುಕೊಳ್ಳುವಿರಿ; ಆಗ ಯೆರೂಸಲೇಮು ಪರಿಶುದ್ಧವಾಗಿರುವದು; ಅನ್ಯರು ಇನ್ನು ಅದರಲ್ಲಿ ಹಾದುಹೋಗರು.

ಯೋವೇಲ 3:21

ನಾನು ಕ್ಷಮಿಸದೆ ಇದ್ದ ಅವರ ರಕ್ತಾಪರಾಧವನ್ನು ಕ್ಷಮಿಸುವೆನು, ಕರ್ತನು ಚೀಯೋನಿನಲ್ಲಿ ವಾಸವಾಗಿರುತ್ತಾನೆ.

ಮೀಕ 4:4

ಆದರೆ ಒಬ್ಬೊಬ್ಬನು ತನ್ನ ತನ್ನ ದ್ರಾಕ್ಷೇ ಬಳ್ಳಿಯ ಕೆಳಗೂ ತನ್ನ ತನ್ನ ಅಂಜೂರದ ಗಿಡದ ಕೆಳಗೂ ಕೂತುಕೊಳ್ಳುವನು. ಭಯಪಡಿಸುವವನು ಯಾರೂ ಇರುವದಿಲ್ಲ. ಯಾಕಂದರೆ ಸೈನ್ಯಗಳ ಕರ್ತನ ಬಾಯಿ ಅದನ್ನು ನುಡಿದಿದೆ.

ಮೀಕ 4:7

ಕುಂಟಾದದ್ದನ್ನು ಉಳಿದದ್ದ ನ್ನಾಗಿಯೂ ತಳ್ಳಿಬಿಟ್ಟಿದ್ದನ್ನು ಬಲವಾದ ಜನಾಂಗವಾ ಗಿಯೂ ಮಾಡುವೆನು; ಕರ್ತನು ಇಂದಿನಿಂದ ಸದಾ ಕಾಲವೂ ಚೀಯೋನ್‌ ಪರ್ವತದಲ್ಲಿ ಅವರ ಮೇಲೆ ಆಳುವನು,

ಮೀಕ 5:4

ಆತನು ಕರ್ತನ ಬಲದಲ್ಲಿಯೂ ತನ್ನ ದೇವರಾದ ಕರ್ತನ ಹೆಸರಿನಲ್ಲಿ ಘನತೆಯಲ್ಲಿಯೂ ನಿಂತುಕೊಂಡು ಮೇಯಿಸುವನು; ಮತ್ತು ಅವರು ನೆಲೆಯಾಗಿರುವರು, ಈಗ ಆತನು ಭೂಮಿಯ ಅಂತ್ಯಗಳ ಮಟ್ಟಿಗೂ ದೊಡ್ಡವನಾಗಿ ರುವನು.

ಮೀಕ 7:14

ನಿನ್ನ ಜನರನ್ನೂ ಏಕಾಂತವಾಗಿ ಅಡವಿಯಲ್ಲಿ ಕರ್ಮೆಲಿನ ನಡುವೆ ವಾಸವಾಗಿರುವ ನಿನ್ನ ಬಾಧ್ಯತೆಯ ಮಂದೆ ಯನ್ನೂ ನಿನ್ನ ಕೋಲಿನಿಂದ ಮೇಯಿಸು; ಅವರು ಪೂರ್ವದ ದಿವಸಗಳಲ್ಲಾದ ಹಾಗೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ.

ಸೆಫನ್ಯ 2:7

ತೀರವು ಯೆಹೂದದ ಮನೆತನದವರ ಉಳಿದವರಿಗೆ ಆಗುವದು; ಅದರ ಮೇಲೆ ಮೇಯಿಸುವರು; ಅಷ್ಕೆ ಲೋನಿನ ಮನೆತನಗಳಲ್ಲಿ ಸಾಯಂಕಾಲ ಅವರು ಮಲಗಿಕೊಳ್ಳುವರು; ಅವರ ದೇವರಾದ ಕರ್ತನು ಅವರನ್ನು ದರ್ಶಿಸಿ ಅವರ ಸೆರೆಯನ್ನು ತಿರುಗಿಸುವನು.

ಜೆಕರ್ಯ 8:12

ಬೀಜವುವೃದ್ಧಿಯಾಗುವದು; ದ್ರಾಕ್ಷೇ ಬಳ್ಳಿ ತನ್ನ ಫಲವನ್ನು ಕೊಡುವದು; ಭೂಮಿಯು ತನ್ನ ಹುಟ್ಟುವಳಿಯನ್ನು ಹೆಚ್ಚಾಗಿ ಕೊಡುವದು; ಆಕಾಶ ಗಳು ತಮ್ಮ ಮಂಜನ್ನು ಕೊಡುವವು; ಈ ಜನರಲ್ಲಿ ಉಳಿದವರು ಇವುಗಳನ್ನೆಲ್ಲಾ ಸ್ವಾಧೀನ ಮಾಡಿಕೊಳ್ಳು ವಂತೆ ಮಾಡುವೆನು.

ಜೆಕರ್ಯ 14:20

ಆ ದಿನದಲ್ಲಿ ಕುದುರೆಗಳ ಗೆಜ್ಜೆಗಳ ಮೇಲೆ ಕರ್ತನಿಗೆ ಪರಿಶುದ್ಧವು ಎಂದಿರುವದು; ಕರ್ತನ ಆಲಯದ ಪಾತ್ರೆಗಳು ಬಲಿಪೀಠದ ಮುಂದಿನ ಪಾತ್ರೆಗಳ ಹಾಗಿರುವವು.ಹೌದು, ಯೆರೂಸಲೇಮಿ ನಲ್ಲಿಯೂ ಯೆಹೂದದಲ್ಲಿಯೂ ಇರುವ ಪ್ರತಿ ಯೊಂದು ಪಾತ್ರೆಯು ಸೈನ್ಯಗಳ ಕರ್ತನಿಗೆ ಪರಿಶುದ್ಧ ವಾಗಿರುವವು; ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳಲ್ಲಿ ತಕ್ಕೊಂಡು ಬೇಯಿಸುವರು; ಆ ದಿನದಲ್ಲಿ ಕಾನಾನ್ಯನು ಸೈನ್ಯಗಳ ಕರ್ತನ ಆಲಯದಲ್ಲಿ ಇನ್ನು ಮೇಲೆ ಇರುವದೇ ಇಲ್ಲ.

ಮತ್ತಾಯ 13:41

ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿ ಸುವನು; ಅವರು ಆತಂಕ ಮಾಡುವ ಎಲ್ಲವುಗಳನ್ನೂ ದುಷ್ಟತನ ಮಾಡುವವರನ್ನೂ ಆತನ ರಾಜ್ಯದೊಳಗಿಂದ ಕೂಡಿಸಿ ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು;

ಯೋಹಾನ 1:47

ಯೇಸು ತನ್ನ ಬಳಿಗೆ ಬರುವ ನತಾನಯೇಲನನ್ನು ಕಂಡು ಅವನ ವಿಷಯವಾಗಿ--ಇಗೋ, ಇವನು ನಿಜ ವಾಗಿಯೂ ಇಸ್ರಾಯೇಲನು; ಇವನಲ್ಲಿ ಕಪಟವಿಲ್ಲ ಅಂದನು.

ರೋಮಾಪುರದವರಿಗೆ 11:4

ಆದರೆ ದೇವರು ಅವನಿಗೆ ಕೊಟ್ಟ ಉತ್ತರವೇನಂದರೆ--ಬಾಳನ ವಿಗ್ರಹಕ್ಕೆ ಮೊಣಕಾಲೂರದ ಏಳುಸಾವಿರ ಜನರನ್ನು ನಾನು ನನಗೋಸ್ಕರ ಉಳಿಸಿಕೊಂಡಿದ್ದೇನೆ ಎಂಬದು.

ಕೊಲೊಸ್ಸೆಯವರಿಗೆ 3:9

ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ; ನೀವು ಹಳೇ ಮನುಷ್ಯನನ್ನು ಅವನ ಕೃತ್ಯಗಳ ಕೂಡ ತೆಗೆದುಹಾಕಿದ್ದೀರಲ್ಲವೇ?

1 ಪೇತ್ರ 3:14

ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ಸಂತೋಷವುಳ್ಳವರು. ಅವರ ಬೆದರಿಸುವಿಕೆಗೆ ಹೆದರಬೇಡಿರಿ ಮತ್ತು ಕಳವಳ ಪಡಬೇಡಿರಿ.

1 ಯೋಹಾನ 3:9

ದೇವರಿಂದ ಹುಟ್ಟಿದವನು ಪಾಪಮಾಡನು; ಯಾಕಂದರೆ ಆತನ ಬೀಜವು ಅವನಲ್ಲಿ ನೆಲೆಗೊಂಡದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡ ಲಾರನು.

1 ಯೋಹಾನ 5:18

ದೇವರಿಂದ ಹುಟ್ಟಿರುವವನು ಪಾಪಮಾಡುವವ ನಲ್ಲವೆಂಬದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದ ವನು ತನ್ನನ್ನು ತಾನು ಕಾಪಾಡಿಕೊಳ್ಳುವನು; ಕೆಡುಕನು ಅವನನ್ನು ಮುಟ್ಟುವದಿಲ್ಲ.

ಪ್ರಕಟನೆ 7:15

ಈ ಕಾರಣದಿಂದ ಇವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳು ಆತನ ಸೇವೆ ಮಾಡುವವರಾ ಗಿದ್ದಾರೆ; ಸಿಂಹಾಸನದ ಮೇಲೆ ಕೂತಿರುವಾತನು ಅವರ ಮಧ್ಯದಲ್ಲಿ ವಾಸಿಸುವನು.

ಪ್ರಕಟನೆ 14:5

ಇವರ ಬಾಯಲ್ಲಿ ವಂಚನೆ ಸಿಕ್ಕಲಿಲ್ಲ; ಯಾಕಂದರೆ ಇವರು ದೇವರ ಸಿಂಹಾಸನದ ಮುಂದೆ ನಿರ್ದೋಷಿಗಳಾಗಿದ್ದಾರೆ.

ಪ್ರಕಟನೆ 21:8

ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.

ಪ್ರಕಟನೆ 21:27

ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.

Interlinear

Choose Theme