ಪರಿಶುದ್ಧ ಸಭೆಯ ವಿಷಯವಾಗಿ ವ್ಯಸನ ಪಡುವವರನ್ನು ನಾನು ಕೂಡಿಸುತ್ತೇನೆ; ಅವರು ನಿನ್ನವರೇ; ಅವರ ಮೇಲೆ ನಿಂದೆ ಭಾರವಾಗಿದೆ.
Cross references
ದೇವರಿ ಗೋಸ್ಕರ ಹೌದು, ಜೀವವುಳ್ಳ ದೇವರಿಗೋಸ್ಕರ ನನ್ನ ಪ್ರಾಣವು ದಾಹಗೊಳ್ಳುತ್ತದೆ; ಯಾವಾಗ ಬಂದು ದೇವರ ಮುಂದೆ ಕಾಣಿಸಿಕೊಳ್ಳಲಿ?
ನಿನ್ನ ಬೆಳ ಕನ್ನೂ ಸತ್ಯವನ್ನೂ ಕಳುಹಿಸು; ಅವು ನನ್ನನ್ನು ನಡಿಸಿ ನಿನ್ನ ಪರಿಶುದ್ಧ ಪರ್ವತಕ್ಕೂ ಗುಡಾರಗಳಿಗೂ ನನ್ನನ್ನು ಬರಮಾಡಲಿ.
ಓ ದೇವರೇ, ನೀನೇ ನನ್ನ ದೇವರು ಹೊತ್ತಾರೆ ನಿನ್ನನ್ನು ಹುಡುಕುತ್ತೇನೆ; ನೀರಿಲ್ಲದೆ ಒಣಗಿದ ಭೂಮಿಯಲ್ಲಿದ್ದವನು ನೀರಿ ಗಾಗಿಯೋ ಎಂಬಂತೆ ನನ್ನ ಆತ್ಮವು ನಿನಗಾಗಿ ಆತುರ ಗೊಳ್ಳುತ್ತದೆ; ಶರೀರವು ಕಂದಿಹೋಗುತ್ತದೆ.
ನಮ್ಮ ನೆರೆಯವರಿಗೆ ನಿಂದೆಯೂ ನಮ್ಮ ಸುತ್ತಲಿರುವವರಿಗೆ ಗೇಲಿಯೂ ಹಾಸ್ಯವೂ ಆಗಿದ್ದೇವೆ.
ಸೈನ್ಯಗಳ ಓ ಕರ್ತನೇ, ನಿನ್ನ ನಿವಾಸಗಳು ಎಷ್ಟೋ ರಮ್ಯವಾಗಿವೆ!
ಅಲ್ಲಿ ನಮ್ಮನ್ನು ಸೆರೆಹಿಡಿದು ಹಾಳುಮಾಡಿದವರು--ನಮ್ಮ ಸಂತೋಷ ಕ್ಕಾಗಿ ಒಂದು ಹಾಡನ್ನು ಹಾಡಿರಿ ಅಂದರು.
ಆಗ ಕರ್ತನು ನನಗೆ--ಯೆರೆವಿಾಯನೇ, ಏನು ನೋಡುತ್ತೀ ಅಂದನು. ಆಗ ನಾನು ಅಂಜೂರದ ಹಣ್ಣುಗಳನ್ನು ನೋಡುತ್ತೇನೆ; ಒಳ್ಳೇ ಹಣ್ಣುಗಳು ಬಹಳ ಒಳ್ಳೇವು; ಕೆಟ್ಟ ಹಣ್ಣುಗಳು ಬಹಳ ಕೆಟ್ಟವುಗಳು, ತಿನ್ನ ಕೂಡದ ಹಾಗೆ ಅಷ್ಟು ಕೆಟ್ಟವಾಗಿವೆ ಅಂದೆನು.
ಹಾಗೆಯೇ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕರ್ತನ ವಾಕ್ಯದ ಪ್ರಕಾರ ನನ್ನ ಬಳಿಗೆ ಸೆರೆಮನೆಯ ಅಂಗಳಕ್ಕೆಬಂದು--ಬೆನ್ಯಾವಿಾನನ ದೇಶದ ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ, ಬಾಧ್ಯದ ಅಧಿಕಾರವೂ ವಿಮೋಚನೆಯೂ ನಿನ್ನದು; ಅದನ್ನು ನಿನಗೋಸ್ಕರ ಕೊಂಡುಕೋ ಎಂದು ಬೇಡಿಕೊಂಡು ಹೇಳಿದನು. ಆಗ ಅದು ಕರ್ತನ ವಾಕ್ಯವೆಂದು ನಾನು ತಿಳುಕೊಂಡೆನು.
ಚೀಯೋನಿನ ಮಾರ್ಗಗಳು ದುಃಖಿಸುತ್ತವೆ, ಯಾಕಂದರೆ ಪವಿತ್ರ ಹಬ್ಬಗಳಿಗೆ ಯಾರೂ ಬರಲಿಲ್ಲ; ಆಕೆಯ ಎಲ್ಲಾ ಬಾಗಿಲುಗಳು ಹಾಳುಬಿದ್ದಿವೆ. ಯಾಜಕರು ನಿಟ್ಟುಸಿರಿಡುತ್ತಾರೆ, ಕನ್ಯೆಯರು ಸಂಕಟಪಡುತ್ತಾರೆ. ಆಕೆಯು ವ್ಯಥೆಯಲ್ಲಿದ್ದಾಳೆ.
ಯೆರೂಸಲೇಮು ಕಷ್ಟ ಮತ್ತು ಸಂಕಟದಲ್ಲಿದ್ದಾಗ ಪೂರ್ವದಿನಗಳಲ್ಲಿ ತನಗಿದ್ದ ರಮ್ಯವಾದವುಗಳೆಲ್ಲವನ್ನು ಜ್ಞಾಪಕಮಾಡಿಕೊಂಡಿದ್ದಾಳೆ. ಆಕೆಯ ಜನರು ಶತ್ರುವಿನ ಕೈಯಲ್ಲಿ ಬಿದ್ದಾಗ ಯಾವನೂ ಸಹಾಯಮಾಡಲಿಲ್ಲ. ವೈರಿಗಳು ಅವಳನ್ನು ನೋಡಿ ಅವಳ ಸಬ್ಬತ್ತುಗಳ ವಿಷಯದಲ್ಲಿ ಅಪಹಾಸ್ಯಮಾಡಿದರು.
ಆತನು ತನ್ನ ಗುಡಾರವನ್ನು ತೋಟದಂತೆ ಬಲಾತ್ಕಾರವಾಗಿ ತೆಗೆದುಹಾಕಿದ್ದಾನೆ. ಆತನು ತನ್ನ ಸಭಾಸ್ಥಾನಗಳನ್ನು ನಾಶಮಾಡಿದ್ದಾನೆ; ಕರ್ತನು ಚೀಯೋನಿನಲ್ಲಿ ಪವಿತ್ರ ಹಬ್ಬಗಳನ್ನೂ ಸಬ್ಬತ್ತನ್ನೂ ಮರೆತುಬಿಡುವಂತೆ ಮಾಡಿದ್ದಾನೆ, ತನ್ನ ಕೋಪದ ಉರಿಯಲ್ಲಿ ಅರಸನನ್ನೂ ಯಾಜಕನನ್ನೂ ತುಚ್ಛೀಕರಿ ಸಿದ್ದಾನೆ.
ಜನಗಳೊಳಗಿಂದ ಅವುಗಳನ್ನು ಹೊರಗೆ ತೆಗೆದು, ದೇಶಗಳಿಂದ ಅವುಗಳನ್ನು ಕೂಡಿಸಿ, ಅವುಗಳ ಸ್ವಂತ ದೇಶಕ್ಕೆ ತರುವೆನು. ಇಸ್ರಾಯೇಲಿನ ಪರ್ವತಗಳ ಮೇಲೆ ನದಿಗಳಲ್ಲಿ ನಿವಾಸಿಸುವ ಎಲ್ಲಾ ದೇಶಗಳಲ್ಲಿ ಮೇಯಿಸುವೆನು.
ನಾನು ನಿಮ್ಮನ್ನು ಅನ್ಯಜನಾಂಗಗಳ ಮಧ್ಯದಿಂದ ತೆಗೆದು ಎಲ್ಲಾ ದೇಶಗಳೊಳಗಿಂದ ಕೂಡಿಸಿ ನಿಮ್ಮ ನಿಮ್ಮ ಸ್ವಂತ ದೇಶಗಳಲ್ಲಿ ಸೇರಿಸುವೆನು.
ಆಗ ಯೆಹೂದದ ಮಕ್ಕಳು ಮತ್ತು ಇಸ್ರಾಯೇಲಿನ ಮಕ್ಕಳು ಒಟ್ಟುಗೂಡಿಕೊಂಡು ತಮಗೆ ಒಬ್ಬನನ್ನೇ ಶಿರಸ್ಸನ್ನಾಗಿ ನೇಮಕಮಾಡಿಕೊಳ್ಳುವರು; ದೇಶದೊಳಗಿಂದ ಹೊರಗೆ ಬರುವರು, ಯಾಕಂದರೆ ಇಜ್ರೇಲಿನ ಸುದಿನವು ಅತಿ ವಿಶೇಷವಾಗಿರುವದು ಅಂದನು.
ಪರಿಶುದ್ಧದಿನದ ಲ್ಲಿಯೂ ಕರ್ತನ ಹಬ್ಬದ ದಿನದಲ್ಲಿಯೂ ನೀವು ಏನು ಮಾಡುತ್ತೀರಿ?
ಆ ಕಾಲದಲ್ಲಿ ಅಂದರೆ ನಾನು ನಿಮ್ಮನ್ನು ಕೂಡಿಸುವ ಕಾಲದಲ್ಲಿ ನಿಮ್ಮನ್ನು ಕರಕೊಂಡು ಬರುವೆನು; ನಾನು ನಿಮ್ಮ ಸೆರೆಯನ್ನು ನಿಮ್ಮ ಕಣ್ಣುಗಳ ಮುಂದೆ ತಿರುಗಿಸುವಾಗ ಭೂಮಿಯ ಎಲ್ಲಾ ಜನರಲ್ಲಿ ನಿಮಗೆ ಕೀರ್ತಿಯನ್ನೂ ಹೊಗಳಿಕೆ ಯನ್ನೂ ಉಂಟುಮಾಡುವೆನು ಎಂದು ಕರ್ತನು ಹೇಳುತ್ತಾನೆ.
ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತ ರೆಂಬದಾಗಿ ಎಣಿಸಿಕೊಳ್ಳದಂತೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ. ಅದೇನಂದರೆ, ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಕುರುಡುತನವು ಅನ್ಯಜನಗಳು ಸಂಪೂರ್ಣವಾಗಿ ದೇವರ ರಾಜ್ಯದಲ್ಲಿ ಸೇರುವ ತನಕ