ನಾನು ಜನಾಂಗಗಳನ್ನು ಕಡಿದು ಬಿಟ್ಟಿದ್ದೇನೆ; ಅವುಗಳ ಗೋಪುರಗಳು ಹಾಳಾಗಿವೆ; ಅವರ ಬೀದಿಗಳನ್ನು ಯಾರೂ ಹಾದು ಹೋಗದ ಹಾಗೆ ಹಾಳು ಮಾಡಿದ್ದೇನೆ; ಅವುಗಳ ಪಟ್ಟಣಗಳು ನಾಶವಾದವು, ಹೀಗೆ ಅಲ್ಲಿ ಯಾವನೂ ಇರುವದಿಲ್ಲ, ಯಾವ ಮನುಷ್ಯನು ಅಲ್ಲಿ ವಾಸಿಸುವದೂ ಇಲ್ಲ.
Cross references
ನಿಮ್ಮ ಪಟ್ಟಣಗಳನ್ನು ಕೆಡವಿಹಾಕಿ, ನಿಮ್ಮ ಪರಿಶುದ್ಧ ಸ್ಥಳಗಳನ್ನು ಹಾಳುಮಾಡಿ, ನಿಮ್ಮ ಸುವಾಸನೆ ಗಳನ್ನು ಮೂಸಿ ನೋಡದೆ ಇರುವೆನು.
ಇಗೋ, ನಾನು ಯೊರ್ದನ್ ಮೊದಲುಗೊಂಡು ಪಶ್ಚಿಮಕ್ಕಿರುವ ದೊಡ್ಡ ಸಮುದ್ರದ ವರೆಗೂ ಜನಾಂಗಗಳನ್ನು ಕಡಿದು ಉಳಿದ ಸಕಲ ಜನಾಂಗಗಳ ದೇಶಗಳನ್ನು ನಿಮ್ಮ ಗೋತ್ರಗಳಿಗೆ ಚೀಟು ಹಾಕಿ ನಿಮಗೆ ಹಂಚಿಕೊಟ್ಟೆನು.
ಅನೀತಿಯ ನೇಮಕಗಳನ್ನು ನೇಮಿಸಿ, ಕ್ರೂರವಾದ ಬರಹ ಬರೆಯುವವರಿಗೆ ಅಯ್ಯೋ!
ಮೋವಾಬಿನ ವಿಷಯವಾದ ದೈವೋಕ್ತಿ. ಆ ರಾತ್ರಿಯಲ್ಲಿ ಮೋವಾಬಿನ ಆರ್ ಹಾಳಾಗಿ ನಿಶ್ಯಬ್ದವಾಯಿತು; ಆ ರಾತ್ರಿಯಲ್ಲಿ ಮೋವಾ ಬಿನ ಕಿರ್ ಹಾಳಾಗಿ ನಿಶ್ಯಬ್ಧವಾಯಿತು
ಐಗುಪ್ತ್ಯರ ವಿಷಯವಾದ ದೈವೋಕ್ತಿ; ಇಗೋ ಕರ್ತನು ವೇಗವುಳ್ಳ ಮೇಘವನ್ನು ಹತ್ತಿಕೊಂಡು ಐಗುಪ್ತಕ್ಕೆ ಬರುತ್ತಾನೆ; ಆತನು ಸಮ್ಮುಖ ನಾದಾಗ ಐಗುಪ್ತದ ವಿಗ್ರಹಗಳು ನಡುಗುವವು, ಐಗುಪ್ತ್ಯರ ಹೃದಯವು ಅವರ ಮಧ್ಯೆ ಕರಗುವದು.
ಇಗೋ, ಅಶ್ಶೂರದ ಅರಸರು ಎಲ್ಲಾ ದೇಶಗಳನ್ನು ಪೂರ್ಣವಾಗಿ ನಾಶ ಮಾಡಿದರೆಂದು ನೀನು ಕೇಳಿದಿಯಲ್ಲಾ; ಹೀಗಿದ್ದ ಮೇಲೆ ನೀನು ಬಿಡುಗಡೆಯಾಗುವಿಯೋ?
ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ--ನನ್ನ ರಥಸಮೂಹದೊಡನೆ ಪರ್ವತ ಶಿಖರಗಳನ್ನು ಹತ್ತಿದ್ದೇನೆ; ಲೆಬನೋನಿನ ಭಾಗಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರು, ಶ್ರೇಷ್ಠವಾದ ತುರಾಯಿ ಮರಗಳನ್ನು ಕಡಿದುಬಿಟ್ಟಿದ್ದೇನೆ; ಅಂಚಿನ ಉನ್ನತವಾದ ಸ್ಥಳವನ್ನೂ ಮತ್ತು ಅದರ ಕರ್ಮೇಲಿನ ಅಡವಿಯನ್ನೂ ಪ್ರವೇಶಿಸಿದ್ದೇನೆ;
ಆಗ ಕರ್ತನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಹೊಡೆದನು. ಇನ್ನೂ ಮೊಬ್ಬಿರು ವಾಗಲೇ ಎದ್ದಾಗ ಇಗೋ, ಅವರು ಸತ್ತ ಹೆಣಗಳಾ ಗಿದ್ದರು.
ಈ ಮನೆಯು ಶಿಲೋವಿನ ಹಾಗೆ ಆಗುವದೆಂದೂ ಈ ಪಟ್ಟಣವು ನಿವಾಸಿಗಳಿಲ್ಲದೆ ಹಾಳಾಗುವದೆಂದೂ ಕರ್ತನ ಹೆಸರಿನಲ್ಲಿ ಯಾಕೆ ನೀನು ಪ್ರವಾದಿಸಿದ್ದೀ ಅಂದರು. ಆಗ ಜನರೆಲ್ಲರೂ ಕರ್ತನ ಆಲಯದಲ್ಲಿ ಯೆರೆವಿಾಯನಿಗೆ ವಿರೋಧವಾಗಿ ಕೂಡಿಕೊಂಡರು.
ಮೋರೇಷೆತಿನವನಾದ ವಿಾಕಾಯನು ಯೆಹೂದದ ಅರಸನಾದ ಹಿಜ್ಕೀಯನ ದಿನಗಳಲ್ಲಿ ಪ್ರವಾದಿಸಿ ಯೆಹೂದದ ಜನರಿಗೆಲ್ಲಾ ಹೇಳಿದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ಚೀಯೋನು ಹೊಲದ ಹಾಗೆ ಉಳಲ್ಪಡು ವದು; ಯೆರೂಸಲೇಮು ದಿಬ್ಬಗಳಾಗುವದು; ಮಂದಿ ರದ ಬೆಟ್ಟವು ಅಡವಿಯ ಉನ್ನತ ಸ್ಥಳವಾಗುವದು.
ಚೂರುಚೂರಾಗಿ ಒಡೆದು ಬಿಡುವವನು ನಿನ್ನ ಎದುರಿಗೆ ಬಂದಿದ್ದಾನೆ; ಆಯುಧ ಗಳನ್ನು ಭದ್ರಪಡಿಸು; ದಾರಿಯನ್ನು ಕಾಯಿ; ನಡುವನ್ನು ಬಲಪಡಿಸಿಕೋ, ನಿನ್ನ ಶಕ್ತಿಯನ್ನು ಬಲವಾಗಿ ಗಟ್ಟಿ ಮಾಡಿಕೋ.
ಸಮುದ್ರತೀರದ ನಿವಾಸಿಗಳಾದ ಕೆರೇತ್ಯರ ಜನಾಂಗಕ್ಕೆ ಅಯ್ಯೋ! ಕರ್ತನ ವಾಕ್ಯವು ನಿಮಗೆ ವಿರೋಧವಾಗಿದೆ; ಓ ಕಾನಾನೇ, ಫಿಲಿಷ್ಟಿಯರ ದೇಶವೇ, ನಿವಾಸಿಯೇ ಇಲ್ಲದ ಹಾಗೆ ನಿನ್ನನ್ನು ನಾಶಮಾಡುವೆನು.
ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರ ಗಾಳಿಯಿಂದ ಚದರಿಸಿಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು; ಹಾದುಹೋಗುವವನೂ ತಿರುಗಿಕೊಳ್ಳುವವನೂ ಇಲ್ಲದೆ ಹೋದರು. ರಮ್ಯವಾದ ದೇಶವನ್ನು ಹಾಳಾಗಿ ಮಾಡಿದರು.
ಅವರು ಕೆಟ್ಟವಿಷಯಗಳನ್ನು ಆಶಿಸಿದಂತೆ ನಾವು ಆಶಿಸುವವರಾಗಬಾರದೆಂಬದಕ್ಕಾಗಿ ಈ ಸಂಗತಿ ಗಳು ನಮಗೆ ನಿದರ್ಶನಗಳಾಗಿವೆ.
ಅವರಿಗೆ ಸಂಭವಿಸಿದ ಈ ಎಲ್ಲಾ ಸಂಗತಿಗಳು ನಿದರ್ಶನಗಳಾಗಿವೆ; ಲೋಕದ ಅಂತ್ಯಕ್ಕೆ ಬಂದಿರುವ ವರಾದ ನಮಗೆ ಅವು ಬುದ್ಧಿವಾದಗಳಾಗಿ ಬರೆದವೆ.